Homeಕರ್ನಾಟಕಕಲಾಪ ತಿಂದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ವಿಚಾರ: ನಾಳೆಗೆ ಸದನ ಮೂಂದೂಡಿಕೆ

ಕಲಾಪ ತಿಂದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ವಿಚಾರ: ನಾಳೆಗೆ ಸದನ ಮೂಂದೂಡಿಕೆ

- Advertisement -
- Advertisement -

ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ರನ್ನು ಬಿಜೆಪಿ ಕಿಡ್ನಾಪ್ ಮಾಡಿದೆ ಎಂದು ಆರೋಪಿಸಿದ್ದ ಸಚಿವ ಡಿ.ಕೆ ಶಿವಕುಮಾರ್ ಸದನದಲ್ಲಿಂದು ಅದಕ್ಕೆ ಸಾಕ್ಷಿ ತೋರಿಸಿದ್ದಾರೆ. ಅದು ನಿನ್ನೆ ರಾತ್ರಿ ಶ್ರೀಮಂತ ಪಾಟೀಲರು ಆರಾಮಾಗಿ ಒಡಾಡುತ್ತಾ, ಬಿಜೆಪಿಯ ಲಕ್ಷ್ಮಣ್ ಸವಧಿಯ ಜೊತೆ ಮುಂಬೈಗೆ ವಿಮಾನ ಹತ್ತಿರುವ ಫೋಟೊಗಳನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ಅವನ್ನಿಟ್ಟುಕೊಂಡು ಸದನದಲ್ಲಿ ಭಾರೀ ಗದ್ದಲ ಮತ್ತು ಪ್ರತಿಭಟನೆ ನಡೆಸಿದರು. ಇದರಿಂದ ಕಲಾಪವನ್ನು ಉಪಸಭಾಧ್ಯಕ್ಷ ಜೆ.ಕೆ ಕೃಷ್ಣರೆಡ್ಡಿಯವರು ನಾಳೆಗೆ ಮುಂದೂಡಿದರು.

ಇದಕ್ಕೂ ಮೊದಲು ಶ್ರೀಮಂತ ಪಾಟೀಲರಿಗೆ ಹೃದಯಘಾತವಾಗಿ ಮುಂಬೈ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೆಲವರು ವಾಟ್ಸಾಪ್ ನಲ್ಲಿ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವ ಪೋಟೊಗಳನ್ನು ವಾಟ್ಸಾಪ್ ನಲ್ಲಿ ಹರಿಯಬಿಟ್ಟಿದ್ದರು. ಆದರೆ ಅವರು ನಿನ್ನೆ ತಾನೇ ನಮ್ಮ ಜೊತೆಯಲ್ಲಿಯೇ ಇದ್ದರು, ಚೆನ್ನಾಗಿಯೇ ಮಾತನಾಡಿದರು ಆದರೆ ರಾತ್ರಿಯೇ ಕಣ್ಮರೆಯಾಗಿದ್ದು ಬಿಜೆಪಿಯವರು ಅಪಹರಿಸಿದ್ದು ಇದರ ತನಿಖೆ ನಡೆಸಬೇಕು ಎಂದು ಡಿ.ಕೆ ಶಿವಕುಮಾರ್ ಪಟ್ಟು ಹಿಡಿದರು.

ಅವರು ಬೆಂಗಳೂರಿನ ರೆಸಾರ್ಟ್ ನಿಂದ ಚನ್ನೈಗೆ ಹೋಗಿ ಅಲ್ಲಿಂದ ಮುಂಬೈಗೆ ಹೋಗಿರುವ ಕುರಿತು ವಿಮಾನ ಟಿಕೆಟ್ ಗಳನ್ನು ಪ್ರದರ್ಶಿಸಿದ ಡಿ.ಕೆ ಶಿವಕುಮಾರ್ ಇದೆಲ್ಲದರ ಹಿಂದೆ ಬಿಜೆಪಿಯಿದೆ ಎಂದು ಆರೋಪಿಸಿದರು. ಇದರ ಜೊತೆಗೆ ಅವರು ವಿಮಾನದಲ್ಲಿ ಹೋಗಿರುವ ಟಕೇಟ್ ಕಾಪಿಗಳನ್ನು ಪ್ರದರ್ಶನ ಮಾಡಿ ಇದೆಲ್ಲದರ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸಿದ್ದರು. ದಿನೇಶ್ ಗುಂಡೂರಾವ್ ಕೂಡ ಇದಕ್ಕೆ ದನಿಗೂಡಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯನವರು ಶಾಸಕಾಂಗದ ಪಕ್ಷದ ನಾಯಕನಾಗಿ ನಮ್ಮ ಸದಸ್ಯರಿಗೆ ವಿಪ್ ನೀಡುವ ನನ್ನ ಅಧಿಕಾರದ ಬಗ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಆದೇಶದಲ್ಲಿ‌ ಗೊಂದಲ ಇದೆ. ಇದು ಸ್ಪಷ್ಟವಾಗುವ ವರೆಗೆ ಮುಖ್ಯಮಂತ್ರಿಗಳು ವಿಶ್ವಾಸಮತ ಮಂಡನೆಯನ್ನು ಮುಂದೂಡಬೇಕು ಎಂದು ವಾದ ಮಂಡಿಸಿದ್ದರು.

ಇದೆಲ್ಲದರ ಕುರಿತು ಅಡ್ವೋಕೇಟ್ ಜನರಲ್ ಬಳಿ ಚರ್ಚಿಸಲು ಸಂಜೆ 4 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ರವರು ತೆರಳಿದ್ದರು. ಹಾಗಾಗಿ ಅವರ ಅನುಪಸ್ಥಿತಿಯಲ್ಲಿ ಉಪಸಭಾಧ್ಯಕ್ಷ ಜೆ.ಕೆ ಕೃಷ್ಣರೆಡ್ಡಿಯವರು ಕಲಾಪವನ್ನು ನಡೆಸುವ ಜವಾಬ್ದಾರಿ ವಹಿಸಿಕೊಂಡರು. ಆದರೆ ಆಡಳಿತ ಪಕ್ಷದ ಸದಸ್ಯರು ಶ್ರೀಮಂತ ಪಾಟೀಲರ ವಿಷಯವಿಟ್ಟುಕೊಂಡು ಪದೇ ಪದೇ ಪ್ರತಿಭಟಿಸಿ, ಬಿಜೆಪಿಯ ಆಪರೇಷನ್ ಕಮಲದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿಯುಂಟುಮಾಡಿದರು.

ಇದರಿಂದ ಉಪಸಭಾಧ್ಯಕ್ಷ ಜೆ.ಕೆ ಕೃಷ್ಣರೆಡ್ಡಿಯವರು ಸಂಜೆ 6.20ರ ಸಮಯಕ್ಕೆ ಕಲಾಪವನ್ನು ಶುಕ್ರವಾರ 11 ಗಂಟೆಗೆ ಮುಂದೂಡುವ ನಿರ್ಧಾರ ಕೈಗೊಂಡರು.

ರಾತ್ರಿಯೆಲ್ಲಾ ಸದನದಲ್ಲಿಯೇ ಉಳಿಯುತ್ತೇವೆ : ಯಡಿಯೂರಪ್ಪ

ವಿಶ್ವಾಸಮತ ನಡೆಯುತ್ತದೆ ಮತ್ತು ಆಡಳಿತ ಪಕ್ಷಕ್ಕೆ ಸೋಲಾಗುತ್ತದೆ, 107ರಷ್ಟು ಸಂಖ್ಯಾಬಲವಿರುವ ಬಿಜೆಪಿ ಸರ್ಕಾರ ರಚಿಸಬಹುದು ಎಂಬ ಆಸೆಯಲ್ಲಿದ್ದ ಯಡಿಯೂರಪ್ಪಗೆ ಇಂದಿನ ಕಲಾಪದಿಂದ ತೀವ್ರ ನಿರಾಶೆಯಾಗಿದೆ. ಬೆಳಿಗ್ಗೆಯಿಂದಲೂ ಅವರು ಬಹಳ ತಾಳ್ಮೆಯಿಂದ ಕಾದಿದ್ದರು. ಒಮ್ಮೆ ಮಾತ್ರ “ಸುಪ್ರೀಂ ಕೋರ್ಟ್ ಹೇಳಿ ಅತೃಪ್ತ ಶಾಸಕರಿಗೆ ವಿಪ್ ನೀಡಬೇಕಿಲ್ಲ ಎಂದು” ಯಡಿಯೂರಪ್ಪ ಹೇಳಿದಾಗ ಸದನದಲ್ಲಿ ದೊಡ್ಡ ಗದ್ದಲ ಉಂಟಾಯಿತು. ಡಿ.ಕೆ ಶಿವಕುಮಾರ್ ಸದನದಲ್ಲಿ ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದೀರಿ ಎಂದು ಕೂಗಾಡಿದರು. ಆಗ ಯಡಿಯೂರಪ್ಪನವರು ಇಲ್ಲ ಬೇಕಾದರೆ ಆ ಪದಗಳನ್ನು ನಾನು ವಾಪಸ್ ಪಡೆಯುತ್ತೇನೆ ಎನ್ನುವಷ್ಟರ ಮಟ್ಟಕ್ಕೆ ತಲುಪಿದ್ದರು.

ಆದರೆ ಯಾವಾಗ ಸದನ ನಾಳೆಗೆ ಹೋಯಿತೋ? ಆಗ ಯಡಿಯೂರಪ್ಪನವರು ಪ್ರತಿಭಟನೆಯ ಕಾರಣಕ್ಕಾಗಿ ರಾತ್ರಿಯೆಲ್ಲಾ ಇಲ್ಲೇ ತಂಗುತ್ತೇವೆ, ಇದೇನು ನಮಗೆ ಹೊಸದಲ್ಲ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರೆಸಾರ್ಟ್ ನತ್ತ ಹೆಜ್ಜೆ ಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...