Homeಕರ್ನಾಟಕಸ್ಪರ್ಧಾತ್ಮಕ ಪರೀಕ್ಷಾ ಕೊಠಡಿಯಲ್ಲಿ ಶಿರವಸ್ತ್ರ ನಿಷೇಧ, ಮಂಗಳಸೂತ್ರಕ್ಕೆ ಅವಕಾಶ: ಕೆಇಎ

ಸ್ಪರ್ಧಾತ್ಮಕ ಪರೀಕ್ಷಾ ಕೊಠಡಿಯಲ್ಲಿ ಶಿರವಸ್ತ್ರ ನಿಷೇಧ, ಮಂಗಳಸೂತ್ರಕ್ಕೆ ಅವಕಾಶ: ಕೆಇಎ

- Advertisement -
- Advertisement -

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ವಿವಿಧ ಬೋರ್ಡ್‌ಗಳು ಮತ್ತು ಕಾರ್ಪೊರೇಷನ್‌ಗಳಿಗೆ ನೇಮಕಾತಿ ಪರೀಕ್ಷೆಯ ಸಮಯದಲ್ಲಿ ಪರೀಕ್ಷಾ ಹಾಲ್‌ನಲ್ಲಿ ಎಲ್ಲಾ ರೀತಿಯ ಶಿರವಸ್ತ್ರವನ್ನು ಧರಿಸುವುದನ್ನು ನಿರ್ಬಂಧಿಸಿದೆ. ಡ್ರೆಸ್ ಕೋಡ್‌ನಲ್ಲಿ ಸ್ಪಷ್ಟವಾಗಿ ಹಿಜಾಬ್‌ ಎಂದು ಉಲ್ಲೇಖಿಸದಿದ್ದರೂ, ಹೊಸ ಮಾರ್ಗಸೂಚಿಗಳಿಂದ ಇದು ಸೂಚಿತವಾಗಿದೆ.

ಬ್ಲೂಟೂತ್ ಸಾಧನಗಳನ್ನು ಬಳಸಿಕೊಂಡು ಪರೀಕ್ಷಾ ಅಕ್ರಮಗಳನ್ನು ತಡೆಯುವ ಪ್ರಯತ್ನದ ಭಾಗವಾಗಿ ನೂತನ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನ.6 ರಂದು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗೆ ಹಾಜರಾಗುತ್ತಿದ್ದ ಮಹಿಳೆಯೊಬ್ಬರಿಗೆ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು ಮಂಗಳಸೂತ್ರವನ್ನು ತೆಗೆಯುವಂತೆ ಹೇಳಲಾಗಿತ್ತು. ಹಿಂದುತ್ವ ಗುಂಪುಗಳ ಪ್ರತಿಭಟನೆಯ ನಂತರ KEA ಇದೀಗ ಇತರ ಆಭರಣಗಳನ್ನು ನಿರ್ಬಂಧಿಸುವ ಸಂದರ್ಭದಲ್ಲಿ ಮಹಿಳೆಯರಿಗೆ ಮಂಗಳಸೂತ್ರ ಮತ್ತು ಟೋ ರಿಂಗ್‌ಗಳನ್ನು ಪರೀಕ್ಷಾ ಕೊಠಡಿಯಲ್ಲಿ ಧರಿಸಲು ಅನುಮತಿ ನೀಡಿದೆ.

ರಾಜ್ಯಾದ್ಯಂತ ನ.18 ಮತ್ತು 19ರಂದು ವಿವಿಧ ಮಂಡಳಿಗಳು ಮತ್ತು ನಿಗಮಗಳ ನೇಮಕಾತಿ ಪರೀಕ್ಷೆಗಳು ನಡೆಯಲಿವೆ.

ಅಕ್ಟೋಬರ್‌ನಲ್ಲಿ ಕರ್ನಾಟಕ ಸರ್ಕಾರವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿತ್ತು. ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಅವರು ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಗಳಿಗೆ ಬರಲು ಅವಕಾಶ ಇದೆ ಎಂದು ಹೇಳಿದ್ದರು.

ಆದರೆ ಇದೀಗ ಅಕ್ರಮವಾಗಿ ಬ್ಲೂಟೂತ್ ಸಾಧನಗಳ ಬಳಕೆ ಹಿನ್ನೆಲೆ ರಾಜ್ಯ ಸರ್ಕಾರವು ಈ ರೀತಿ ಹೊಸ ಆದೇಶವನ್ನು ಹೊರಡಿಸಿದೆ. ಅಕ್ಟೋಬರ್‌ನಲ್ಲಿ ಕೆಇಎ ನಡೆಸಿದ ಪರೀಕ್ಷೆ ವೇಳೆ ಕಲಬುರಗಿ ಮತ್ತು ಯಾದಗಿರಿ ಪರೀಕ್ಷಾ ಕೇಂದ್ರಗಳಲ್ಲಿ ಬ್ಲೂಟೂತ್ ಸಾಧನಗಳನ್ನು ಬಳಸಿರುವ ಘಟನೆಯ ಕುರಿತು ರಾಜ್ಯ ಸರ್ಕಾರವು ನ.11 ರಂದು ಸಿಐಡಿ ತನಿಖೆಗೆ ಆದೇಶಿಸಿದೆ.

ಡ್ರೆಸ್ ಕೋಡ್  ಪ್ರಕಾರ, ಅಭ್ಯರ್ಥಿಗಳು ಎತ್ತರದ ಬೂಟುಗಳು, ಜೀನ್ಸ್ ಮತ್ತು ಟಿ-ಶರ್ಟ್‌ಗಳನ್ನು ಧರಿಸುವುದನ್ನು ನಿರ್ಬಂಧಿಸಿದೆ. ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರವನ್ನು ಧರಿಸುವುದನ್ನು, ತಲೆ, ಕಿವಿ, ಮೂಗನ್ನು ಮುಚ್ಚುವ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ. ಯಾವುದೇ ರೀತಿಯ ಮಾಸ್ಕನ್ನು ಕೂಡ ಧರಿಸುವತಿಲ್ಲ ಎಂದು ಸೂಚಿಸಲಾಗಿದೆ.

ಎಲೆಕ್ಟ್ರಾನಿಕ್‌ ವಸ್ತುಗಳು, ಮೊಬೈಲ್‌ ಪೋನ್‌ಗಳು, ಬ್ಲೂಟುಥ್, ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಗೆ ತರದಂತೆ ನಿಷೇಧ ವಿಧಿಸಲಾಗಿದೆ. ಪೆನ್ಸಿಲ್‌, ಪೇಪರ್‌, ಎರೇಸರ್‌, ಬಾಕ್ಸ್‌ಗಳು, ಆಹಾರ ಪದಾರ್ಥಗಳನ್ನು ತರದಂತೆ ನಿಷೇಧ ವಿಧಿಸಲಾಗಿದೆ.

ಇದನ್ನು ಓದಿ: ಮರುನಾಡನ್ ಮಲಯಾಳಿ’ ಯೂಟ್ಯೂಬ್ ಚಾನೆಲ್ ಸಂಸ್ಥಾಪಕರ ವಿರುದ್ಧ ಪ್ರಕರಣ ದಾಖಲು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...