Homeಕರ್ನಾಟಕಇಂದು ಕರ್ನಾಟಕ ಬಂದ್: ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ?

ಇಂದು ಕರ್ನಾಟಕ ಬಂದ್: ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ?

- Advertisement -
- Advertisement -

ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ಮಾಡಿರುವುದು, ಎಂಇಎಸ್‌ ಸಂಘಟನೆ ಪದೇ ಪದೇ ಗಡಿ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿರುವುದು ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ವಾಟಾಳ್‌ ನಾಗರಾಜ್‌ ನೇತೃತ್ವದ ಕನ್ನಡ ಪರ ಗುಂಪು ಇಂದು (ಶನಿವಾರ) ‘ಕರ್ನಾಟಕ ಬಂದ್’ಗೆ ಕರೆ ನೀಡಿದೆ.

ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್‌ಗೆ ಬೆಂಬಲ ನೀಡುವಂತೆ ವಾಟಾಳ್‌ ನಾಗರಾಜ್ ಜನರಿಗೆ ಮನವಿ ಮಾಡಿದ್ದಾರೆ.

ಬಂದ್‌ಗೆ ಓಲಾ, ಊಬರ್‌ ಡ್ರೈವರ್ಸ್ ಅಂಡ್ ಓನರ್ಸ್ ಅಸೋಸಿಯೇಷನ್, ಕೆಲ ಆಟೊ ರಿಕ್ಷಾ ಸಂಘಟನೆಗಳು ಬೆಂಬಲ ನೀಡಿವೆ. ಕೆಎಸ್‌ಆರ್‌ಟಿಸಿ ಮತ್ತು ಇತರ ಸಾರಿಗೆ ನಿಗಮಗಳು, ಬಿಎಂಟಿಸಿ ಮತ್ತು ಮೆಟ್ರೋ ಬೆಂಬಲ ನೀಡಿಲ್ಲ. ಹೋಟೆಲ್‌ ಮಾಲೀಕರು ನೈತಿಕ ಬೆಂಬಲ ಮಾತ್ರ ನೀಡಿದ್ದಾರೆ.

ಗಮನಾರ್ಹ ಸಂಗತಿಯೆಂದರೆ ಇಂದು ಏಕೆ ಬಂದ್ ಮಾಡಲಾಗುತ್ತಿದೆ?.. ಯಾರು ಬಂದ್ ಮಾಡುತ್ತಿದ್ದಾರೆ? ಎಂದು ಹಲವರು ನಮ್ಮನ್ನು ಪ್ರಶ್ನಿಸಿದ್ದಾರೆ. ಜನರಿಗೆ ಇಂದಿನ ಬಂದ್ ಬಗ್ಗೆ ಹಲವು ಗೊಂದಲಗಳಿವೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಬಂದ್ ಪರಿಸ್ಥಿತಿ ಹೇಗಿತ್ತು ಎಂಬ ಮಾಹಿತಿ ಇಲ್ಲಿದೆ.

  • ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಿಸ್ಥಿತಿ ಎಂದಿನಂತೆ ಇದೆ. ಮುಂಜಾನೆಯೇ ಜನರು ತಮ್ಮ ದೈನಂದಿನ ಕೆಲಸ, ಕಾರ್ಯಗಳಲ್ಲಿ ತೊಡಗಿದ್ದಾರೆ. ನಗರದ ಜೀವನಾಡಿ ಬಿಎಂಟಿಸಿ ಬಸ್‌ಗಳು ಎಂದಿನಂತೆ ಓಡಾಡುತ್ತಿವೆ. ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ಕೆಎಸ್‌ಆರ್‌ಟಿಸಿ ಮತ್ತು ಇತರ ನಿಗಮಗಳ ಬಸ್‌ ಸಂಚಾರ ಎಂದಿನಂತೆ ಇದೆ.
  • ನಗರದ ಪ್ರಮುಖ ಪ್ರದೇಶಗಳಾದ ಮೆಜೆಸ್ಟಿಕ್, ಕೆ.ಆರ್‌ ಮಾರುಕಟ್ಟೆ, ಟೌನ್‌ ಹಾಲ್‌, ಕಾರ್ಪೋರೇಶನ್ ಬಸವನಗುಡಿ, ಚಾಮರಾಜಪೇಟೆ, ಜಯನಗರ, ಆರ್‌.ಟಿ ನಗರ, ವಿಧಾನಸೌಧ, ಕಂಟೋನ್‌ಮೆಂಟ್, ಶಿವಾಜಿನಗರ ಸೇರಿದಂತೆ ಎಲ್ಲೆಡೆ ಪರಿಸ್ಥಿತಿ ಎಂದಿನಂತೆ ಇದೆ. ಪ್ರಮುಖ ಆಸ್ಪತ್ರೆಗಳಾದ ವಿಕ್ಟೋರಿಯಾ, ವಾಣಿ ವಿಲಾಸ, ಕಿಮ್ಸ್, ಬೌರಿಂಗ್ ಎಲ್ಲವೂ ಕಾರ್ಯ ನಿರ್ವಹಿಸುತ್ತಿವೆ.
  • ಪ್ರತಿಭಟನೆಯ ಕೇಂದ್ರ ಬಿಂದುವಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಪರಿಸ್ಥಿತಿ ಎಂದಿನಂತೆ ಇದೆ. ಬೆಳಗಾವಿ ನಗರದಿಂದ ಗ್ರಾಮೀಣ ಭಾಗಗಳು ಮತ್ತು ರಾಜ್ಯದ ಇತರ ಜಿಲ್ಲೆಗಳಿಗೆ ಬಸ್‌ ಸಂಚಾರ ಯಥಾಸ್ಥಿತಿಯಲ್ಲಿದೆ.
  • ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರ ಮತ್ತು ಬೆಳಗಾವಿ ನಡುವಿನ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿಭಾಗ ನಿಪ್ಪಾಣಿಯವರೆಗೆ ಮಾತ್ರ ಎರಡೂ ಕಡೆಯ ಬಸ್‌ಗಳು ಸಂಚರಿಸುತ್ತಿವೆ.
  • ಕನ್ನಡ ನೆಲ, ಜಲ ವಿಷಯದ ಹೋರಾಟದಲ್ಲಿ ಸದಾ ಮುಂದಿರುವ ಮಂಡ್ಯ ಜಿಲ್ಲೆಯಲ್ಲೂ ಪರಿಸ್ಥಿತಿ ಎಂದಿನಂತೆ ಇದೆ. ಬಸ್‌ಗಳು ಯಥಾಸ್ಥಿತಿಯಲ್ಲಿ ಓಡಾಡುತ್ತಿವೆ. ಆದರೆ, ಆಟೋಗಳ ಓಡಾಟ ವಿರಳವಿದೆ. ಬೆಳಿಗ್ಗೆ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.
  • ಮಂಡ್ಯ ಜಿಲ್ಲೆಯ ಕನ್ನಡ ಪರ ಮತ್ತು ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಕನ್ನಡ ಪರ ಸಂಘಟನೆಗಳ ಕಾರ್ಯರ್ತರು ಬೆಳಿಗ್ಗೆಯೇ ಮಂಡ್ಯ ನಗರದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.
  • ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳಿಗ್ಗೆಯೇ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ ಆರಂಭಿಸಿವೆ. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಬಸ್‌, ಆಟೋ ಮತ್ತು ಇತರ ವಾಹನಗಳ ಸಂಚಾರ ಎಂದಿನಂತೆ ಇದೆ. ಅಂಗಡಿ, ಮುಂಗಟ್ಟುಗಳು ತೆರದಿವೆ.
  • ಕೊಪ್ಪಳ, ದಾವಣಗೆರೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ತುಮಕೂರು, ಧಾರವಾಡ, ಹುಬ್ಬಳ್ಳಿ ನಗರ ಸೇರಿದಂತೆ ವಿವಿದೆಡೆ ಪರಿಸ್ಥಿತಿ ಎಂದಿನಂತೆ ಇದೆ. ಎಲ್ಲಿಯೂ ಬಂದ್ ಬಿಸಿ ತಟ್ಟಿರುವುದು ಕಂಡು ಬಂದಿಲ್ಲ.
  • ಆದರೆ, ದಾವಣಗೆರೆ, ಕೊಪ್ಪಳ ಮತ್ತು ಚಿಕ್ಕಮಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಬೆಳಿಗ್ಗೆ ಪ್ರತಿಭಟನೆ ನಡೆಸಿವೆ. ದಾವಣಗೆರೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಲಾಗಿದೆ.
  • ಮಂಗಳೂರು, ಉಡುಪಿಯಲ್ಲಿ ಎಂದಿನಂತೆ ಖಾಸಗಿ ಬಸ್‌ಗಳ ಓಡಾಟ ಇದ್ದು, ಅಂಗಡಿ, ಮುಂಗಟ್ಟುಗಳು ತೆರೆದಿವೆ. ಈ ಭಾಗದಲ್ಲಿ ಬಂದ್ ಯಾವುದೇ ಪರಿಣಾಮ ಬೀರಿಲ್ಲ.

ಬೆಳಿಗ್ಗೆ 9 ಗಂಟೆಯವರೆ ವಿವಿಧ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೀಗಿತ್ತು. ಇನ್ನುಮುಂದೆ ಬದಲಾದರೂ ಆಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...