Homeಕರ್ನಾಟಕಬೆಂಗಳೂರಿನ ESI ಆಸ್ಪತ್ರೆ ನಿರ್ಲಕ್ಷ್ಯ: ಒಂದೂವರೆ ವರ್ಷದ ಬಳಿಕ ಶವಾಗಾರದಿಂದ ಕೊರೊನಾ ಪೀಡಿತರ ಮೃತದೇಹ ಹೊರ...

ಬೆಂಗಳೂರಿನ ESI ಆಸ್ಪತ್ರೆ ನಿರ್ಲಕ್ಷ್ಯ: ಒಂದೂವರೆ ವರ್ಷದ ಬಳಿಕ ಶವಾಗಾರದಿಂದ ಕೊರೊನಾ ಪೀಡಿತರ ಮೃತದೇಹ ಹೊರ ತೆಗೆದ ಸಿಬ್ಬಂದಿ

- Advertisement -
- Advertisement -

ಕೊರೊನಾದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಸುಮಾರು ಒಂದೂವರೆ ವರ್ಷಗಳ ನಂತರ ಅವರ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಕುಟುಂಬದವರಿಗೆ ದೊರಕಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಜಾಜಿನಗರದಲ್ಲಿರುವ ESI ಆಸ್ಪತ್ರೆಯ ಶವಾಗಾರದಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ಕೊರೊನಾದಿಂದ ಮೃತಪಟ್ಟಿದ್ದ ದುರ್ಗಾ ಸುಮಿತ್ರಾ (40) ಮತ್ತು ಮುನಿರಾಜು (50) ಎಂಬುವವರ ಮೃತದೇಹಗಳನ್ನಿಟ್ಟು ಆಸ್ಪತ್ರೆ ಸಿಬ್ಬಂದಿ ಮರೆತುಬಿಟ್ಟಿದ್ದಾರೆ. ಮೊನ್ನೆ ಶವಾಗಾರ ಸ್ವಚ್ಛಗೊಳಿಸುವ ವೇಳೆ ಸಿಬ್ಬಂದಿಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ESI ಆಸ್ಪತ್ರೆಯ ದಾಖಲೆಗಳ ಪ್ರಕಾರ, ದುರ್ಗಾ ಸುಮಿತ್ರಾ (40) ಮತ್ತು ಮುನಿರಾಜು (50) ಕಳೆದ ವರ್ಷ ಜುಲೈ 2 ರಂದು ನಿಧನರಾಗಿದ್ದಾರೆ. ಆ ಸಮಯದಲ್ಲಿ, ನಗರದಲ್ಲಿ ಕೊರೊನಾ ಪ್ರಕರಣಗಳು ಉಲ್ಬಣಗೊಂಡಿದ್ದವು. ಆರೋಗ್ಯ ಮೂಲಸೌಕರ್ಯ ವ್ಯವಸ್ಥೆ ತೀವ್ರ ಒತ್ತಡದಲ್ಲಿದ್ದ ಸಮಯವಾಗಿತ್ತು. ಬೆಂಗಳೂರು ಸಾಲು ಸಾಲು ಸಾವಿನ ಮೆರವಣಿಗೆಗೆ ಸಾಕ್ಷಿಯಾಗಿದ್ದ ಸಮಯವದು. ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಗಳ ನೋವು ಇನ್ನು ರಾಜ್ಯದ ಜನರ ಕಣ್ಣೇದುರಿಗಿದೆ.

ಇಂತಹ ಸಮಯದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇವರುಗಳು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಆದರೆ, ಸೋಂಕು ಹರಡುವ ಅಪಾಯವಿದೆ ಎಂದು ತಿಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಆಸ್ಪತ್ರೆಯ ಅಧಿಕಾರಿಗಳು ದೇಹವನ್ನು ಅವರಿಗೆ ಹಸ್ತಾಂತರಿಸಲಿಲ್ಲ. ಜೊತೆಗೆ ಇಬ್ಬರ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಎರಡು ಕುಟುಂಬದ ಸದಸ್ಯರಿಗೆ ತಿಳಿಸಲಾಗಿತ್ತು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕ, ಯೂರೋಪ್ ದೇಶಗಳಲ್ಲಿ ಕೊರೊನಾ ನಾಲ್ಕನೇ ಅಲೆ; ಭಾರತ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆಯೇ?

ಮೃತರ ಡೆಡ್ ಸರ್ಟಿಫಿಕೆಟ್ ಕೂಡ ಪಡೆದಿದ್ದ ಕುಟುಂಬಸ್ಥರಿಗೆ ಈಗ ಒಂದೂವರೆ ವರ್ಷದ ನಂತರ, ತಮ್ಮವರ ಮೃತದೇಹಗಳು ಆಸ್ಪತ್ರೆಯ ಶವಾಗಾರದಲ್ಲೇ ಇವೆ ಎಂಬ ಆಘಾತಕಾರಿ ಸುದ್ದಿ ತಿಳಿದು ಬಂದಿದೆ. ಅದು ಕೂಡ ಹೌಸ್ ಕೀಪಿಂಗ್ ಸಿಬ್ಬಂದಿ ಹಳೆಯ ಶವಾಗಾರವನ್ನು ಸ್ವಚ್ಛಗೊಳಿಸುವಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಅಧಿಕಾರಿಗಳು ಕುಟುಂಬಸ್ಥರಿಗೆ ತಿಳಿಸಿದ್ದಾರೆ.

ಆಸ್ಪತ್ರೆಯ ನಿರ್ಲಕ್ಷ್ಯದ ಕೃತ್ಯಕ್ಕೆ ಆಸ್ಪತ್ರೆಯ ಅಧಿಕಾರಿಗಳು, ಸಿಬ್ಬಂದಿ ಟೀಕೆಗೆ ಗುರಿಯಾಗಿದ್ದಾರೆ. ಘಟನೆ ಬಗ್ಗೆ ನಡೆದಿದೆ ಎಂಬುದನ್ನು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ.

“ಕಳೆದ ವರ್ಷ ಅನಾರೋಗ್ಯಕ್ಕೆ ಒಳಗಾಗಿದ್ದ ದುರ್ಗಾಗಾಗಿ ತೀವ್ರ ಹುಡುಕಾಟದ ನಂತರ ಇಎಸ್‌ಐ ಆಸ್ಪತ್ರೆಯಲ್ಲಿ ಹಾಸಿಗೆ ಸಿಕ್ಕಿತ್ತು. ಆಸ್ಪತ್ರೆಯಲ್ಲಿ 4 ದಿನಗಳ ನಂತರ ಆಕೆ ಮೃತಪಟ್ಟಿದ್ದರು. ಕೋವಿಡ್ ಆಗಿದ್ದರಿಂದ ಅವರು ದೇಹವನ್ನು ನಮಗೆ ಹಸ್ತಾಂತರಿಸಲಿಲ್ಲ, ನಾವು ಮನೆಗೆ ಮರಳಿದ್ದೇವು. ಕೆಲವು ದಿನಗಳ ನಂತರ, ನಮಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿಂದ ಕರೆ ಬಂದಿತು, ಅವರು ಅಂತ್ಯಸಂಸ್ಕಾರ ಮಾಡಿರುವುದಾಗಿ ತಿಳಿಸಿದ್ದರು. ಈಗ 15 ತಿಂಗಳ ನಂತರ ನಮಗೆ ಕರೆ ಬಂದಾಗ, ಅದು ನಿಜವೋ ಸುಳ್ಳೋ ಎಂದು ನಾವು ಹೆದರಿದ್ದೆವು” ಎಂದು ಮೃತ ದುರ್ಗ ಅವರ ಅಕ್ಕ ಸುಜಾತಾ ಹೇಳಿದ್ದಾರೆ.

ಮೃತ ಮುನಿರಾಜು ಅವರ ಪುತ್ರ ಸತೀಶ್ ಅವರಿಗೂ ಕೂಡ ಇದೇ ರೀತಿಯ ಅನುಭವವಾಗಿದೆ. “ಆಸ್ಪತ್ರೆಯವರು ಕರೆ ಮಾಡಿ ಅವರು ಇನ್ನಿಲ್ಲ ಎಂದು ಹೇಳಿದಾಗ, ನಾವು ಶವವನ್ನು ಕೇಳಿದ್ದೇವು. ಆದರೆ ಬಿಬಿಎಂಪಿ ಅಧಿಕಾರಿಗಳು ಮೃತದೇಹವನ್ನು ಸುಡಲಾಯಿತು ಎಂದು ಹೇಳಿದ್ದರು. ನಾವು ಮರಣ ಪ್ರಮಾಣಪತ್ರವನ್ನು ಪಡೆಯಲು ಹೋದಾಗ ಕೂಡ ಅವರು ಅದನ್ನೇ ಮತ್ತೆ ಹೇಳಿದ್ದರು” ಎಂದಿದ್ದಾರೆ.

ಇನ್ನು ಘಟನೆ ಸಂಬಂಧ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಕಾರ್ಮಿಕ ಸಚಿವ ಎ.ಶಿವರಾಮ್ ಹೆಬ್ಬಾರ್ ಅವರಿಗೆ ಪತ್ರ ಬರೆದಿದ್ದು, ಈ ವಿಷಯವನ್ನು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ತಿಳಿಸುವಂತೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೂವಂತೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...