Homeಕರ್ನಾಟಕಕಲಾಪ ತಿಂದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ವಿಚಾರ: ನಾಳೆಗೆ ಸದನ ಮೂಂದೂಡಿಕೆ

ಕಲಾಪ ತಿಂದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ವಿಚಾರ: ನಾಳೆಗೆ ಸದನ ಮೂಂದೂಡಿಕೆ

- Advertisement -
- Advertisement -

ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ರನ್ನು ಬಿಜೆಪಿ ಕಿಡ್ನಾಪ್ ಮಾಡಿದೆ ಎಂದು ಆರೋಪಿಸಿದ್ದ ಸಚಿವ ಡಿ.ಕೆ ಶಿವಕುಮಾರ್ ಸದನದಲ್ಲಿಂದು ಅದಕ್ಕೆ ಸಾಕ್ಷಿ ತೋರಿಸಿದ್ದಾರೆ. ಅದು ನಿನ್ನೆ ರಾತ್ರಿ ಶ್ರೀಮಂತ ಪಾಟೀಲರು ಆರಾಮಾಗಿ ಒಡಾಡುತ್ತಾ, ಬಿಜೆಪಿಯ ಲಕ್ಷ್ಮಣ್ ಸವಧಿಯ ಜೊತೆ ಮುಂಬೈಗೆ ವಿಮಾನ ಹತ್ತಿರುವ ಫೋಟೊಗಳನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ಅವನ್ನಿಟ್ಟುಕೊಂಡು ಸದನದಲ್ಲಿ ಭಾರೀ ಗದ್ದಲ ಮತ್ತು ಪ್ರತಿಭಟನೆ ನಡೆಸಿದರು. ಇದರಿಂದ ಕಲಾಪವನ್ನು ಉಪಸಭಾಧ್ಯಕ್ಷ ಜೆ.ಕೆ ಕೃಷ್ಣರೆಡ್ಡಿಯವರು ನಾಳೆಗೆ ಮುಂದೂಡಿದರು.

ಇದಕ್ಕೂ ಮೊದಲು ಶ್ರೀಮಂತ ಪಾಟೀಲರಿಗೆ ಹೃದಯಘಾತವಾಗಿ ಮುಂಬೈ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೆಲವರು ವಾಟ್ಸಾಪ್ ನಲ್ಲಿ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವ ಪೋಟೊಗಳನ್ನು ವಾಟ್ಸಾಪ್ ನಲ್ಲಿ ಹರಿಯಬಿಟ್ಟಿದ್ದರು. ಆದರೆ ಅವರು ನಿನ್ನೆ ತಾನೇ ನಮ್ಮ ಜೊತೆಯಲ್ಲಿಯೇ ಇದ್ದರು, ಚೆನ್ನಾಗಿಯೇ ಮಾತನಾಡಿದರು ಆದರೆ ರಾತ್ರಿಯೇ ಕಣ್ಮರೆಯಾಗಿದ್ದು ಬಿಜೆಪಿಯವರು ಅಪಹರಿಸಿದ್ದು ಇದರ ತನಿಖೆ ನಡೆಸಬೇಕು ಎಂದು ಡಿ.ಕೆ ಶಿವಕುಮಾರ್ ಪಟ್ಟು ಹಿಡಿದರು.

ಅವರು ಬೆಂಗಳೂರಿನ ರೆಸಾರ್ಟ್ ನಿಂದ ಚನ್ನೈಗೆ ಹೋಗಿ ಅಲ್ಲಿಂದ ಮುಂಬೈಗೆ ಹೋಗಿರುವ ಕುರಿತು ವಿಮಾನ ಟಿಕೆಟ್ ಗಳನ್ನು ಪ್ರದರ್ಶಿಸಿದ ಡಿ.ಕೆ ಶಿವಕುಮಾರ್ ಇದೆಲ್ಲದರ ಹಿಂದೆ ಬಿಜೆಪಿಯಿದೆ ಎಂದು ಆರೋಪಿಸಿದರು. ಇದರ ಜೊತೆಗೆ ಅವರು ವಿಮಾನದಲ್ಲಿ ಹೋಗಿರುವ ಟಕೇಟ್ ಕಾಪಿಗಳನ್ನು ಪ್ರದರ್ಶನ ಮಾಡಿ ಇದೆಲ್ಲದರ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸಿದ್ದರು. ದಿನೇಶ್ ಗುಂಡೂರಾವ್ ಕೂಡ ಇದಕ್ಕೆ ದನಿಗೂಡಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯನವರು ಶಾಸಕಾಂಗದ ಪಕ್ಷದ ನಾಯಕನಾಗಿ ನಮ್ಮ ಸದಸ್ಯರಿಗೆ ವಿಪ್ ನೀಡುವ ನನ್ನ ಅಧಿಕಾರದ ಬಗ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಆದೇಶದಲ್ಲಿ‌ ಗೊಂದಲ ಇದೆ. ಇದು ಸ್ಪಷ್ಟವಾಗುವ ವರೆಗೆ ಮುಖ್ಯಮಂತ್ರಿಗಳು ವಿಶ್ವಾಸಮತ ಮಂಡನೆಯನ್ನು ಮುಂದೂಡಬೇಕು ಎಂದು ವಾದ ಮಂಡಿಸಿದ್ದರು.

ಇದೆಲ್ಲದರ ಕುರಿತು ಅಡ್ವೋಕೇಟ್ ಜನರಲ್ ಬಳಿ ಚರ್ಚಿಸಲು ಸಂಜೆ 4 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ರವರು ತೆರಳಿದ್ದರು. ಹಾಗಾಗಿ ಅವರ ಅನುಪಸ್ಥಿತಿಯಲ್ಲಿ ಉಪಸಭಾಧ್ಯಕ್ಷ ಜೆ.ಕೆ ಕೃಷ್ಣರೆಡ್ಡಿಯವರು ಕಲಾಪವನ್ನು ನಡೆಸುವ ಜವಾಬ್ದಾರಿ ವಹಿಸಿಕೊಂಡರು. ಆದರೆ ಆಡಳಿತ ಪಕ್ಷದ ಸದಸ್ಯರು ಶ್ರೀಮಂತ ಪಾಟೀಲರ ವಿಷಯವಿಟ್ಟುಕೊಂಡು ಪದೇ ಪದೇ ಪ್ರತಿಭಟಿಸಿ, ಬಿಜೆಪಿಯ ಆಪರೇಷನ್ ಕಮಲದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿಯುಂಟುಮಾಡಿದರು.

ಇದರಿಂದ ಉಪಸಭಾಧ್ಯಕ್ಷ ಜೆ.ಕೆ ಕೃಷ್ಣರೆಡ್ಡಿಯವರು ಸಂಜೆ 6.20ರ ಸಮಯಕ್ಕೆ ಕಲಾಪವನ್ನು ಶುಕ್ರವಾರ 11 ಗಂಟೆಗೆ ಮುಂದೂಡುವ ನಿರ್ಧಾರ ಕೈಗೊಂಡರು.

ರಾತ್ರಿಯೆಲ್ಲಾ ಸದನದಲ್ಲಿಯೇ ಉಳಿಯುತ್ತೇವೆ : ಯಡಿಯೂರಪ್ಪ

ವಿಶ್ವಾಸಮತ ನಡೆಯುತ್ತದೆ ಮತ್ತು ಆಡಳಿತ ಪಕ್ಷಕ್ಕೆ ಸೋಲಾಗುತ್ತದೆ, 107ರಷ್ಟು ಸಂಖ್ಯಾಬಲವಿರುವ ಬಿಜೆಪಿ ಸರ್ಕಾರ ರಚಿಸಬಹುದು ಎಂಬ ಆಸೆಯಲ್ಲಿದ್ದ ಯಡಿಯೂರಪ್ಪಗೆ ಇಂದಿನ ಕಲಾಪದಿಂದ ತೀವ್ರ ನಿರಾಶೆಯಾಗಿದೆ. ಬೆಳಿಗ್ಗೆಯಿಂದಲೂ ಅವರು ಬಹಳ ತಾಳ್ಮೆಯಿಂದ ಕಾದಿದ್ದರು. ಒಮ್ಮೆ ಮಾತ್ರ “ಸುಪ್ರೀಂ ಕೋರ್ಟ್ ಹೇಳಿ ಅತೃಪ್ತ ಶಾಸಕರಿಗೆ ವಿಪ್ ನೀಡಬೇಕಿಲ್ಲ ಎಂದು” ಯಡಿಯೂರಪ್ಪ ಹೇಳಿದಾಗ ಸದನದಲ್ಲಿ ದೊಡ್ಡ ಗದ್ದಲ ಉಂಟಾಯಿತು. ಡಿ.ಕೆ ಶಿವಕುಮಾರ್ ಸದನದಲ್ಲಿ ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದೀರಿ ಎಂದು ಕೂಗಾಡಿದರು. ಆಗ ಯಡಿಯೂರಪ್ಪನವರು ಇಲ್ಲ ಬೇಕಾದರೆ ಆ ಪದಗಳನ್ನು ನಾನು ವಾಪಸ್ ಪಡೆಯುತ್ತೇನೆ ಎನ್ನುವಷ್ಟರ ಮಟ್ಟಕ್ಕೆ ತಲುಪಿದ್ದರು.

ಆದರೆ ಯಾವಾಗ ಸದನ ನಾಳೆಗೆ ಹೋಯಿತೋ? ಆಗ ಯಡಿಯೂರಪ್ಪನವರು ಪ್ರತಿಭಟನೆಯ ಕಾರಣಕ್ಕಾಗಿ ರಾತ್ರಿಯೆಲ್ಲಾ ಇಲ್ಲೇ ತಂಗುತ್ತೇವೆ, ಇದೇನು ನಮಗೆ ಹೊಸದಲ್ಲ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರೆಸಾರ್ಟ್ ನತ್ತ ಹೆಜ್ಜೆ ಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...