Homeಕರ್ನಾಟಕಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

ಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

- Advertisement -
- Advertisement -

ಇಂದು ಪೂರ್ವನಿಗದಿತ ಅಧಿಸೂಚನೆಯಂತೆ ವಿಶ್ವಾಸಮತ ಯಾಚನೆಗೆ ವಿಧಾನಸಭೆ ಕಲಾಪ ಶುರುವಾಯಿತಾದರೂ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಂವಿಧಾನದ ಚೌಕಟ್ಟಿನೊಳಗೇ ಯೋಜಿತ ಕಾರ್ಯಾಚರಣೆಯನ್ನು ನಡೆಸಿವೆ. ಇದು ಬಿಜೆಪಿಯಲ್ಲಿ, ಅದಕ್ಕಿಂತಲೂ ಹೆಚ್ಚಾಗಿ ರಾಜೀನಾಮೆ ಕೊಟ್ಟು ಪಕ್ಷ ಹಾರಲು ಸಿದ್ಧವಾಗಿರುವ ಶಾಸಕರಲ್ಲಿ ಆತಂಕ ಹುಟ್ಟಿಸಿರಲಿಕ್ಕೆ ಸಾಕು.

ರಾಜೀನಾಮೆ ಅಂಗೀಕರಿಸುವ ವಿಚಾರದಲ್ಲಿ ಸ್ಪೀಕರ್ ಅವರ ಪರಮಾಧಿಕಾರಕ್ಕೆ ಅಡ್ಡಿ ಬರುವುದಿಲ್ಲ ಎಂದು ಸುಪ್ರೀಂಕೋರ್ಟು ಹೇಳಿತ್ತು. ಆದರೆ, ರಾಜೀನಾಮೆ ನೀಡಿರುವ ಶಾಸಕರನ್ನು ಸದನಕ್ಕೆ ಬರುವಂತೆ ಬಲವಂತಪಡಿಸತಕ್ಕದ್ದಲ್ಲ, ಅದನ್ನು ಅವರ ವಿವೇಚನೆಗೆ ಬಿಡಬೇಕು ಎಂದೂ ಹೇಳಿತ್ತು. ಇದು ವಿಪ್ ಹೊರಡಿಸಬೇಕೇ ಇಲ್ಲವೇ ಎಂಬುದರ ಕುರಿತು, ಒಂದು ವೇಳೆ ವಿಪ್ ಉಲ್ಲಂಘನೆ ಆದರೆ, ಅದರ ಕುರಿತು ಕ್ರಮ ಕೈಗೊಳ್ಳಬಹುದೇ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಮುಖ ಅಂಶವಾದ ವಿಪ್ ಉಲ್ಲಂಘನೆಯ ಮಹತ್ವವೇ ಅಪ್ರಸ್ತುತವಾಗುತ್ತದೆ ಎಂಬ ಪ್ರಶ್ನೆ ಉದ್ಭವವಾಗಿತ್ತು.

ಈಗ ಪ್ರಶ್ನೆಯು ವಿಪ್ ನೀಡುವ ಶಾಸಕಾಂಗ ಪಕ್ಷದ ನಾಯಕರ ಸಂವಿಧಾನಬದ್ಧ ಅಧಿಕಾರವನ್ನು ನ್ಯಾಯಾಂಗ ನಿರ್ಬಂಧಿಸಬಹುದೇ ಎಂಬುದಾಗಿತ್ತು. ಅದನ್ನು ಸರಿಯಾಗಿ ಅಧ್ಯಯನ ಮಾಡಿದ್ದ ಕಾಂಗ್ರೆಸ್ ನಾಯಕರು ಇಂದು ಯೋಜಿತವಾದ ರೀತಿಯಲ್ಲಿ ಸಂವಾದ ನಡೆಸಿದರು. ಮೊದಲಿಗೆ ವಿಶ್ವಾಸಮತ ಯಾಚನೆಯ ಗೊತ್ತುವಳಿಯನ್ನು ಸಭಾನಾಯಕರಾದ ಎಚ್.ಡಿ.ಕುಮಾರಸ್ವಾಮಿ ಮುಂದಿಟ್ಟರು. ಅದಕ್ಕೆ ಸ್ಪೀಕರ್ ಅವಕಾಶ ಮಾಡಿಕೊಟ್ಟ ನಂತರ, ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರು ‘ಇದನ್ನು ಕಾಲನಿಗದಿತವಾಗಿ ಬೇಗನೇ ಮುಗಿಸಬೇಕು’ ಎಂದು ಮನವಿ ಮಾಡಿದರು. ಕಾಲಾವಧಿ ಕುರಿತು ನಂತರ ನೋಡೋಣ ಈಗ ಚರ್ಚೆ ಆರಂಭವಾಗಲಿ ಎಂದು ಸ್ಪೀಕರ್ ಹೇಳಿದ ನಂತರ ಮುಖ್ಯಮಂತ್ರಿ ತಮ್ಮ ಮಾತನ್ನು ಆರಂಭಿಸಿದರು. ಅಲ್ಲಿಂದ ಮುಂದಕ್ಕೆ ನಡೆದಿದ್ದು ಅತ್ಯಂತ ಸ್ವಾರಸ್ಯಕರವಾದ ಮತ್ತು ಮಹತ್ವದ ಚರ್ಚೆ.

ಮುಖ್ಯಮಂತ್ರಿ ಮಾತಾಡಲು ಶುರು ಮಾಡಿದ ನಂತರ ಮಧ್ಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರು ಕ್ರಿಯಾಲೋಪ (ಪಾಯಿಂಟ್ ಆಫ್ ಆರ್ಡರ್) ಎತ್ತಿದರು. ಇಂದು ವಿಶ್ವಾಸಮತ ಯಾಚನೆ ಮುಗಿದುಹೋಗಬಾರದು ಎಂಬ ಕಾರಣಕ್ಕೆ ಅವರು ದೀರ್ಘವಾಗಿ ಮಾತಾಡುತ್ತಿದ್ದಾರೆ ಎಂದು ವಿರೋಧಪಕ್ಷದ ಸದಸ್ಯರು ಆಕ್ಷೇಪ ಎತ್ತಿದರೂ, ಸಿದ್ದರಾಮಯ್ಯನವರಿಗೆ ಬೇರೆ ಪಾಯಿಂಟ್ ಮುಂದಿಡಬೇಕಿತ್ತು. ಅವರ ಪ್ರಕಾರ

ಸಿದ್ದರಾಮಯ್ಯ: ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಲಾಗಿದ್ದ ಮೊಕದ್ದಮೆಯಲ್ಲಿ ಪ್ರಾರ್ಥನೆ ಹೀಗಿತ್ತು.

1. ಪ್ರತಿವಾದಿ 2 (ಅಂದರೆ ಸಭಾಧ್ಯಕ್ಷರು) ರಾಜೀನಾಮೆ ಅಂಗೀಕರಿಸಲು ಸೂಚಿಸಬೇಕು.

2. ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಪ್ರತಿವಾದಿ 2 ಕ್ರಮ ತೆಗೆದುಕೊಳ್ಳದಂತೆ ನಿರ್ಬಂಧಿಸಬೇಕು.

ದುರದೃಷ್ಟಕರ ವಿಚಾರ ಒಂದಿದೆ.
ಮೊದಲನೆಯ ಪ್ರಾರ್ಥನೆಯ ಕುರಿತು (ರಾಜೀನಾಮೆ ಅಂಗೀಕಾರದ ಕುರಿತು) ಸ್ಪೀಕರ್‍ಗೆ ಎಲ್ಲಾ ರೀತಿಯ ಅಧಿಕಾರ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಆದರೆ, ಈ ಪ್ರಾರ್ಥನೆಯಲ್ಲಿ ಇಲ್ಲದಿದ್ದ ಒಂದು ಅಂಶದ ಕುರಿತು ಸುಪ್ರೀಂಕೋರ್ಟು ಸೂಚನೆ ನೀಡಿದೆ. ಅದರ ಪ್ರಕಾರ ರಾಜೀನಾಮೆ ನೀಡಿರುವ ಶಾಸಕರು ಸದನದ ಕಲಾಪದಲ್ಲಿ ಭಾಗವಹಿಸುವಂತೆ ಮುಂದಿನ ಆದೇಶದವರೆಗೆ ಬಲವಂತಗೊಳಿಸುವಂತಿಲ್ಲ ಎಂದು ಅದು ಹೇಳಿದೆ. ಆದರೆ, ವಿಪ್ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಈ ಮೊಕದ್ದಮೆಯಲ್ಲಿ ನಾನು (ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ) ಪ್ರತಿವಾದಿಯೇ ಅಲ್ಲ. ಇದು ಸಂವಿಧಾನದ 10ನೇ ಶೆಡ್ಯೂಲ್‍ನಲ್ಲಿ ನನಗೆ ಕೊಟ್ಟಿರುವ ಅಧಿಕಾರವನ್ನು ನಿರ್ಬಂಧಿಸುತ್ತದೆ. ನನ್ನನ್ನು ಅಥವಾ ಕಾಂಗ್ರೆಸ್ ಪಕ್ಷವನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸುವುದು ಸರಿಯೇ? ಈ ಕುರಿತು ಸಭಾಧ್ಯಕ್ಷರು ಸ್ಪಷ್ಟೀಕರಣ ನೀಡಬೇಕು.

ಸ್ಪೀಕರ್: ಇದನ್ನು ನಾನು ಇಂಗ್ಲಿಷಿನಲ್ಲೇ ಉತ್ತರಿಸುತ್ತೇನೆ. ‘ನನ್ನನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸಿದ್ದಾರೆ. ಜೊತೆಗೆ ಇದು ಪ್ರೇಯರ್‍ನಲ್ಲಿ ಇರಲೂ ಇಲ್ಲ’ ಎಂದು ಶಾಸಕಾಂಗ ಪಕ್ಷದ ನಾಯಕರು ಹೇಳಿದ್ದಾರೆ. ಸುಪ್ರೀಂಕೋರ್ಟಿನ ಬಗ್ಗೆ ನಮಗೆಲ್ಲರಿಗೂ ಗೌರವವಿದೆ. ಅದು ಏನು ಹೇಳಿದೆ ಎಂಬ ಕುರಿತು ನಾನು ಕಾಮೆಂಟ್ ಮಾಡಲು ಹೋಗುವುದಿಲ್ಲ. ಆದರೆ, ನಾನು ನಿಮ್ಮ ಅಧಿಕಾರವನ್ನು ನಾನು ನಿರ್ಬಂಧಿಸುತ್ತಿಲ್ಲ.

ಎಚ್.ಕೆ.ಪಾಟೀಲ್: ಇದು ಬುದ್ಧಿವಂತರ ಸಭೆ – ನಮ್ಮ ಸ್ವಾಯತ್ತತೆಯನ್ನು ಕಿತ್ತುಕೊಂಡಾಗ ಸುಮ್ಮನಿರಬಾರದು.

ಕೃಷ್ಣ ಭೈರೇಗೌಡ: ಸುಪ್ರೀಂಕೋರ್ಟ್ ತೀರ್ಪಿನಿಂದ ಆ ಸದಸ್ಯರು ಸದನದ ಸದಸ್ಯರು ಹೌದೇ ಅಲ್ಲವೇ ಎಂಬ ಗೊಂದಲ ಉಂಟಾಗಿದೆ. ಅವರು ಪ್ರಮಾಣ ವಚನ ಸ್ವೀಕರಿಸಿದ ಮೇಲೆ ರಾಜೀನಾಮೆ ಅಂಗೀಕಾರವಾಗುವವರೆಗೆ ಸದನದ ಸದಸ್ಯರೇ ಆಗಿರುತ್ತಾರೆ.

ಇವೆಲ್ಲದರಿಂದ ಒಂದು ವಿಚಾರ ಸ್ಪಷ್ಟವಾಗಿದೆ. ಶಾಸಕಾಂಗದ ಅಧಿಕಾರವನ್ನು ಸುಪ್ರೀಂಕೋರ್ಟು ಮೊಟಕುಗೊಳಿಸಬಹುದೇ ಎಂಬ ಚರ್ಚೆಯನ್ನು ಸದನದಲ್ಲೇ ಮಾಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಅದರಿಂದ ಸುಪ್ರೀಂಕೋರ್ಟಿನ ತೀರ್ಪಿನಲ್ಲಿದ್ದ ಸಮಸ್ಯೆಯನ್ನು ಸದನದಲ್ಲಿ ಬಗೆಹರಿಸಿಕೊಳ್ಳಬಹುದು ಎಂಬುದು ಅವರ ಲೆಕ್ಕಾಚಾರ. ಸ್ಪೀಕರ್ ಈ ಕುರಿತು ರೂಲಿಂಗ್ ನೀಡಲೇಬೇಕಾಗುತ್ತದೆ. ಆ ಮೂಲಕ ವಿಪ್ ನೀಡಬಹುದು, ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಸದರಿ ಶಾಸಕರನ್ನು ಅನರ್ಹಗೊಳಿಸಬಹುದು ಎಂದಾದಲ್ಲಿ, ಮುಂಬೈ ಹೋಟೆಲಿನಲ್ಲಿ ಬೀಡುಬಿಟ್ಟಿರುವ ಶಾಸಕರು ಇಕ್ಕಟ್ಟಿಗೆ ಸಿಕ್ಕಿಕೊಳ್ಳುತ್ತದೆ. ಇದರಿಂದ ಬಿಜೆಪಿ ಇನ್ನಷ್ಟು ಗಲಭೆ ಎಬ್ಬಿಸಿದಲ್ಲಿ ಅದರಿಂದಲೂ ಸರ್ಕಾರಕ್ಕೇ ಒಳ್ಳೆಯದಾಗುತ್ತದೆ. ಈ ಅವಧಿಯಲ್ಲಿ ಸರ್ಕಾರ ಉಳಿಸಿಕೊಳ್ಳುವ ಅವಕಾಶ ಲಭ್ಯವಾಗುತ್ತದೆ ಎಂದು ಯೋಜಿಸಿದಂತಿದೆ. ಸ್ವೀಕರ್ ರವರು 3 ಗಂಟೆಗೆ ಸದನವನ್ನು ಮೂಂದೂಡಿದ್ದಾರೆ.

ಸ್ಪೀಕರ್ ಯಾವ ರೂಲಿಂಗ್ ಕೊಡುತ್ತಾರೆ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...