Homeಕರ್ನಾಟಕನಾಳೆ ಕರ್ನಾಟಕ ಬಂದ್: ಜನಜೀವನ ಅಸ್ತವ್ಯಸ್ತ ಸಾಧ್ಯತೆ

ನಾಳೆ ಕರ್ನಾಟಕ ಬಂದ್: ಜನಜೀವನ ಅಸ್ತವ್ಯಸ್ತ ಸಾಧ್ಯತೆ

- Advertisement -
- Advertisement -

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ನಾಳೆ (ಶುಕ್ರವಾರ) ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ನೂರಾರು ಸಂಘಟನೆಗಳು ಬಂದ್​ಗೆ ಸಂಪೂರ್ಣ ಬೆಂಬಲ ನೀಡಿದ್ದು, ನಾಳೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಂದ್ ಯಶಸ್ವಿಯಾಗುವ ಸಾಧ್ಯತೆ ಇದೆ. ಬಂದ್​ ಯಶಸ್ವಿ ಮಾಡಲು ಕನ್ನಡಪರ ಹಾಗೂ ರೈತ ಪರ ಸಂಘಟನೆಗಳಿಂದ ಭಾರೀ ತಯಾರಿ ನಡೆದಿದೆ.

ಟೋಲ್ ಗೇಟ್, ರಾಷ್ಟ್ರೀಯ ಹೆದ್ದಾರಿಗಳನ್ನು ತಡೆಯಲು ಹೋರಾಟಗಾರರು ಪ್ಲಾನ್​ ಮಾಡಿದ್ದಾರೆ. ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲೇ ಪ್ರತಿಭಟನೆ ನಡೆಸುವುದಕ್ಕೆ ಕನ್ನಡ ಸಂಘಟನೆಗಳ ತಯಾರಿ ನಡೆಸುತ್ತಿವೆ. ನಗರಗಳ ವ್ಯಾಪ್ತಿ ಮಾತ್ರವಲ್ಲದೆ, ತಾಲೂಕು ಕೇಂದ್ರಗಳಲ್ಲಿ ಹಾದು ಹೋಗುವ ಹೆದ್ದಾರಿಗಳಲ್ಲೂ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ.

ಈಗಾಗಲೇ ಇಡೀ ರಾಜ್ಯಕ್ಕೆ ಕನ್ನಡಪರ ಸಂಘಟನೆಗಳು ಸಂದೇಶ ಕೊಟ್ಟಿವೆ. ಕಳೆದ ಮಂಗಳವಾರವಷ್ಟೇ ಬೆಂಗಳೂರು ಬಂದ್​ ಮಾಡಲಾಯಿತು. ಇದೀಗ ಅಖಂಡ ಕರ್ನಾಟಕ ಬಂದ್​ ಗೆ ಸಕಲ ತಯಾರಿ ನಡೆಯುತ್ತಿದೆ.

ಶುಕ್ರವಾರ ಕರ್ನಾಟಕ ಬಂದ್​ಗೆ ಇಂದು ಸಹ ಅಬ್ಬರದ ಪ್ರಚಾರ ನಡೆಯುತ್ತಿದೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬಂದ್‌ಗೆ ಬೆಂಬಲ ನೀಡುವಂತೆ ವಿವಿಧ ಸಂಘಟನೆಗಳು ಮನವಿ ಮಾಡುತ್ತಿವೆ. ನಗರ ಹಲವು ಕಡೆ ತೆರದ ವಾಹನದ ಮುಖಾಂತರ ವಾಟಳ್ ನಾಗರಾಜ್ ಮನವಿ ಮಾಡುತ್ತಿದ್ದಾರೆ. ನಿನ್ನೆ ಮಾಲ್, ಮಾರುಕಟ್ಟೆ ಸೇರಿ ಹಲವು ಕಡೆ ಹೋಗಿ ಪ್ರಚಾರ ಮಾಡಿದರು.

ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​​ ನೀರನ್ನು ಹರಿಸಬೇಕೆಂದು ಸೆ.12ರಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೆ.18ರಂದು ಆದೇಶ ಹೊರಡಿಸಿತ್ತು. ಇದರ ವಿರುದ್ಧ ಸುಪ್ರೀಂಕೋರ್ಟ್​ಗೆ ಕರ್ನಾಟಕ ಮೇಲ್ಮನವಿ ಸಲ್ಲಿಸಿತ್ತು. ಸೆ.21ರಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ CWMA ಆದೇಶವನ್ನು ಎತ್ತಿಹಿಡಿದಿತ್ತು. ಅದರಂತೆ ರಾಜ್ಯ ಸರ್ಕಾರ ನೀರು ಬಿಡುಗಡೆ ಸಹ ಮಾಡಿತು. ಅತ್ತ ಸಂಘಟನೆಗಳು ಬಂದ್​ ಗೆ ಕರೆ ಕೊಡುತ್ತಿದ್ದರೆ. ಇದರ ನಡುವೆ ಮತ್ತೆ 3000 ಸಾವಿರ ಕ್ಯೂಸೆಕ್​ ನೀರು ಹರಿಸಲು ಕಾವೇರಿ ನದಿ ನೀರು ಸಮಿತಿ ಶಿಫಾರಸು ಮಾಡಿರುವುದರಿಂದ ನಾಳಿನ ಕರ್ನಾಟಕ ಬಂದ್​ ತೀವ್ರತೆ ಪಡೆದುಕೊಳ್ಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.

ಇದನ್ನೂ ಓದಿ: ನಾಳೆ ಬೆಂಗಳೂರು, ಶುಕ್ರವಾರ ಅಖಂಡ ಕರ್ನಾಟಕ ಬಂದ್‌ಗೆ ಕರೆ: ಯಾವ ಸೌಲಭ್ಯ ಇರಲಿದೆ, ಏನಿರಲ್ಲ- ಮಾಹಿತಿ ಇಲ್ಲಿದೆ…

ಜನಜೀವನ ಅಸ್ತವ್ಯಸ್ತ ಸಾಧ್ಯತೆ: 

ಕರ್ನಾಟಕ ಬಂದ್‌ನಿಂದ ವಿಶೇಷವಾಗಿ ರಾಜ್ಯದ ದಕ್ಷಿಣ ಭಾಗದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ. ನಗರದ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಎಲ್ಲ ವರ್ಗದ ಜನರು ಭಾಗವಹಿಸುವ ಸಾಧ್ಯತೆ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.

ಬಂದ್ ಇಡೀ ಕರ್ನಾಟಕಕ್ಕೆ ಮತ್ತು ಹೆದ್ದಾರಿಗಳು, ಟೋಲ್ ಗೇಟ್‌ಗಳು, ರೈಲು ಸೇವೆಗಳು ಮತ್ತು ವಿಮಾನ ನಿಲ್ದಾಣಗಳನ್ನು ಮುಚ್ಚಲು ಪ್ರಯತ್ನಿಸುತ್ತೇವೆ ಎಂದು ಹೇಳಲಾಗಿದೆ. ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸಹ ಬಂದ್‌ಗೆ ಬೆಂಬಲ ನೀಡಿದ್ದು, ಕರ್ನಾಟಕದ ಹೋಟೆಲ್‌ಗಳು, ಆಟೋರಿಕ್ಷಾಗಳು ಬಂದ್‌ಗೆ ಬೆಂಬಲ ನೀಡಿವೆ.

ಆಟೋರಿಕ್ಷಾ ಚಾಲಕರ ಒಕ್ಕೂಟ ಮತ್ತು ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘ (OUDOA) ಬಂದ್‌ಗೆ ಬೆಂಬಲ ನೀಡುತ್ತಿದೆ. ನಾವು ನಾಳೆ ನಾಯಂಡಹಳ್ಳಿಯಿಂದ ಫ್ರೀಡಂ ಪಾರ್ಕ್‌ವರೆಗೆ ರ್ಯಾಲಿ ನಡೆಸುತ್ತೇವೆ” ಎಂದು ಅದರ ಅಧ್ಯಕ್ಷ ತನ್ವೀರ್ ಪಾಷಾ ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಮುಷ್ಕರಕ್ಕೆ ನೈತಿಕ ಬೆಂಬಲ ನೀಡಿದೆ. ಶುಕ್ರವಾರ ಇಡೀ ದಿನ ರೆಸ್ಟೋರೆಂಟ್‌ಗಳು ಮತ್ತು ತಿನಿಸುಗಳನ್ನು ಮುಚ್ಚಬೇಕೆ ಎಂಬುದರ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲು ಅವರು ಸಭೆ ನಡೆಸುತ್ತಿದ್ದರು.

ರಾಜ್ಯ ಸಾರಿಗೆ ಇಲಾಖೆಯು ತಮ್ಮ ಸೇವೆಗಳನ್ನು ಎಂದಿನಂತೆ ಮುಂದುವರಿಸಲು ರಾಜ್ಯ ಸಾರಿಗೆ ನಿಗಮಗಳಿಗೆ ನಿರ್ದೇಶನ ನೀಡಿದೆ. ಕರ್ನಾಟಕದ ಉತ್ತರ ಭಾಗದ ಬಳ್ಳಾರಿ, ಕಲಬುರಗಿ, ಬೀದರ್, ಬಾಗಲಕೋಟೆ, ವಿಜಯಪುರ, ಯಾದಗಿರಿ, ಹುಬ್ಬಳ್ಳಿ-ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ದಾವಣಗೆರೆಯ ರೈತರು ಮತ್ತು ವರ್ತಕರು ಬಂದ್‌ಗೆ ತಮ್ಮ ನೈತಿಕ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ ಆದರೆ ಬಂದ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕ ಬಂದ್​ಗೆ ನೈತಿಕ ಬೆಂಬಲ ನೀಡಲು ಶಾಲೆಗಳು ಮುಂದಾಗಿದೆ. ಶಾಲೆಗಳಿಗೆ ರಜೆ ನೀಡುವ ಜವಬ್ದಾರಿಯನ್ನು ಆಯಾ ಆಡಳಿತ ಮಂಡಳಿ ತಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಶಾಲೆಗಳ ರಜೆ ನೀಡುವ ಬಗ್ಗೆ ನಿರ್ಧಾರಕ್ಕೆ ಮನವಿ ನೀಡಲಾಗಿದೆ ಎಂದು ರೂಪ್ಸಾ ಖಾಸಗಿ ಶಾಲೆಗಳ ಸಂಘಟನೆಯ ಲೋಕೇಶ್ ತಾಳಿಕಟ್ಟೆ ಮನವಿ ಮಾಡಿದ್ದಾರೆ.

ಬೀದಿ ಬದಿ ವ್ಯಾಪಾರಿಗಳು ಕೂಡ ಬಂದ್​ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಬೆಳಗ್ಗೆ 6 ರಿಂದ ಸಂಜೆ 6 ವರೆಗೂ ರಾಜ್ಯಾದ್ಯಂತ ಬೀದಿ ಬದಿ ವ್ಯಾಪಾರಿಗಳು ಹಾಗೂ ಸ್ಥಳೀಯ ಮಾರ್ಕೆಟ್ ಬೀದಿ ಬದಿ ವ್ಯಾಪಾರಗಳು ಸಂಪೂರ್ಣ ಸ್ಥಗಿತವಾಗಲಿದೆ ಎಂದು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.

ಕಾವೇರಿ ವಿಚಾರವಾಗಿ ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಬಂದ್ ಬೆಂಬಲಿಸಿ ನಾಳೆ ಹೆದ್ದಾರಿ, ರೈಲು ತಡೆದು ಚಳವಳಿ ನಡೆಸಲಾಗುವುದು ಎಂದು ಮಂಡ್ಯದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕಾವೇರಿ ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ ಮಾಡಲಾಗಿದ್ದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಹಾಗೂ ರೈಲು ತಡೆಗೆ ನಿರ್ಧಾರ ಮಾಡಲಾಗಿದೆ.

ನಾಳೆ ಬೆಂಗಳೂರು ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಮೆಟ್ರೋ ರೈಲು ಸುರಕ್ಷತಾ ವಿಭಾಗದ ಆಯುಕ್ತರು ಕೆಂಗೇರಿಯಿಂದ ಚಲ್ಲಘಟ್ಟ ನಡುವೆ ಹೊಸ ಮಾರ್ಗ ಪರಿಶೀಲನೆ ನಡೆಸಲಿದ್ದು, ಈ ಹಿನ್ನಲೆ ನಾಳೆ ಕೆಂಗೇರಿಯಿಂದ ಮೈಸೂರು ರಸ್ತೆ ನಿಲ್ದಾಣಗಳ ನಡುವೆ ಸಂಚಾರವಿಲ್ಲ. ಆದರೆ, ಬೈಯ್ಯಪ್ಪನಹಳ್ಳಿಯಿಂದ ಮೈಸೂರು ರಸ್ತೆ ನಿಲ್ದಾಣಗಳ ನಡುವೆ ಸೇವೆ ಲಭ್ಯವಿರಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...