Homeಕರ್ನಾಟಕಬೆಂಗಳೂರಿನ ESI ಆಸ್ಪತ್ರೆ ನಿರ್ಲಕ್ಷ್ಯ: ಒಂದೂವರೆ ವರ್ಷದ ಬಳಿಕ ಶವಾಗಾರದಿಂದ ಕೊರೊನಾ ಪೀಡಿತರ ಮೃತದೇಹ ಹೊರ...

ಬೆಂಗಳೂರಿನ ESI ಆಸ್ಪತ್ರೆ ನಿರ್ಲಕ್ಷ್ಯ: ಒಂದೂವರೆ ವರ್ಷದ ಬಳಿಕ ಶವಾಗಾರದಿಂದ ಕೊರೊನಾ ಪೀಡಿತರ ಮೃತದೇಹ ಹೊರ ತೆಗೆದ ಸಿಬ್ಬಂದಿ

- Advertisement -
- Advertisement -

ಕೊರೊನಾದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಸುಮಾರು ಒಂದೂವರೆ ವರ್ಷಗಳ ನಂತರ ಅವರ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಕುಟುಂಬದವರಿಗೆ ದೊರಕಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಜಾಜಿನಗರದಲ್ಲಿರುವ ESI ಆಸ್ಪತ್ರೆಯ ಶವಾಗಾರದಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ಕೊರೊನಾದಿಂದ ಮೃತಪಟ್ಟಿದ್ದ ದುರ್ಗಾ ಸುಮಿತ್ರಾ (40) ಮತ್ತು ಮುನಿರಾಜು (50) ಎಂಬುವವರ ಮೃತದೇಹಗಳನ್ನಿಟ್ಟು ಆಸ್ಪತ್ರೆ ಸಿಬ್ಬಂದಿ ಮರೆತುಬಿಟ್ಟಿದ್ದಾರೆ. ಮೊನ್ನೆ ಶವಾಗಾರ ಸ್ವಚ್ಛಗೊಳಿಸುವ ವೇಳೆ ಸಿಬ್ಬಂದಿಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ESI ಆಸ್ಪತ್ರೆಯ ದಾಖಲೆಗಳ ಪ್ರಕಾರ, ದುರ್ಗಾ ಸುಮಿತ್ರಾ (40) ಮತ್ತು ಮುನಿರಾಜು (50) ಕಳೆದ ವರ್ಷ ಜುಲೈ 2 ರಂದು ನಿಧನರಾಗಿದ್ದಾರೆ. ಆ ಸಮಯದಲ್ಲಿ, ನಗರದಲ್ಲಿ ಕೊರೊನಾ ಪ್ರಕರಣಗಳು ಉಲ್ಬಣಗೊಂಡಿದ್ದವು. ಆರೋಗ್ಯ ಮೂಲಸೌಕರ್ಯ ವ್ಯವಸ್ಥೆ ತೀವ್ರ ಒತ್ತಡದಲ್ಲಿದ್ದ ಸಮಯವಾಗಿತ್ತು. ಬೆಂಗಳೂರು ಸಾಲು ಸಾಲು ಸಾವಿನ ಮೆರವಣಿಗೆಗೆ ಸಾಕ್ಷಿಯಾಗಿದ್ದ ಸಮಯವದು. ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಗಳ ನೋವು ಇನ್ನು ರಾಜ್ಯದ ಜನರ ಕಣ್ಣೇದುರಿಗಿದೆ.

ಇಂತಹ ಸಮಯದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇವರುಗಳು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಆದರೆ, ಸೋಂಕು ಹರಡುವ ಅಪಾಯವಿದೆ ಎಂದು ತಿಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಆಸ್ಪತ್ರೆಯ ಅಧಿಕಾರಿಗಳು ದೇಹವನ್ನು ಅವರಿಗೆ ಹಸ್ತಾಂತರಿಸಲಿಲ್ಲ. ಜೊತೆಗೆ ಇಬ್ಬರ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಎರಡು ಕುಟುಂಬದ ಸದಸ್ಯರಿಗೆ ತಿಳಿಸಲಾಗಿತ್ತು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕ, ಯೂರೋಪ್ ದೇಶಗಳಲ್ಲಿ ಕೊರೊನಾ ನಾಲ್ಕನೇ ಅಲೆ; ಭಾರತ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆಯೇ?

ಮೃತರ ಡೆಡ್ ಸರ್ಟಿಫಿಕೆಟ್ ಕೂಡ ಪಡೆದಿದ್ದ ಕುಟುಂಬಸ್ಥರಿಗೆ ಈಗ ಒಂದೂವರೆ ವರ್ಷದ ನಂತರ, ತಮ್ಮವರ ಮೃತದೇಹಗಳು ಆಸ್ಪತ್ರೆಯ ಶವಾಗಾರದಲ್ಲೇ ಇವೆ ಎಂಬ ಆಘಾತಕಾರಿ ಸುದ್ದಿ ತಿಳಿದು ಬಂದಿದೆ. ಅದು ಕೂಡ ಹೌಸ್ ಕೀಪಿಂಗ್ ಸಿಬ್ಬಂದಿ ಹಳೆಯ ಶವಾಗಾರವನ್ನು ಸ್ವಚ್ಛಗೊಳಿಸುವಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಅಧಿಕಾರಿಗಳು ಕುಟುಂಬಸ್ಥರಿಗೆ ತಿಳಿಸಿದ್ದಾರೆ.

ಆಸ್ಪತ್ರೆಯ ನಿರ್ಲಕ್ಷ್ಯದ ಕೃತ್ಯಕ್ಕೆ ಆಸ್ಪತ್ರೆಯ ಅಧಿಕಾರಿಗಳು, ಸಿಬ್ಬಂದಿ ಟೀಕೆಗೆ ಗುರಿಯಾಗಿದ್ದಾರೆ. ಘಟನೆ ಬಗ್ಗೆ ನಡೆದಿದೆ ಎಂಬುದನ್ನು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ.

“ಕಳೆದ ವರ್ಷ ಅನಾರೋಗ್ಯಕ್ಕೆ ಒಳಗಾಗಿದ್ದ ದುರ್ಗಾಗಾಗಿ ತೀವ್ರ ಹುಡುಕಾಟದ ನಂತರ ಇಎಸ್‌ಐ ಆಸ್ಪತ್ರೆಯಲ್ಲಿ ಹಾಸಿಗೆ ಸಿಕ್ಕಿತ್ತು. ಆಸ್ಪತ್ರೆಯಲ್ಲಿ 4 ದಿನಗಳ ನಂತರ ಆಕೆ ಮೃತಪಟ್ಟಿದ್ದರು. ಕೋವಿಡ್ ಆಗಿದ್ದರಿಂದ ಅವರು ದೇಹವನ್ನು ನಮಗೆ ಹಸ್ತಾಂತರಿಸಲಿಲ್ಲ, ನಾವು ಮನೆಗೆ ಮರಳಿದ್ದೇವು. ಕೆಲವು ದಿನಗಳ ನಂತರ, ನಮಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿಂದ ಕರೆ ಬಂದಿತು, ಅವರು ಅಂತ್ಯಸಂಸ್ಕಾರ ಮಾಡಿರುವುದಾಗಿ ತಿಳಿಸಿದ್ದರು. ಈಗ 15 ತಿಂಗಳ ನಂತರ ನಮಗೆ ಕರೆ ಬಂದಾಗ, ಅದು ನಿಜವೋ ಸುಳ್ಳೋ ಎಂದು ನಾವು ಹೆದರಿದ್ದೆವು” ಎಂದು ಮೃತ ದುರ್ಗ ಅವರ ಅಕ್ಕ ಸುಜಾತಾ ಹೇಳಿದ್ದಾರೆ.

ಮೃತ ಮುನಿರಾಜು ಅವರ ಪುತ್ರ ಸತೀಶ್ ಅವರಿಗೂ ಕೂಡ ಇದೇ ರೀತಿಯ ಅನುಭವವಾಗಿದೆ. “ಆಸ್ಪತ್ರೆಯವರು ಕರೆ ಮಾಡಿ ಅವರು ಇನ್ನಿಲ್ಲ ಎಂದು ಹೇಳಿದಾಗ, ನಾವು ಶವವನ್ನು ಕೇಳಿದ್ದೇವು. ಆದರೆ ಬಿಬಿಎಂಪಿ ಅಧಿಕಾರಿಗಳು ಮೃತದೇಹವನ್ನು ಸುಡಲಾಯಿತು ಎಂದು ಹೇಳಿದ್ದರು. ನಾವು ಮರಣ ಪ್ರಮಾಣಪತ್ರವನ್ನು ಪಡೆಯಲು ಹೋದಾಗ ಕೂಡ ಅವರು ಅದನ್ನೇ ಮತ್ತೆ ಹೇಳಿದ್ದರು” ಎಂದಿದ್ದಾರೆ.

ಇನ್ನು ಘಟನೆ ಸಂಬಂಧ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಕಾರ್ಮಿಕ ಸಚಿವ ಎ.ಶಿವರಾಮ್ ಹೆಬ್ಬಾರ್ ಅವರಿಗೆ ಪತ್ರ ಬರೆದಿದ್ದು, ಈ ವಿಷಯವನ್ನು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ತಿಳಿಸುವಂತೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೂವಂತೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...