Homeಕರ್ನಾಟಕಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

ಸದನದಲ್ಲಿ ಮಹತ್ವದ ಚರ್ಚೆ, ಹಾಸ್ಯ, ನೋವು: ಕಲಾಪ ಸೋಮವಾರಕ್ಕೆ..

- Advertisement -
- Advertisement -

ರಾಜ್ಯ ಸರ್ಕಾರದ ಹಾವು ಏಣಿ ಆಟ ಮುಂದುವರೆದಿದ್ದು ಇಂದು ಸಹ ಸದನದಲ್ಲಿ ಮಹತ್ವದ ಚರ್ಚೆ, ವಾಗ್ವಾದ ಮತ್ತು ಗದ್ದಲ ನಡೆದು ಕೊನೆಗೆ ಕಲಾಪವನ್ನು ಸ್ಪೀಕರ್ ರಮೇಶ್ ಕುಮಾರ್ ರವರು ಸೋಮವಾರಕ್ಕೆ ಮುಂದೂಡಿದರು.

ಸೋಮವಾರ ಏನೇ ಆಗಲಿ ಒಂದು ಇತ್ಯರ್ಥ ಮಾಡುತ್ತೇವೆ ಎಂದು ಮಾತುಕೊಟ್ಟ ಬಳಿಕವಷ್ಟೇ ಸದನದ ಕಲಾಪವನ್ನು ಮುಂದೂಡಿದ್ದ ಅಲ್ಲಿಯವರೆಗೂ ಬಿಜೆಪಿ ಕಾಯಬೇಕಾಗಿದೆ ಮಾತ್ರವಲ್ಲ ಬಂಡಾಯವೆದ್ದಿರುವ ಅತೃಪ್ತ ಶಾಸಕರನ್ನು ಕಾಯುವ ಕೆಲಸ ಮಾಡಬೇಕಿದೆ.

ಇನ್ನು ಮೈತ್ರಿ ಸರ್ಕಾರ ಚರ್ಚೆಯನ್ನು ಮನಬಂದಂತೆ ಎಳೆದುದ್ದಲ್ಲದೇ ಸೋಮವಾರ ಕುಮಾರಸ್ವಾಮಿಯವರು ರಾಜೀನಾಮೆ ನೀಡುವುದು ಖಚಿತವಾಗಿದ್ದು ಅಲ್ಲಿಯವರೆಗೂ ಬಿಜೆಪಿಯವರನ್ನು ಕಾಡಿಸುವ ಕೆಲಸವನ್ನು ಸಮರ್ಪಕವಾಗಿ ಮಾಡಿದೆ.

ಇಂದು ರಾತ್ರಿ 12 ಗಂಟೆಯಾದರೂ ಪರವಾಗಿಲ್ಲ, ನಾವು ಸದನದಲ್ಲಿರುತ್ತೇವೆ, ದಯವಿಟ್ಟು ಇಂದು ತೀರ್ಮಾನ ಮಾಡಿ ಎಂದು ವಿಪಕ್ಷ ನಾಯಕ ಬಿ.ಎಸ್ ಯಡಿಯೂರಪ್ಪನವರು ಪದೇ ಪದೇ ಸ್ಪೀಕರ್ ಬಳಿ ಮನವಿ ಮಾಡಿದರೂ ಸ್ಪೀಕರ್ ರವರು ಕರಗದೇ ಕೊನೆಗೂ ಕಲಾಪ ಮುಂದೂಡಿದರು.

ಇದಕ್ಕೂ ಮೊದಲು ಇಂದು 1:30ರವರೆಗೆ ಡೆಡ್ ಲೈನ್ ಕೊಟ್ಟಿದ್ದ ರಾಜ್ಯಪಾಲರು ತಮ್ಮ ಮಾತನ್ನು ಸಿಎಂ ಕುಮಾರಸ್ವಾಮಿಯವರು ಮೀರಿದ್ದರಿಂದ ಸಂಜೆ ಆರು ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸಿ ಎಂದು ಮತ್ತೊಮ್ಮೆ ಡೆಡ್ ಲೈನ್ ಕೊಟ್ಟರೂ ಸಹ ಸಿಎಂ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಸಹ ಕೊಡಲಿಲ್ಲ.

ಇನ್ನು ಆಡಳಿತ ಪಕ್ಷದ ಪರ ಒಬ್ಬರ ನಂತರ ಒಬ್ಬರಂತೆ ಭಾಷಣ ಬಿಗಿದರು. ಕಾಂಗ್ರೆಸ್ ನ ಕೃಷ್ಣಭೈರೇಗೌಡ ಮತ್ತು ಜೆಡಿಎಸ್ ಶಿವಲಿಂಗೇಗೌಡರವರು ಅದ್ಭುತವಾಗಿ ಮಾತನಾಡಿ ಮೆಚ್ಚುಗೆ ಗಳಿಸಿದರು. ತದನಂತರ ಎಚ್.ಡಿ ರೇವಣ್ಣನವರು ಮಾತಿನ ಚಟಾಕಿ ಹಾರಿಸಿದರು. ಇಡೀ ವರ್ಷಪೂರ್ತಿ ನನ್ನ ಬಗ್ಗೆಯೇ ಮಾತಾಡಿದ್ದೀರಿ ಇಂದು ನನಗೆ ಮಾತಾಡಲು ಎರಡು ಗಂಟೆ ಅವಕಾಶ ಕೊಡಬೇಕು ಸಭಾಧ್ಯಕ್ಷರೆ ಎಂದರು.

ಆಗ ರಮೇಶ್ ಕುಮಾರ್ ರವರು ಖಂಡಿತ ಸಮಯ ಕೊಡುತ್ತೇವೆ ರೇವಣ್ಣನವರೆ ಅದಕ್ಕೂ ಮೊದಲು ಯಾವಾಗ ಕೊಡಬೇಕು ಎಂದು ನಮ್ಮ ಜ್ಯೋತಿಷಿಯವರನ್ನು ಕೇಳಿ, ಯಾವ ಗಳಿಗೆ ಕೊಡಬೇಕು ಎಂದು ಹೇಳುತ್ತೀವಿ ಎಂದು ತಮಾಷೆ ಮಾಡುವ ಮೂಲಕ ಇಡೀ ಸದನ ನಗೆಗಡಲಲ್ಲಿ ಮುಳುಗುವಂತೆ ಮಾಡಿದರು. ನಂತರ ರೇವಣ್ಣನವರು ಮನೆಲೀ ಹೆಂಗಸರು ಕಾಯುತ್ತಿದ್ದಾರೆ, ಒಂದು ವಾರವಾಯಿತು ಬಂದು, ಹಾಗಾಗಿ ಇಂದಿನ ಸದನದ ಕಲಾಪವನ್ನು ಬೇಗ ಮುಗಿಸಿ ನಾವು ಮನೆಗೆ ಹೋಗಲು ಅವಕಾಶ ಕೊಡಿ ಎಂದರು.

ಸ್ಪೀಕರ್ ರಮೇಶ್ ಕುಮಾರ್ ರವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಬಳಿ ದಯವಿಟ್ಟು ಇಂದು ಎಷ್ಟು ಗಂಟೆಗೆ ಮುಗಿಸುತ್ತೀರಿ ಹೇಳಿ ಎಂದು ಮನವಿ ಮಾಡಿದಾಗ ಸಿದ್ದರಾಮಯ್ಯನವರು “ಇನ್ನು ಬಹಳಷ್ಟು ಜನ ಮಾತಾಡುವವರಿದ್ದಾರೆ ಹಾಗಾಗಿ ಸೋಮವಾರ ಮುಂದೂಡಬೇಕಾಗಿ ಮನವಿ” ಎಂದು ಹೇಳಿದರು

ನಂತರ ಸ್ಪೀಕರ್ ರವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...