Homeಕರ್ನಾಟಕಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

ಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

- Advertisement -
- Advertisement -

ರಾಜ್ಯ ಸರ್ಕಾರದ ಹಾವು ಏಣಿ ಆಟ ಮುಂದುವರೆದಿದ್ದು ಇಂದು ಸಹ ಸದನದಲ್ಲಿ ಮಹತ್ವದ ಚರ್ಚೆ, ವಾಗ್ವಾದ ಮತ್ತು ಗದ್ದಲ ನಡೆದು ಕೊನೆಗೆ ಕಲಾಪವನ್ನು ಸ್ಪೀಕರ್ ರಮೇಶ್ ಕುಮಾರ್ ರವರು ಸೋಮವಾರಕ್ಕೆ ಮುಂದೂಡಿದರು.

ಸೋಮವಾರ ಏನೇ ಆಗಲಿ ಒಂದು ಇತ್ಯರ್ಥ ಮಾಡುತ್ತೇವೆ ಎಂದು ಮಾತುಕೊಟ್ಟ ಬಳಿಕವಷ್ಟೇ ಸದನದ ಕಲಾಪವನ್ನು ಮುಂದೂಡಿದ್ದ ಅಲ್ಲಿಯವರೆಗೂ ಬಿಜೆಪಿ ಕಾಯಬೇಕಾಗಿದೆ ಮಾತ್ರವಲ್ಲ ಬಂಡಾಯವೆದ್ದಿರುವ ಅತೃಪ್ತ ಶಾಸಕರನ್ನು ಕಾಯುವ ಕೆಲಸ ಮಾಡಬೇಕಿದೆ.

ಇನ್ನು ಮೈತ್ರಿ ಸರ್ಕಾರ ಚರ್ಚೆಯನ್ನು ಮನಬಂದಂತೆ ಎಳೆದುದ್ದಲ್ಲದೇ ಸೋಮವಾರ ಕುಮಾರಸ್ವಾಮಿಯವರು ರಾಜೀನಾಮೆ ನೀಡುವುದು ಖಚಿತವಾಗಿದ್ದು ಅಲ್ಲಿಯವರೆಗೂ ಬಿಜೆಪಿಯವರನ್ನು ಕಾಡಿಸುವ ಕೆಲಸವನ್ನು ಸಮರ್ಪಕವಾಗಿ ಮಾಡಿದೆ.

ಇಂದು ರಾತ್ರಿ 12 ಗಂಟೆಯಾದರೂ ಪರವಾಗಿಲ್ಲ, ನಾವು ಸದನದಲ್ಲಿರುತ್ತೇವೆ, ದಯವಿಟ್ಟು ಇಂದು ತೀರ್ಮಾನ ಮಾಡಿ ಎಂದು ವಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪನವರು ಪದೇ ಪದೇ ಸ್ಪೀಕರ್ ಬಳಿ ಮನವಿ ಮಾಡಿದರೂ ಸ್ಪೀಕರ್ ರವರು ಕರಗದೇ ಕೊನೆಗೂ ಕಲಾಪ ಮುಂದೂಡಿದರು.

ಇದಕ್ಕೂ ಮೊದಲು ಇಂದು 1:30ರವರೆಗೆ ಡೆಡ್ ಲೈನ್ ಕೊಟ್ಟಿದ್ದ ರಾಜ್ಯಪಾಲರು ತಮ್ಮ ಮಾತನ್ನು ಸಿಎಂ ಕುಮಾರಸ್ವಾಮಿಯವರು ಮೀರಿದ್ದರಿಂದ ಸಂಜೆ ಆರು ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸಿ ಎಂದು ಮತ್ತೊಮ್ಮೆ ಡೆಡ್ ಲೈನ್ ಕೊಟ್ಟರೂ ಸಹ ಸಿಎಂ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಸಹ ಕೊಡಲಿಲ್ಲ.

ಇನ್ನು ಆಡಳಿತ ಪಕ್ಷದ ಪರ ಒಬ್ಬರ ನಂತರ ಒಬ್ಬರಂತೆ ಭಾಷಣ ಬಿಗಿದರು. ಕಾಂಗ್ರೆಸ್ ನ ಕೃಷ್ಣಭೈರೇಗೌಡ ಮತ್ತು ಜೆಡಿಎಸ್ ಶಿವಲಿಂಗೇಗೌಡರವರು ಅದ್ಭುತವಾಗಿ ಮಾತನಾಡಿ ಮೆಚ್ಚುಗೆ ಗಳಿಸಿದರು. ತದನಂತರ ಎಚ್.ಡಿ ರೇವಣ್ಣನವರು ಮಾತಿನ ಚಟಾಕಿ ಹಾರಿಸಿದರು. ಇಡೀ ವರ್ಷಪೂರ್ತಿ ನನ್ನ ಬಗ್ಗೆಯೇ ಮಾತಾಡಿದ್ದೀರಿ ಇಂದು ನನಗೆ ಮಾತಾಡಲು ಎರಡು ಗಂಟೆ ಅವಕಾಶ ಕೊಡಬೇಕು ಸಭಾಧ್ಯಕ್ಷರೆ ಎಂದರು.

ಆಗ ರಮೇಶ್ ಕುಮಾರ್ ರವರು ಖಂಡಿತ ಸಮಯ ಕೊಡುತ್ತೇವೆ ರೇವಣ್ಣನವರೆ ಅದಕ್ಕೂ ಮೊದಲು ಯಾವಾಗ ಕೊಡಬೇಕು ಎಂದು ನಮ್ಮ ಜ್ಯೋತಿಷಿಯವರನ್ನು ಕೇಳಿ, ಯಾವ ಗಳಿಗೆ ಕೊಡಬೇಕು ಎಂದು ಹೇಳುತ್ತೀವಿ ಎಂದು ತಮಾಷೆ ಮಾಡುವ ಮೂಲಕ ಇಡೀ ಸದನ ನಗೆಗಡಲಲ್ಲಿ ಮುಳುಗುವಂತೆ ಮಾಡಿದರು. ನಂತರ ರೇವಣ್ಣನವರು ಮನೆಲೀ ಹೆಂಗಸರು ಕಾಯುತ್ತಿದ್ದಾರೆ, ಒಂದು ವಾರವಾಯಿತು ಬಂದು, ಹಾಗಾಗಿ ಇಂದಿನ ಸದನದ ಕಲಾಪವನ್ನು ಬೇಗ ಮುಗಿಸಿ ನಾವು ಮನೆಗೆ ಹೋಗಲು ಅವಕಾಶ ಕೊಡಿ ಎಂದರು.

ಸ್ಪೀಕರ್ ರಮೇಶ್ ಕುಮಾರ್ ರವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಬಳಿ ದಯವಿಟ್ಟು ಇಂದು ಎಷ್ಟು ಗಂಟೆಗೆ ಮುಗಿಸುತ್ತೀರಿ ಹೇಳಿ ಎಂದು ಮನವಿ ಮಾಡಿದಾಗ ಸಿದ್ದರಾಮಯ್ಯನವರು “ಇನ್ನು ಬಹಳಷ್ಟು ಜನ ಮಾತಾಡುವವರಿದ್ದಾರೆ ಹಾಗಾಗಿ ಸೋಮವಾರ ಮುಂದೂಡಬೇಕಾಗಿ ಮನವಿ” ಎಂದು ಹೇಳಿದರು

ನಂತರ ಸ್ಪೀಕರ್ ರವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...