Homeಕರ್ನಾಟಕಇಂದು ಕರ್ನಾಟಕ ಬಂದ್: ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ?

ಇಂದು ಕರ್ನಾಟಕ ಬಂದ್: ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ?

- Advertisement -
- Advertisement -

ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದು, ಎಂಇಎಸ್‌ ಸಂಘಟನೆ ಪದೇ ಪದೇ ಗಡಿ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿರುವುದು ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ವಾಟಾಳ್‌ ನಾಗರಾಜ್‌ ನೇತೃತ್ವದ ಕನ್ನಡ ಪರ ಗುಂಪು ಇಂದು (ಶನಿವಾರ) ‘ಕರ್ನಾಟಕ ಬಂದ್’ಗೆ ಕರೆ ನೀಡಿದೆ.

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್‌ಗೆ ಬೆಂಬಲ ನೀಡುವಂತೆ ವಾಟಾಳ್‌ ನಾಗರಾಜ್ ಜನರಿಗೆ ಮನವಿ ಮಾಡಿದ್ದಾರೆ.

ಬಂದ್‌ಗೆ ಓಲಾ, ಊಬರ್‌ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ಕೆಲ ಆಟೊ ರಿಕ್ಷಾ ಸಂಘಟನೆಗಳು ಬೆಂಬಲ ನೀಡಿವೆ. ಕೆಎಸ್‌ಆರ್‌ಟಿಸಿ ಮತ್ತು ಇತರ ಸಾರಿಗೆ ನಿಗಮಗಳು, ಬಿಎಂಟಿಸಿ ಮತ್ತು ಮೆಟ್ರೋ ಬೆಂಬಲ ನೀಡಿಲ್ಲ. ಹೋಟೆಲ್‌ ಮಾಲೀಕರು ನೈತಿಕ ಬೆಂಬಲ ಮಾತ್ರ ನೀಡಿದ್ದಾರೆ.

ಗಮನಾರ್ಹ ಸಂಗತಿಯೆಂದರೆ ಇಂದು ಏಕೆ ಬಂದ್ ಮಾಡಲಾಗುತ್ತಿದೆ?.. ಯಾರು ಬಂದ್ ಮಾಡುತ್ತಿದ್ದಾರೆ? ಎಂದು ಹಲವರು ನಮ್ಮನ್ನು ಪ್ರಶ್ನಿಸಿದ್ದಾರೆ. ಜನರಿಗೆ ಇಂದಿನ ಬಂದ್ ಬಗ್ಗೆ ಹಲವು ಗೊಂದಲಗಳಿವೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಬಂದ್ ಪರಿಸ್ಥಿತಿ ಹೇಗಿತ್ತು ಎಂಬ ಮಾಹಿತಿ ಇಲ್ಲಿದೆ.

  • ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಿಸ್ಥಿತಿ ಎಂದಿನಂತೆ ಇದೆ. ಮುಂಜಾನೆಯೇ ಜನರು ತಮ್ಮ ದೈನಂದಿನ ಕೆಲಸ, ಕಾರ್ಯಗಳಲ್ಲಿ ತೊಡಗಿದ್ದಾರೆ. ನಗರದ ಜೀವನಾಡಿ ಬಿಎಂಟಿಸಿ ಬಸ್‌ಗಳು ಎಂದಿನಂತೆ ಓಡಾಡುತ್ತಿವೆ. ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ಕೆಎಸ್‌ಆರ್‌ಟಿಸಿ ಮತ್ತು ಇತರ ನಿಗಮಗಳ ಬಸ್‌ ಸಂಚಾರ ಎಂದಿನಂತೆ ಇದೆ.
  • ನಗರದ ಪ್ರಮುಖ ಪ್ರದೇಶಗಳಾದ ಮೆಜೆಸ್ಟಿಕ್, ಕೆ.ಆರ್‌ ಮಾರುಕಟ್ಟೆ, ಟೌನ್‌ ಹಾಲ್‌, ಕಾರ್ಪೋರೇಶನ್ ಬಸವನಗುಡಿ, ಚಾಮರಾಜಪೇಟೆ, ಜಯನಗರ, ಆರ್‌.ಟಿ ನಗರ, ವಿಧಾನಸೌಧ, ಕಂಟೋನ್‌ಮೆಂಟ್, ಶಿವಾಜಿನಗರ ಸೇರಿದಂತೆ ಎಲ್ಲೆಡೆ ಪರಿಸ್ಥಿತಿ ಎಂದಿನಂತೆ ಇದೆ. ಪ್ರಮುಖ ಆಸ್ಪತ್ರೆಗಳಾದ ವಿಕ್ಟೋರಿಯಾ, ವಾಣಿ ವಿಲಾಸ, ಕಿಮ್ಸ್, ಬೌರಿಂಗ್ ಎಲ್ಲವೂ ಕಾರ್ಯ ನಿರ್ವಹಿಸುತ್ತಿವೆ.
  • ಪ್ರತಿಭಟನೆಯ ಕೇಂದ್ರ ಬಿಂದುವಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಪರಿಸ್ಥಿತಿ ಎಂದಿನಂತೆ ಇದೆ. ಬೆಳಗಾವಿ ನಗರದಿಂದ ಗ್ರಾಮೀಣ ಭಾಗಗಳು ಮತ್ತು ರಾಜ್ಯದ ಇತರ ಜಿಲ್ಲೆಗಳಿಗೆ ಬಸ್‌ ಸಂಚಾರ ಯಥಾಸ್ಥಿತಿಯಲ್ಲಿದೆ.
  • ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರ ಮತ್ತು ಬೆಳಗಾವಿ ನಡುವಿನ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿಭಾಗ ನಿಪ್ಪಾಣಿಯವರೆಗೆ ಮಾತ್ರ ಎರಡೂ ಕಡೆಯ ಬಸ್‌ಗಳು ಸಂಚರಿಸುತ್ತಿವೆ.
  • ಕನ್ನಡ ನೆಲ, ಜಲ ವಿಷಯದ ಹೋರಾಟದಲ್ಲಿ ಸದಾ ಮುಂದಿರುವ ಮಂಡ್ಯ ಜಿಲ್ಲೆಯಲ್ಲೂ ಪರಿಸ್ಥಿತಿ ಎಂದಿನಂತೆ ಇದೆ. ಬಸ್‌ಗಳು ಯಥಾಸ್ಥಿತಿಯಲ್ಲಿ ಓಡಾಡುತ್ತಿವೆ. ಆದರೆ, ಆಟೋಗಳ ಓಡಾಟ ವಿರಳವಿದೆ. ಬೆಳಿಗ್ಗೆ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.
  • ಮಂಡ್ಯ ಜಿಲ್ಲೆಯ ಕನ್ನಡ ಪರ ಮತ್ತು ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಕನ್ನಡ ಪರ ಸಂಘಟನೆಗಳ ಕಾರ್ಯರ್ತರು ಬೆಳಿಗ್ಗೆಯೇ ಮಂಡ್ಯ ನಗರದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.
  • ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳಿಗ್ಗೆಯೇ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ ಆರಂಭಿಸಿವೆ. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಬಸ್‌, ಆಟೋ ಮತ್ತು ಇತರ ವಾಹನಗಳ ಸಂಚಾರ ಎಂದಿನಂತೆ ಇದೆ. ಅಂಗಡಿ, ಮುಂಗಟ್ಟುಗಳು ತೆರದಿವೆ.
  • ಕೊಪ್ಪಳ, ದಾವಣಗೆರೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ತುಮಕೂರು, ಧಾರವಾಡ, ಹುಬ್ಬಳ್ಳಿ ನಗರ ಸೇರಿದಂತೆ ವಿವಿದೆಡೆ ಪರಿಸ್ಥಿತಿ ಎಂದಿನಂತೆ ಇದೆ. ಎಲ್ಲಿಯೂ ಬಂದ್ ಬಿಸಿ ತಟ್ಟಿರುವುದು ಕಂಡು ಬಂದಿಲ್ಲ.
  • ಆದರೆ, ದಾವಣಗೆರೆ, ಕೊಪ್ಪಳ ಮತ್ತು ಚಿಕ್ಕಮಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಬೆಳಿಗ್ಗೆ ಪ್ರತಿಭಟನೆ ನಡೆಸಿವೆ. ದಾವಣಗೆರೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಲಾಗಿದೆ.
  • ಮಂಗಳೂರು, ಉಡುಪಿಯಲ್ಲಿ ಎಂದಿನಂತೆ ಖಾಸಗಿ ಬಸ್‌ಗಳ ಓಡಾಟ ಇದ್ದು, ಅಂಗಡಿ, ಮುಂಗಟ್ಟುಗಳು ತೆರೆದಿವೆ. ಈ ಭಾಗದಲ್ಲಿ ಬಂದ್ ಯಾವುದೇ ಪರಿಣಾಮ ಬೀರಿಲ್ಲ.

ಬೆಳಿಗ್ಗೆ 9 ಗಂಟೆಯವರೆ ವಿವಿಧ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೀಗಿತ್ತು. ಇನ್ನುಮುಂದೆ ಬದಲಾದರೂ ಆಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...