Homeಕರ್ನಾಟಕಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

ಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

- Advertisement -
- Advertisement -

ಇಂದು ಪೂರ್ವನಿಗದಿತ ಅಧಿಸೂಚನೆಯಂತೆ ವಿಶ್ವಾಸಮತ ಯಾಚನೆಗೆ ವಿಧಾನಸಭೆ ಕಲಾಪ ಶುರುವಾಯಿತಾದರೂ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಂವಿಧಾನದ ಚೌಕಟ್ಟಿನೊಳಗೇ ಯೋಜಿತ ಕಾರ್ಯಾಚರಣೆಯನ್ನು ನಡೆಸಿವೆ. ಇದು ಬಿಜೆಪಿಯಲ್ಲಿ, ಅದಕ್ಕಿಂತಲೂ ಹೆಚ್ಚಾಗಿ ರಾಜೀನಾಮೆ ಕೊಟ್ಟು ಪಕ್ಷ ಹಾರಲು ಸಿದ್ಧವಾಗಿರುವ ಶಾಸಕರಲ್ಲಿ ಆತಂಕ ಹುಟ್ಟಿಸಿರಲಿಕ್ಕೆ ಸಾಕು.

ರಾಜೀನಾಮೆ ಅಂಗೀಕರಿಸುವ ವಿಚಾರದಲ್ಲಿ ಸ್ಪೀಕರ್ ಅವರ ಪರಮಾಧಿಕಾರಕ್ಕೆ ಅಡ್ಡಿ ಬರುವುದಿಲ್ಲ ಎಂದು ಸುಪ್ರೀಂಕೋರ್ಟು ಹೇಳಿತ್ತು. ಆದರೆ, ರಾಜೀನಾಮೆ ನೀಡಿರುವ ಶಾಸಕರನ್ನು ಸದನಕ್ಕೆ ಬರುವಂತೆ ಬಲವಂತಪಡಿಸತಕ್ಕದ್ದಲ್ಲ, ಅದನ್ನು ಅವರ ವಿವೇಚನೆಗೆ ಬಿಡಬೇಕು ಎಂದೂ ಹೇಳಿತ್ತು. ಇದು ವಿಪ್ ಹೊರಡಿಸಬೇಕೇ ಇಲ್ಲವೇ ಎಂಬುದರ ಕುರಿತು, ಒಂದು ವೇಳೆ ವಿಪ್ ಉಲ್ಲಂಘನೆ ಆದರೆ, ಅದರ ಕುರಿತು ಕ್ರಮ ಕೈಗೊಳ್ಳಬಹುದೇ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಮುಖ ಅಂಶವಾದ ವಿಪ್ ಉಲ್ಲಂಘನೆಯ ಮಹತ್ವವೇ ಅಪ್ರಸ್ತುತವಾಗುತ್ತದೆ ಎಂಬ ಪ್ರಶ್ನೆ ಉದ್ಭವವಾಗಿತ್ತು.

ಈಗ ಪ್ರಶ್ನೆಯು ವಿಪ್ ನೀಡುವ ಶಾಸಕಾಂಗ ಪಕ್ಷದ ನಾಯಕರ ಸಂವಿಧಾನಬದ್ಧ ಅಧಿಕಾರವನ್ನು ನ್ಯಾಯಾಂಗ ನಿರ್ಬಂಧಿಸಬಹುದೇ ಎಂಬುದಾಗಿತ್ತು. ಅದನ್ನು ಸರಿಯಾಗಿ ಅಧ್ಯಯನ ಮಾಡಿದ್ದ ಕಾಂಗ್ರೆಸ್ ನಾಯಕರು ಇಂದು ಯೋಜಿತವಾದ ರೀತಿಯಲ್ಲಿ ಸಂವಾದ ನಡೆಸಿದರು. ಮೊದಲಿಗೆ ವಿಶ್ವಾಸಮತ ಯಾಚನೆಯ ಗೊತ್ತುವಳಿಯನ್ನು ಸಭಾನಾಯಕರಾದ ಎಚ್.ಡಿ.ಕುಮಾರಸ್ವಾಮಿ ಮುಂದಿಟ್ಟರು. ಅದಕ್ಕೆ ಸ್ಪೀಕರ್ ಅವಕಾಶ ಮಾಡಿಕೊಟ್ಟ ನಂತರ, ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರು ‘ಇದನ್ನು ಕಾಲನಿಗದಿತವಾಗಿ ಬೇಗನೇ ಮುಗಿಸಬೇಕು’ ಎಂದು ಮನವಿ ಮಾಡಿದರು. ಕಾಲಾವಧಿ ಕುರಿತು ನಂತರ ನೋಡೋಣ ಈಗ ಚರ್ಚೆ ಆರಂಭವಾಗಲಿ ಎಂದು ಸ್ಪೀಕರ್ ಹೇಳಿದ ನಂತರ ಮುಖ್ಯಮಂತ್ರಿ ತಮ್ಮ ಮಾತನ್ನು ಆರಂಭಿಸಿದರು. ಅಲ್ಲಿಂದ ಮುಂದಕ್ಕೆ ನಡೆದಿದ್ದು ಅತ್ಯಂತ ಸ್ವಾರಸ್ಯಕರವಾದ ಮತ್ತು ಮಹತ್ವದ ಚರ್ಚೆ.

ಮುಖ್ಯಮಂತ್ರಿ ಮಾತಾಡಲು ಶುರು ಮಾಡಿದ ನಂತರ ಮಧ್ಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರು ಕ್ರಿಯಾಲೋಪ (ಪಾಯಿಂಟ್ ಆಫ್ ಆರ್ಡರ್) ಎತ್ತಿದರು. ಇಂದು ವಿಶ್ವಾಸಮತ ಯಾಚನೆ ಮುಗಿದುಹೋಗಬಾರದು ಎಂಬ ಕಾರಣಕ್ಕೆ ಅವರು ದೀರ್ಘವಾಗಿ ಮಾತಾಡುತ್ತಿದ್ದಾರೆ ಎಂದು ವಿರೋಧಪಕ್ಷದ ಸದಸ್ಯರು ಆಕ್ಷೇಪ ಎತ್ತಿದರೂ, ಸಿದ್ದರಾಮಯ್ಯನವರಿಗೆ ಬೇರೆ ಪಾಯಿಂಟ್ ಮುಂದಿಡಬೇಕಿತ್ತು. ಅವರ ಪ್ರಕಾರ

ಸಿದ್ದರಾಮಯ್ಯ: ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಲಾಗಿದ್ದ ಮೊಕದ್ದಮೆಯಲ್ಲಿ ಪ್ರಾರ್ಥನೆ ಹೀಗಿತ್ತು.

1. ಪ್ರತಿವಾದಿ 2 (ಅಂದರೆ ಸಭಾಧ್ಯಕ್ಷರು) ರಾಜೀನಾಮೆ ಅಂಗೀಕರಿಸಲು ಸೂಚಿಸಬೇಕು.

2. ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಪ್ರತಿವಾದಿ 2 ಕ್ರಮ ತೆಗೆದುಕೊಳ್ಳದಂತೆ ನಿರ್ಬಂಧಿಸಬೇಕು.

ದುರದೃಷ್ಟಕರ ವಿಚಾರ ಒಂದಿದೆ.
ಮೊದಲನೆಯ ಪ್ರಾರ್ಥನೆಯ ಕುರಿತು (ರಾಜೀನಾಮೆ ಅಂಗೀಕಾರದ ಕುರಿತು) ಸ್ಪೀಕರ್‍ಗೆ ಎಲ್ಲಾ ರೀತಿಯ ಅಧಿಕಾರ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಆದರೆ, ಈ ಪ್ರಾರ್ಥನೆಯಲ್ಲಿ ಇಲ್ಲದಿದ್ದ ಒಂದು ಅಂಶದ ಕುರಿತು ಸುಪ್ರೀಂಕೋರ್ಟು ಸೂಚನೆ ನೀಡಿದೆ. ಅದರ ಪ್ರಕಾರ ರಾಜೀನಾಮೆ ನೀಡಿರುವ ಶಾಸಕರು ಸದನದ ಕಲಾಪದಲ್ಲಿ ಭಾಗವಹಿಸುವಂತೆ ಮುಂದಿನ ಆದೇಶದವರೆಗೆ ಬಲವಂತಗೊಳಿಸುವಂತಿಲ್ಲ ಎಂದು ಅದು ಹೇಳಿದೆ. ಆದರೆ, ವಿಪ್ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಈ ಮೊಕದ್ದಮೆಯಲ್ಲಿ ನಾನು (ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ) ಪ್ರತಿವಾದಿಯೇ ಅಲ್ಲ. ಇದು ಸಂವಿಧಾನದ 10ನೇ ಶೆಡ್ಯೂಲ್‍ನಲ್ಲಿ ನನಗೆ ಕೊಟ್ಟಿರುವ ಅಧಿಕಾರವನ್ನು ನಿರ್ಬಂಧಿಸುತ್ತದೆ. ನನ್ನನ್ನು ಅಥವಾ ಕಾಂಗ್ರೆಸ್ ಪಕ್ಷವನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸುವುದು ಸರಿಯೇ? ಈ ಕುರಿತು ಸಭಾಧ್ಯಕ್ಷರು ಸ್ಪಷ್ಟೀಕರಣ ನೀಡಬೇಕು.

ಸ್ಪೀಕರ್: ಇದನ್ನು ನಾನು ಇಂಗ್ಲಿಷಿನಲ್ಲೇ ಉತ್ತರಿಸುತ್ತೇನೆ. ‘ನನ್ನನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸಿದ್ದಾರೆ. ಜೊತೆಗೆ ಇದು ಪ್ರೇಯರ್‍ನಲ್ಲಿ ಇರಲೂ ಇಲ್ಲ’ ಎಂದು ಶಾಸಕಾಂಗ ಪಕ್ಷದ ನಾಯಕರು ಹೇಳಿದ್ದಾರೆ. ಸುಪ್ರೀಂಕೋರ್ಟಿನ ಬಗ್ಗೆ ನಮಗೆಲ್ಲರಿಗೂ ಗೌರವವಿದೆ. ಅದು ಏನು ಹೇಳಿದೆ ಎಂಬ ಕುರಿತು ನಾನು ಕಾಮೆಂಟ್ ಮಾಡಲು ಹೋಗುವುದಿಲ್ಲ. ಆದರೆ, ನಾನು ನಿಮ್ಮ ಅಧಿಕಾರವನ್ನು ನಾನು ನಿರ್ಬಂಧಿಸುತ್ತಿಲ್ಲ.

ಎಚ್.ಕೆ.ಪಾಟೀಲ್: ಇದು ಬುದ್ಧಿವಂತರ ಸಭೆ – ನಮ್ಮ ಸ್ವಾಯತ್ತತೆಯನ್ನು ಕಿತ್ತುಕೊಂಡಾಗ ಸುಮ್ಮನಿರಬಾರದು.

ಕೃಷ್ಣ ಭೈರೇಗೌಡ: ಸುಪ್ರೀಂಕೋರ್ಟ್ ತೀರ್ಪಿನಿಂದ ಆ ಸದಸ್ಯರು ಸದನದ ಸದಸ್ಯರು ಹೌದೇ ಅಲ್ಲವೇ ಎಂಬ ಗೊಂದಲ ಉಂಟಾಗಿದೆ. ಅವರು ಪ್ರಮಾಣ ವಚನ ಸ್ವೀಕರಿಸಿದ ಮೇಲೆ ರಾಜೀನಾಮೆ ಅಂಗೀಕಾರವಾಗುವವರೆಗೆ ಸದನದ ಸದಸ್ಯರೇ ಆಗಿರುತ್ತಾರೆ.

ಇವೆಲ್ಲದರಿಂದ ಒಂದು ವಿಚಾರ ಸ್ಪಷ್ಟವಾಗಿದೆ. ಶಾಸಕಾಂಗದ ಅಧಿಕಾರವನ್ನು ಸುಪ್ರೀಂಕೋರ್ಟು ಮೊಟಕುಗೊಳಿಸಬಹುದೇ ಎಂಬ ಚರ್ಚೆಯನ್ನು ಸದನದಲ್ಲೇ ಮಾಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಅದರಿಂದ ಸುಪ್ರೀಂಕೋರ್ಟಿನ ತೀರ್ಪಿನಲ್ಲಿದ್ದ ಸಮಸ್ಯೆಯನ್ನು ಸದನದಲ್ಲಿ ಬಗೆಹರಿಸಿಕೊಳ್ಳಬಹುದು ಎಂಬುದು ಅವರ ಲೆಕ್ಕಾಚಾರ. ಸ್ಪೀಕರ್ ಈ ಕುರಿತು ರೂಲಿಂಗ್ ನೀಡಲೇಬೇಕಾಗುತ್ತದೆ. ಆ ಮೂಲಕ ವಿಪ್ ನೀಡಬಹುದು, ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಸದರಿ ಶಾಸಕರನ್ನು ಅನರ್ಹಗೊಳಿಸಬಹುದು ಎಂದಾದಲ್ಲಿ, ಮುಂಬೈ ಹೋಟೆಲಿನಲ್ಲಿ ಬೀಡುಬಿಟ್ಟಿರುವ ಶಾಸಕರು ಇಕ್ಕಟ್ಟಿಗೆ ಸಿಕ್ಕಿಕೊಳ್ಳುತ್ತದೆ. ಇದರಿಂದ ಬಿಜೆಪಿ ಇನ್ನಷ್ಟು ಗಲಭೆ ಎಬ್ಬಿಸಿದಲ್ಲಿ ಅದರಿಂದಲೂ ಸರ್ಕಾರಕ್ಕೇ ಒಳ್ಳೆಯದಾಗುತ್ತದೆ. ಈ ಅವಧಿಯಲ್ಲಿ ಸರ್ಕಾರ ಉಳಿಸಿಕೊಳ್ಳುವ ಅವಕಾಶ ಲಭ್ಯವಾಗುತ್ತದೆ ಎಂದು ಯೋಜಿಸಿದಂತಿದೆ. ಸ್ವೀಕರ್ ರವರು 3 ಗಂಟೆಗೆ ಸದನವನ್ನು ಮೂಂದೂಡಿದ್ದಾರೆ.

ಸ್ಪೀಕರ್ ಯಾವ ರೂಲಿಂಗ್ ಕೊಡುತ್ತಾರೆ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...