Homeಕರ್ನಾಟಕಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

ಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

- Advertisement -
- Advertisement -

ರಾಜ್ಯ ಸರ್ಕಾರದ ಹಾವು ಏಣಿ ಆಟ ಮುಂದುವರೆದಿದ್ದು ಇಂದು ಸಹ ಸದನದಲ್ಲಿ ಮಹತ್ವದ ಚರ್ಚೆ, ವಾಗ್ವಾದ ಮತ್ತು ಗದ್ದಲ ನಡೆದು ಕೊನೆಗೆ ಕಲಾಪವನ್ನು ಸ್ಪೀಕರ್ ರಮೇಶ್ ಕುಮಾರ್ ರವರು ಸೋಮವಾರಕ್ಕೆ ಮುಂದೂಡಿದರು.

ಸೋಮವಾರ ಏನೇ ಆಗಲಿ ಒಂದು ಇತ್ಯರ್ಥ ಮಾಡುತ್ತೇವೆ ಎಂದು ಮಾತುಕೊಟ್ಟ ಬಳಿಕವಷ್ಟೇ ಸದನದ ಕಲಾಪವನ್ನು ಮುಂದೂಡಿದ್ದ ಅಲ್ಲಿಯವರೆಗೂ ಬಿಜೆಪಿ ಕಾಯಬೇಕಾಗಿದೆ ಮಾತ್ರವಲ್ಲ ಬಂಡಾಯವೆದ್ದಿರುವ ಅತೃಪ್ತ ಶಾಸಕರನ್ನು ಕಾಯುವ ಕೆಲಸ ಮಾಡಬೇಕಿದೆ.

ಇನ್ನು ಮೈತ್ರಿ ಸರ್ಕಾರ ಚರ್ಚೆಯನ್ನು ಮನಬಂದಂತೆ ಎಳೆದುದ್ದಲ್ಲದೇ ಸೋಮವಾರ ಕುಮಾರಸ್ವಾಮಿಯವರು ರಾಜೀನಾಮೆ ನೀಡುವುದು ಖಚಿತವಾಗಿದ್ದು ಅಲ್ಲಿಯವರೆಗೂ ಬಿಜೆಪಿಯವರನ್ನು ಕಾಡಿಸುವ ಕೆಲಸವನ್ನು ಸಮರ್ಪಕವಾಗಿ ಮಾಡಿದೆ.

ಇಂದು ರಾತ್ರಿ 12 ಗಂಟೆಯಾದರೂ ಪರವಾಗಿಲ್ಲ, ನಾವು ಸದನದಲ್ಲಿರುತ್ತೇವೆ, ದಯವಿಟ್ಟು ಇಂದು ತೀರ್ಮಾನ ಮಾಡಿ ಎಂದು ವಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪನವರು ಪದೇ ಪದೇ ಸ್ಪೀಕರ್ ಬಳಿ ಮನವಿ ಮಾಡಿದರೂ ಸ್ಪೀಕರ್ ರವರು ಕರಗದೇ ಕೊನೆಗೂ ಕಲಾಪ ಮುಂದೂಡಿದರು.

ಇದಕ್ಕೂ ಮೊದಲು ಇಂದು 1:30ರವರೆಗೆ ಡೆಡ್ ಲೈನ್ ಕೊಟ್ಟಿದ್ದ ರಾಜ್ಯಪಾಲರು ತಮ್ಮ ಮಾತನ್ನು ಸಿಎಂ ಕುಮಾರಸ್ವಾಮಿಯವರು ಮೀರಿದ್ದರಿಂದ ಸಂಜೆ ಆರು ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸಿ ಎಂದು ಮತ್ತೊಮ್ಮೆ ಡೆಡ್ ಲೈನ್ ಕೊಟ್ಟರೂ ಸಹ ಸಿಎಂ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಸಹ ಕೊಡಲಿಲ್ಲ.

ಇನ್ನು ಆಡಳಿತ ಪಕ್ಷದ ಪರ ಒಬ್ಬರ ನಂತರ ಒಬ್ಬರಂತೆ ಭಾಷಣ ಬಿಗಿದರು. ಕಾಂಗ್ರೆಸ್ ನ ಕೃಷ್ಣಭೈರೇಗೌಡ ಮತ್ತು ಜೆಡಿಎಸ್ ಶಿವಲಿಂಗೇಗೌಡರವರು ಅದ್ಭುತವಾಗಿ ಮಾತನಾಡಿ ಮೆಚ್ಚುಗೆ ಗಳಿಸಿದರು. ತದನಂತರ ಎಚ್.ಡಿ ರೇವಣ್ಣನವರು ಮಾತಿನ ಚಟಾಕಿ ಹಾರಿಸಿದರು. ಇಡೀ ವರ್ಷಪೂರ್ತಿ ನನ್ನ ಬಗ್ಗೆಯೇ ಮಾತಾಡಿದ್ದೀರಿ ಇಂದು ನನಗೆ ಮಾತಾಡಲು ಎರಡು ಗಂಟೆ ಅವಕಾಶ ಕೊಡಬೇಕು ಸಭಾಧ್ಯಕ್ಷರೆ ಎಂದರು.

ಆಗ ರಮೇಶ್ ಕುಮಾರ್ ರವರು ಖಂಡಿತ ಸಮಯ ಕೊಡುತ್ತೇವೆ ರೇವಣ್ಣನವರೆ ಅದಕ್ಕೂ ಮೊದಲು ಯಾವಾಗ ಕೊಡಬೇಕು ಎಂದು ನಮ್ಮ ಜ್ಯೋತಿಷಿಯವರನ್ನು ಕೇಳಿ, ಯಾವ ಗಳಿಗೆ ಕೊಡಬೇಕು ಎಂದು ಹೇಳುತ್ತೀವಿ ಎಂದು ತಮಾಷೆ ಮಾಡುವ ಮೂಲಕ ಇಡೀ ಸದನ ನಗೆಗಡಲಲ್ಲಿ ಮುಳುಗುವಂತೆ ಮಾಡಿದರು. ನಂತರ ರೇವಣ್ಣನವರು ಮನೆಲೀ ಹೆಂಗಸರು ಕಾಯುತ್ತಿದ್ದಾರೆ, ಒಂದು ವಾರವಾಯಿತು ಬಂದು, ಹಾಗಾಗಿ ಇಂದಿನ ಸದನದ ಕಲಾಪವನ್ನು ಬೇಗ ಮುಗಿಸಿ ನಾವು ಮನೆಗೆ ಹೋಗಲು ಅವಕಾಶ ಕೊಡಿ ಎಂದರು.

ಸ್ಪೀಕರ್ ರಮೇಶ್ ಕುಮಾರ್ ರವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಬಳಿ ದಯವಿಟ್ಟು ಇಂದು ಎಷ್ಟು ಗಂಟೆಗೆ ಮುಗಿಸುತ್ತೀರಿ ಹೇಳಿ ಎಂದು ಮನವಿ ಮಾಡಿದಾಗ ಸಿದ್ದರಾಮಯ್ಯನವರು “ಇನ್ನು ಬಹಳಷ್ಟು ಜನ ಮಾತಾಡುವವರಿದ್ದಾರೆ ಹಾಗಾಗಿ ಸೋಮವಾರ ಮುಂದೂಡಬೇಕಾಗಿ ಮನವಿ” ಎಂದು ಹೇಳಿದರು

ನಂತರ ಸ್ಪೀಕರ್ ರವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...