Homeಕರ್ನಾಟಕಕರ್ನಾಟಕ ಬಂದ್: ರೈತ ಪರ ಹೋರಾಟಕ್ಕೆ ಬೆಂಗಳೂರಿನಲ್ಲಿ ಅಭೂತಪೂರ್ವ ಬೆಂಬಲ

ಕರ್ನಾಟಕ ಬಂದ್: ರೈತ ಪರ ಹೋರಾಟಕ್ಕೆ ಬೆಂಗಳೂರಿನಲ್ಲಿ ಅಭೂತಪೂರ್ವ ಬೆಂಬಲ

ನೂರಾರು ಸಂಘಟನೆಗಳ ಕಾರ್ಯಕರ್ತರು, ರೈತರ ಜೊತೆ ನಾವಿದ್ದೇವೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತರುತ್ತಿರುವ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ಇಂದು ನಡೆದ ಕರ್ನಾಟಕ ಬಂದ್‌ಗೆ ರಾಜ್ಯದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಟೌನ್‌ಹಾಲ್ ಬಳಿ ನೂರಾರು ರೈತ, ಕಾರ್ಮಿಕ, ದಲಿತ, ಕನ್ನಡಪರ, ದಲಿತ, ವಿದ್ಯಾರ್ಥಿ, ಮಹಿಳಾ ಹಾಗೂ ರಾಜಕೀಯ ಸಂಘಟನೆಗಳು ಭಾಗವಹಿಸಿ ಸರ್ಕಾರಗಳ ವಿರುದ್ದ ಘೋಷಣೆಗಳನ್ನು ಕೂಗಿದರು.

ಸುಮಾರು 12  ಗಂಟೆಯವರೆಗೂ ಟೌನ್‌ಹಾಲ್‌ನಲ್ಲೇ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ನಂತರ ಸರ್ಕಾರಗಳ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್ ವೃತ್ತಕ್ಕೆ ಪ್ರತಿಭಟನಾ ಜಾಥಾ ಹೊರಟರು. ಜಾಥಾದ ಉದ್ದಕ್ಕೂ ಹಾಡು, ಘೋಷಣೆಗಳನ್ನು ಕೂಗುತ್ತಾ ಹೊರಟ ಪ್ರತಿಭಟನಾಕಾರರು ಮೈಸೂರು ಬ್ಯಾಂಕ್ ವೃತ್ತದಲ್ಲಿ ಧರಣಿ ಕೂತರು.

Posted by Naanu Gauri on Sunday, September 27, 2020

 

ಮೈಸೂರು ಬ್ಯಾಂಕ್‌ ವೃತ್ತದಲ್ಲಿ ನೆರೆದ ಸಾವಿರಾರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಂಘಟನೆಗಳ ಮುಖಂಡರು ಮಾತನಾಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ತಮ್ಮ ಆಕ್ರೋಶಗಳನ್ನು ಹೊರಹಾಕಿದರು.

ರೈತ ವಿರೋಧಿ ನೀತಿ ವಿರುದ್ಧ ಬೆಂಗಳೂರಲ್ಲಿ ನಡೆಯುತ್ತಿರುವ ಜಾಥಾ

Posted by Naanu Gauri on Sunday, September 27, 2020

 

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, “ರಾಜ್ಯ ಸರ್ಕಾರ ಎಪಿಎಂಸಿ ಕಾಯಿದೆಯನ್ನು ಸರಿಯಾಗಿ ತಿಳಿದುಕೊಂಡಿಲ್ಲ. ಅದರಲ್ಲಿರುವ ಬಿಳಿಚೀಟಿ ಕಮೀಷನ್‌‌ನನ್ನು ತಿದ್ದುಪಡಿ ಮಾಡುವುದಾದರೆ ನಮ್ಮ ಬೆಂಬಲ ಇದೆ. ಮುಕ್ತ ಮನಸ್ಸಿನಿಂದ ನಮ್ಮನ್ನು ಮಾತಿಗೆ ಕರೆಯುವುದಾದರೆ ನಾವು ಸರ್ಕಾರದೊಂದಿಗೆ ಮಾತಿಗೆ ತಯಾರಿದ್ದೇವೆ. ಅದು ಬಿಟ್ಟು ನೀವು ಅಜೆಂಡಾವನ್ನು ತಯಾರಾಗಿಟ್ಟುಕೊಂಡು ಮಾತಿಗೆ ಕರೆಯುವುದಾದರೆ ಅದಕ್ಕೆ ತಯಾರಿಲ್ಲ” ಎಂದು ಹೇಳಿದರು.

ಮತ್ತೊಬ್ಬ ರೈತ ಮುಖಂಡರಾದ ಬಡಗಲಪುರ ನಾಗೇಂದ್ರ ಮಾತನಾಡಿ, “ಮುಖ್ಯಮಂತ್ರಿ ಯಡಿಯೂರಪ್ಪ ಇದು ಬೇರೆ ಪಕ್ಷಗಳ ರಾಜಕೀಯ ಪ್ರೇರಣೆಯಿಂದ ನಡೆಯುತ್ತಿದೆ ಎನ್ನುತ್ತಿದ್ದಾರೆ. ನಮಗೆ ಎಲ್ಲಾ ರಾಜಕೀಯ ಪಕ್ಷಗಳಿಗೂ ತಿಳವಳಿಕೆ ನೀಡುವಂತಹ ಶಕ್ತಿಯಿದೆ, ಇನ್ಯಾರದೋ ಪ್ರೇರೇಪಣೆಯಿಂದ ಚಳವಳಿಗೆ ಇಳಿಯುವ ಅಗತ್ಯವಿಲ್ಲ. ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಹೋರಾಟಗಾರರ ಮೇಲೆ ಸುಳ್ಳು ಆರೋಪಗಳನ್ನು ಮಾಡುವಂತದ್ದು ನಾವು ತೀವ್ರವಾಗಿ ಖಂಡಿಸುತ್ತೇವೆ. ನಮಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳೂ ಒಂದೇ. ರೈತ ವಿರೋಧಿಯಾಗಿ ಯಾರಿದ್ದಾರೋ ಎಲ್ಲರನ್ನೂ ವಿರೋಧಿಸುತ್ತಾ ಬಂದಿದ್ದೇವೆ. ಮುಖ್ಯಮಂತ್ರಿಗಳು ನಾಲಗೆ ಬಿಗಿಹಿಡಿದು ಮಾತನಾಡಬೇಕು. ಅಧಿಕಾರವಿದ್ದರೆ ಏನು ಬೇಕಾದರೂ ಮಾಡಬಹುದು ಎಂದು ತಿಳಿದು ಕೊಂಡಿದ್ದರು, ಈಗ ಚಳವಳಿಯ ಬಿಸಿ ಮುಟ್ಟಿದೆ, ಕಾರ್ಪೊರೇಟ್‌ಗಳ ಗುಲಾಮರಾಗಿ ರೈತರನ್ನು ವಂಚಿಸಲು ಹೊರಟರೆ ರೈತ ಸುಮ್ಮನಿರುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಬ್ಬುಬೆಳೆಗಾರರ ಸಂಘದ ಮುಖಂಡ ಕುರಬೂರು ಶಾಂತಕುಮಾರ್‌ ಮಾಡನಾಡಿ, “ಸರ್ಕಾರ ಬಂದನ್ನು ವಿಫಲ ಮಾಡಲು ಬಹಳ ಪ್ರಯತ್ನ ಮಾಡುತ್ತಿದೆ. ಆದರೂ ಕೂಡಾ ಜನರು ಅಭೂತಪೂರ್ವ ಬೆಂಬಲ ನೀಡಿದ್ದಾರೆ. ನೂರಾರು ಸಂಘಟನೆಗಳು ಬೆಂಬಲ ನೀಡಿದ್ದರಿಂದ ಬಂದ್‌ ಯಶಸ್ವಿಯಾಗಿದೆ” ಎಂದು ಹೇಳಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಹಲವಾರು ಕಾರ್ಮಿಕ, ದಲಿತ, ಮಹಿಳಾ ಹಾಗೂ ರಾಜಕೀಯ ಸಂಘಟನೆಯ ಮುಖಂಡರು ಮಾತನಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಪ್ರತಿಭಟನೆಯ ಕಾವು ಹೆಚ್ಚಾದಂತೆ ಪತ್ರಿಭಟನಾಕಾರರನ್ನು ನಿಯಂತ್ರಿಸಲು ಪರದಾಡಿದ ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದುಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...