Homeಕರ್ನಾಟಕಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

ಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

- Advertisement -
- Advertisement -

ಇಂದು ಪೂರ್ವನಿಗದಿತ ಅಧಿಸೂಚನೆಯಂತೆ ವಿಶ್ವಾಸಮತ ಯಾಚನೆಗೆ ವಿಧಾನಸಭೆ ಕಲಾಪ ಶುರುವಾಯಿತಾದರೂ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಂವಿಧಾನದ ಚೌಕಟ್ಟಿನೊಳಗೇ ಯೋಜಿತ ಕಾರ್ಯಾಚರಣೆಯನ್ನು ನಡೆಸಿವೆ. ಇದು ಬಿಜೆಪಿಯಲ್ಲಿ, ಅದಕ್ಕಿಂತಲೂ ಹೆಚ್ಚಾಗಿ ರಾಜೀನಾಮೆ ಕೊಟ್ಟು ಪಕ್ಷ ಹಾರಲು ಸಿದ್ಧವಾಗಿರುವ ಶಾಸಕರಲ್ಲಿ ಆತಂಕ ಹುಟ್ಟಿಸಿರಲಿಕ್ಕೆ ಸಾಕು.

ರಾಜೀನಾಮೆ ಅಂಗೀಕರಿಸುವ ವಿಚಾರದಲ್ಲಿ ಸ್ಪೀಕರ್ ಅವರ ಪರಮಾಧಿಕಾರಕ್ಕೆ ಅಡ್ಡಿ ಬರುವುದಿಲ್ಲ ಎಂದು ಸುಪ್ರೀಂಕೋರ್ಟು ಹೇಳಿತ್ತು. ಆದರೆ, ರಾಜೀನಾಮೆ ನೀಡಿರುವ ಶಾಸಕರನ್ನು ಸದನಕ್ಕೆ ಬರುವಂತೆ ಬಲವಂತಪಡಿಸತಕ್ಕದ್ದಲ್ಲ, ಅದನ್ನು ಅವರ ವಿವೇಚನೆಗೆ ಬಿಡಬೇಕು ಎಂದೂ ಹೇಳಿತ್ತು. ಇದು ವಿಪ್ ಹೊರಡಿಸಬೇಕೇ ಇಲ್ಲವೇ ಎಂಬುದರ ಕುರಿತು, ಒಂದು ವೇಳೆ ವಿಪ್ ಉಲ್ಲಂಘನೆ ಆದರೆ, ಅದರ ಕುರಿತು ಕ್ರಮ ಕೈಗೊಳ್ಳಬಹುದೇ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಮುಖ ಅಂಶವಾದ ವಿಪ್ ಉಲ್ಲಂಘನೆಯ ಮಹತ್ವವೇ ಅಪ್ರಸ್ತುತವಾಗುತ್ತದೆ ಎಂಬ ಪ್ರಶ್ನೆ ಉದ್ಭವವಾಗಿತ್ತು.

ಈಗ ಪ್ರಶ್ನೆಯು ವಿಪ್ ನೀಡುವ ಶಾಸಕಾಂಗ ಪಕ್ಷದ ನಾಯಕರ ಸಂವಿಧಾನಬದ್ಧ ಅಧಿಕಾರವನ್ನು ನ್ಯಾಯಾಂಗ ನಿರ್ಬಂಧಿಸಬಹುದೇ ಎಂಬುದಾಗಿತ್ತು. ಅದನ್ನು ಸರಿಯಾಗಿ ಅಧ್ಯಯನ ಮಾಡಿದ್ದ ಕಾಂಗ್ರೆಸ್ ನಾಯಕರು ಇಂದು ಯೋಜಿತವಾದ ರೀತಿಯಲ್ಲಿ ಸಂವಾದ ನಡೆಸಿದರು. ಮೊದಲಿಗೆ ವಿಶ್ವಾಸಮತ ಯಾಚನೆಯ ಗೊತ್ತುವಳಿಯನ್ನು ಸಭಾನಾಯಕರಾದ ಎಚ್.ಡಿ.ಕುಮಾರಸ್ವಾಮಿ ಮುಂದಿಟ್ಟರು. ಅದಕ್ಕೆ ಸ್ಪೀಕರ್ ಅವಕಾಶ ಮಾಡಿಕೊಟ್ಟ ನಂತರ, ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರು ‘ಇದನ್ನು ಕಾಲನಿಗದಿತವಾಗಿ ಬೇಗನೇ ಮುಗಿಸಬೇಕು’ ಎಂದು ಮನವಿ ಮಾಡಿದರು. ಕಾಲಾವಧಿ ಕುರಿತು ನಂತರ ನೋಡೋಣ ಈಗ ಚರ್ಚೆ ಆರಂಭವಾಗಲಿ ಎಂದು ಸ್ಪೀಕರ್ ಹೇಳಿದ ನಂತರ ಮುಖ್ಯಮಂತ್ರಿ ತಮ್ಮ ಮಾತನ್ನು ಆರಂಭಿಸಿದರು. ಅಲ್ಲಿಂದ ಮುಂದಕ್ಕೆ ನಡೆದಿದ್ದು ಅತ್ಯಂತ ಸ್ವಾರಸ್ಯಕರವಾದ ಮತ್ತು ಮಹತ್ವದ ಚರ್ಚೆ.

ಮುಖ್ಯಮಂತ್ರಿ ಮಾತಾಡಲು ಶುರು ಮಾಡಿದ ನಂತರ ಮಧ್ಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರು ಕ್ರಿಯಾಲೋಪ (ಪಾಯಿಂಟ್ ಆಫ್ ಆರ್ಡರ್) ಎತ್ತಿದರು. ಇಂದು ವಿಶ್ವಾಸಮತ ಯಾಚನೆ ಮುಗಿದುಹೋಗಬಾರದು ಎಂಬ ಕಾರಣಕ್ಕೆ ಅವರು ದೀರ್ಘವಾಗಿ ಮಾತಾಡುತ್ತಿದ್ದಾರೆ ಎಂದು ವಿರೋಧಪಕ್ಷದ ಸದಸ್ಯರು ಆಕ್ಷೇಪ ಎತ್ತಿದರೂ, ಸಿದ್ದರಾಮಯ್ಯನವರಿಗೆ ಬೇರೆ ಪಾಯಿಂಟ್ ಮುಂದಿಡಬೇಕಿತ್ತು. ಅವರ ಪ್ರಕಾರ

ಸಿದ್ದರಾಮಯ್ಯ: ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಲಾಗಿದ್ದ ಮೊಕದ್ದಮೆಯಲ್ಲಿ ಪ್ರಾರ್ಥನೆ ಹೀಗಿತ್ತು.

1. ಪ್ರತಿವಾದಿ 2 (ಅಂದರೆ ಸಭಾಧ್ಯಕ್ಷರು) ರಾಜೀನಾಮೆ ಅಂಗೀಕರಿಸಲು ಸೂಚಿಸಬೇಕು.

2. ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಪ್ರತಿವಾದಿ 2 ಕ್ರಮ ತೆಗೆದುಕೊಳ್ಳದಂತೆ ನಿರ್ಬಂಧಿಸಬೇಕು.

ದುರದೃಷ್ಟಕರ ವಿಚಾರ ಒಂದಿದೆ.
ಮೊದಲನೆಯ ಪ್ರಾರ್ಥನೆಯ ಕುರಿತು (ರಾಜೀನಾಮೆ ಅಂಗೀಕಾರದ ಕುರಿತು) ಸ್ಪೀಕರ್‍ಗೆ ಎಲ್ಲಾ ರೀತಿಯ ಅಧಿಕಾರ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಆದರೆ, ಈ ಪ್ರಾರ್ಥನೆಯಲ್ಲಿ ಇಲ್ಲದಿದ್ದ ಒಂದು ಅಂಶದ ಕುರಿತು ಸುಪ್ರೀಂಕೋರ್ಟು ಸೂಚನೆ ನೀಡಿದೆ. ಅದರ ಪ್ರಕಾರ ರಾಜೀನಾಮೆ ನೀಡಿರುವ ಶಾಸಕರು ಸದನದ ಕಲಾಪದಲ್ಲಿ ಭಾಗವಹಿಸುವಂತೆ ಮುಂದಿನ ಆದೇಶದವರೆಗೆ ಬಲವಂತಗೊಳಿಸುವಂತಿಲ್ಲ ಎಂದು ಅದು ಹೇಳಿದೆ. ಆದರೆ, ವಿಪ್ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಈ ಮೊಕದ್ದಮೆಯಲ್ಲಿ ನಾನು (ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ) ಪ್ರತಿವಾದಿಯೇ ಅಲ್ಲ. ಇದು ಸಂವಿಧಾನದ 10ನೇ ಶೆಡ್ಯೂಲ್‍ನಲ್ಲಿ ನನಗೆ ಕೊಟ್ಟಿರುವ ಅಧಿಕಾರವನ್ನು ನಿರ್ಬಂಧಿಸುತ್ತದೆ. ನನ್ನನ್ನು ಅಥವಾ ಕಾಂಗ್ರೆಸ್ ಪಕ್ಷವನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸುವುದು ಸರಿಯೇ? ಈ ಕುರಿತು ಸಭಾಧ್ಯಕ್ಷರು ಸ್ಪಷ್ಟೀಕರಣ ನೀಡಬೇಕು.

ಸ್ಪೀಕರ್: ಇದನ್ನು ನಾನು ಇಂಗ್ಲಿಷಿನಲ್ಲೇ ಉತ್ತರಿಸುತ್ತೇನೆ. ‘ನನ್ನನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸಿದ್ದಾರೆ. ಜೊತೆಗೆ ಇದು ಪ್ರೇಯರ್‍ನಲ್ಲಿ ಇರಲೂ ಇಲ್ಲ’ ಎಂದು ಶಾಸಕಾಂಗ ಪಕ್ಷದ ನಾಯಕರು ಹೇಳಿದ್ದಾರೆ. ಸುಪ್ರೀಂಕೋರ್ಟಿನ ಬಗ್ಗೆ ನಮಗೆಲ್ಲರಿಗೂ ಗೌರವವಿದೆ. ಅದು ಏನು ಹೇಳಿದೆ ಎಂಬ ಕುರಿತು ನಾನು ಕಾಮೆಂಟ್ ಮಾಡಲು ಹೋಗುವುದಿಲ್ಲ. ಆದರೆ, ನಾನು ನಿಮ್ಮ ಅಧಿಕಾರವನ್ನು ನಾನು ನಿರ್ಬಂಧಿಸುತ್ತಿಲ್ಲ.

ಎಚ್.ಕೆ.ಪಾಟೀಲ್: ಇದು ಬುದ್ಧಿವಂತರ ಸಭೆ – ನಮ್ಮ ಸ್ವಾಯತ್ತತೆಯನ್ನು ಕಿತ್ತುಕೊಂಡಾಗ ಸುಮ್ಮನಿರಬಾರದು.

ಕೃಷ್ಣ ಭೈರೇಗೌಡ: ಸುಪ್ರೀಂಕೋರ್ಟ್ ತೀರ್ಪಿನಿಂದ ಆ ಸದಸ್ಯರು ಸದನದ ಸದಸ್ಯರು ಹೌದೇ ಅಲ್ಲವೇ ಎಂಬ ಗೊಂದಲ ಉಂಟಾಗಿದೆ. ಅವರು ಪ್ರಮಾಣ ವಚನ ಸ್ವೀಕರಿಸಿದ ಮೇಲೆ ರಾಜೀನಾಮೆ ಅಂಗೀಕಾರವಾಗುವವರೆಗೆ ಸದನದ ಸದಸ್ಯರೇ ಆಗಿರುತ್ತಾರೆ.

ಇವೆಲ್ಲದರಿಂದ ಒಂದು ವಿಚಾರ ಸ್ಪಷ್ಟವಾಗಿದೆ. ಶಾಸಕಾಂಗದ ಅಧಿಕಾರವನ್ನು ಸುಪ್ರೀಂಕೋರ್ಟು ಮೊಟಕುಗೊಳಿಸಬಹುದೇ ಎಂಬ ಚರ್ಚೆಯನ್ನು ಸದನದಲ್ಲೇ ಮಾಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಅದರಿಂದ ಸುಪ್ರೀಂಕೋರ್ಟಿನ ತೀರ್ಪಿನಲ್ಲಿದ್ದ ಸಮಸ್ಯೆಯನ್ನು ಸದನದಲ್ಲಿ ಬಗೆಹರಿಸಿಕೊಳ್ಳಬಹುದು ಎಂಬುದು ಅವರ ಲೆಕ್ಕಾಚಾರ. ಸ್ಪೀಕರ್ ಈ ಕುರಿತು ರೂಲಿಂಗ್ ನೀಡಲೇಬೇಕಾಗುತ್ತದೆ. ಆ ಮೂಲಕ ವಿಪ್ ನೀಡಬಹುದು, ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಸದರಿ ಶಾಸಕರನ್ನು ಅನರ್ಹಗೊಳಿಸಬಹುದು ಎಂದಾದಲ್ಲಿ, ಮುಂಬೈ ಹೋಟೆಲಿನಲ್ಲಿ ಬೀಡುಬಿಟ್ಟಿರುವ ಶಾಸಕರು ಇಕ್ಕಟ್ಟಿಗೆ ಸಿಕ್ಕಿಕೊಳ್ಳುತ್ತದೆ. ಇದರಿಂದ ಬಿಜೆಪಿ ಇನ್ನಷ್ಟು ಗಲಭೆ ಎಬ್ಬಿಸಿದಲ್ಲಿ ಅದರಿಂದಲೂ ಸರ್ಕಾರಕ್ಕೇ ಒಳ್ಳೆಯದಾಗುತ್ತದೆ. ಈ ಅವಧಿಯಲ್ಲಿ ಸರ್ಕಾರ ಉಳಿಸಿಕೊಳ್ಳುವ ಅವಕಾಶ ಲಭ್ಯವಾಗುತ್ತದೆ ಎಂದು ಯೋಜಿಸಿದಂತಿದೆ. ಸ್ವೀಕರ್ ರವರು 3 ಗಂಟೆಗೆ ಸದನವನ್ನು ಮೂಂದೂಡಿದ್ದಾರೆ.

ಸ್ಪೀಕರ್ ಯಾವ ರೂಲಿಂಗ್ ಕೊಡುತ್ತಾರೆ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...