Homeಕರ್ನಾಟಕಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

ಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

- Advertisement -
- Advertisement -

ಇಂದು ಪೂರ್ವನಿಗದಿತ ಅಧಿಸೂಚನೆಯಂತೆ ವಿಶ್ವಾಸಮತ ಯಾಚನೆಗೆ ವಿಧಾನಸಭೆ ಕಲಾಪ ಶುರುವಾಯಿತಾದರೂ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಂವಿಧಾನದ ಚೌಕಟ್ಟಿನೊಳಗೇ ಯೋಜಿತ ಕಾರ್ಯಾಚರಣೆಯನ್ನು ನಡೆಸಿವೆ. ಇದು ಬಿಜೆಪಿಯಲ್ಲಿ, ಅದಕ್ಕಿಂತಲೂ ಹೆಚ್ಚಾಗಿ ರಾಜೀನಾಮೆ ಕೊಟ್ಟು ಪಕ್ಷ ಹಾರಲು ಸಿದ್ಧವಾಗಿರುವ ಶಾಸಕರಲ್ಲಿ ಆತಂಕ ಹುಟ್ಟಿಸಿರಲಿಕ್ಕೆ ಸಾಕು.

ರಾಜೀನಾಮೆ ಅಂಗೀಕರಿಸುವ ವಿಚಾರದಲ್ಲಿ ಸ್ಪೀಕರ್ ಅವರ ಪರಮಾಧಿಕಾರಕ್ಕೆ ಅಡ್ಡಿ ಬರುವುದಿಲ್ಲ ಎಂದು ಸುಪ್ರೀಂಕೋರ್ಟು ಹೇಳಿತ್ತು. ಆದರೆ, ರಾಜೀನಾಮೆ ನೀಡಿರುವ ಶಾಸಕರನ್ನು ಸದನಕ್ಕೆ ಬರುವಂತೆ ಬಲವಂತಪಡಿಸತಕ್ಕದ್ದಲ್ಲ, ಅದನ್ನು ಅವರ ವಿವೇಚನೆಗೆ ಬಿಡಬೇಕು ಎಂದೂ ಹೇಳಿತ್ತು. ಇದು ವಿಪ್ ಹೊರಡಿಸಬೇಕೇ ಇಲ್ಲವೇ ಎಂಬುದರ ಕುರಿತು, ಒಂದು ವೇಳೆ ವಿಪ್ ಉಲ್ಲಂಘನೆ ಆದರೆ, ಅದರ ಕುರಿತು ಕ್ರಮ ಕೈಗೊಳ್ಳಬಹುದೇ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಮುಖ ಅಂಶವಾದ ವಿಪ್ ಉಲ್ಲಂಘನೆಯ ಮಹತ್ವವೇ ಅಪ್ರಸ್ತುತವಾಗುತ್ತದೆ ಎಂಬ ಪ್ರಶ್ನೆ ಉದ್ಭವವಾಗಿತ್ತು.

ಈಗ ಪ್ರಶ್ನೆಯು ವಿಪ್ ನೀಡುವ ಶಾಸಕಾಂಗ ಪಕ್ಷದ ನಾಯಕರ ಸಂವಿಧಾನಬದ್ಧ ಅಧಿಕಾರವನ್ನು ನ್ಯಾಯಾಂಗ ನಿರ್ಬಂಧಿಸಬಹುದೇ ಎಂಬುದಾಗಿತ್ತು. ಅದನ್ನು ಸರಿಯಾಗಿ ಅಧ್ಯಯನ ಮಾಡಿದ್ದ ಕಾಂಗ್ರೆಸ್ ನಾಯಕರು ಇಂದು ಯೋಜಿತವಾದ ರೀತಿಯಲ್ಲಿ ಸಂವಾದ ನಡೆಸಿದರು. ಮೊದಲಿಗೆ ವಿಶ್ವಾಸಮತ ಯಾಚನೆಯ ಗೊತ್ತುವಳಿಯನ್ನು ಸಭಾನಾಯಕರಾದ ಎಚ್.ಡಿ.ಕುಮಾರಸ್ವಾಮಿ ಮುಂದಿಟ್ಟರು. ಅದಕ್ಕೆ ಸ್ಪೀಕರ್ ಅವಕಾಶ ಮಾಡಿಕೊಟ್ಟ ನಂತರ, ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರು ‘ಇದನ್ನು ಕಾಲನಿಗದಿತವಾಗಿ ಬೇಗನೇ ಮುಗಿಸಬೇಕು’ ಎಂದು ಮನವಿ ಮಾಡಿದರು. ಕಾಲಾವಧಿ ಕುರಿತು ನಂತರ ನೋಡೋಣ ಈಗ ಚರ್ಚೆ ಆರಂಭವಾಗಲಿ ಎಂದು ಸ್ಪೀಕರ್ ಹೇಳಿದ ನಂತರ ಮುಖ್ಯಮಂತ್ರಿ ತಮ್ಮ ಮಾತನ್ನು ಆರಂಭಿಸಿದರು. ಅಲ್ಲಿಂದ ಮುಂದಕ್ಕೆ ನಡೆದಿದ್ದು ಅತ್ಯಂತ ಸ್ವಾರಸ್ಯಕರವಾದ ಮತ್ತು ಮಹತ್ವದ ಚರ್ಚೆ.

ಮುಖ್ಯಮಂತ್ರಿ ಮಾತಾಡಲು ಶುರು ಮಾಡಿದ ನಂತರ ಮಧ್ಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರು ಕ್ರಿಯಾಲೋಪ (ಪಾಯಿಂಟ್ ಆಫ್ ಆರ್ಡರ್) ಎತ್ತಿದರು. ಇಂದು ವಿಶ್ವಾಸಮತ ಯಾಚನೆ ಮುಗಿದುಹೋಗಬಾರದು ಎಂಬ ಕಾರಣಕ್ಕೆ ಅವರು ದೀರ್ಘವಾಗಿ ಮಾತಾಡುತ್ತಿದ್ದಾರೆ ಎಂದು ವಿರೋಧಪಕ್ಷದ ಸದಸ್ಯರು ಆಕ್ಷೇಪ ಎತ್ತಿದರೂ, ಸಿದ್ದರಾಮಯ್ಯನವರಿಗೆ ಬೇರೆ ಪಾಯಿಂಟ್ ಮುಂದಿಡಬೇಕಿತ್ತು. ಅವರ ಪ್ರಕಾರ

ಸಿದ್ದರಾಮಯ್ಯ: ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಲಾಗಿದ್ದ ಮೊಕದ್ದಮೆಯಲ್ಲಿ ಪ್ರಾರ್ಥನೆ ಹೀಗಿತ್ತು.

1. ಪ್ರತಿವಾದಿ 2 (ಅಂದರೆ ಸಭಾಧ್ಯಕ್ಷರು) ರಾಜೀನಾಮೆ ಅಂಗೀಕರಿಸಲು ಸೂಚಿಸಬೇಕು.

2. ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಪ್ರತಿವಾದಿ 2 ಕ್ರಮ ತೆಗೆದುಕೊಳ್ಳದಂತೆ ನಿರ್ಬಂಧಿಸಬೇಕು.

ದುರದೃಷ್ಟಕರ ವಿಚಾರ ಒಂದಿದೆ.
ಮೊದಲನೆಯ ಪ್ರಾರ್ಥನೆಯ ಕುರಿತು (ರಾಜೀನಾಮೆ ಅಂಗೀಕಾರದ ಕುರಿತು) ಸ್ಪೀಕರ್‍ಗೆ ಎಲ್ಲಾ ರೀತಿಯ ಅಧಿಕಾರ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಆದರೆ, ಈ ಪ್ರಾರ್ಥನೆಯಲ್ಲಿ ಇಲ್ಲದಿದ್ದ ಒಂದು ಅಂಶದ ಕುರಿತು ಸುಪ್ರೀಂಕೋರ್ಟು ಸೂಚನೆ ನೀಡಿದೆ. ಅದರ ಪ್ರಕಾರ ರಾಜೀನಾಮೆ ನೀಡಿರುವ ಶಾಸಕರು ಸದನದ ಕಲಾಪದಲ್ಲಿ ಭಾಗವಹಿಸುವಂತೆ ಮುಂದಿನ ಆದೇಶದವರೆಗೆ ಬಲವಂತಗೊಳಿಸುವಂತಿಲ್ಲ ಎಂದು ಅದು ಹೇಳಿದೆ. ಆದರೆ, ವಿಪ್ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಈ ಮೊಕದ್ದಮೆಯಲ್ಲಿ ನಾನು (ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ) ಪ್ರತಿವಾದಿಯೇ ಅಲ್ಲ. ಇದು ಸಂವಿಧಾನದ 10ನೇ ಶೆಡ್ಯೂಲ್‍ನಲ್ಲಿ ನನಗೆ ಕೊಟ್ಟಿರುವ ಅಧಿಕಾರವನ್ನು ನಿರ್ಬಂಧಿಸುತ್ತದೆ. ನನ್ನನ್ನು ಅಥವಾ ಕಾಂಗ್ರೆಸ್ ಪಕ್ಷವನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸುವುದು ಸರಿಯೇ? ಈ ಕುರಿತು ಸಭಾಧ್ಯಕ್ಷರು ಸ್ಪಷ್ಟೀಕರಣ ನೀಡಬೇಕು.

ಸ್ಪೀಕರ್: ಇದನ್ನು ನಾನು ಇಂಗ್ಲಿಷಿನಲ್ಲೇ ಉತ್ತರಿಸುತ್ತೇನೆ. ‘ನನ್ನನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸಿದ್ದಾರೆ. ಜೊತೆಗೆ ಇದು ಪ್ರೇಯರ್‍ನಲ್ಲಿ ಇರಲೂ ಇಲ್ಲ’ ಎಂದು ಶಾಸಕಾಂಗ ಪಕ್ಷದ ನಾಯಕರು ಹೇಳಿದ್ದಾರೆ. ಸುಪ್ರೀಂಕೋರ್ಟಿನ ಬಗ್ಗೆ ನಮಗೆಲ್ಲರಿಗೂ ಗೌರವವಿದೆ. ಅದು ಏನು ಹೇಳಿದೆ ಎಂಬ ಕುರಿತು ನಾನು ಕಾಮೆಂಟ್ ಮಾಡಲು ಹೋಗುವುದಿಲ್ಲ. ಆದರೆ, ನಾನು ನಿಮ್ಮ ಅಧಿಕಾರವನ್ನು ನಾನು ನಿರ್ಬಂಧಿಸುತ್ತಿಲ್ಲ.

ಎಚ್.ಕೆ.ಪಾಟೀಲ್: ಇದು ಬುದ್ಧಿವಂತರ ಸಭೆ – ನಮ್ಮ ಸ್ವಾಯತ್ತತೆಯನ್ನು ಕಿತ್ತುಕೊಂಡಾಗ ಸುಮ್ಮನಿರಬಾರದು.

ಕೃಷ್ಣ ಭೈರೇಗೌಡ: ಸುಪ್ರೀಂಕೋರ್ಟ್ ತೀರ್ಪಿನಿಂದ ಆ ಸದಸ್ಯರು ಸದನದ ಸದಸ್ಯರು ಹೌದೇ ಅಲ್ಲವೇ ಎಂಬ ಗೊಂದಲ ಉಂಟಾಗಿದೆ. ಅವರು ಪ್ರಮಾಣ ವಚನ ಸ್ವೀಕರಿಸಿದ ಮೇಲೆ ರಾಜೀನಾಮೆ ಅಂಗೀಕಾರವಾಗುವವರೆಗೆ ಸದನದ ಸದಸ್ಯರೇ ಆಗಿರುತ್ತಾರೆ.

ಇವೆಲ್ಲದರಿಂದ ಒಂದು ವಿಚಾರ ಸ್ಪಷ್ಟವಾಗಿದೆ. ಶಾಸಕಾಂಗದ ಅಧಿಕಾರವನ್ನು ಸುಪ್ರೀಂಕೋರ್ಟು ಮೊಟಕುಗೊಳಿಸಬಹುದೇ ಎಂಬ ಚರ್ಚೆಯನ್ನು ಸದನದಲ್ಲೇ ಮಾಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಅದರಿಂದ ಸುಪ್ರೀಂಕೋರ್ಟಿನ ತೀರ್ಪಿನಲ್ಲಿದ್ದ ಸಮಸ್ಯೆಯನ್ನು ಸದನದಲ್ಲಿ ಬಗೆಹರಿಸಿಕೊಳ್ಳಬಹುದು ಎಂಬುದು ಅವರ ಲೆಕ್ಕಾಚಾರ. ಸ್ಪೀಕರ್ ಈ ಕುರಿತು ರೂಲಿಂಗ್ ನೀಡಲೇಬೇಕಾಗುತ್ತದೆ. ಆ ಮೂಲಕ ವಿಪ್ ನೀಡಬಹುದು, ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಸದರಿ ಶಾಸಕರನ್ನು ಅನರ್ಹಗೊಳಿಸಬಹುದು ಎಂದಾದಲ್ಲಿ, ಮುಂಬೈ ಹೋಟೆಲಿನಲ್ಲಿ ಬೀಡುಬಿಟ್ಟಿರುವ ಶಾಸಕರು ಇಕ್ಕಟ್ಟಿಗೆ ಸಿಕ್ಕಿಕೊಳ್ಳುತ್ತದೆ. ಇದರಿಂದ ಬಿಜೆಪಿ ಇನ್ನಷ್ಟು ಗಲಭೆ ಎಬ್ಬಿಸಿದಲ್ಲಿ ಅದರಿಂದಲೂ ಸರ್ಕಾರಕ್ಕೇ ಒಳ್ಳೆಯದಾಗುತ್ತದೆ. ಈ ಅವಧಿಯಲ್ಲಿ ಸರ್ಕಾರ ಉಳಿಸಿಕೊಳ್ಳುವ ಅವಕಾಶ ಲಭ್ಯವಾಗುತ್ತದೆ ಎಂದು ಯೋಜಿಸಿದಂತಿದೆ. ಸ್ವೀಕರ್ ರವರು 3 ಗಂಟೆಗೆ ಸದನವನ್ನು ಮೂಂದೂಡಿದ್ದಾರೆ.

ಸ್ಪೀಕರ್ ಯಾವ ರೂಲಿಂಗ್ ಕೊಡುತ್ತಾರೆ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...