Homeಕರ್ನಾಟಕಇಂದು ಕರ್ನಾಟಕ ಬಂದ್: ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ?

ಇಂದು ಕರ್ನಾಟಕ ಬಂದ್: ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ?

- Advertisement -
- Advertisement -

ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದು, ಎಂಇಎಸ್‌ ಸಂಘಟನೆ ಪದೇ ಪದೇ ಗಡಿ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿರುವುದು ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ವಾಟಾಳ್‌ ನಾಗರಾಜ್‌ ನೇತೃತ್ವದ ಕನ್ನಡ ಪರ ಗುಂಪು ಇಂದು (ಶನಿವಾರ) ‘ಕರ್ನಾಟಕ ಬಂದ್’ಗೆ ಕರೆ ನೀಡಿದೆ.

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್‌ಗೆ ಬೆಂಬಲ ನೀಡುವಂತೆ ವಾಟಾಳ್‌ ನಾಗರಾಜ್ ಜನರಿಗೆ ಮನವಿ ಮಾಡಿದ್ದಾರೆ.

ಬಂದ್‌ಗೆ ಓಲಾ, ಊಬರ್‌ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ಕೆಲ ಆಟೊ ರಿಕ್ಷಾ ಸಂಘಟನೆಗಳು ಬೆಂಬಲ ನೀಡಿವೆ. ಕೆಎಸ್‌ಆರ್‌ಟಿಸಿ ಮತ್ತು ಇತರ ಸಾರಿಗೆ ನಿಗಮಗಳು, ಬಿಎಂಟಿಸಿ ಮತ್ತು ಮೆಟ್ರೋ ಬೆಂಬಲ ನೀಡಿಲ್ಲ. ಹೋಟೆಲ್‌ ಮಾಲೀಕರು ನೈತಿಕ ಬೆಂಬಲ ಮಾತ್ರ ನೀಡಿದ್ದಾರೆ.

ಗಮನಾರ್ಹ ಸಂಗತಿಯೆಂದರೆ ಇಂದು ಏಕೆ ಬಂದ್ ಮಾಡಲಾಗುತ್ತಿದೆ?.. ಯಾರು ಬಂದ್ ಮಾಡುತ್ತಿದ್ದಾರೆ? ಎಂದು ಹಲವರು ನಮ್ಮನ್ನು ಪ್ರಶ್ನಿಸಿದ್ದಾರೆ. ಜನರಿಗೆ ಇಂದಿನ ಬಂದ್ ಬಗ್ಗೆ ಹಲವು ಗೊಂದಲಗಳಿವೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಬಂದ್ ಪರಿಸ್ಥಿತಿ ಹೇಗಿತ್ತು ಎಂಬ ಮಾಹಿತಿ ಇಲ್ಲಿದೆ.

  • ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಿಸ್ಥಿತಿ ಎಂದಿನಂತೆ ಇದೆ. ಮುಂಜಾನೆಯೇ ಜನರು ತಮ್ಮ ದೈನಂದಿನ ಕೆಲಸ, ಕಾರ್ಯಗಳಲ್ಲಿ ತೊಡಗಿದ್ದಾರೆ. ನಗರದ ಜೀವನಾಡಿ ಬಿಎಂಟಿಸಿ ಬಸ್‌ಗಳು ಎಂದಿನಂತೆ ಓಡಾಡುತ್ತಿವೆ. ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ಕೆಎಸ್‌ಆರ್‌ಟಿಸಿ ಮತ್ತು ಇತರ ನಿಗಮಗಳ ಬಸ್‌ ಸಂಚಾರ ಎಂದಿನಂತೆ ಇದೆ.
  • ನಗರದ ಪ್ರಮುಖ ಪ್ರದೇಶಗಳಾದ ಮೆಜೆಸ್ಟಿಕ್, ಕೆ.ಆರ್‌ ಮಾರುಕಟ್ಟೆ, ಟೌನ್‌ ಹಾಲ್‌, ಕಾರ್ಪೋರೇಶನ್ ಬಸವನಗುಡಿ, ಚಾಮರಾಜಪೇಟೆ, ಜಯನಗರ, ಆರ್‌.ಟಿ ನಗರ, ವಿಧಾನಸೌಧ, ಕಂಟೋನ್‌ಮೆಂಟ್, ಶಿವಾಜಿನಗರ ಸೇರಿದಂತೆ ಎಲ್ಲೆಡೆ ಪರಿಸ್ಥಿತಿ ಎಂದಿನಂತೆ ಇದೆ. ಪ್ರಮುಖ ಆಸ್ಪತ್ರೆಗಳಾದ ವಿಕ್ಟೋರಿಯಾ, ವಾಣಿ ವಿಲಾಸ, ಕಿಮ್ಸ್, ಬೌರಿಂಗ್ ಎಲ್ಲವೂ ಕಾರ್ಯ ನಿರ್ವಹಿಸುತ್ತಿವೆ.
  • ಪ್ರತಿಭಟನೆಯ ಕೇಂದ್ರ ಬಿಂದುವಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಪರಿಸ್ಥಿತಿ ಎಂದಿನಂತೆ ಇದೆ. ಬೆಳಗಾವಿ ನಗರದಿಂದ ಗ್ರಾಮೀಣ ಭಾಗಗಳು ಮತ್ತು ರಾಜ್ಯದ ಇತರ ಜಿಲ್ಲೆಗಳಿಗೆ ಬಸ್‌ ಸಂಚಾರ ಯಥಾಸ್ಥಿತಿಯಲ್ಲಿದೆ.
  • ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರ ಮತ್ತು ಬೆಳಗಾವಿ ನಡುವಿನ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿಭಾಗ ನಿಪ್ಪಾಣಿಯವರೆಗೆ ಮಾತ್ರ ಎರಡೂ ಕಡೆಯ ಬಸ್‌ಗಳು ಸಂಚರಿಸುತ್ತಿವೆ.
  • ಕನ್ನಡ ನೆಲ, ಜಲ ವಿಷಯದ ಹೋರಾಟದಲ್ಲಿ ಸದಾ ಮುಂದಿರುವ ಮಂಡ್ಯ ಜಿಲ್ಲೆಯಲ್ಲೂ ಪರಿಸ್ಥಿತಿ ಎಂದಿನಂತೆ ಇದೆ. ಬಸ್‌ಗಳು ಯಥಾಸ್ಥಿತಿಯಲ್ಲಿ ಓಡಾಡುತ್ತಿವೆ. ಆದರೆ, ಆಟೋಗಳ ಓಡಾಟ ವಿರಳವಿದೆ. ಬೆಳಿಗ್ಗೆ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.
  • ಮಂಡ್ಯ ಜಿಲ್ಲೆಯ ಕನ್ನಡ ಪರ ಮತ್ತು ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಕನ್ನಡ ಪರ ಸಂಘಟನೆಗಳ ಕಾರ್ಯರ್ತರು ಬೆಳಿಗ್ಗೆಯೇ ಮಂಡ್ಯ ನಗರದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.
  • ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳಿಗ್ಗೆಯೇ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ ಆರಂಭಿಸಿವೆ. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಬಸ್‌, ಆಟೋ ಮತ್ತು ಇತರ ವಾಹನಗಳ ಸಂಚಾರ ಎಂದಿನಂತೆ ಇದೆ. ಅಂಗಡಿ, ಮುಂಗಟ್ಟುಗಳು ತೆರದಿವೆ.
  • ಕೊಪ್ಪಳ, ದಾವಣಗೆರೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ತುಮಕೂರು, ಧಾರವಾಡ, ಹುಬ್ಬಳ್ಳಿ ನಗರ ಸೇರಿದಂತೆ ವಿವಿದೆಡೆ ಪರಿಸ್ಥಿತಿ ಎಂದಿನಂತೆ ಇದೆ. ಎಲ್ಲಿಯೂ ಬಂದ್ ಬಿಸಿ ತಟ್ಟಿರುವುದು ಕಂಡು ಬಂದಿಲ್ಲ.
  • ಆದರೆ, ದಾವಣಗೆರೆ, ಕೊಪ್ಪಳ ಮತ್ತು ಚಿಕ್ಕಮಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಬೆಳಿಗ್ಗೆ ಪ್ರತಿಭಟನೆ ನಡೆಸಿವೆ. ದಾವಣಗೆರೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಲಾಗಿದೆ.
  • ಮಂಗಳೂರು, ಉಡುಪಿಯಲ್ಲಿ ಎಂದಿನಂತೆ ಖಾಸಗಿ ಬಸ್‌ಗಳ ಓಡಾಟ ಇದ್ದು, ಅಂಗಡಿ, ಮುಂಗಟ್ಟುಗಳು ತೆರೆದಿವೆ. ಈ ಭಾಗದಲ್ಲಿ ಬಂದ್ ಯಾವುದೇ ಪರಿಣಾಮ ಬೀರಿಲ್ಲ.

ಬೆಳಿಗ್ಗೆ 9 ಗಂಟೆಯವರೆ ವಿವಿಧ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೀಗಿತ್ತು. ಇನ್ನುಮುಂದೆ ಬದಲಾದರೂ ಆಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...