Homeಕರ್ನಾಟಕ’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

- Advertisement -
- Advertisement -

ಘನತೆ, ಮನ್ನಣೆ, ಸಾಮಾಜಿಕ ಭದ್ರತೆಗೆ ಆಗ್ರಹಿಸಿರುವ ಗೃಹ ಕಾರ್ಮಿಕರು ನವೆಂಬರ್‌ 20 ರಂದು ಮೂರು ಜಿಲ್ಲೆಗಳ ಕಾರ್ಮಿಕರ ಭವನದ ಬಳಿ ಮಹಿಳಾ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಗೃಹ ಕಾರ್ಮಿಕ ಹಕ್ಕುಗಳ ಯೂನಿಯನ್ (DWRU) ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

“ನಾವು ನಿಮ್ಮಂತೆಯೇ ಮನುಷ್ಯರು. ನಿಮ್ಮಂತೆಯೆ ದುಡಿದು ತಿನ್ನುವ ನೈತಿಕ ಜವಾಬ್ದಾರಿ ಹೊತ್ತಿರುವ ಕಾರ್ಮಿಕರು. ಬದುಕಿನುದ್ದಕ್ಕೂ ಅನೇಕ ಸವಾಲುಗಳನ್ನೆದುರಿಸಿ ಪ್ರತಿ ದಿನವನ್ನು ಹೋರಾಟದ ಬದುಕನ್ನಾಗಿಸಿಕೊಂಡು ಯಶಸ್ಸು ಕಾಣಬಯಸಿರುವ ಕನಸಿಗರು. ಕಟ್ಟಡ ನಿರ್ಮಾಣ ಕೆಲಸದಲ್ಲಿ, ಬೀದಿ ವ್ಯಾಪಾರದಲ್ಲಿ, ರಸ್ತೆ ನಿರ್ಮಾಣ, ಮನೆಗೆಲಸ, ಕಂಪನಿ, ಹೋಟೆಲ್‌ಗಳಲ್ಲಿ ಸ್ವಚ್ಛ ಮಾಡಿ ಗುಡಿಸಿ ಚೆಂದ ಮಾಡುವ ಇನ್ನೂ ಅನೇಕ ಅಸಂಘಟಿತ ವಲಯದ ಕೆಲಸಗಳಲ್ಲಿ ಭಾಗಿಯಾಗಿದ್ದೇವೆ. ಇಂತಹ ನಮ್ಮ ಬದುಕಿನ ಪ್ರಶ್ನೆಗಳಿಗೆ ಸರ್ಕಾರವೇ ಉತ್ತರ ಕೊಡಬೇಕು” ಎಂದು ಕಾರ್ಮಿಕರು ಆಗ್ರಹಿಸಿದ್ದಾರೆ.

ಬೆಂಗಳೂರು, ಮಂಗಳೂರು ಮತ್ತು ಬೆಳಗಾವಿ ಜಿಲ್ಲೆಗಳ ಕಾರ್ಮಿಕರ ಭವನದ ಬಳಿ Domestic Workers Rights Union (DWRU) ನೇತೃತ್ವದಲ್ಲಿ ಏಕಕಾಲಕ್ಕೆ ಕಾರ್ಮಿಕರು ಪ್ರತಿಭಟನೆ ನಡೆಸಿ, ತಮ್ಮ ಹಕ್ಕುಗಳಿಗೆ ಆಗ್ರಹಿಸಲಿದ್ದಾರೆ.

ಇದನ್ನೂ ಓದಿ: ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

“ದೇಶದಾದ್ಯಂತ ಸಾವಿರಾರು ಹುಡುಗಿಯರು ಜೀವನೋಪಾಯದ ಹುಡುಕಾಟದಲ್ಲಿ ಪ್ಲೇಸ್‌ ಮೆಂಟ್‌ ಎಜೆನ್ಸಿಗಳ ಜಾಲಕ್ಕೆ ಸಿಲುಕಿ ಕಳ್ಳಸಾಗಾಣಿಕೆಗೆ ಬಲಿಯಾಗುತ್ತಿದ್ದಾರೆ, ದುಡಿತಕ್ಕೆ ತಕ್ಕ ಸಂಬಳ ಸಿಗುವುದಿಲ್ಲ. ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ಅಸ್ಪೃಶ್ಯತೆ ಮತ್ತು ಅನಾರೋಗ್ಯವನ್ನು ಎದುರಿಸುತ್ತಿದ್ದಾರೆ. ಎಲ್ಲಾ ಬೃಹತ್‌ ನಗರ ಮತ್ತು ನಗರ, ಮನೆಗಳಲ್ಲಿ ಕಂಡುಬರುವ ಸಾವಿರಾರು ಮನೆಕೆಲಸಗಾರರು ಅದೃಶ್ಯರಾಗಿದ್ದಾರೆ, ಆರ್ಥಿಕತೆ, ಸಮಾಜ ಮತ್ತು ಕುಟುಂಬಕ್ಕೆ ಕೊಡುಗೆ ನೀಡುತ್ತಾ ಬಂದಿದ್ದಾರೆ”.

“ಈ ಪಾರ್ಟ್‌ಟೈಮರ್‌ಗಳಲ್ಲಿ ಅನೇಕರು ಮುಂಜಾನೆ 5 ಗಂಟೆಗೆ ಮನೆ ಕೆಲಸಕ್ಕೆ ತೆರಳುತ್ತಾರೆ. ಅನೇಕ ಮನೆಗಳಲ್ಲಿ, ಜಾತಿ ತಾರತಮ್ಯವನ್ನು ಎದುರಿಸುತ್ತಾರೆ. ಅವರ ಘನತೆಯ ಮೇಲೆ ಹಲ್ಲೆ ನಡೆಸಲಾಗುತ್ತದೆ. ಇವರಿಗೆ ಸಾಮಾಜಿಕ ಭದ್ರತೆ ಇಲ್ಲ, ರಜೆ ಇಲ್ಲ, ರಕ್ಷಣೆ ಇಲ್ಲ, ಇತರ ಕಾರ್ಮಿಕರಂತೆ ಯಾವುದೇ ಹಕ್ಕುಗಳಿಲ್ಲ. ಆದ್ದರಿಂದ ಬಹುಪಾಲು ಮಹಿಳೆಯರು, ಬಾಲಕಿಯರು ಅದೃಶ್ಯರಾಗಿದ್ದಾರೆ. ಜೊತೆಗೆ ಗುಲಾಮಗಿರಿಯಂತಹ ಪರಿಸ್ಥಿತಿಗಳಲ್ಲಿ ಉಳಿದಿದ್ದಾರೆ” ಎಂದು ಗೃಹ ಕಾರ್ಮಿಕರ ಸಂಘಟನೆ ತಿಳಿಸಿದೆ.

 ಪ್ರಶ್ನೆಗಳು ಮತ್ತು ಹಕ್ಕೊತ್ತಾಯಗಳು: 
1. ಗೃಹ ಕಾರ್ಮಿಕರನ್ನು ಗುರುತಿಸುವ ಮತ್ತು ಅವರನ್ನು ಘನತೆಯಿಂದ ನಡೆಸಿಕೊಳ್ಳುವ ಉದ್ದೇಶದ ಬಗ್ಗೆ ಸರ್ಕಾರವು ಗಂಭೀರವಾಗಿದೆಯೇ..? ಅಸಂಘಟಿತ ಕಾರ್ಮಿಕ ವಲಕ್ಕೆ ಸರ್ಕಾರವು ನಿಗದಿ ಪಡಿಸಿದ ಹಣಕಾಸಿನ(ಬಜೆಟ್) ಹಂಚಿಕೆಯ ಬಗೆಗಿನ ವಿವರದ ಮಾಹಿತಿ ಜನರಿಗೆ ಯಾಕೆ ತಲುಪುವುದಿಲ್ಲ..?

2. ಯೋಜನೆಯಿಲ್ಲದ, ಯಾವುದೇ ಪ್ರಯೋಜನಗಳಿಲ್ಲದ, ಕೇವಲ ಪ್ಲಾಸ್ಟಿಕ್ ಪೇಪರ್ ಕಾರ್ಡ್ ಏನು ಸೇವೆ ನೀಡುತ್ತದೆ..?

3. 2016 ರಿಂದ 2021ರ ಈ ನಾಲ್ಕು ವರ್ಷಗಳು ಕಳೆದರು ಸರ್ಕಾರವು ತೀವ್ರ ಮಂದಗತಿಯಲ್ಲಿ ಗೃಹ ಕಾರ್ಮಿಕರನ್ನು ತಲುಪಿರುವುದಾದರು ಯಾಕೆ..? ಗೃಹ ಕಾರ್ಮಿಕರು ಬಹುತೇಕರು ದಲಿತರು ಮತ್ತು ಮುಸ್ಲಿಮರು ಎಂಬ ಕಾರಣಕ್ಕೆ ಸರ್ಕಾರದ ಕಣ್ಣಿಗೆ ಕಾಣಿಸುತ್ತಿಲ್ಲವೆ..?

4.2020-2021ರ ಈ ಎರಡು ವರ್ಷಗಳ ಭೀಕರ ಕೊರೊನಾ ಪರಿಸ್ಥಿತಿಯಲ್ಲಿ ಕೆಲಸಗಳಿಲ್ಲದೆ, ಯಾವುದೇ ಆದಾಯವಿಲ್ಲದೆ, ಸರ್ಕಾರದ ಯಾವ ಸೌಲಭ್ಯಗಳಿಲ್ಲದೆ, ಕಡಿಮೆ ವೈದ್ಯಕೀಯ ಸೌಲಭ್ಯಗಳ ಪರಿಸ್ಥಿತಿಯಲ್ಲಿ ಸ್ಮಾರ್ಟ್ ಕಾರ್ಡ್ ನೋಂದಾವಣಿಯನ್ನು ಏಕೆ ನಿಲ್ಲಿಸಲಾಯಿತು..?

5. ವಲಸೆ ಗೃಹ ಕಾರ್ಮಿಕರನ್ನು ಸ್ಮಾರ್ಟ್ ಕಾರ್ಡ್ ಯೋಜನೆಯಿಂದ ಏಕೆ ಹೊರಗಿಡಲಾಗಿದೆ..? ಮಾಲೀಕರ ಮನೆಯಲ್ಲೇ ಉಳಿದುಕೊಂಡು ಕೆಲಸ ಮಾಡುವ ಮಹಿಳಾ ಕಾರ್ಮಿಕರು ಒಂದು ರೀತಿಯ ಜೀತವನ್ನು ಪ್ರತಿ ದಿನವೂ ಅನುಭವಿಸುತ್ತಿದ್ದಾರೆ ಇವರ ಬಗೆಗೆ ನಿಮ್ಮ ನಿಲುವೇನು..?

6. ಮಾಲೀಕರ ವಿವರಗಳನ್ನು ಮಂಡಳಿಯಲ್ಲಿ ಏಕೆ ನೋಂದಾಯಿಸಲಾಗಿಲ್ಲ..?

7. ಸೆಪ್ಟೆಂಬರ್ 2021 ರಿಂದ ಸ್ಮಾರ್ಟ್ ಕಾರ್ಡ್ ನೋಂದಾವಣೆಯಲ್ಲಿ BPL/PPH ಕಾರ್ಡ್‌ಗಳನ್ನು ಏಕೆ ಹೊಸದಾಗಿ ಪರಿಚಯಿಸಬೇಕು.? ಸರ್ಕಾರ ಗೃಹ ಕಾರ್ಮಿಕರ ಕಲ್ಯಾಣವನ್ನು ಬಯಸುವುದಾದರೆ ಕಲ್ಯಾಣ ಯೋಜನೆಗಳಲ್ಲಿ ತಾರತಮ್ಯ ಏಕೆ..?

8. ಸಮತೆಯ ಹರಿಕಾರ ಡಾ. ಬಿ. ಆರ್ ಅಂಬೇಡ್ಕರ್ ಅವರ ಹೆಸರನ್ನು ಹೊಂದಿರುವ ಯೋಜನೆಯಡಿಯಲ್ಲಿ ಸಂವಿಧಾನದಲ್ಲಿನ ಎಲ್ಲಾ ತತ್ವಗಳನ್ನು ಉಲ್ಲಂಘಿಸಲಾಗಿದ್ದು ಇದು ನಿರ್ಲಜ್ಜವಾಗಿ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

9. ಕೋವಿಡ್ ತಂದೊಡ್ಡಿದ್ದ ಭೀಕರ ಪರಿಸ್ಥಿತಿಯಲ್ಲಿ ಕಾರ್ಮಿಕಾ ಕೋಡ್ ಅನ್ನು ಕಾರ್ಮಿಕರ ಹಿತಾಸಕ್ತಿ ಇಲ್ಲದೆ, ನ್ಯಾಯ ಸಮ್ಮತ ಇಲ್ಲದೆ ಅಂಗೀಕರಿಸಿರುವುದು ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆ ತೋರಿಸುವುದಿಲ್ಲವೇ..?

10. “ರೈತರು ಮತ್ತು ಕಾರ್ಮಿಕರನ್ನು” ದ್ರೋಹ ಬಗೆದವರು ಎಂಬ ರೀತಿಯಲ್ಲಿ ಕಾಣುವ ರಾಜ್ಯದಲ್ಲಿ ಯಾವುದೇ ಗೌರವ ಇಲ್ಲದೇ ಗೃಹ ಕಾರ್ಮಿಕರನ್ನು ಪ್ರತ್ಯೇಕವಾಗಿ ಕಾಣುತ್ತಿರುವುದಾದರೂ ಯಾಕೆ..? ಪ್ರತಿ ಸಲ ನಾವು “ರಾಷ್ಟ್ರ ವಿರೋಧಿಗಳು” ಎಂಬ ಪದವನ್ನು ಕೇಳಿಸಿಕೊಳ್ಳುತ್ತಿದ್ದೇವೆ. ಹಾಗಾದರೆ ಯಾರು ನಿಮ್ಮ ಪ್ರಕಾರ ರಾಷ್ಟ್ರ ವಿರೋಧಿಗಳು..?

ಎಂಬ 10 ಪ್ರಶ್ನೆಗಳನ್ನು ಇಟ್ಟುಕೊಂಡು, ಘನತೆ, ಮನ್ನಣೆ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ಮಹಿಳಾ ಚಲೋ ನಡೆಸಲು ನಿರ್ಧರಿಸಲಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ:ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....