Homeಕರ್ನಾಟಕ’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

- Advertisement -
- Advertisement -

ಘನತೆ, ಮನ್ನಣೆ, ಸಾಮಾಜಿಕ ಭದ್ರತೆಗೆ ಆಗ್ರಹಿಸಿರುವ ಗೃಹ ಕಾರ್ಮಿಕರು ನವೆಂಬರ್‌ 20 ರಂದು ಮೂರು ಜಿಲ್ಲೆಗಳ ಕಾರ್ಮಿಕರ ಭವನದ ಬಳಿ ಮಹಿಳಾ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಗೃಹ ಕಾರ್ಮಿಕ ಹಕ್ಕುಗಳ ಯೂನಿಯನ್ (DWRU) ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

“ನಾವು ನಿಮ್ಮಂತೆಯೇ ಮನುಷ್ಯರು. ನಿಮ್ಮಂತೆಯೆ ದುಡಿದು ತಿನ್ನುವ ನೈತಿಕ ಜವಾಬ್ದಾರಿ ಹೊತ್ತಿರುವ ಕಾರ್ಮಿಕರು. ಬದುಕಿನುದ್ದಕ್ಕೂ ಅನೇಕ ಸವಾಲುಗಳನ್ನೆದುರಿಸಿ ಪ್ರತಿ ದಿನವನ್ನು ಹೋರಾಟದ ಬದುಕನ್ನಾಗಿಸಿಕೊಂಡು ಯಶಸ್ಸು ಕಾಣಬಯಸಿರುವ ಕನಸಿಗರು. ಕಟ್ಟಡ ನಿರ್ಮಾಣ ಕೆಲಸದಲ್ಲಿ, ಬೀದಿ ವ್ಯಾಪಾರದಲ್ಲಿ, ರಸ್ತೆ ನಿರ್ಮಾಣ, ಮನೆಗೆಲಸ, ಕಂಪನಿ, ಹೋಟೆಲ್‌ಗಳಲ್ಲಿ ಸ್ವಚ್ಛ ಮಾಡಿ ಗುಡಿಸಿ ಚೆಂದ ಮಾಡುವ ಇನ್ನೂ ಅನೇಕ ಅಸಂಘಟಿತ ವಲಯದ ಕೆಲಸಗಳಲ್ಲಿ ಭಾಗಿಯಾಗಿದ್ದೇವೆ. ಇಂತಹ ನಮ್ಮ ಬದುಕಿನ ಪ್ರಶ್ನೆಗಳಿಗೆ ಸರ್ಕಾರವೇ ಉತ್ತರ ಕೊಡಬೇಕು” ಎಂದು ಕಾರ್ಮಿಕರು ಆಗ್ರಹಿಸಿದ್ದಾರೆ.

ಬೆಂಗಳೂರು, ಮಂಗಳೂರು ಮತ್ತು ಬೆಳಗಾವಿ ಜಿಲ್ಲೆಗಳ ಕಾರ್ಮಿಕರ ಭವನದ ಬಳಿ Domestic Workers Rights Union (DWRU) ನೇತೃತ್ವದಲ್ಲಿ ಏಕಕಾಲಕ್ಕೆ ಕಾರ್ಮಿಕರು ಪ್ರತಿಭಟನೆ ನಡೆಸಿ, ತಮ್ಮ ಹಕ್ಕುಗಳಿಗೆ ಆಗ್ರಹಿಸಲಿದ್ದಾರೆ.

ಇದನ್ನೂ ಓದಿ: ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

“ದೇಶದಾದ್ಯಂತ ಸಾವಿರಾರು ಹುಡುಗಿಯರು ಜೀವನೋಪಾಯದ ಹುಡುಕಾಟದಲ್ಲಿ ಪ್ಲೇಸ್‌ ಮೆಂಟ್‌ ಎಜೆನ್ಸಿಗಳ ಜಾಲಕ್ಕೆ ಸಿಲುಕಿ ಕಳ್ಳಸಾಗಾಣಿಕೆಗೆ ಬಲಿಯಾಗುತ್ತಿದ್ದಾರೆ, ದುಡಿತಕ್ಕೆ ತಕ್ಕ ಸಂಬಳ ಸಿಗುವುದಿಲ್ಲ. ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ಅಸ್ಪೃಶ್ಯತೆ ಮತ್ತು ಅನಾರೋಗ್ಯವನ್ನು ಎದುರಿಸುತ್ತಿದ್ದಾರೆ. ಎಲ್ಲಾ ಬೃಹತ್‌ ನಗರ ಮತ್ತು ನಗರ, ಮನೆಗಳಲ್ಲಿ ಕಂಡುಬರುವ ಸಾವಿರಾರು ಮನೆಕೆಲಸಗಾರರು ಅದೃಶ್ಯರಾಗಿದ್ದಾರೆ, ಆರ್ಥಿಕತೆ, ಸಮಾಜ ಮತ್ತು ಕುಟುಂಬಕ್ಕೆ ಕೊಡುಗೆ ನೀಡುತ್ತಾ ಬಂದಿದ್ದಾರೆ”.

“ಈ ಪಾರ್ಟ್‌ಟೈಮರ್‌ಗಳಲ್ಲಿ ಅನೇಕರು ಮುಂಜಾನೆ 5 ಗಂಟೆಗೆ ಮನೆ ಕೆಲಸಕ್ಕೆ ತೆರಳುತ್ತಾರೆ. ಅನೇಕ ಮನೆಗಳಲ್ಲಿ, ಜಾತಿ ತಾರತಮ್ಯವನ್ನು ಎದುರಿಸುತ್ತಾರೆ. ಅವರ ಘನತೆಯ ಮೇಲೆ ಹಲ್ಲೆ ನಡೆಸಲಾಗುತ್ತದೆ. ಇವರಿಗೆ ಸಾಮಾಜಿಕ ಭದ್ರತೆ ಇಲ್ಲ, ರಜೆ ಇಲ್ಲ, ರಕ್ಷಣೆ ಇಲ್ಲ, ಇತರ ಕಾರ್ಮಿಕರಂತೆ ಯಾವುದೇ ಹಕ್ಕುಗಳಿಲ್ಲ. ಆದ್ದರಿಂದ ಬಹುಪಾಲು ಮಹಿಳೆಯರು, ಬಾಲಕಿಯರು ಅದೃಶ್ಯರಾಗಿದ್ದಾರೆ. ಜೊತೆಗೆ ಗುಲಾಮಗಿರಿಯಂತಹ ಪರಿಸ್ಥಿತಿಗಳಲ್ಲಿ ಉಳಿದಿದ್ದಾರೆ” ಎಂದು ಗೃಹ ಕಾರ್ಮಿಕರ ಸಂಘಟನೆ ತಿಳಿಸಿದೆ.

 ಪ್ರಶ್ನೆಗಳು ಮತ್ತು ಹಕ್ಕೊತ್ತಾಯಗಳು: 
1. ಗೃಹ ಕಾರ್ಮಿಕರನ್ನು ಗುರುತಿಸುವ ಮತ್ತು ಅವರನ್ನು ಘನತೆಯಿಂದ ನಡೆಸಿಕೊಳ್ಳುವ ಉದ್ದೇಶದ ಬಗ್ಗೆ ಸರ್ಕಾರವು ಗಂಭೀರವಾಗಿದೆಯೇ..? ಅಸಂಘಟಿತ ಕಾರ್ಮಿಕ ವಲಕ್ಕೆ ಸರ್ಕಾರವು ನಿಗದಿ ಪಡಿಸಿದ ಹಣಕಾಸಿನ(ಬಜೆಟ್) ಹಂಚಿಕೆಯ ಬಗೆಗಿನ ವಿವರದ ಮಾಹಿತಿ ಜನರಿಗೆ ಯಾಕೆ ತಲುಪುವುದಿಲ್ಲ..?

2. ಯೋಜನೆಯಿಲ್ಲದ, ಯಾವುದೇ ಪ್ರಯೋಜನಗಳಿಲ್ಲದ, ಕೇವಲ ಪ್ಲಾಸ್ಟಿಕ್ ಪೇಪರ್ ಕಾರ್ಡ್ ಏನು ಸೇವೆ ನೀಡುತ್ತದೆ..?

3. 2016 ರಿಂದ 2021ರ ಈ ನಾಲ್ಕು ವರ್ಷಗಳು ಕಳೆದರು ಸರ್ಕಾರವು ತೀವ್ರ ಮಂದಗತಿಯಲ್ಲಿ ಗೃಹ ಕಾರ್ಮಿಕರನ್ನು ತಲುಪಿರುವುದಾದರು ಯಾಕೆ..? ಗೃಹ ಕಾರ್ಮಿಕರು ಬಹುತೇಕರು ದಲಿತರು ಮತ್ತು ಮುಸ್ಲಿಮರು ಎಂಬ ಕಾರಣಕ್ಕೆ ಸರ್ಕಾರದ ಕಣ್ಣಿಗೆ ಕಾಣಿಸುತ್ತಿಲ್ಲವೆ..?

4.2020-2021ರ ಈ ಎರಡು ವರ್ಷಗಳ ಭೀಕರ ಕೊರೊನಾ ಪರಿಸ್ಥಿತಿಯಲ್ಲಿ ಕೆಲಸಗಳಿಲ್ಲದೆ, ಯಾವುದೇ ಆದಾಯವಿಲ್ಲದೆ, ಸರ್ಕಾರದ ಯಾವ ಸೌಲಭ್ಯಗಳಿಲ್ಲದೆ, ಕಡಿಮೆ ವೈದ್ಯಕೀಯ ಸೌಲಭ್ಯಗಳ ಪರಿಸ್ಥಿತಿಯಲ್ಲಿ ಸ್ಮಾರ್ಟ್ ಕಾರ್ಡ್ ನೋಂದಾವಣಿಯನ್ನು ಏಕೆ ನಿಲ್ಲಿಸಲಾಯಿತು..?

5. ವಲಸೆ ಗೃಹ ಕಾರ್ಮಿಕರನ್ನು ಸ್ಮಾರ್ಟ್ ಕಾರ್ಡ್ ಯೋಜನೆಯಿಂದ ಏಕೆ ಹೊರಗಿಡಲಾಗಿದೆ..? ಮಾಲೀಕರ ಮನೆಯಲ್ಲೇ ಉಳಿದುಕೊಂಡು ಕೆಲಸ ಮಾಡುವ ಮಹಿಳಾ ಕಾರ್ಮಿಕರು ಒಂದು ರೀತಿಯ ಜೀತವನ್ನು ಪ್ರತಿ ದಿನವೂ ಅನುಭವಿಸುತ್ತಿದ್ದಾರೆ ಇವರ ಬಗೆಗೆ ನಿಮ್ಮ ನಿಲುವೇನು..?

6. ಮಾಲೀಕರ ವಿವರಗಳನ್ನು ಮಂಡಳಿಯಲ್ಲಿ ಏಕೆ ನೋಂದಾಯಿಸಲಾಗಿಲ್ಲ..?

7. ಸೆಪ್ಟೆಂಬರ್ 2021 ರಿಂದ ಸ್ಮಾರ್ಟ್ ಕಾರ್ಡ್ ನೋಂದಾವಣೆಯಲ್ಲಿ BPL/PPH ಕಾರ್ಡ್‌ಗಳನ್ನು ಏಕೆ ಹೊಸದಾಗಿ ಪರಿಚಯಿಸಬೇಕು.? ಸರ್ಕಾರ ಗೃಹ ಕಾರ್ಮಿಕರ ಕಲ್ಯಾಣವನ್ನು ಬಯಸುವುದಾದರೆ ಕಲ್ಯಾಣ ಯೋಜನೆಗಳಲ್ಲಿ ತಾರತಮ್ಯ ಏಕೆ..?

8. ಸಮತೆಯ ಹರಿಕಾರ ಡಾ. ಬಿ. ಆರ್ ಅಂಬೇಡ್ಕರ್ ಅವರ ಹೆಸರನ್ನು ಹೊಂದಿರುವ ಯೋಜನೆಯಡಿಯಲ್ಲಿ ಸಂವಿಧಾನದಲ್ಲಿನ ಎಲ್ಲಾ ತತ್ವಗಳನ್ನು ಉಲ್ಲಂಘಿಸಲಾಗಿದ್ದು ಇದು ನಿರ್ಲಜ್ಜವಾಗಿ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

9. ಕೋವಿಡ್ ತಂದೊಡ್ಡಿದ್ದ ಭೀಕರ ಪರಿಸ್ಥಿತಿಯಲ್ಲಿ ಕಾರ್ಮಿಕಾ ಕೋಡ್ ಅನ್ನು ಕಾರ್ಮಿಕರ ಹಿತಾಸಕ್ತಿ ಇಲ್ಲದೆ, ನ್ಯಾಯ ಸಮ್ಮತ ಇಲ್ಲದೆ ಅಂಗೀಕರಿಸಿರುವುದು ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆ ತೋರಿಸುವುದಿಲ್ಲವೇ..?

10. “ರೈತರು ಮತ್ತು ಕಾರ್ಮಿಕರನ್ನು” ದ್ರೋಹ ಬಗೆದವರು ಎಂಬ ರೀತಿಯಲ್ಲಿ ಕಾಣುವ ರಾಜ್ಯದಲ್ಲಿ ಯಾವುದೇ ಗೌರವ ಇಲ್ಲದೇ ಗೃಹ ಕಾರ್ಮಿಕರನ್ನು ಪ್ರತ್ಯೇಕವಾಗಿ ಕಾಣುತ್ತಿರುವುದಾದರೂ ಯಾಕೆ..? ಪ್ರತಿ ಸಲ ನಾವು “ರಾಷ್ಟ್ರ ವಿರೋಧಿಗಳು” ಎಂಬ ಪದವನ್ನು ಕೇಳಿಸಿಕೊಳ್ಳುತ್ತಿದ್ದೇವೆ. ಹಾಗಾದರೆ ಯಾರು ನಿಮ್ಮ ಪ್ರಕಾರ ರಾಷ್ಟ್ರ ವಿರೋಧಿಗಳು..?

ಎಂಬ 10 ಪ್ರಶ್ನೆಗಳನ್ನು ಇಟ್ಟುಕೊಂಡು, ಘನತೆ, ಮನ್ನಣೆ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ಮಹಿಳಾ ಚಲೋ ನಡೆಸಲು ನಿರ್ಧರಿಸಲಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ:ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...