Homeಕರ್ನಾಟಕಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

ಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

- Advertisement -
- Advertisement -

ಇಂದು ಪೂರ್ವನಿಗದಿತ ಅಧಿಸೂಚನೆಯಂತೆ ವಿಶ್ವಾಸಮತ ಯಾಚನೆಗೆ ವಿಧಾನಸಭೆ ಕಲಾಪ ಶುರುವಾಯಿತಾದರೂ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಂವಿಧಾನದ ಚೌಕಟ್ಟಿನೊಳಗೇ ಯೋಜಿತ ಕಾರ್ಯಾಚರಣೆಯನ್ನು ನಡೆಸಿವೆ. ಇದು ಬಿಜೆಪಿಯಲ್ಲಿ, ಅದಕ್ಕಿಂತಲೂ ಹೆಚ್ಚಾಗಿ ರಾಜೀನಾಮೆ ಕೊಟ್ಟು ಪಕ್ಷ ಹಾರಲು ಸಿದ್ಧವಾಗಿರುವ ಶಾಸಕರಲ್ಲಿ ಆತಂಕ ಹುಟ್ಟಿಸಿರಲಿಕ್ಕೆ ಸಾಕು.

ರಾಜೀನಾಮೆ ಅಂಗೀಕರಿಸುವ ವಿಚಾರದಲ್ಲಿ ಸ್ಪೀಕರ್ ಅವರ ಪರಮಾಧಿಕಾರಕ್ಕೆ ಅಡ್ಡಿ ಬರುವುದಿಲ್ಲ ಎಂದು ಸುಪ್ರೀಂಕೋರ್ಟು ಹೇಳಿತ್ತು. ಆದರೆ, ರಾಜೀನಾಮೆ ನೀಡಿರುವ ಶಾಸಕರನ್ನು ಸದನಕ್ಕೆ ಬರುವಂತೆ ಬಲವಂತಪಡಿಸತಕ್ಕದ್ದಲ್ಲ, ಅದನ್ನು ಅವರ ವಿವೇಚನೆಗೆ ಬಿಡಬೇಕು ಎಂದೂ ಹೇಳಿತ್ತು. ಇದು ವಿಪ್ ಹೊರಡಿಸಬೇಕೇ ಇಲ್ಲವೇ ಎಂಬುದರ ಕುರಿತು, ಒಂದು ವೇಳೆ ವಿಪ್ ಉಲ್ಲಂಘನೆ ಆದರೆ, ಅದರ ಕುರಿತು ಕ್ರಮ ಕೈಗೊಳ್ಳಬಹುದೇ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಮುಖ ಅಂಶವಾದ ವಿಪ್ ಉಲ್ಲಂಘನೆಯ ಮಹತ್ವವೇ ಅಪ್ರಸ್ತುತವಾಗುತ್ತದೆ ಎಂಬ ಪ್ರಶ್ನೆ ಉದ್ಭವವಾಗಿತ್ತು.

ಈಗ ಪ್ರಶ್ನೆಯು ವಿಪ್ ನೀಡುವ ಶಾಸಕಾಂಗ ಪಕ್ಷದ ನಾಯಕರ ಸಂವಿಧಾನಬದ್ಧ ಅಧಿಕಾರವನ್ನು ನ್ಯಾಯಾಂಗ ನಿರ್ಬಂಧಿಸಬಹುದೇ ಎಂಬುದಾಗಿತ್ತು. ಅದನ್ನು ಸರಿಯಾಗಿ ಅಧ್ಯಯನ ಮಾಡಿದ್ದ ಕಾಂಗ್ರೆಸ್ ನಾಯಕರು ಇಂದು ಯೋಜಿತವಾದ ರೀತಿಯಲ್ಲಿ ಸಂವಾದ ನಡೆಸಿದರು. ಮೊದಲಿಗೆ ವಿಶ್ವಾಸಮತ ಯಾಚನೆಯ ಗೊತ್ತುವಳಿಯನ್ನು ಸಭಾನಾಯಕರಾದ ಎಚ್.ಡಿ.ಕುಮಾರಸ್ವಾಮಿ ಮುಂದಿಟ್ಟರು. ಅದಕ್ಕೆ ಸ್ಪೀಕರ್ ಅವಕಾಶ ಮಾಡಿಕೊಟ್ಟ ನಂತರ, ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರು ‘ಇದನ್ನು ಕಾಲನಿಗದಿತವಾಗಿ ಬೇಗನೇ ಮುಗಿಸಬೇಕು’ ಎಂದು ಮನವಿ ಮಾಡಿದರು. ಕಾಲಾವಧಿ ಕುರಿತು ನಂತರ ನೋಡೋಣ ಈಗ ಚರ್ಚೆ ಆರಂಭವಾಗಲಿ ಎಂದು ಸ್ಪೀಕರ್ ಹೇಳಿದ ನಂತರ ಮುಖ್ಯಮಂತ್ರಿ ತಮ್ಮ ಮಾತನ್ನು ಆರಂಭಿಸಿದರು. ಅಲ್ಲಿಂದ ಮುಂದಕ್ಕೆ ನಡೆದಿದ್ದು ಅತ್ಯಂತ ಸ್ವಾರಸ್ಯಕರವಾದ ಮತ್ತು ಮಹತ್ವದ ಚರ್ಚೆ.

ಮುಖ್ಯಮಂತ್ರಿ ಮಾತಾಡಲು ಶುರು ಮಾಡಿದ ನಂತರ ಮಧ್ಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರು ಕ್ರಿಯಾಲೋಪ (ಪಾಯಿಂಟ್ ಆಫ್ ಆರ್ಡರ್) ಎತ್ತಿದರು. ಇಂದು ವಿಶ್ವಾಸಮತ ಯಾಚನೆ ಮುಗಿದುಹೋಗಬಾರದು ಎಂಬ ಕಾರಣಕ್ಕೆ ಅವರು ದೀರ್ಘವಾಗಿ ಮಾತಾಡುತ್ತಿದ್ದಾರೆ ಎಂದು ವಿರೋಧಪಕ್ಷದ ಸದಸ್ಯರು ಆಕ್ಷೇಪ ಎತ್ತಿದರೂ, ಸಿದ್ದರಾಮಯ್ಯನವರಿಗೆ ಬೇರೆ ಪಾಯಿಂಟ್ ಮುಂದಿಡಬೇಕಿತ್ತು. ಅವರ ಪ್ರಕಾರ

ಸಿದ್ದರಾಮಯ್ಯ: ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಲಾಗಿದ್ದ ಮೊಕದ್ದಮೆಯಲ್ಲಿ ಪ್ರಾರ್ಥನೆ ಹೀಗಿತ್ತು.

1. ಪ್ರತಿವಾದಿ 2 (ಅಂದರೆ ಸಭಾಧ್ಯಕ್ಷರು) ರಾಜೀನಾಮೆ ಅಂಗೀಕರಿಸಲು ಸೂಚಿಸಬೇಕು.

2. ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಪ್ರತಿವಾದಿ 2 ಕ್ರಮ ತೆಗೆದುಕೊಳ್ಳದಂತೆ ನಿರ್ಬಂಧಿಸಬೇಕು.

ದುರದೃಷ್ಟಕರ ವಿಚಾರ ಒಂದಿದೆ.
ಮೊದಲನೆಯ ಪ್ರಾರ್ಥನೆಯ ಕುರಿತು (ರಾಜೀನಾಮೆ ಅಂಗೀಕಾರದ ಕುರಿತು) ಸ್ಪೀಕರ್‍ಗೆ ಎಲ್ಲಾ ರೀತಿಯ ಅಧಿಕಾರ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಆದರೆ, ಈ ಪ್ರಾರ್ಥನೆಯಲ್ಲಿ ಇಲ್ಲದಿದ್ದ ಒಂದು ಅಂಶದ ಕುರಿತು ಸುಪ್ರೀಂಕೋರ್ಟು ಸೂಚನೆ ನೀಡಿದೆ. ಅದರ ಪ್ರಕಾರ ರಾಜೀನಾಮೆ ನೀಡಿರುವ ಶಾಸಕರು ಸದನದ ಕಲಾಪದಲ್ಲಿ ಭಾಗವಹಿಸುವಂತೆ ಮುಂದಿನ ಆದೇಶದವರೆಗೆ ಬಲವಂತಗೊಳಿಸುವಂತಿಲ್ಲ ಎಂದು ಅದು ಹೇಳಿದೆ. ಆದರೆ, ವಿಪ್ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಈ ಮೊಕದ್ದಮೆಯಲ್ಲಿ ನಾನು (ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ) ಪ್ರತಿವಾದಿಯೇ ಅಲ್ಲ. ಇದು ಸಂವಿಧಾನದ 10ನೇ ಶೆಡ್ಯೂಲ್‍ನಲ್ಲಿ ನನಗೆ ಕೊಟ್ಟಿರುವ ಅಧಿಕಾರವನ್ನು ನಿರ್ಬಂಧಿಸುತ್ತದೆ. ನನ್ನನ್ನು ಅಥವಾ ಕಾಂಗ್ರೆಸ್ ಪಕ್ಷವನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸುವುದು ಸರಿಯೇ? ಈ ಕುರಿತು ಸಭಾಧ್ಯಕ್ಷರು ಸ್ಪಷ್ಟೀಕರಣ ನೀಡಬೇಕು.

ಸ್ಪೀಕರ್: ಇದನ್ನು ನಾನು ಇಂಗ್ಲಿಷಿನಲ್ಲೇ ಉತ್ತರಿಸುತ್ತೇನೆ. ‘ನನ್ನನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸಿದ್ದಾರೆ. ಜೊತೆಗೆ ಇದು ಪ್ರೇಯರ್‍ನಲ್ಲಿ ಇರಲೂ ಇಲ್ಲ’ ಎಂದು ಶಾಸಕಾಂಗ ಪಕ್ಷದ ನಾಯಕರು ಹೇಳಿದ್ದಾರೆ. ಸುಪ್ರೀಂಕೋರ್ಟಿನ ಬಗ್ಗೆ ನಮಗೆಲ್ಲರಿಗೂ ಗೌರವವಿದೆ. ಅದು ಏನು ಹೇಳಿದೆ ಎಂಬ ಕುರಿತು ನಾನು ಕಾಮೆಂಟ್ ಮಾಡಲು ಹೋಗುವುದಿಲ್ಲ. ಆದರೆ, ನಾನು ನಿಮ್ಮ ಅಧಿಕಾರವನ್ನು ನಾನು ನಿರ್ಬಂಧಿಸುತ್ತಿಲ್ಲ.

ಎಚ್.ಕೆ.ಪಾಟೀಲ್: ಇದು ಬುದ್ಧಿವಂತರ ಸಭೆ – ನಮ್ಮ ಸ್ವಾಯತ್ತತೆಯನ್ನು ಕಿತ್ತುಕೊಂಡಾಗ ಸುಮ್ಮನಿರಬಾರದು.

ಕೃಷ್ಣ ಭೈರೇಗೌಡ: ಸುಪ್ರೀಂಕೋರ್ಟ್ ತೀರ್ಪಿನಿಂದ ಆ ಸದಸ್ಯರು ಸದನದ ಸದಸ್ಯರು ಹೌದೇ ಅಲ್ಲವೇ ಎಂಬ ಗೊಂದಲ ಉಂಟಾಗಿದೆ. ಅವರು ಪ್ರಮಾಣ ವಚನ ಸ್ವೀಕರಿಸಿದ ಮೇಲೆ ರಾಜೀನಾಮೆ ಅಂಗೀಕಾರವಾಗುವವರೆಗೆ ಸದನದ ಸದಸ್ಯರೇ ಆಗಿರುತ್ತಾರೆ.

ಇವೆಲ್ಲದರಿಂದ ಒಂದು ವಿಚಾರ ಸ್ಪಷ್ಟವಾಗಿದೆ. ಶಾಸಕಾಂಗದ ಅಧಿಕಾರವನ್ನು ಸುಪ್ರೀಂಕೋರ್ಟು ಮೊಟಕುಗೊಳಿಸಬಹುದೇ ಎಂಬ ಚರ್ಚೆಯನ್ನು ಸದನದಲ್ಲೇ ಮಾಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಅದರಿಂದ ಸುಪ್ರೀಂಕೋರ್ಟಿನ ತೀರ್ಪಿನಲ್ಲಿದ್ದ ಸಮಸ್ಯೆಯನ್ನು ಸದನದಲ್ಲಿ ಬಗೆಹರಿಸಿಕೊಳ್ಳಬಹುದು ಎಂಬುದು ಅವರ ಲೆಕ್ಕಾಚಾರ. ಸ್ಪೀಕರ್ ಈ ಕುರಿತು ರೂಲಿಂಗ್ ನೀಡಲೇಬೇಕಾಗುತ್ತದೆ. ಆ ಮೂಲಕ ವಿಪ್ ನೀಡಬಹುದು, ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಸದರಿ ಶಾಸಕರನ್ನು ಅನರ್ಹಗೊಳಿಸಬಹುದು ಎಂದಾದಲ್ಲಿ, ಮುಂಬೈ ಹೋಟೆಲಿನಲ್ಲಿ ಬೀಡುಬಿಟ್ಟಿರುವ ಶಾಸಕರು ಇಕ್ಕಟ್ಟಿಗೆ ಸಿಕ್ಕಿಕೊಳ್ಳುತ್ತದೆ. ಇದರಿಂದ ಬಿಜೆಪಿ ಇನ್ನಷ್ಟು ಗಲಭೆ ಎಬ್ಬಿಸಿದಲ್ಲಿ ಅದರಿಂದಲೂ ಸರ್ಕಾರಕ್ಕೇ ಒಳ್ಳೆಯದಾಗುತ್ತದೆ. ಈ ಅವಧಿಯಲ್ಲಿ ಸರ್ಕಾರ ಉಳಿಸಿಕೊಳ್ಳುವ ಅವಕಾಶ ಲಭ್ಯವಾಗುತ್ತದೆ ಎಂದು ಯೋಜಿಸಿದಂತಿದೆ. ಸ್ವೀಕರ್ ರವರು 3 ಗಂಟೆಗೆ ಸದನವನ್ನು ಮೂಂದೂಡಿದ್ದಾರೆ.

ಸ್ಪೀಕರ್ ಯಾವ ರೂಲಿಂಗ್ ಕೊಡುತ್ತಾರೆ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...