Homeಕರ್ನಾಟಕಇಂದು ಕರ್ನಾಟಕ ಬಂದ್: ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ?

ಇಂದು ಕರ್ನಾಟಕ ಬಂದ್: ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ?

- Advertisement -
- Advertisement -

ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದು, ಎಂಇಎಸ್‌ ಸಂಘಟನೆ ಪದೇ ಪದೇ ಗಡಿ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿರುವುದು ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ವಾಟಾಳ್‌ ನಾಗರಾಜ್‌ ನೇತೃತ್ವದ ಕನ್ನಡ ಪರ ಗುಂಪು ಇಂದು (ಶನಿವಾರ) ‘ಕರ್ನಾಟಕ ಬಂದ್’ಗೆ ಕರೆ ನೀಡಿದೆ.

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್‌ಗೆ ಬೆಂಬಲ ನೀಡುವಂತೆ ವಾಟಾಳ್‌ ನಾಗರಾಜ್ ಜನರಿಗೆ ಮನವಿ ಮಾಡಿದ್ದಾರೆ.

ಬಂದ್‌ಗೆ ಓಲಾ, ಊಬರ್‌ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ಕೆಲ ಆಟೊ ರಿಕ್ಷಾ ಸಂಘಟನೆಗಳು ಬೆಂಬಲ ನೀಡಿವೆ. ಕೆಎಸ್‌ಆರ್‌ಟಿಸಿ ಮತ್ತು ಇತರ ಸಾರಿಗೆ ನಿಗಮಗಳು, ಬಿಎಂಟಿಸಿ ಮತ್ತು ಮೆಟ್ರೋ ಬೆಂಬಲ ನೀಡಿಲ್ಲ. ಹೋಟೆಲ್‌ ಮಾಲೀಕರು ನೈತಿಕ ಬೆಂಬಲ ಮಾತ್ರ ನೀಡಿದ್ದಾರೆ.

ಗಮನಾರ್ಹ ಸಂಗತಿಯೆಂದರೆ ಇಂದು ಏಕೆ ಬಂದ್ ಮಾಡಲಾಗುತ್ತಿದೆ?.. ಯಾರು ಬಂದ್ ಮಾಡುತ್ತಿದ್ದಾರೆ? ಎಂದು ಹಲವರು ನಮ್ಮನ್ನು ಪ್ರಶ್ನಿಸಿದ್ದಾರೆ. ಜನರಿಗೆ ಇಂದಿನ ಬಂದ್ ಬಗ್ಗೆ ಹಲವು ಗೊಂದಲಗಳಿವೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಬಂದ್ ಪರಿಸ್ಥಿತಿ ಹೇಗಿತ್ತು ಎಂಬ ಮಾಹಿತಿ ಇಲ್ಲಿದೆ.

  • ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಿಸ್ಥಿತಿ ಎಂದಿನಂತೆ ಇದೆ. ಮುಂಜಾನೆಯೇ ಜನರು ತಮ್ಮ ದೈನಂದಿನ ಕೆಲಸ, ಕಾರ್ಯಗಳಲ್ಲಿ ತೊಡಗಿದ್ದಾರೆ. ನಗರದ ಜೀವನಾಡಿ ಬಿಎಂಟಿಸಿ ಬಸ್‌ಗಳು ಎಂದಿನಂತೆ ಓಡಾಡುತ್ತಿವೆ. ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ಕೆಎಸ್‌ಆರ್‌ಟಿಸಿ ಮತ್ತು ಇತರ ನಿಗಮಗಳ ಬಸ್‌ ಸಂಚಾರ ಎಂದಿನಂತೆ ಇದೆ.
  • ನಗರದ ಪ್ರಮುಖ ಪ್ರದೇಶಗಳಾದ ಮೆಜೆಸ್ಟಿಕ್, ಕೆ.ಆರ್‌ ಮಾರುಕಟ್ಟೆ, ಟೌನ್‌ ಹಾಲ್‌, ಕಾರ್ಪೋರೇಶನ್ ಬಸವನಗುಡಿ, ಚಾಮರಾಜಪೇಟೆ, ಜಯನಗರ, ಆರ್‌.ಟಿ ನಗರ, ವಿಧಾನಸೌಧ, ಕಂಟೋನ್‌ಮೆಂಟ್, ಶಿವಾಜಿನಗರ ಸೇರಿದಂತೆ ಎಲ್ಲೆಡೆ ಪರಿಸ್ಥಿತಿ ಎಂದಿನಂತೆ ಇದೆ. ಪ್ರಮುಖ ಆಸ್ಪತ್ರೆಗಳಾದ ವಿಕ್ಟೋರಿಯಾ, ವಾಣಿ ವಿಲಾಸ, ಕಿಮ್ಸ್, ಬೌರಿಂಗ್ ಎಲ್ಲವೂ ಕಾರ್ಯ ನಿರ್ವಹಿಸುತ್ತಿವೆ.
  • ಪ್ರತಿಭಟನೆಯ ಕೇಂದ್ರ ಬಿಂದುವಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಪರಿಸ್ಥಿತಿ ಎಂದಿನಂತೆ ಇದೆ. ಬೆಳಗಾವಿ ನಗರದಿಂದ ಗ್ರಾಮೀಣ ಭಾಗಗಳು ಮತ್ತು ರಾಜ್ಯದ ಇತರ ಜಿಲ್ಲೆಗಳಿಗೆ ಬಸ್‌ ಸಂಚಾರ ಯಥಾಸ್ಥಿತಿಯಲ್ಲಿದೆ.
  • ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರ ಮತ್ತು ಬೆಳಗಾವಿ ನಡುವಿನ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿಭಾಗ ನಿಪ್ಪಾಣಿಯವರೆಗೆ ಮಾತ್ರ ಎರಡೂ ಕಡೆಯ ಬಸ್‌ಗಳು ಸಂಚರಿಸುತ್ತಿವೆ.
  • ಕನ್ನಡ ನೆಲ, ಜಲ ವಿಷಯದ ಹೋರಾಟದಲ್ಲಿ ಸದಾ ಮುಂದಿರುವ ಮಂಡ್ಯ ಜಿಲ್ಲೆಯಲ್ಲೂ ಪರಿಸ್ಥಿತಿ ಎಂದಿನಂತೆ ಇದೆ. ಬಸ್‌ಗಳು ಯಥಾಸ್ಥಿತಿಯಲ್ಲಿ ಓಡಾಡುತ್ತಿವೆ. ಆದರೆ, ಆಟೋಗಳ ಓಡಾಟ ವಿರಳವಿದೆ. ಬೆಳಿಗ್ಗೆ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.
  • ಮಂಡ್ಯ ಜಿಲ್ಲೆಯ ಕನ್ನಡ ಪರ ಮತ್ತು ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಕನ್ನಡ ಪರ ಸಂಘಟನೆಗಳ ಕಾರ್ಯರ್ತರು ಬೆಳಿಗ್ಗೆಯೇ ಮಂಡ್ಯ ನಗರದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.
  • ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳಿಗ್ಗೆಯೇ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ ಆರಂಭಿಸಿವೆ. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಬಸ್‌, ಆಟೋ ಮತ್ತು ಇತರ ವಾಹನಗಳ ಸಂಚಾರ ಎಂದಿನಂತೆ ಇದೆ. ಅಂಗಡಿ, ಮುಂಗಟ್ಟುಗಳು ತೆರದಿವೆ.
  • ಕೊಪ್ಪಳ, ದಾವಣಗೆರೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ತುಮಕೂರು, ಧಾರವಾಡ, ಹುಬ್ಬಳ್ಳಿ ನಗರ ಸೇರಿದಂತೆ ವಿವಿದೆಡೆ ಪರಿಸ್ಥಿತಿ ಎಂದಿನಂತೆ ಇದೆ. ಎಲ್ಲಿಯೂ ಬಂದ್ ಬಿಸಿ ತಟ್ಟಿರುವುದು ಕಂಡು ಬಂದಿಲ್ಲ.
  • ಆದರೆ, ದಾವಣಗೆರೆ, ಕೊಪ್ಪಳ ಮತ್ತು ಚಿಕ್ಕಮಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಬೆಳಿಗ್ಗೆ ಪ್ರತಿಭಟನೆ ನಡೆಸಿವೆ. ದಾವಣಗೆರೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಲಾಗಿದೆ.
  • ಮಂಗಳೂರು, ಉಡುಪಿಯಲ್ಲಿ ಎಂದಿನಂತೆ ಖಾಸಗಿ ಬಸ್‌ಗಳ ಓಡಾಟ ಇದ್ದು, ಅಂಗಡಿ, ಮುಂಗಟ್ಟುಗಳು ತೆರೆದಿವೆ. ಈ ಭಾಗದಲ್ಲಿ ಬಂದ್ ಯಾವುದೇ ಪರಿಣಾಮ ಬೀರಿಲ್ಲ.

ಬೆಳಿಗ್ಗೆ 9 ಗಂಟೆಯವರೆ ವಿವಿಧ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೀಗಿತ್ತು. ಇನ್ನುಮುಂದೆ ಬದಲಾದರೂ ಆಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...