Homeಕರ್ನಾಟಕಇಂದು ಕರ್ನಾಟಕ ಬಂದ್: ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ?

ಇಂದು ಕರ್ನಾಟಕ ಬಂದ್: ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ?

- Advertisement -
- Advertisement -

ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದು, ಎಂಇಎಸ್‌ ಸಂಘಟನೆ ಪದೇ ಪದೇ ಗಡಿ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿರುವುದು ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ವಾಟಾಳ್‌ ನಾಗರಾಜ್‌ ನೇತೃತ್ವದ ಕನ್ನಡ ಪರ ಗುಂಪು ಇಂದು (ಶನಿವಾರ) ‘ಕರ್ನಾಟಕ ಬಂದ್’ಗೆ ಕರೆ ನೀಡಿದೆ.

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್‌ಗೆ ಬೆಂಬಲ ನೀಡುವಂತೆ ವಾಟಾಳ್‌ ನಾಗರಾಜ್ ಜನರಿಗೆ ಮನವಿ ಮಾಡಿದ್ದಾರೆ.

ಬಂದ್‌ಗೆ ಓಲಾ, ಊಬರ್‌ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ಕೆಲ ಆಟೊ ರಿಕ್ಷಾ ಸಂಘಟನೆಗಳು ಬೆಂಬಲ ನೀಡಿವೆ. ಕೆಎಸ್‌ಆರ್‌ಟಿಸಿ ಮತ್ತು ಇತರ ಸಾರಿಗೆ ನಿಗಮಗಳು, ಬಿಎಂಟಿಸಿ ಮತ್ತು ಮೆಟ್ರೋ ಬೆಂಬಲ ನೀಡಿಲ್ಲ. ಹೋಟೆಲ್‌ ಮಾಲೀಕರು ನೈತಿಕ ಬೆಂಬಲ ಮಾತ್ರ ನೀಡಿದ್ದಾರೆ.

ಗಮನಾರ್ಹ ಸಂಗತಿಯೆಂದರೆ ಇಂದು ಏಕೆ ಬಂದ್ ಮಾಡಲಾಗುತ್ತಿದೆ?.. ಯಾರು ಬಂದ್ ಮಾಡುತ್ತಿದ್ದಾರೆ? ಎಂದು ಹಲವರು ನಮ್ಮನ್ನು ಪ್ರಶ್ನಿಸಿದ್ದಾರೆ. ಜನರಿಗೆ ಇಂದಿನ ಬಂದ್ ಬಗ್ಗೆ ಹಲವು ಗೊಂದಲಗಳಿವೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಬಂದ್ ಪರಿಸ್ಥಿತಿ ಹೇಗಿತ್ತು ಎಂಬ ಮಾಹಿತಿ ಇಲ್ಲಿದೆ.

  • ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಿಸ್ಥಿತಿ ಎಂದಿನಂತೆ ಇದೆ. ಮುಂಜಾನೆಯೇ ಜನರು ತಮ್ಮ ದೈನಂದಿನ ಕೆಲಸ, ಕಾರ್ಯಗಳಲ್ಲಿ ತೊಡಗಿದ್ದಾರೆ. ನಗರದ ಜೀವನಾಡಿ ಬಿಎಂಟಿಸಿ ಬಸ್‌ಗಳು ಎಂದಿನಂತೆ ಓಡಾಡುತ್ತಿವೆ. ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ಕೆಎಸ್‌ಆರ್‌ಟಿಸಿ ಮತ್ತು ಇತರ ನಿಗಮಗಳ ಬಸ್‌ ಸಂಚಾರ ಎಂದಿನಂತೆ ಇದೆ.
  • ನಗರದ ಪ್ರಮುಖ ಪ್ರದೇಶಗಳಾದ ಮೆಜೆಸ್ಟಿಕ್, ಕೆ.ಆರ್‌ ಮಾರುಕಟ್ಟೆ, ಟೌನ್‌ ಹಾಲ್‌, ಕಾರ್ಪೋರೇಶನ್ ಬಸವನಗುಡಿ, ಚಾಮರಾಜಪೇಟೆ, ಜಯನಗರ, ಆರ್‌.ಟಿ ನಗರ, ವಿಧಾನಸೌಧ, ಕಂಟೋನ್‌ಮೆಂಟ್, ಶಿವಾಜಿನಗರ ಸೇರಿದಂತೆ ಎಲ್ಲೆಡೆ ಪರಿಸ್ಥಿತಿ ಎಂದಿನಂತೆ ಇದೆ. ಪ್ರಮುಖ ಆಸ್ಪತ್ರೆಗಳಾದ ವಿಕ್ಟೋರಿಯಾ, ವಾಣಿ ವಿಲಾಸ, ಕಿಮ್ಸ್, ಬೌರಿಂಗ್ ಎಲ್ಲವೂ ಕಾರ್ಯ ನಿರ್ವಹಿಸುತ್ತಿವೆ.
  • ಪ್ರತಿಭಟನೆಯ ಕೇಂದ್ರ ಬಿಂದುವಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಪರಿಸ್ಥಿತಿ ಎಂದಿನಂತೆ ಇದೆ. ಬೆಳಗಾವಿ ನಗರದಿಂದ ಗ್ರಾಮೀಣ ಭಾಗಗಳು ಮತ್ತು ರಾಜ್ಯದ ಇತರ ಜಿಲ್ಲೆಗಳಿಗೆ ಬಸ್‌ ಸಂಚಾರ ಯಥಾಸ್ಥಿತಿಯಲ್ಲಿದೆ.
  • ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರ ಮತ್ತು ಬೆಳಗಾವಿ ನಡುವಿನ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿಭಾಗ ನಿಪ್ಪಾಣಿಯವರೆಗೆ ಮಾತ್ರ ಎರಡೂ ಕಡೆಯ ಬಸ್‌ಗಳು ಸಂಚರಿಸುತ್ತಿವೆ.
  • ಕನ್ನಡ ನೆಲ, ಜಲ ವಿಷಯದ ಹೋರಾಟದಲ್ಲಿ ಸದಾ ಮುಂದಿರುವ ಮಂಡ್ಯ ಜಿಲ್ಲೆಯಲ್ಲೂ ಪರಿಸ್ಥಿತಿ ಎಂದಿನಂತೆ ಇದೆ. ಬಸ್‌ಗಳು ಯಥಾಸ್ಥಿತಿಯಲ್ಲಿ ಓಡಾಡುತ್ತಿವೆ. ಆದರೆ, ಆಟೋಗಳ ಓಡಾಟ ವಿರಳವಿದೆ. ಬೆಳಿಗ್ಗೆ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.
  • ಮಂಡ್ಯ ಜಿಲ್ಲೆಯ ಕನ್ನಡ ಪರ ಮತ್ತು ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಕನ್ನಡ ಪರ ಸಂಘಟನೆಗಳ ಕಾರ್ಯರ್ತರು ಬೆಳಿಗ್ಗೆಯೇ ಮಂಡ್ಯ ನಗರದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.
  • ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳಿಗ್ಗೆಯೇ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ ಆರಂಭಿಸಿವೆ. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಬಸ್‌, ಆಟೋ ಮತ್ತು ಇತರ ವಾಹನಗಳ ಸಂಚಾರ ಎಂದಿನಂತೆ ಇದೆ. ಅಂಗಡಿ, ಮುಂಗಟ್ಟುಗಳು ತೆರದಿವೆ.
  • ಕೊಪ್ಪಳ, ದಾವಣಗೆರೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ತುಮಕೂರು, ಧಾರವಾಡ, ಹುಬ್ಬಳ್ಳಿ ನಗರ ಸೇರಿದಂತೆ ವಿವಿದೆಡೆ ಪರಿಸ್ಥಿತಿ ಎಂದಿನಂತೆ ಇದೆ. ಎಲ್ಲಿಯೂ ಬಂದ್ ಬಿಸಿ ತಟ್ಟಿರುವುದು ಕಂಡು ಬಂದಿಲ್ಲ.
  • ಆದರೆ, ದಾವಣಗೆರೆ, ಕೊಪ್ಪಳ ಮತ್ತು ಚಿಕ್ಕಮಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಬೆಳಿಗ್ಗೆ ಪ್ರತಿಭಟನೆ ನಡೆಸಿವೆ. ದಾವಣಗೆರೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಲಾಗಿದೆ.
  • ಮಂಗಳೂರು, ಉಡುಪಿಯಲ್ಲಿ ಎಂದಿನಂತೆ ಖಾಸಗಿ ಬಸ್‌ಗಳ ಓಡಾಟ ಇದ್ದು, ಅಂಗಡಿ, ಮುಂಗಟ್ಟುಗಳು ತೆರೆದಿವೆ. ಈ ಭಾಗದಲ್ಲಿ ಬಂದ್ ಯಾವುದೇ ಪರಿಣಾಮ ಬೀರಿಲ್ಲ.

ಬೆಳಿಗ್ಗೆ 9 ಗಂಟೆಯವರೆ ವಿವಿಧ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೀಗಿತ್ತು. ಇನ್ನುಮುಂದೆ ಬದಲಾದರೂ ಆಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...