Homeಕರ್ನಾಟಕಕರ್ನಾಟಕ ಬಂದ್: ರೈತ ಪರ ಹೋರಾಟಕ್ಕೆ ಬೆಂಗಳೂರಿನಲ್ಲಿ ಅಭೂತಪೂರ್ವ ಬೆಂಬಲ

ಕರ್ನಾಟಕ ಬಂದ್: ರೈತ ಪರ ಹೋರಾಟಕ್ಕೆ ಬೆಂಗಳೂರಿನಲ್ಲಿ ಅಭೂತಪೂರ್ವ ಬೆಂಬಲ

ನೂರಾರು ಸಂಘಟನೆಗಳ ಕಾರ್ಯಕರ್ತರು, ರೈತರ ಜೊತೆ ನಾವಿದ್ದೇವೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತರುತ್ತಿರುವ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ಇಂದು ನಡೆದ ಕರ್ನಾಟಕ ಬಂದ್‌ಗೆ ರಾಜ್ಯದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಟೌನ್‌ಹಾಲ್ ಬಳಿ ನೂರಾರು ರೈತ, ಕಾರ್ಮಿಕ, ದಲಿತ, ಕನ್ನಡಪರ, ದಲಿತ, ವಿದ್ಯಾರ್ಥಿ, ಮಹಿಳಾ ಹಾಗೂ ರಾಜಕೀಯ ಸಂಘಟನೆಗಳು ಭಾಗವಹಿಸಿ ಸರ್ಕಾರಗಳ ವಿರುದ್ದ ಘೋಷಣೆಗಳನ್ನು ಕೂಗಿದರು.

ಸುಮಾರು 12  ಗಂಟೆಯವರೆಗೂ ಟೌನ್‌ಹಾಲ್‌ನಲ್ಲೇ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ನಂತರ ಸರ್ಕಾರಗಳ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್ ವೃತ್ತಕ್ಕೆ ಪ್ರತಿಭಟನಾ ಜಾಥಾ ಹೊರಟರು. ಜಾಥಾದ ಉದ್ದಕ್ಕೂ ಹಾಡು, ಘೋಷಣೆಗಳನ್ನು ಕೂಗುತ್ತಾ ಹೊರಟ ಪ್ರತಿಭಟನಾಕಾರರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಧರಣಿ ಕೂತರು.

Posted by Naanu Gauri on Sunday, September 27, 2020

 

ಮೈಸೂರು ಬ್ಯಾಂಕ್‌ ವೃತ್ತದಲ್ಲಿ ನೆರೆದ ಸಾವಿರಾರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಂಘಟನೆಗಳ ಮುಖಂಡರು ಮಾತನಾಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ತಮ್ಮ ಆಕ್ರೋಶಗಳನ್ನು ಹೊರಹಾಕಿದರು.

ರೈತ ವಿರೋಧಿ ನೀತಿ ವಿರುದ್ಧ ಬೆಂಗಳೂರಲ್ಲಿ ನಡೆಯುತ್ತಿರುವ ಜಾಥಾ

Posted by Naanu Gauri on Sunday, September 27, 2020

 

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, “ರಾಜ್ಯ ಸರ್ಕಾರ ಎಪಿಎಂಸಿ ಕಾಯಿದೆಯನ್ನು ಸರಿಯಾಗಿ ತಿಳಿದುಕೊಂಡಿಲ್ಲ. ಅದರಲ್ಲಿರುವ ಬಿಳಿಚೀಟಿ ಕಮೀಷನ್‌‌ನನ್ನು ತಿದ್ದುಪಡಿ ಮಾಡುವುದಾದರೆ ನಮ್ಮ ಬೆಂಬಲ ಇದೆ. ಮುಕ್ತ ಮನಸ್ಸಿನಿಂದ ನಮ್ಮನ್ನು ಮಾತಿಗೆ ಕರೆಯುವುದಾದರೆ ನಾವು ಸರ್ಕಾರದೊಂದಿಗೆ ಮಾತಿಗೆ ತಯಾರಿದ್ದೇವೆ. ಅದು ಬಿಟ್ಟು ನೀವು ಅಜೆಂಡಾವನ್ನು ತಯಾರಾಗಿಟ್ಟುಕೊಂಡು ಮಾತಿಗೆ ಕರೆಯುವುದಾದರೆ ಅದಕ್ಕೆ ತಯಾರಿಲ್ಲ” ಎಂದು ಹೇಳಿದರು.

ಮತ್ತೊಬ್ಬ ರೈತ ಮುಖಂಡರಾದ ಬಡಗಲಪುರ ನಾಗೇಂದ್ರ ಮಾತನಾಡಿ, “ಮುಖ್ಯಮಂತ್ರಿ ಯಡಿಯೂರಪ್ಪ ಇದು ಬೇರೆ ಪಕ್ಷಗಳ ರಾಜಕೀಯ ಪ್ರೇರಣೆಯಿಂದ ನಡೆಯುತ್ತಿದೆ ಎನ್ನುತ್ತಿದ್ದಾರೆ. ನಮಗೆ ಎಲ್ಲಾ ರಾಜಕೀಯ ಪಕ್ಷಗಳಿಗೂ ತಿಳವಳಿಕೆ ನೀಡುವಂತಹ ಶಕ್ತಿಯಿದೆ, ಇನ್ಯಾರದೋ ಪ್ರೇರೇಪಣೆಯಿಂದ ಚಳವಳಿಗೆ ಇಳಿಯುವ ಅಗತ್ಯವಿಲ್ಲ. ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಹೋರಾಟಗಾರರ ಮೇಲೆ ಸುಳ್ಳು ಆರೋಪಗಳನ್ನು ಮಾಡುವಂತದ್ದು ನಾವು ತೀವ್ರವಾಗಿ ಖಂಡಿಸುತ್ತೇವೆ. ನಮಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳೂ ಒಂದೇ. ರೈತ ವಿರೋಧಿಯಾಗಿ ಯಾರಿದ್ದಾರೋ ಎಲ್ಲರನ್ನೂ ವಿರೋಧಿಸುತ್ತಾ ಬಂದಿದ್ದೇವೆ. ಮುಖ್ಯಮಂತ್ರಿಗಳು ನಾಲಗೆ ಬಿಗಿಹಿಡಿದು ಮಾತನಾಡಬೇಕು. ಅಧಿಕಾರವಿದ್ದರೆ ಏನು ಬೇಕಾದರೂ ಮಾಡಬಹುದು ಎಂದು ತಿಳಿದು ಕೊಂಡಿದ್ದರು, ಈಗ ಚಳವಳಿಯ ಬಿಸಿ ಮುಟ್ಟಿದೆ, ಕಾರ್ಪೊರೇಟ್‌ಗಳ ಗುಲಾಮರಾಗಿ ರೈತರನ್ನು ವಂಚಿಸಲು ಹೊರಟರೆ ರೈತ ಸುಮ್ಮನಿರುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಬ್ಬುಬೆಳೆಗಾರರ ಸಂಘದ ಮುಖಂಡ ಕುರಬೂರು ಶಾಂತಕುಮಾರ್‌ ಮಾಡನಾಡಿ, “ಸರ್ಕಾರ ಬಂದನ್ನು ವಿಫಲ ಮಾಡಲು ಬಹಳ ಪ್ರಯತ್ನ ಮಾಡುತ್ತಿದೆ. ಆದರೂ ಕೂಡಾ ಜನರು ಅಭೂತಪೂರ್ವ ಬೆಂಬಲ ನೀಡಿದ್ದಾರೆ. ನೂರಾರು ಸಂಘಟನೆಗಳು ಬೆಂಬಲ ನೀಡಿದ್ದರಿಂದ ಬಂದ್‌ ಯಶಸ್ವಿಯಾಗಿದೆ” ಎಂದು ಹೇಳಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಹಲವಾರು ಕಾರ್ಮಿಕ, ದಲಿತ, ಮಹಿಳಾ ಹಾಗೂ ರಾಜಕೀಯ ಸಂಘಟನೆಯ ಮುಖಂಡರು ಮಾತನಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಪ್ರತಿಭಟನೆಯ ಕಾವು ಹೆಚ್ಚಾದಂತೆ ಪತ್ರಿಭಟನಾಕಾರರನ್ನು ನಿಯಂತ್ರಿಸಲು ಪರದಾಡಿದ ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದುಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...