Homeಕರ್ನಾಟಕಕಲಾಪ ತಿಂದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ವಿಚಾರ: ನಾಳೆಗೆ ಸದನ ಮೂಂದೂಡಿಕೆ

ಕಲಾಪ ತಿಂದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ವಿಚಾರ: ನಾಳೆಗೆ ಸದನ ಮೂಂದೂಡಿಕೆ

- Advertisement -
- Advertisement -

ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ರನ್ನು ಬಿಜೆಪಿ ಕಿಡ್ನಾಪ್ ಮಾಡಿದೆ ಎಂದು ಆರೋಪಿಸಿದ್ದ ಸಚಿವ ಡಿ.ಕೆ ಶಿವಕುಮಾರ್ ಸದನದಲ್ಲಿಂದು ಅದಕ್ಕೆ ಸಾಕ್ಷಿ ತೋರಿಸಿದ್ದಾರೆ. ಅದು ನಿನ್ನೆ ರಾತ್ರಿ ಶ್ರೀಮಂತ ಪಾಟೀಲರು ಆರಾಮಾಗಿ ಒಡಾಡುತ್ತಾ, ಬಿಜೆಪಿಯ ಲಕ್ಷ್ಮಣ್ ಸವಧಿಯ ಜೊತೆ ಮುಂಬೈಗೆ ವಿಮಾನ ಹತ್ತಿರುವ ಫೋಟೊಗಳನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ಅವನ್ನಿಟ್ಟುಕೊಂಡು ಸದನದಲ್ಲಿ ಭಾರೀ ಗದ್ದಲ ಮತ್ತು ಪ್ರತಿಭಟನೆ ನಡೆಸಿದರು. ಇದರಿಂದ ಕಲಾಪವನ್ನು ಉಪಸಭಾಧ್ಯಕ್ಷ ಜೆ.ಕೆ ಕೃಷ್ಣರೆಡ್ಡಿಯವರು ನಾಳೆಗೆ ಮುಂದೂಡಿದರು.

ಇದಕ್ಕೂ ಮೊದಲು ಶ್ರೀಮಂತ ಪಾಟೀಲರಿಗೆ ಹೃದಯಘಾತವಾಗಿ ಮುಂಬೈ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೆಲವರು ವಾಟ್ಸಾಪ್ ನಲ್ಲಿ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವ ಪೋಟೊಗಳನ್ನು ವಾಟ್ಸಾಪ್ ನಲ್ಲಿ ಹರಿಯಬಿಟ್ಟಿದ್ದರು. ಆದರೆ ಅವರು ನಿನ್ನೆ ತಾನೇ ನಮ್ಮ ಜೊತೆಯಲ್ಲಿಯೇ ಇದ್ದರು, ಚೆನ್ನಾಗಿಯೇ ಮಾತನಾಡಿದರು ಆದರೆ ರಾತ್ರಿಯೇ ಕಣ್ಮರೆಯಾಗಿದ್ದು ಬಿಜೆಪಿಯವರು ಅಪಹರಿಸಿದ್ದು ಇದರ ತನಿಖೆ ನಡೆಸಬೇಕು ಎಂದು ಡಿ.ಕೆ ಶಿವಕುಮಾರ್ ಪಟ್ಟು ಹಿಡಿದರು.

ಅವರು ಬೆಂಗಳೂರಿನ ರೆಸಾರ್ಟ್ ನಿಂದ ಚನ್ನೈಗೆ ಹೋಗಿ ಅಲ್ಲಿಂದ ಮುಂಬೈಗೆ ಹೋಗಿರುವ ಕುರಿತು ವಿಮಾನ ಟಿಕೆಟ್ ಗಳನ್ನು ಪ್ರದರ್ಶಿಸಿದ ಡಿ.ಕೆ ಶಿವಕುಮಾರ್ ಇದೆಲ್ಲದರ ಹಿಂದೆ ಬಿಜೆಪಿಯಿದೆ ಎಂದು ಆರೋಪಿಸಿದರು. ಇದರ ಜೊತೆಗೆ ಅವರು ವಿಮಾನದಲ್ಲಿ ಹೋಗಿರುವ ಟಕೇಟ್ ಕಾಪಿಗಳನ್ನು ಪ್ರದರ್ಶನ ಮಾಡಿ ಇದೆಲ್ಲದರ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸಿದ್ದರು. ದಿನೇಶ್ ಗುಂಡೂರಾವ್ ಕೂಡ ಇದಕ್ಕೆ ದನಿಗೂಡಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯನವರು ಶಾಸಕಾಂಗದ ಪಕ್ಷದ ನಾಯಕನಾಗಿ ನಮ್ಮ ಸದಸ್ಯರಿಗೆ ವಿಪ್ ನೀಡುವ ನನ್ನ ಅಧಿಕಾರದ ಬಗ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಆದೇಶದಲ್ಲಿ‌ ಗೊಂದಲ ಇದೆ. ಇದು ಸ್ಪಷ್ಟವಾಗುವ ವರೆಗೆ ಮುಖ್ಯಮಂತ್ರಿಗಳು ವಿಶ್ವಾಸಮತ ಮಂಡನೆಯನ್ನು ಮುಂದೂಡಬೇಕು ಎಂದು ವಾದ ಮಂಡಿಸಿದ್ದರು.

ಇದೆಲ್ಲದರ ಕುರಿತು ಅಡ್ವೋಕೇಟ್ ಜನರಲ್ ಬಳಿ ಚರ್ಚಿಸಲು ಸಂಜೆ 4 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ರವರು ತೆರಳಿದ್ದರು. ಹಾಗಾಗಿ ಅವರ ಅನುಪಸ್ಥಿತಿಯಲ್ಲಿ ಉಪಸಭಾಧ್ಯಕ್ಷ ಜೆ.ಕೆ ಕೃಷ್ಣರೆಡ್ಡಿಯವರು ಕಲಾಪವನ್ನು ನಡೆಸುವ ಜವಾಬ್ದಾರಿ ವಹಿಸಿಕೊಂಡರು. ಆದರೆ ಆಡಳಿತ ಪಕ್ಷದ ಸದಸ್ಯರು ಶ್ರೀಮಂತ ಪಾಟೀಲರ ವಿಷಯವಿಟ್ಟುಕೊಂಡು ಪದೇ ಪದೇ ಪ್ರತಿಭಟಿಸಿ, ಬಿಜೆಪಿಯ ಆಪರೇಷನ್ ಕಮಲದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿಯುಂಟುಮಾಡಿದರು.

ಇದರಿಂದ ಉಪಸಭಾಧ್ಯಕ್ಷ ಜೆ.ಕೆ ಕೃಷ್ಣರೆಡ್ಡಿಯವರು ಸಂಜೆ 6.20ರ ಸಮಯಕ್ಕೆ ಕಲಾಪವನ್ನು ಶುಕ್ರವಾರ 11 ಗಂಟೆಗೆ ಮುಂದೂಡುವ ನಿರ್ಧಾರ ಕೈಗೊಂಡರು.

ರಾತ್ರಿಯೆಲ್ಲಾ ಸದನದಲ್ಲಿಯೇ ಉಳಿಯುತ್ತೇವೆ : ಯಡಿಯೂರಪ್ಪ

ವಿಶ್ವಾಸಮತ ನಡೆಯುತ್ತದೆ ಮತ್ತು ಆಡಳಿತ ಪಕ್ಷಕ್ಕೆ ಸೋಲಾಗುತ್ತದೆ, 107ರಷ್ಟು ಸಂಖ್ಯಾಬಲವಿರುವ ಬಿಜೆಪಿ ಸರ್ಕಾರ ರಚಿಸಬಹುದು ಎಂಬ ಆಸೆಯಲ್ಲಿದ್ದ ಯಡಿಯೂರಪ್ಪಗೆ ಇಂದಿನ ಕಲಾಪದಿಂದ ತೀವ್ರ ನಿರಾಶೆಯಾಗಿದೆ. ಬೆಳಿಗ್ಗೆಯಿಂದಲೂ ಅವರು ಬಹಳ ತಾಳ್ಮೆಯಿಂದ ಕಾದಿದ್ದರು. ಒಮ್ಮೆ ಮಾತ್ರ “ಸುಪ್ರೀಂ ಕೋರ್ಟ್ ಹೇಳಿ ಅತೃಪ್ತ ಶಾಸಕರಿಗೆ ವಿಪ್ ನೀಡಬೇಕಿಲ್ಲ ಎಂದು” ಯಡಿಯೂರಪ್ಪ ಹೇಳಿದಾಗ ಸದನದಲ್ಲಿ ದೊಡ್ಡ ಗದ್ದಲ ಉಂಟಾಯಿತು. ಡಿ.ಕೆ ಶಿವಕುಮಾರ್ ಸದನದಲ್ಲಿ ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದೀರಿ ಎಂದು ಕೂಗಾಡಿದರು. ಆಗ ಯಡಿಯೂರಪ್ಪನವರು ಇಲ್ಲ ಬೇಕಾದರೆ ಆ ಪದಗಳನ್ನು ನಾನು ವಾಪಸ್ ಪಡೆಯುತ್ತೇನೆ ಎನ್ನುವಷ್ಟರ ಮಟ್ಟಕ್ಕೆ ತಲುಪಿದ್ದರು.

ಆದರೆ ಯಾವಾಗ ಸದನ ನಾಳೆಗೆ ಹೋಯಿತೋ? ಆಗ ಯಡಿಯೂರಪ್ಪನವರು ಪ್ರತಿಭಟನೆಯ ಕಾರಣಕ್ಕಾಗಿ ರಾತ್ರಿಯೆಲ್ಲಾ ಇಲ್ಲೇ ತಂಗುತ್ತೇವೆ, ಇದೇನು ನಮಗೆ ಹೊಸದಲ್ಲ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರೆಸಾರ್ಟ್ ನತ್ತ ಹೆಜ್ಜೆ ಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...