Homeಕರ್ನಾಟಕಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

ಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

- Advertisement -
- Advertisement -

ಇಂದು ಪೂರ್ವನಿಗದಿತ ಅಧಿಸೂಚನೆಯಂತೆ ವಿಶ್ವಾಸಮತ ಯಾಚನೆಗೆ ವಿಧಾನಸಭೆ ಕಲಾಪ ಶುರುವಾಯಿತಾದರೂ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಂವಿಧಾನದ ಚೌಕಟ್ಟಿನೊಳಗೇ ಯೋಜಿತ ಕಾರ್ಯಾಚರಣೆಯನ್ನು ನಡೆಸಿವೆ. ಇದು ಬಿಜೆಪಿಯಲ್ಲಿ, ಅದಕ್ಕಿಂತಲೂ ಹೆಚ್ಚಾಗಿ ರಾಜೀನಾಮೆ ಕೊಟ್ಟು ಪಕ್ಷ ಹಾರಲು ಸಿದ್ಧವಾಗಿರುವ ಶಾಸಕರಲ್ಲಿ ಆತಂಕ ಹುಟ್ಟಿಸಿರಲಿಕ್ಕೆ ಸಾಕು.

ರಾಜೀನಾಮೆ ಅಂಗೀಕರಿಸುವ ವಿಚಾರದಲ್ಲಿ ಸ್ಪೀಕರ್ ಅವರ ಪರಮಾಧಿಕಾರಕ್ಕೆ ಅಡ್ಡಿ ಬರುವುದಿಲ್ಲ ಎಂದು ಸುಪ್ರೀಂಕೋರ್ಟು ಹೇಳಿತ್ತು. ಆದರೆ, ರಾಜೀನಾಮೆ ನೀಡಿರುವ ಶಾಸಕರನ್ನು ಸದನಕ್ಕೆ ಬರುವಂತೆ ಬಲವಂತಪಡಿಸತಕ್ಕದ್ದಲ್ಲ, ಅದನ್ನು ಅವರ ವಿವೇಚನೆಗೆ ಬಿಡಬೇಕು ಎಂದೂ ಹೇಳಿತ್ತು. ಇದು ವಿಪ್ ಹೊರಡಿಸಬೇಕೇ ಇಲ್ಲವೇ ಎಂಬುದರ ಕುರಿತು, ಒಂದು ವೇಳೆ ವಿಪ್ ಉಲ್ಲಂಘನೆ ಆದರೆ, ಅದರ ಕುರಿತು ಕ್ರಮ ಕೈಗೊಳ್ಳಬಹುದೇ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಮುಖ ಅಂಶವಾದ ವಿಪ್ ಉಲ್ಲಂಘನೆಯ ಮಹತ್ವವೇ ಅಪ್ರಸ್ತುತವಾಗುತ್ತದೆ ಎಂಬ ಪ್ರಶ್ನೆ ಉದ್ಭವವಾಗಿತ್ತು.

ಈಗ ಪ್ರಶ್ನೆಯು ವಿಪ್ ನೀಡುವ ಶಾಸಕಾಂಗ ಪಕ್ಷದ ನಾಯಕರ ಸಂವಿಧಾನಬದ್ಧ ಅಧಿಕಾರವನ್ನು ನ್ಯಾಯಾಂಗ ನಿರ್ಬಂಧಿಸಬಹುದೇ ಎಂಬುದಾಗಿತ್ತು. ಅದನ್ನು ಸರಿಯಾಗಿ ಅಧ್ಯಯನ ಮಾಡಿದ್ದ ಕಾಂಗ್ರೆಸ್ ನಾಯಕರು ಇಂದು ಯೋಜಿತವಾದ ರೀತಿಯಲ್ಲಿ ಸಂವಾದ ನಡೆಸಿದರು. ಮೊದಲಿಗೆ ವಿಶ್ವಾಸಮತ ಯಾಚನೆಯ ಗೊತ್ತುವಳಿಯನ್ನು ಸಭಾನಾಯಕರಾದ ಎಚ್.ಡಿ.ಕುಮಾರಸ್ವಾಮಿ ಮುಂದಿಟ್ಟರು. ಅದಕ್ಕೆ ಸ್ಪೀಕರ್ ಅವಕಾಶ ಮಾಡಿಕೊಟ್ಟ ನಂತರ, ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರು ‘ಇದನ್ನು ಕಾಲನಿಗದಿತವಾಗಿ ಬೇಗನೇ ಮುಗಿಸಬೇಕು’ ಎಂದು ಮನವಿ ಮಾಡಿದರು. ಕಾಲಾವಧಿ ಕುರಿತು ನಂತರ ನೋಡೋಣ ಈಗ ಚರ್ಚೆ ಆರಂಭವಾಗಲಿ ಎಂದು ಸ್ಪೀಕರ್ ಹೇಳಿದ ನಂತರ ಮುಖ್ಯಮಂತ್ರಿ ತಮ್ಮ ಮಾತನ್ನು ಆರಂಭಿಸಿದರು. ಅಲ್ಲಿಂದ ಮುಂದಕ್ಕೆ ನಡೆದಿದ್ದು ಅತ್ಯಂತ ಸ್ವಾರಸ್ಯಕರವಾದ ಮತ್ತು ಮಹತ್ವದ ಚರ್ಚೆ.

ಮುಖ್ಯಮಂತ್ರಿ ಮಾತಾಡಲು ಶುರು ಮಾಡಿದ ನಂತರ ಮಧ್ಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರು ಕ್ರಿಯಾಲೋಪ (ಪಾಯಿಂಟ್ ಆಫ್ ಆರ್ಡರ್) ಎತ್ತಿದರು. ಇಂದು ವಿಶ್ವಾಸಮತ ಯಾಚನೆ ಮುಗಿದುಹೋಗಬಾರದು ಎಂಬ ಕಾರಣಕ್ಕೆ ಅವರು ದೀರ್ಘವಾಗಿ ಮಾತಾಡುತ್ತಿದ್ದಾರೆ ಎಂದು ವಿರೋಧಪಕ್ಷದ ಸದಸ್ಯರು ಆಕ್ಷೇಪ ಎತ್ತಿದರೂ, ಸಿದ್ದರಾಮಯ್ಯನವರಿಗೆ ಬೇರೆ ಪಾಯಿಂಟ್ ಮುಂದಿಡಬೇಕಿತ್ತು. ಅವರ ಪ್ರಕಾರ

ಸಿದ್ದರಾಮಯ್ಯ: ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಲಾಗಿದ್ದ ಮೊಕದ್ದಮೆಯಲ್ಲಿ ಪ್ರಾರ್ಥನೆ ಹೀಗಿತ್ತು.

1. ಪ್ರತಿವಾದಿ 2 (ಅಂದರೆ ಸಭಾಧ್ಯಕ್ಷರು) ರಾಜೀನಾಮೆ ಅಂಗೀಕರಿಸಲು ಸೂಚಿಸಬೇಕು.

2. ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಪ್ರತಿವಾದಿ 2 ಕ್ರಮ ತೆಗೆದುಕೊಳ್ಳದಂತೆ ನಿರ್ಬಂಧಿಸಬೇಕು.

ದುರದೃಷ್ಟಕರ ವಿಚಾರ ಒಂದಿದೆ.
ಮೊದಲನೆಯ ಪ್ರಾರ್ಥನೆಯ ಕುರಿತು (ರಾಜೀನಾಮೆ ಅಂಗೀಕಾರದ ಕುರಿತು) ಸ್ಪೀಕರ್‍ಗೆ ಎಲ್ಲಾ ರೀತಿಯ ಅಧಿಕಾರ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಆದರೆ, ಈ ಪ್ರಾರ್ಥನೆಯಲ್ಲಿ ಇಲ್ಲದಿದ್ದ ಒಂದು ಅಂಶದ ಕುರಿತು ಸುಪ್ರೀಂಕೋರ್ಟು ಸೂಚನೆ ನೀಡಿದೆ. ಅದರ ಪ್ರಕಾರ ರಾಜೀನಾಮೆ ನೀಡಿರುವ ಶಾಸಕರು ಸದನದ ಕಲಾಪದಲ್ಲಿ ಭಾಗವಹಿಸುವಂತೆ ಮುಂದಿನ ಆದೇಶದವರೆಗೆ ಬಲವಂತಗೊಳಿಸುವಂತಿಲ್ಲ ಎಂದು ಅದು ಹೇಳಿದೆ. ಆದರೆ, ವಿಪ್ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಈ ಮೊಕದ್ದಮೆಯಲ್ಲಿ ನಾನು (ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ) ಪ್ರತಿವಾದಿಯೇ ಅಲ್ಲ. ಇದು ಸಂವಿಧಾನದ 10ನೇ ಶೆಡ್ಯೂಲ್‍ನಲ್ಲಿ ನನಗೆ ಕೊಟ್ಟಿರುವ ಅಧಿಕಾರವನ್ನು ನಿರ್ಬಂಧಿಸುತ್ತದೆ. ನನ್ನನ್ನು ಅಥವಾ ಕಾಂಗ್ರೆಸ್ ಪಕ್ಷವನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸುವುದು ಸರಿಯೇ? ಈ ಕುರಿತು ಸಭಾಧ್ಯಕ್ಷರು ಸ್ಪಷ್ಟೀಕರಣ ನೀಡಬೇಕು.

ಸ್ಪೀಕರ್: ಇದನ್ನು ನಾನು ಇಂಗ್ಲಿಷಿನಲ್ಲೇ ಉತ್ತರಿಸುತ್ತೇನೆ. ‘ನನ್ನನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸಿದ್ದಾರೆ. ಜೊತೆಗೆ ಇದು ಪ್ರೇಯರ್‍ನಲ್ಲಿ ಇರಲೂ ಇಲ್ಲ’ ಎಂದು ಶಾಸಕಾಂಗ ಪಕ್ಷದ ನಾಯಕರು ಹೇಳಿದ್ದಾರೆ. ಸುಪ್ರೀಂಕೋರ್ಟಿನ ಬಗ್ಗೆ ನಮಗೆಲ್ಲರಿಗೂ ಗೌರವವಿದೆ. ಅದು ಏನು ಹೇಳಿದೆ ಎಂಬ ಕುರಿತು ನಾನು ಕಾಮೆಂಟ್ ಮಾಡಲು ಹೋಗುವುದಿಲ್ಲ. ಆದರೆ, ನಾನು ನಿಮ್ಮ ಅಧಿಕಾರವನ್ನು ನಾನು ನಿರ್ಬಂಧಿಸುತ್ತಿಲ್ಲ.

ಎಚ್.ಕೆ.ಪಾಟೀಲ್: ಇದು ಬುದ್ಧಿವಂತರ ಸಭೆ – ನಮ್ಮ ಸ್ವಾಯತ್ತತೆಯನ್ನು ಕಿತ್ತುಕೊಂಡಾಗ ಸುಮ್ಮನಿರಬಾರದು.

ಕೃಷ್ಣ ಭೈರೇಗೌಡ: ಸುಪ್ರೀಂಕೋರ್ಟ್ ತೀರ್ಪಿನಿಂದ ಆ ಸದಸ್ಯರು ಸದನದ ಸದಸ್ಯರು ಹೌದೇ ಅಲ್ಲವೇ ಎಂಬ ಗೊಂದಲ ಉಂಟಾಗಿದೆ. ಅವರು ಪ್ರಮಾಣ ವಚನ ಸ್ವೀಕರಿಸಿದ ಮೇಲೆ ರಾಜೀನಾಮೆ ಅಂಗೀಕಾರವಾಗುವವರೆಗೆ ಸದನದ ಸದಸ್ಯರೇ ಆಗಿರುತ್ತಾರೆ.

ಇವೆಲ್ಲದರಿಂದ ಒಂದು ವಿಚಾರ ಸ್ಪಷ್ಟವಾಗಿದೆ. ಶಾಸಕಾಂಗದ ಅಧಿಕಾರವನ್ನು ಸುಪ್ರೀಂಕೋರ್ಟು ಮೊಟಕುಗೊಳಿಸಬಹುದೇ ಎಂಬ ಚರ್ಚೆಯನ್ನು ಸದನದಲ್ಲೇ ಮಾಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಅದರಿಂದ ಸುಪ್ರೀಂಕೋರ್ಟಿನ ತೀರ್ಪಿನಲ್ಲಿದ್ದ ಸಮಸ್ಯೆಯನ್ನು ಸದನದಲ್ಲಿ ಬಗೆಹರಿಸಿಕೊಳ್ಳಬಹುದು ಎಂಬುದು ಅವರ ಲೆಕ್ಕಾಚಾರ. ಸ್ಪೀಕರ್ ಈ ಕುರಿತು ರೂಲಿಂಗ್ ನೀಡಲೇಬೇಕಾಗುತ್ತದೆ. ಆ ಮೂಲಕ ವಿಪ್ ನೀಡಬಹುದು, ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಸದರಿ ಶಾಸಕರನ್ನು ಅನರ್ಹಗೊಳಿಸಬಹುದು ಎಂದಾದಲ್ಲಿ, ಮುಂಬೈ ಹೋಟೆಲಿನಲ್ಲಿ ಬೀಡುಬಿಟ್ಟಿರುವ ಶಾಸಕರು ಇಕ್ಕಟ್ಟಿಗೆ ಸಿಕ್ಕಿಕೊಳ್ಳುತ್ತದೆ. ಇದರಿಂದ ಬಿಜೆಪಿ ಇನ್ನಷ್ಟು ಗಲಭೆ ಎಬ್ಬಿಸಿದಲ್ಲಿ ಅದರಿಂದಲೂ ಸರ್ಕಾರಕ್ಕೇ ಒಳ್ಳೆಯದಾಗುತ್ತದೆ. ಈ ಅವಧಿಯಲ್ಲಿ ಸರ್ಕಾರ ಉಳಿಸಿಕೊಳ್ಳುವ ಅವಕಾಶ ಲಭ್ಯವಾಗುತ್ತದೆ ಎಂದು ಯೋಜಿಸಿದಂತಿದೆ. ಸ್ವೀಕರ್ ರವರು 3 ಗಂಟೆಗೆ ಸದನವನ್ನು ಮೂಂದೂಡಿದ್ದಾರೆ.

ಸ್ಪೀಕರ್ ಯಾವ ರೂಲಿಂಗ್ ಕೊಡುತ್ತಾರೆ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...