Homeಕರ್ನಾಟಕಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

ಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

- Advertisement -
- Advertisement -

ರಾಜ್ಯ ಸರ್ಕಾರದ ಹಾವು ಏಣಿ ಆಟ ಮುಂದುವರೆದಿದ್ದು ಇಂದು ಸಹ ಸದನದಲ್ಲಿ ಮಹತ್ವದ ಚರ್ಚೆ, ವಾಗ್ವಾದ ಮತ್ತು ಗದ್ದಲ ನಡೆದು ಕೊನೆಗೆ ಕಲಾಪವನ್ನು ಸ್ಪೀಕರ್ ರಮೇಶ್ ಕುಮಾರ್ ರವರು ಸೋಮವಾರಕ್ಕೆ ಮುಂದೂಡಿದರು.

ಸೋಮವಾರ ಏನೇ ಆಗಲಿ ಒಂದು ಇತ್ಯರ್ಥ ಮಾಡುತ್ತೇವೆ ಎಂದು ಮಾತುಕೊಟ್ಟ ಬಳಿಕವಷ್ಟೇ ಸದನದ ಕಲಾಪವನ್ನು ಮುಂದೂಡಿದ್ದ ಅಲ್ಲಿಯವರೆಗೂ ಬಿಜೆಪಿ ಕಾಯಬೇಕಾಗಿದೆ ಮಾತ್ರವಲ್ಲ ಬಂಡಾಯವೆದ್ದಿರುವ ಅತೃಪ್ತ ಶಾಸಕರನ್ನು ಕಾಯುವ ಕೆಲಸ ಮಾಡಬೇಕಿದೆ.

ಇನ್ನು ಮೈತ್ರಿ ಸರ್ಕಾರ ಚರ್ಚೆಯನ್ನು ಮನಬಂದಂತೆ ಎಳೆದುದ್ದಲ್ಲದೇ ಸೋಮವಾರ ಕುಮಾರಸ್ವಾಮಿಯವರು ರಾಜೀನಾಮೆ ನೀಡುವುದು ಖಚಿತವಾಗಿದ್ದು ಅಲ್ಲಿಯವರೆಗೂ ಬಿಜೆಪಿಯವರನ್ನು ಕಾಡಿಸುವ ಕೆಲಸವನ್ನು ಸಮರ್ಪಕವಾಗಿ ಮಾಡಿದೆ.

ಇಂದು ರಾತ್ರಿ 12 ಗಂಟೆಯಾದರೂ ಪರವಾಗಿಲ್ಲ, ನಾವು ಸದನದಲ್ಲಿರುತ್ತೇವೆ, ದಯವಿಟ್ಟು ಇಂದು ತೀರ್ಮಾನ ಮಾಡಿ ಎಂದು ವಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪನವರು ಪದೇ ಪದೇ ಸ್ಪೀಕರ್ ಬಳಿ ಮನವಿ ಮಾಡಿದರೂ ಸ್ಪೀಕರ್ ರವರು ಕರಗದೇ ಕೊನೆಗೂ ಕಲಾಪ ಮುಂದೂಡಿದರು.

ಇದಕ್ಕೂ ಮೊದಲು ಇಂದು 1:30ರವರೆಗೆ ಡೆಡ್ ಲೈನ್ ಕೊಟ್ಟಿದ್ದ ರಾಜ್ಯಪಾಲರು ತಮ್ಮ ಮಾತನ್ನು ಸಿಎಂ ಕುಮಾರಸ್ವಾಮಿಯವರು ಮೀರಿದ್ದರಿಂದ ಸಂಜೆ ಆರು ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸಿ ಎಂದು ಮತ್ತೊಮ್ಮೆ ಡೆಡ್ ಲೈನ್ ಕೊಟ್ಟರೂ ಸಹ ಸಿಎಂ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಸಹ ಕೊಡಲಿಲ್ಲ.

ಇನ್ನು ಆಡಳಿತ ಪಕ್ಷದ ಪರ ಒಬ್ಬರ ನಂತರ ಒಬ್ಬರಂತೆ ಭಾಷಣ ಬಿಗಿದರು. ಕಾಂಗ್ರೆಸ್ ನ ಕೃಷ್ಣಭೈರೇಗೌಡ ಮತ್ತು ಜೆಡಿಎಸ್ ಶಿವಲಿಂಗೇಗೌಡರವರು ಅದ್ಭುತವಾಗಿ ಮಾತನಾಡಿ ಮೆಚ್ಚುಗೆ ಗಳಿಸಿದರು. ತದನಂತರ ಎಚ್.ಡಿ ರೇವಣ್ಣನವರು ಮಾತಿನ ಚಟಾಕಿ ಹಾರಿಸಿದರು. ಇಡೀ ವರ್ಷಪೂರ್ತಿ ನನ್ನ ಬಗ್ಗೆಯೇ ಮಾತಾಡಿದ್ದೀರಿ ಇಂದು ನನಗೆ ಮಾತಾಡಲು ಎರಡು ಗಂಟೆ ಅವಕಾಶ ಕೊಡಬೇಕು ಸಭಾಧ್ಯಕ್ಷರೆ ಎಂದರು.

ಆಗ ರಮೇಶ್ ಕುಮಾರ್ ರವರು ಖಂಡಿತ ಸಮಯ ಕೊಡುತ್ತೇವೆ ರೇವಣ್ಣನವರೆ ಅದಕ್ಕೂ ಮೊದಲು ಯಾವಾಗ ಕೊಡಬೇಕು ಎಂದು ನಮ್ಮ ಜ್ಯೋತಿಷಿಯವರನ್ನು ಕೇಳಿ, ಯಾವ ಗಳಿಗೆ ಕೊಡಬೇಕು ಎಂದು ಹೇಳುತ್ತೀವಿ ಎಂದು ತಮಾಷೆ ಮಾಡುವ ಮೂಲಕ ಇಡೀ ಸದನ ನಗೆಗಡಲಲ್ಲಿ ಮುಳುಗುವಂತೆ ಮಾಡಿದರು. ನಂತರ ರೇವಣ್ಣನವರು ಮನೆಲೀ ಹೆಂಗಸರು ಕಾಯುತ್ತಿದ್ದಾರೆ, ಒಂದು ವಾರವಾಯಿತು ಬಂದು, ಹಾಗಾಗಿ ಇಂದಿನ ಸದನದ ಕಲಾಪವನ್ನು ಬೇಗ ಮುಗಿಸಿ ನಾವು ಮನೆಗೆ ಹೋಗಲು ಅವಕಾಶ ಕೊಡಿ ಎಂದರು.

ಸ್ಪೀಕರ್ ರಮೇಶ್ ಕುಮಾರ್ ರವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಬಳಿ ದಯವಿಟ್ಟು ಇಂದು ಎಷ್ಟು ಗಂಟೆಗೆ ಮುಗಿಸುತ್ತೀರಿ ಹೇಳಿ ಎಂದು ಮನವಿ ಮಾಡಿದಾಗ ಸಿದ್ದರಾಮಯ್ಯನವರು “ಇನ್ನು ಬಹಳಷ್ಟು ಜನ ಮಾತಾಡುವವರಿದ್ದಾರೆ ಹಾಗಾಗಿ ಸೋಮವಾರ ಮುಂದೂಡಬೇಕಾಗಿ ಮನವಿ” ಎಂದು ಹೇಳಿದರು

ನಂತರ ಸ್ಪೀಕರ್ ರವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...