Homeಕರ್ನಾಟಕಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

ಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

- Advertisement -
- Advertisement -

ರಾಜ್ಯ ಸರ್ಕಾರದ ಹಾವು ಏಣಿ ಆಟ ಮುಂದುವರೆದಿದ್ದು ಇಂದು ಸಹ ಸದನದಲ್ಲಿ ಮಹತ್ವದ ಚರ್ಚೆ, ವಾಗ್ವಾದ ಮತ್ತು ಗದ್ದಲ ನಡೆದು ಕೊನೆಗೆ ಕಲಾಪವನ್ನು ಸ್ಪೀಕರ್ ರಮೇಶ್ ಕುಮಾರ್ ರವರು ಸೋಮವಾರಕ್ಕೆ ಮುಂದೂಡಿದರು.

ಸೋಮವಾರ ಏನೇ ಆಗಲಿ ಒಂದು ಇತ್ಯರ್ಥ ಮಾಡುತ್ತೇವೆ ಎಂದು ಮಾತುಕೊಟ್ಟ ಬಳಿಕವಷ್ಟೇ ಸದನದ ಕಲಾಪವನ್ನು ಮುಂದೂಡಿದ್ದ ಅಲ್ಲಿಯವರೆಗೂ ಬಿಜೆಪಿ ಕಾಯಬೇಕಾಗಿದೆ ಮಾತ್ರವಲ್ಲ ಬಂಡಾಯವೆದ್ದಿರುವ ಅತೃಪ್ತ ಶಾಸಕರನ್ನು ಕಾಯುವ ಕೆಲಸ ಮಾಡಬೇಕಿದೆ.

ಇನ್ನು ಮೈತ್ರಿ ಸರ್ಕಾರ ಚರ್ಚೆಯನ್ನು ಮನಬಂದಂತೆ ಎಳೆದುದ್ದಲ್ಲದೇ ಸೋಮವಾರ ಕುಮಾರಸ್ವಾಮಿಯವರು ರಾಜೀನಾಮೆ ನೀಡುವುದು ಖಚಿತವಾಗಿದ್ದು ಅಲ್ಲಿಯವರೆಗೂ ಬಿಜೆಪಿಯವರನ್ನು ಕಾಡಿಸುವ ಕೆಲಸವನ್ನು ಸಮರ್ಪಕವಾಗಿ ಮಾಡಿದೆ.

ಇಂದು ರಾತ್ರಿ 12 ಗಂಟೆಯಾದರೂ ಪರವಾಗಿಲ್ಲ, ನಾವು ಸದನದಲ್ಲಿರುತ್ತೇವೆ, ದಯವಿಟ್ಟು ಇಂದು ತೀರ್ಮಾನ ಮಾಡಿ ಎಂದು ವಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪನವರು ಪದೇ ಪದೇ ಸ್ಪೀಕರ್ ಬಳಿ ಮನವಿ ಮಾಡಿದರೂ ಸ್ಪೀಕರ್ ರವರು ಕರಗದೇ ಕೊನೆಗೂ ಕಲಾಪ ಮುಂದೂಡಿದರು.

ಇದಕ್ಕೂ ಮೊದಲು ಇಂದು 1:30ರವರೆಗೆ ಡೆಡ್ ಲೈನ್ ಕೊಟ್ಟಿದ್ದ ರಾಜ್ಯಪಾಲರು ತಮ್ಮ ಮಾತನ್ನು ಸಿಎಂ ಕುಮಾರಸ್ವಾಮಿಯವರು ಮೀರಿದ್ದರಿಂದ ಸಂಜೆ ಆರು ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸಿ ಎಂದು ಮತ್ತೊಮ್ಮೆ ಡೆಡ್ ಲೈನ್ ಕೊಟ್ಟರೂ ಸಹ ಸಿಎಂ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಸಹ ಕೊಡಲಿಲ್ಲ.

ಇನ್ನು ಆಡಳಿತ ಪಕ್ಷದ ಪರ ಒಬ್ಬರ ನಂತರ ಒಬ್ಬರಂತೆ ಭಾಷಣ ಬಿಗಿದರು. ಕಾಂಗ್ರೆಸ್ ನ ಕೃಷ್ಣಭೈರೇಗೌಡ ಮತ್ತು ಜೆಡಿಎಸ್ ಶಿವಲಿಂಗೇಗೌಡರವರು ಅದ್ಭುತವಾಗಿ ಮಾತನಾಡಿ ಮೆಚ್ಚುಗೆ ಗಳಿಸಿದರು. ತದನಂತರ ಎಚ್.ಡಿ ರೇವಣ್ಣನವರು ಮಾತಿನ ಚಟಾಕಿ ಹಾರಿಸಿದರು. ಇಡೀ ವರ್ಷಪೂರ್ತಿ ನನ್ನ ಬಗ್ಗೆಯೇ ಮಾತಾಡಿದ್ದೀರಿ ಇಂದು ನನಗೆ ಮಾತಾಡಲು ಎರಡು ಗಂಟೆ ಅವಕಾಶ ಕೊಡಬೇಕು ಸಭಾಧ್ಯಕ್ಷರೆ ಎಂದರು.

ಆಗ ರಮೇಶ್ ಕುಮಾರ್ ರವರು ಖಂಡಿತ ಸಮಯ ಕೊಡುತ್ತೇವೆ ರೇವಣ್ಣನವರೆ ಅದಕ್ಕೂ ಮೊದಲು ಯಾವಾಗ ಕೊಡಬೇಕು ಎಂದು ನಮ್ಮ ಜ್ಯೋತಿಷಿಯವರನ್ನು ಕೇಳಿ, ಯಾವ ಗಳಿಗೆ ಕೊಡಬೇಕು ಎಂದು ಹೇಳುತ್ತೀವಿ ಎಂದು ತಮಾಷೆ ಮಾಡುವ ಮೂಲಕ ಇಡೀ ಸದನ ನಗೆಗಡಲಲ್ಲಿ ಮುಳುಗುವಂತೆ ಮಾಡಿದರು. ನಂತರ ರೇವಣ್ಣನವರು ಮನೆಲೀ ಹೆಂಗಸರು ಕಾಯುತ್ತಿದ್ದಾರೆ, ಒಂದು ವಾರವಾಯಿತು ಬಂದು, ಹಾಗಾಗಿ ಇಂದಿನ ಸದನದ ಕಲಾಪವನ್ನು ಬೇಗ ಮುಗಿಸಿ ನಾವು ಮನೆಗೆ ಹೋಗಲು ಅವಕಾಶ ಕೊಡಿ ಎಂದರು.

ಸ್ಪೀಕರ್ ರಮೇಶ್ ಕುಮಾರ್ ರವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಬಳಿ ದಯವಿಟ್ಟು ಇಂದು ಎಷ್ಟು ಗಂಟೆಗೆ ಮುಗಿಸುತ್ತೀರಿ ಹೇಳಿ ಎಂದು ಮನವಿ ಮಾಡಿದಾಗ ಸಿದ್ದರಾಮಯ್ಯನವರು “ಇನ್ನು ಬಹಳಷ್ಟು ಜನ ಮಾತಾಡುವವರಿದ್ದಾರೆ ಹಾಗಾಗಿ ಸೋಮವಾರ ಮುಂದೂಡಬೇಕಾಗಿ ಮನವಿ” ಎಂದು ಹೇಳಿದರು

ನಂತರ ಸ್ಪೀಕರ್ ರವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....