Homeಕರ್ನಾಟಕಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

ಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

- Advertisement -
- Advertisement -

ಇಂದು ಪೂರ್ವನಿಗದಿತ ಅಧಿಸೂಚನೆಯಂತೆ ವಿಶ್ವಾಸಮತ ಯಾಚನೆಗೆ ವಿಧಾನಸಭೆ ಕಲಾಪ ಶುರುವಾಯಿತಾದರೂ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಂವಿಧಾನದ ಚೌಕಟ್ಟಿನೊಳಗೇ ಯೋಜಿತ ಕಾರ್ಯಾಚರಣೆಯನ್ನು ನಡೆಸಿವೆ. ಇದು ಬಿಜೆಪಿಯಲ್ಲಿ, ಅದಕ್ಕಿಂತಲೂ ಹೆಚ್ಚಾಗಿ ರಾಜೀನಾಮೆ ಕೊಟ್ಟು ಪಕ್ಷ ಹಾರಲು ಸಿದ್ಧವಾಗಿರುವ ಶಾಸಕರಲ್ಲಿ ಆತಂಕ ಹುಟ್ಟಿಸಿರಲಿಕ್ಕೆ ಸಾಕು.

ರಾಜೀನಾಮೆ ಅಂಗೀಕರಿಸುವ ವಿಚಾರದಲ್ಲಿ ಸ್ಪೀಕರ್ ಅವರ ಪರಮಾಧಿಕಾರಕ್ಕೆ ಅಡ್ಡಿ ಬರುವುದಿಲ್ಲ ಎಂದು ಸುಪ್ರೀಂಕೋರ್ಟು ಹೇಳಿತ್ತು. ಆದರೆ, ರಾಜೀನಾಮೆ ನೀಡಿರುವ ಶಾಸಕರನ್ನು ಸದನಕ್ಕೆ ಬರುವಂತೆ ಬಲವಂತಪಡಿಸತಕ್ಕದ್ದಲ್ಲ, ಅದನ್ನು ಅವರ ವಿವೇಚನೆಗೆ ಬಿಡಬೇಕು ಎಂದೂ ಹೇಳಿತ್ತು. ಇದು ವಿಪ್ ಹೊರಡಿಸಬೇಕೇ ಇಲ್ಲವೇ ಎಂಬುದರ ಕುರಿತು, ಒಂದು ವೇಳೆ ವಿಪ್ ಉಲ್ಲಂಘನೆ ಆದರೆ, ಅದರ ಕುರಿತು ಕ್ರಮ ಕೈಗೊಳ್ಳಬಹುದೇ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಮುಖ ಅಂಶವಾದ ವಿಪ್ ಉಲ್ಲಂಘನೆಯ ಮಹತ್ವವೇ ಅಪ್ರಸ್ತುತವಾಗುತ್ತದೆ ಎಂಬ ಪ್ರಶ್ನೆ ಉದ್ಭವವಾಗಿತ್ತು.

ಈಗ ಪ್ರಶ್ನೆಯು ವಿಪ್ ನೀಡುವ ಶಾಸಕಾಂಗ ಪಕ್ಷದ ನಾಯಕರ ಸಂವಿಧಾನಬದ್ಧ ಅಧಿಕಾರವನ್ನು ನ್ಯಾಯಾಂಗ ನಿರ್ಬಂಧಿಸಬಹುದೇ ಎಂಬುದಾಗಿತ್ತು. ಅದನ್ನು ಸರಿಯಾಗಿ ಅಧ್ಯಯನ ಮಾಡಿದ್ದ ಕಾಂಗ್ರೆಸ್ ನಾಯಕರು ಇಂದು ಯೋಜಿತವಾದ ರೀತಿಯಲ್ಲಿ ಸಂವಾದ ನಡೆಸಿದರು. ಮೊದಲಿಗೆ ವಿಶ್ವಾಸಮತ ಯಾಚನೆಯ ಗೊತ್ತುವಳಿಯನ್ನು ಸಭಾನಾಯಕರಾದ ಎಚ್.ಡಿ.ಕುಮಾರಸ್ವಾಮಿ ಮುಂದಿಟ್ಟರು. ಅದಕ್ಕೆ ಸ್ಪೀಕರ್ ಅವಕಾಶ ಮಾಡಿಕೊಟ್ಟ ನಂತರ, ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರು ‘ಇದನ್ನು ಕಾಲನಿಗದಿತವಾಗಿ ಬೇಗನೇ ಮುಗಿಸಬೇಕು’ ಎಂದು ಮನವಿ ಮಾಡಿದರು. ಕಾಲಾವಧಿ ಕುರಿತು ನಂತರ ನೋಡೋಣ ಈಗ ಚರ್ಚೆ ಆರಂಭವಾಗಲಿ ಎಂದು ಸ್ಪೀಕರ್ ಹೇಳಿದ ನಂತರ ಮುಖ್ಯಮಂತ್ರಿ ತಮ್ಮ ಮಾತನ್ನು ಆರಂಭಿಸಿದರು. ಅಲ್ಲಿಂದ ಮುಂದಕ್ಕೆ ನಡೆದಿದ್ದು ಅತ್ಯಂತ ಸ್ವಾರಸ್ಯಕರವಾದ ಮತ್ತು ಮಹತ್ವದ ಚರ್ಚೆ.

ಮುಖ್ಯಮಂತ್ರಿ ಮಾತಾಡಲು ಶುರು ಮಾಡಿದ ನಂತರ ಮಧ್ಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರು ಕ್ರಿಯಾಲೋಪ (ಪಾಯಿಂಟ್ ಆಫ್ ಆರ್ಡರ್) ಎತ್ತಿದರು. ಇಂದು ವಿಶ್ವಾಸಮತ ಯಾಚನೆ ಮುಗಿದುಹೋಗಬಾರದು ಎಂಬ ಕಾರಣಕ್ಕೆ ಅವರು ದೀರ್ಘವಾಗಿ ಮಾತಾಡುತ್ತಿದ್ದಾರೆ ಎಂದು ವಿರೋಧಪಕ್ಷದ ಸದಸ್ಯರು ಆಕ್ಷೇಪ ಎತ್ತಿದರೂ, ಸಿದ್ದರಾಮಯ್ಯನವರಿಗೆ ಬೇರೆ ಪಾಯಿಂಟ್ ಮುಂದಿಡಬೇಕಿತ್ತು. ಅವರ ಪ್ರಕಾರ

ಸಿದ್ದರಾಮಯ್ಯ: ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಲಾಗಿದ್ದ ಮೊಕದ್ದಮೆಯಲ್ಲಿ ಪ್ರಾರ್ಥನೆ ಹೀಗಿತ್ತು.

1. ಪ್ರತಿವಾದಿ 2 (ಅಂದರೆ ಸಭಾಧ್ಯಕ್ಷರು) ರಾಜೀನಾಮೆ ಅಂಗೀಕರಿಸಲು ಸೂಚಿಸಬೇಕು.

2. ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಪ್ರತಿವಾದಿ 2 ಕ್ರಮ ತೆಗೆದುಕೊಳ್ಳದಂತೆ ನಿರ್ಬಂಧಿಸಬೇಕು.

ದುರದೃಷ್ಟಕರ ವಿಚಾರ ಒಂದಿದೆ.
ಮೊದಲನೆಯ ಪ್ರಾರ್ಥನೆಯ ಕುರಿತು (ರಾಜೀನಾಮೆ ಅಂಗೀಕಾರದ ಕುರಿತು) ಸ್ಪೀಕರ್‍ಗೆ ಎಲ್ಲಾ ರೀತಿಯ ಅಧಿಕಾರ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಆದರೆ, ಈ ಪ್ರಾರ್ಥನೆಯಲ್ಲಿ ಇಲ್ಲದಿದ್ದ ಒಂದು ಅಂಶದ ಕುರಿತು ಸುಪ್ರೀಂಕೋರ್ಟು ಸೂಚನೆ ನೀಡಿದೆ. ಅದರ ಪ್ರಕಾರ ರಾಜೀನಾಮೆ ನೀಡಿರುವ ಶಾಸಕರು ಸದನದ ಕಲಾಪದಲ್ಲಿ ಭಾಗವಹಿಸುವಂತೆ ಮುಂದಿನ ಆದೇಶದವರೆಗೆ ಬಲವಂತಗೊಳಿಸುವಂತಿಲ್ಲ ಎಂದು ಅದು ಹೇಳಿದೆ. ಆದರೆ, ವಿಪ್ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಈ ಮೊಕದ್ದಮೆಯಲ್ಲಿ ನಾನು (ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ) ಪ್ರತಿವಾದಿಯೇ ಅಲ್ಲ. ಇದು ಸಂವಿಧಾನದ 10ನೇ ಶೆಡ್ಯೂಲ್‍ನಲ್ಲಿ ನನಗೆ ಕೊಟ್ಟಿರುವ ಅಧಿಕಾರವನ್ನು ನಿರ್ಬಂಧಿಸುತ್ತದೆ. ನನ್ನನ್ನು ಅಥವಾ ಕಾಂಗ್ರೆಸ್ ಪಕ್ಷವನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸುವುದು ಸರಿಯೇ? ಈ ಕುರಿತು ಸಭಾಧ್ಯಕ್ಷರು ಸ್ಪಷ್ಟೀಕರಣ ನೀಡಬೇಕು.

ಸ್ಪೀಕರ್: ಇದನ್ನು ನಾನು ಇಂಗ್ಲಿಷಿನಲ್ಲೇ ಉತ್ತರಿಸುತ್ತೇನೆ. ‘ನನ್ನನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸಿದ್ದಾರೆ. ಜೊತೆಗೆ ಇದು ಪ್ರೇಯರ್‍ನಲ್ಲಿ ಇರಲೂ ಇಲ್ಲ’ ಎಂದು ಶಾಸಕಾಂಗ ಪಕ್ಷದ ನಾಯಕರು ಹೇಳಿದ್ದಾರೆ. ಸುಪ್ರೀಂಕೋರ್ಟಿನ ಬಗ್ಗೆ ನಮಗೆಲ್ಲರಿಗೂ ಗೌರವವಿದೆ. ಅದು ಏನು ಹೇಳಿದೆ ಎಂಬ ಕುರಿತು ನಾನು ಕಾಮೆಂಟ್ ಮಾಡಲು ಹೋಗುವುದಿಲ್ಲ. ಆದರೆ, ನಾನು ನಿಮ್ಮ ಅಧಿಕಾರವನ್ನು ನಾನು ನಿರ್ಬಂಧಿಸುತ್ತಿಲ್ಲ.

ಎಚ್.ಕೆ.ಪಾಟೀಲ್: ಇದು ಬುದ್ಧಿವಂತರ ಸಭೆ – ನಮ್ಮ ಸ್ವಾಯತ್ತತೆಯನ್ನು ಕಿತ್ತುಕೊಂಡಾಗ ಸುಮ್ಮನಿರಬಾರದು.

ಕೃಷ್ಣ ಭೈರೇಗೌಡ: ಸುಪ್ರೀಂಕೋರ್ಟ್ ತೀರ್ಪಿನಿಂದ ಆ ಸದಸ್ಯರು ಸದನದ ಸದಸ್ಯರು ಹೌದೇ ಅಲ್ಲವೇ ಎಂಬ ಗೊಂದಲ ಉಂಟಾಗಿದೆ. ಅವರು ಪ್ರಮಾಣ ವಚನ ಸ್ವೀಕರಿಸಿದ ಮೇಲೆ ರಾಜೀನಾಮೆ ಅಂಗೀಕಾರವಾಗುವವರೆಗೆ ಸದನದ ಸದಸ್ಯರೇ ಆಗಿರುತ್ತಾರೆ.

ಇವೆಲ್ಲದರಿಂದ ಒಂದು ವಿಚಾರ ಸ್ಪಷ್ಟವಾಗಿದೆ. ಶಾಸಕಾಂಗದ ಅಧಿಕಾರವನ್ನು ಸುಪ್ರೀಂಕೋರ್ಟು ಮೊಟಕುಗೊಳಿಸಬಹುದೇ ಎಂಬ ಚರ್ಚೆಯನ್ನು ಸದನದಲ್ಲೇ ಮಾಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಅದರಿಂದ ಸುಪ್ರೀಂಕೋರ್ಟಿನ ತೀರ್ಪಿನಲ್ಲಿದ್ದ ಸಮಸ್ಯೆಯನ್ನು ಸದನದಲ್ಲಿ ಬಗೆಹರಿಸಿಕೊಳ್ಳಬಹುದು ಎಂಬುದು ಅವರ ಲೆಕ್ಕಾಚಾರ. ಸ್ಪೀಕರ್ ಈ ಕುರಿತು ರೂಲಿಂಗ್ ನೀಡಲೇಬೇಕಾಗುತ್ತದೆ. ಆ ಮೂಲಕ ವಿಪ್ ನೀಡಬಹುದು, ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಸದರಿ ಶಾಸಕರನ್ನು ಅನರ್ಹಗೊಳಿಸಬಹುದು ಎಂದಾದಲ್ಲಿ, ಮುಂಬೈ ಹೋಟೆಲಿನಲ್ಲಿ ಬೀಡುಬಿಟ್ಟಿರುವ ಶಾಸಕರು ಇಕ್ಕಟ್ಟಿಗೆ ಸಿಕ್ಕಿಕೊಳ್ಳುತ್ತದೆ. ಇದರಿಂದ ಬಿಜೆಪಿ ಇನ್ನಷ್ಟು ಗಲಭೆ ಎಬ್ಬಿಸಿದಲ್ಲಿ ಅದರಿಂದಲೂ ಸರ್ಕಾರಕ್ಕೇ ಒಳ್ಳೆಯದಾಗುತ್ತದೆ. ಈ ಅವಧಿಯಲ್ಲಿ ಸರ್ಕಾರ ಉಳಿಸಿಕೊಳ್ಳುವ ಅವಕಾಶ ಲಭ್ಯವಾಗುತ್ತದೆ ಎಂದು ಯೋಜಿಸಿದಂತಿದೆ. ಸ್ವೀಕರ್ ರವರು 3 ಗಂಟೆಗೆ ಸದನವನ್ನು ಮೂಂದೂಡಿದ್ದಾರೆ.

ಸ್ಪೀಕರ್ ಯಾವ ರೂಲಿಂಗ್ ಕೊಡುತ್ತಾರೆ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...