Homeಕರ್ನಾಟಕಬೆಂಗಳೂರಿನ ESI ಆಸ್ಪತ್ರೆ ನಿರ್ಲಕ್ಷ್ಯ: ಒಂದೂವರೆ ವರ್ಷದ ಬಳಿಕ ಶವಾಗಾರದಿಂದ ಕೊರೊನಾ ಪೀಡಿತರ ಮೃತದೇಹ ಹೊರ...

ಬೆಂಗಳೂರಿನ ESI ಆಸ್ಪತ್ರೆ ನಿರ್ಲಕ್ಷ್ಯ: ಒಂದೂವರೆ ವರ್ಷದ ಬಳಿಕ ಶವಾಗಾರದಿಂದ ಕೊರೊನಾ ಪೀಡಿತರ ಮೃತದೇಹ ಹೊರ ತೆಗೆದ ಸಿಬ್ಬಂದಿ

- Advertisement -
- Advertisement -

ಕೊರೊನಾದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಸುಮಾರು ಒಂದೂವರೆ ವರ್ಷಗಳ ನಂತರ ಅವರ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಕುಟುಂಬದವರಿಗೆ ದೊರಕಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಜಾಜಿನಗರದಲ್ಲಿರುವ ESI ಆಸ್ಪತ್ರೆಯ ಶವಾಗಾರದಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ಕೊರೊನಾದಿಂದ ಮೃತಪಟ್ಟಿದ್ದ ದುರ್ಗಾ ಸುಮಿತ್ರಾ (40) ಮತ್ತು ಮುನಿರಾಜು (50) ಎಂಬುವವರ ಮೃತದೇಹಗಳನ್ನಿಟ್ಟು ಆಸ್ಪತ್ರೆ ಸಿಬ್ಬಂದಿ ಮರೆತುಬಿಟ್ಟಿದ್ದಾರೆ. ಮೊನ್ನೆ ಶವಾಗಾರ ಸ್ವಚ್ಛಗೊಳಿಸುವ ವೇಳೆ ಸಿಬ್ಬಂದಿಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ESI ಆಸ್ಪತ್ರೆಯ ದಾಖಲೆಗಳ ಪ್ರಕಾರ, ದುರ್ಗಾ ಸುಮಿತ್ರಾ (40) ಮತ್ತು ಮುನಿರಾಜು (50) ಕಳೆದ ವರ್ಷ ಜುಲೈ 2 ರಂದು ನಿಧನರಾಗಿದ್ದಾರೆ. ಆ ಸಮಯದಲ್ಲಿ, ನಗರದಲ್ಲಿ ಕೊರೊನಾ ಪ್ರಕರಣಗಳು ಉಲ್ಬಣಗೊಂಡಿದ್ದವು. ಆರೋಗ್ಯ ಮೂಲಸೌಕರ್ಯ ವ್ಯವಸ್ಥೆ ತೀವ್ರ ಒತ್ತಡದಲ್ಲಿದ್ದ ಸಮಯವಾಗಿತ್ತು. ಬೆಂಗಳೂರು ಸಾಲು ಸಾಲು ಸಾವಿನ ಮೆರವಣಿಗೆಗೆ ಸಾಕ್ಷಿಯಾಗಿದ್ದ ಸಮಯವದು. ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಗಳ ನೋವು ಇನ್ನು ರಾಜ್ಯದ ಜನರ ಕಣ್ಣೇದುರಿಗಿದೆ.

ಇಂತಹ ಸಮಯದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇವರುಗಳು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಆದರೆ, ಸೋಂಕು ಹರಡುವ ಅಪಾಯವಿದೆ ಎಂದು ತಿಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಆಸ್ಪತ್ರೆಯ ಅಧಿಕಾರಿಗಳು ದೇಹವನ್ನು ಅವರಿಗೆ ಹಸ್ತಾಂತರಿಸಲಿಲ್ಲ. ಜೊತೆಗೆ ಇಬ್ಬರ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಎರಡು ಕುಟುಂಬದ ಸದಸ್ಯರಿಗೆ ತಿಳಿಸಲಾಗಿತ್ತು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕ, ಯೂರೋಪ್ ದೇಶಗಳಲ್ಲಿ ಕೊರೊನಾ ನಾಲ್ಕನೇ ಅಲೆ; ಭಾರತ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆಯೇ?

ಮೃತರ ಡೆಡ್ ಸರ್ಟಿಫಿಕೆಟ್ ಕೂಡ ಪಡೆದಿದ್ದ ಕುಟುಂಬಸ್ಥರಿಗೆ ಈಗ ಒಂದೂವರೆ ವರ್ಷದ ನಂತರ, ತಮ್ಮವರ ಮೃತದೇಹಗಳು ಆಸ್ಪತ್ರೆಯ ಶವಾಗಾರದಲ್ಲೇ ಇವೆ ಎಂಬ ಆಘಾತಕಾರಿ ಸುದ್ದಿ ತಿಳಿದು ಬಂದಿದೆ. ಅದು ಕೂಡ ಹೌಸ್ ಕೀಪಿಂಗ್ ಸಿಬ್ಬಂದಿ ಹಳೆಯ ಶವಾಗಾರವನ್ನು ಸ್ವಚ್ಛಗೊಳಿಸುವಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಅಧಿಕಾರಿಗಳು ಕುಟುಂಬಸ್ಥರಿಗೆ ತಿಳಿಸಿದ್ದಾರೆ.

ಆಸ್ಪತ್ರೆಯ ನಿರ್ಲಕ್ಷ್ಯದ ಕೃತ್ಯಕ್ಕೆ ಆಸ್ಪತ್ರೆಯ ಅಧಿಕಾರಿಗಳು, ಸಿಬ್ಬಂದಿ ಟೀಕೆಗೆ ಗುರಿಯಾಗಿದ್ದಾರೆ. ಘಟನೆ ಬಗ್ಗೆ ನಡೆದಿದೆ ಎಂಬುದನ್ನು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ.

“ಕಳೆದ ವರ್ಷ ಅನಾರೋಗ್ಯಕ್ಕೆ ಒಳಗಾಗಿದ್ದ ದುರ್ಗಾಗಾಗಿ ತೀವ್ರ ಹುಡುಕಾಟದ ನಂತರ ಇಎಸ್‌ಐ ಆಸ್ಪತ್ರೆಯಲ್ಲಿ ಹಾಸಿಗೆ ಸಿಕ್ಕಿತ್ತು. ಆಸ್ಪತ್ರೆಯಲ್ಲಿ 4 ದಿನಗಳ ನಂತರ ಆಕೆ ಮೃತಪಟ್ಟಿದ್ದರು. ಕೋವಿಡ್ ಆಗಿದ್ದರಿಂದ ಅವರು ದೇಹವನ್ನು ನಮಗೆ ಹಸ್ತಾಂತರಿಸಲಿಲ್ಲ, ನಾವು ಮನೆಗೆ ಮರಳಿದ್ದೇವು. ಕೆಲವು ದಿನಗಳ ನಂತರ, ನಮಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿಂದ ಕರೆ ಬಂದಿತು, ಅವರು ಅಂತ್ಯಸಂಸ್ಕಾರ ಮಾಡಿರುವುದಾಗಿ ತಿಳಿಸಿದ್ದರು. ಈಗ 15 ತಿಂಗಳ ನಂತರ ನಮಗೆ ಕರೆ ಬಂದಾಗ, ಅದು ನಿಜವೋ ಸುಳ್ಳೋ ಎಂದು ನಾವು ಹೆದರಿದ್ದೆವು” ಎಂದು ಮೃತ ದುರ್ಗ ಅವರ ಅಕ್ಕ ಸುಜಾತಾ ಹೇಳಿದ್ದಾರೆ.

ಮೃತ ಮುನಿರಾಜು ಅವರ ಪುತ್ರ ಸತೀಶ್ ಅವರಿಗೂ ಕೂಡ ಇದೇ ರೀತಿಯ ಅನುಭವವಾಗಿದೆ. “ಆಸ್ಪತ್ರೆಯವರು ಕರೆ ಮಾಡಿ ಅವರು ಇನ್ನಿಲ್ಲ ಎಂದು ಹೇಳಿದಾಗ, ನಾವು ಶವವನ್ನು ಕೇಳಿದ್ದೇವು. ಆದರೆ ಬಿಬಿಎಂಪಿ ಅಧಿಕಾರಿಗಳು ಮೃತದೇಹವನ್ನು ಸುಡಲಾಯಿತು ಎಂದು ಹೇಳಿದ್ದರು. ನಾವು ಮರಣ ಪ್ರಮಾಣಪತ್ರವನ್ನು ಪಡೆಯಲು ಹೋದಾಗ ಕೂಡ ಅವರು ಅದನ್ನೇ ಮತ್ತೆ ಹೇಳಿದ್ದರು” ಎಂದಿದ್ದಾರೆ.

ಇನ್ನು ಘಟನೆ ಸಂಬಂಧ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಕಾರ್ಮಿಕ ಸಚಿವ ಎ.ಶಿವರಾಮ್ ಹೆಬ್ಬಾರ್ ಅವರಿಗೆ ಪತ್ರ ಬರೆದಿದ್ದು, ಈ ವಿಷಯವನ್ನು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ತಿಳಿಸುವಂತೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೂವಂತೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...