Homeಕರ್ನಾಟಕಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

ಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

- Advertisement -
- Advertisement -

ಇಂದು ಪೂರ್ವನಿಗದಿತ ಅಧಿಸೂಚನೆಯಂತೆ ವಿಶ್ವಾಸಮತ ಯಾಚನೆಗೆ ವಿಧಾನಸಭೆ ಕಲಾಪ ಶುರುವಾಯಿತಾದರೂ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಂವಿಧಾನದ ಚೌಕಟ್ಟಿನೊಳಗೇ ಯೋಜಿತ ಕಾರ್ಯಾಚರಣೆಯನ್ನು ನಡೆಸಿವೆ. ಇದು ಬಿಜೆಪಿಯಲ್ಲಿ, ಅದಕ್ಕಿಂತಲೂ ಹೆಚ್ಚಾಗಿ ರಾಜೀನಾಮೆ ಕೊಟ್ಟು ಪಕ್ಷ ಹಾರಲು ಸಿದ್ಧವಾಗಿರುವ ಶಾಸಕರಲ್ಲಿ ಆತಂಕ ಹುಟ್ಟಿಸಿರಲಿಕ್ಕೆ ಸಾಕು.

ರಾಜೀನಾಮೆ ಅಂಗೀಕರಿಸುವ ವಿಚಾರದಲ್ಲಿ ಸ್ಪೀಕರ್ ಅವರ ಪರಮಾಧಿಕಾರಕ್ಕೆ ಅಡ್ಡಿ ಬರುವುದಿಲ್ಲ ಎಂದು ಸುಪ್ರೀಂಕೋರ್ಟು ಹೇಳಿತ್ತು. ಆದರೆ, ರಾಜೀನಾಮೆ ನೀಡಿರುವ ಶಾಸಕರನ್ನು ಸದನಕ್ಕೆ ಬರುವಂತೆ ಬಲವಂತಪಡಿಸತಕ್ಕದ್ದಲ್ಲ, ಅದನ್ನು ಅವರ ವಿವೇಚನೆಗೆ ಬಿಡಬೇಕು ಎಂದೂ ಹೇಳಿತ್ತು. ಇದು ವಿಪ್ ಹೊರಡಿಸಬೇಕೇ ಇಲ್ಲವೇ ಎಂಬುದರ ಕುರಿತು, ಒಂದು ವೇಳೆ ವಿಪ್ ಉಲ್ಲಂಘನೆ ಆದರೆ, ಅದರ ಕುರಿತು ಕ್ರಮ ಕೈಗೊಳ್ಳಬಹುದೇ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಮುಖ ಅಂಶವಾದ ವಿಪ್ ಉಲ್ಲಂಘನೆಯ ಮಹತ್ವವೇ ಅಪ್ರಸ್ತುತವಾಗುತ್ತದೆ ಎಂಬ ಪ್ರಶ್ನೆ ಉದ್ಭವವಾಗಿತ್ತು.

ಈಗ ಪ್ರಶ್ನೆಯು ವಿಪ್ ನೀಡುವ ಶಾಸಕಾಂಗ ಪಕ್ಷದ ನಾಯಕರ ಸಂವಿಧಾನಬದ್ಧ ಅಧಿಕಾರವನ್ನು ನ್ಯಾಯಾಂಗ ನಿರ್ಬಂಧಿಸಬಹುದೇ ಎಂಬುದಾಗಿತ್ತು. ಅದನ್ನು ಸರಿಯಾಗಿ ಅಧ್ಯಯನ ಮಾಡಿದ್ದ ಕಾಂಗ್ರೆಸ್ ನಾಯಕರು ಇಂದು ಯೋಜಿತವಾದ ರೀತಿಯಲ್ಲಿ ಸಂವಾದ ನಡೆಸಿದರು. ಮೊದಲಿಗೆ ವಿಶ್ವಾಸಮತ ಯಾಚನೆಯ ಗೊತ್ತುವಳಿಯನ್ನು ಸಭಾನಾಯಕರಾದ ಎಚ್.ಡಿ.ಕುಮಾರಸ್ವಾಮಿ ಮುಂದಿಟ್ಟರು. ಅದಕ್ಕೆ ಸ್ಪೀಕರ್ ಅವಕಾಶ ಮಾಡಿಕೊಟ್ಟ ನಂತರ, ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರು ‘ಇದನ್ನು ಕಾಲನಿಗದಿತವಾಗಿ ಬೇಗನೇ ಮುಗಿಸಬೇಕು’ ಎಂದು ಮನವಿ ಮಾಡಿದರು. ಕಾಲಾವಧಿ ಕುರಿತು ನಂತರ ನೋಡೋಣ ಈಗ ಚರ್ಚೆ ಆರಂಭವಾಗಲಿ ಎಂದು ಸ್ಪೀಕರ್ ಹೇಳಿದ ನಂತರ ಮುಖ್ಯಮಂತ್ರಿ ತಮ್ಮ ಮಾತನ್ನು ಆರಂಭಿಸಿದರು. ಅಲ್ಲಿಂದ ಮುಂದಕ್ಕೆ ನಡೆದಿದ್ದು ಅತ್ಯಂತ ಸ್ವಾರಸ್ಯಕರವಾದ ಮತ್ತು ಮಹತ್ವದ ಚರ್ಚೆ.

ಮುಖ್ಯಮಂತ್ರಿ ಮಾತಾಡಲು ಶುರು ಮಾಡಿದ ನಂತರ ಮಧ್ಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರು ಕ್ರಿಯಾಲೋಪ (ಪಾಯಿಂಟ್ ಆಫ್ ಆರ್ಡರ್) ಎತ್ತಿದರು. ಇಂದು ವಿಶ್ವಾಸಮತ ಯಾಚನೆ ಮುಗಿದುಹೋಗಬಾರದು ಎಂಬ ಕಾರಣಕ್ಕೆ ಅವರು ದೀರ್ಘವಾಗಿ ಮಾತಾಡುತ್ತಿದ್ದಾರೆ ಎಂದು ವಿರೋಧಪಕ್ಷದ ಸದಸ್ಯರು ಆಕ್ಷೇಪ ಎತ್ತಿದರೂ, ಸಿದ್ದರಾಮಯ್ಯನವರಿಗೆ ಬೇರೆ ಪಾಯಿಂಟ್ ಮುಂದಿಡಬೇಕಿತ್ತು. ಅವರ ಪ್ರಕಾರ

ಸಿದ್ದರಾಮಯ್ಯ: ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಲಾಗಿದ್ದ ಮೊಕದ್ದಮೆಯಲ್ಲಿ ಪ್ರಾರ್ಥನೆ ಹೀಗಿತ್ತು.

1. ಪ್ರತಿವಾದಿ 2 (ಅಂದರೆ ಸಭಾಧ್ಯಕ್ಷರು) ರಾಜೀನಾಮೆ ಅಂಗೀಕರಿಸಲು ಸೂಚಿಸಬೇಕು.

2. ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಪ್ರತಿವಾದಿ 2 ಕ್ರಮ ತೆಗೆದುಕೊಳ್ಳದಂತೆ ನಿರ್ಬಂಧಿಸಬೇಕು.

ದುರದೃಷ್ಟಕರ ವಿಚಾರ ಒಂದಿದೆ.
ಮೊದಲನೆಯ ಪ್ರಾರ್ಥನೆಯ ಕುರಿತು (ರಾಜೀನಾಮೆ ಅಂಗೀಕಾರದ ಕುರಿತು) ಸ್ಪೀಕರ್‍ಗೆ ಎಲ್ಲಾ ರೀತಿಯ ಅಧಿಕಾರ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಆದರೆ, ಈ ಪ್ರಾರ್ಥನೆಯಲ್ಲಿ ಇಲ್ಲದಿದ್ದ ಒಂದು ಅಂಶದ ಕುರಿತು ಸುಪ್ರೀಂಕೋರ್ಟು ಸೂಚನೆ ನೀಡಿದೆ. ಅದರ ಪ್ರಕಾರ ರಾಜೀನಾಮೆ ನೀಡಿರುವ ಶಾಸಕರು ಸದನದ ಕಲಾಪದಲ್ಲಿ ಭಾಗವಹಿಸುವಂತೆ ಮುಂದಿನ ಆದೇಶದವರೆಗೆ ಬಲವಂತಗೊಳಿಸುವಂತಿಲ್ಲ ಎಂದು ಅದು ಹೇಳಿದೆ. ಆದರೆ, ವಿಪ್ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಈ ಮೊಕದ್ದಮೆಯಲ್ಲಿ ನಾನು (ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ) ಪ್ರತಿವಾದಿಯೇ ಅಲ್ಲ. ಇದು ಸಂವಿಧಾನದ 10ನೇ ಶೆಡ್ಯೂಲ್‍ನಲ್ಲಿ ನನಗೆ ಕೊಟ್ಟಿರುವ ಅಧಿಕಾರವನ್ನು ನಿರ್ಬಂಧಿಸುತ್ತದೆ. ನನ್ನನ್ನು ಅಥವಾ ಕಾಂಗ್ರೆಸ್ ಪಕ್ಷವನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸುವುದು ಸರಿಯೇ? ಈ ಕುರಿತು ಸಭಾಧ್ಯಕ್ಷರು ಸ್ಪಷ್ಟೀಕರಣ ನೀಡಬೇಕು.

ಸ್ಪೀಕರ್: ಇದನ್ನು ನಾನು ಇಂಗ್ಲಿಷಿನಲ್ಲೇ ಉತ್ತರಿಸುತ್ತೇನೆ. ‘ನನ್ನನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸಿದ್ದಾರೆ. ಜೊತೆಗೆ ಇದು ಪ್ರೇಯರ್‍ನಲ್ಲಿ ಇರಲೂ ಇಲ್ಲ’ ಎಂದು ಶಾಸಕಾಂಗ ಪಕ್ಷದ ನಾಯಕರು ಹೇಳಿದ್ದಾರೆ. ಸುಪ್ರೀಂಕೋರ್ಟಿನ ಬಗ್ಗೆ ನಮಗೆಲ್ಲರಿಗೂ ಗೌರವವಿದೆ. ಅದು ಏನು ಹೇಳಿದೆ ಎಂಬ ಕುರಿತು ನಾನು ಕಾಮೆಂಟ್ ಮಾಡಲು ಹೋಗುವುದಿಲ್ಲ. ಆದರೆ, ನಾನು ನಿಮ್ಮ ಅಧಿಕಾರವನ್ನು ನಾನು ನಿರ್ಬಂಧಿಸುತ್ತಿಲ್ಲ.

ಎಚ್.ಕೆ.ಪಾಟೀಲ್: ಇದು ಬುದ್ಧಿವಂತರ ಸಭೆ – ನಮ್ಮ ಸ್ವಾಯತ್ತತೆಯನ್ನು ಕಿತ್ತುಕೊಂಡಾಗ ಸುಮ್ಮನಿರಬಾರದು.

ಕೃಷ್ಣ ಭೈರೇಗೌಡ: ಸುಪ್ರೀಂಕೋರ್ಟ್ ತೀರ್ಪಿನಿಂದ ಆ ಸದಸ್ಯರು ಸದನದ ಸದಸ್ಯರು ಹೌದೇ ಅಲ್ಲವೇ ಎಂಬ ಗೊಂದಲ ಉಂಟಾಗಿದೆ. ಅವರು ಪ್ರಮಾಣ ವಚನ ಸ್ವೀಕರಿಸಿದ ಮೇಲೆ ರಾಜೀನಾಮೆ ಅಂಗೀಕಾರವಾಗುವವರೆಗೆ ಸದನದ ಸದಸ್ಯರೇ ಆಗಿರುತ್ತಾರೆ.

ಇವೆಲ್ಲದರಿಂದ ಒಂದು ವಿಚಾರ ಸ್ಪಷ್ಟವಾಗಿದೆ. ಶಾಸಕಾಂಗದ ಅಧಿಕಾರವನ್ನು ಸುಪ್ರೀಂಕೋರ್ಟು ಮೊಟಕುಗೊಳಿಸಬಹುದೇ ಎಂಬ ಚರ್ಚೆಯನ್ನು ಸದನದಲ್ಲೇ ಮಾಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಅದರಿಂದ ಸುಪ್ರೀಂಕೋರ್ಟಿನ ತೀರ್ಪಿನಲ್ಲಿದ್ದ ಸಮಸ್ಯೆಯನ್ನು ಸದನದಲ್ಲಿ ಬಗೆಹರಿಸಿಕೊಳ್ಳಬಹುದು ಎಂಬುದು ಅವರ ಲೆಕ್ಕಾಚಾರ. ಸ್ಪೀಕರ್ ಈ ಕುರಿತು ರೂಲಿಂಗ್ ನೀಡಲೇಬೇಕಾಗುತ್ತದೆ. ಆ ಮೂಲಕ ವಿಪ್ ನೀಡಬಹುದು, ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಸದರಿ ಶಾಸಕರನ್ನು ಅನರ್ಹಗೊಳಿಸಬಹುದು ಎಂದಾದಲ್ಲಿ, ಮುಂಬೈ ಹೋಟೆಲಿನಲ್ಲಿ ಬೀಡುಬಿಟ್ಟಿರುವ ಶಾಸಕರು ಇಕ್ಕಟ್ಟಿಗೆ ಸಿಕ್ಕಿಕೊಳ್ಳುತ್ತದೆ. ಇದರಿಂದ ಬಿಜೆಪಿ ಇನ್ನಷ್ಟು ಗಲಭೆ ಎಬ್ಬಿಸಿದಲ್ಲಿ ಅದರಿಂದಲೂ ಸರ್ಕಾರಕ್ಕೇ ಒಳ್ಳೆಯದಾಗುತ್ತದೆ. ಈ ಅವಧಿಯಲ್ಲಿ ಸರ್ಕಾರ ಉಳಿಸಿಕೊಳ್ಳುವ ಅವಕಾಶ ಲಭ್ಯವಾಗುತ್ತದೆ ಎಂದು ಯೋಜಿಸಿದಂತಿದೆ. ಸ್ವೀಕರ್ ರವರು 3 ಗಂಟೆಗೆ ಸದನವನ್ನು ಮೂಂದೂಡಿದ್ದಾರೆ.

ಸ್ಪೀಕರ್ ಯಾವ ರೂಲಿಂಗ್ ಕೊಡುತ್ತಾರೆ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...