Homeಕರ್ನಾಟಕ’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

- Advertisement -
- Advertisement -

ಘನತೆ, ಮನ್ನಣೆ, ಸಾಮಾಜಿಕ ಭದ್ರತೆಗೆ ಆಗ್ರಹಿಸಿರುವ ಗೃಹ ಕಾರ್ಮಿಕರು ನವೆಂಬರ್‌ 20 ರಂದು ಮೂರು ಜಿಲ್ಲೆಗಳ ಕಾರ್ಮಿಕರ ಭವನದ ಬಳಿ ಮಹಿಳಾ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಗೃಹ ಕಾರ್ಮಿಕ ಹಕ್ಕುಗಳ ಯೂನಿಯನ್ (DWRU) ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

“ನಾವು ನಿಮ್ಮಂತೆಯೇ ಮನುಷ್ಯರು. ನಿಮ್ಮಂತೆಯೆ ದುಡಿದು ತಿನ್ನುವ ನೈತಿಕ ಜವಾಬ್ದಾರಿ ಹೊತ್ತಿರುವ ಕಾರ್ಮಿಕರು. ಬದುಕಿನುದ್ದಕ್ಕೂ ಅನೇಕ ಸವಾಲುಗಳನ್ನೆದುರಿಸಿ ಪ್ರತಿ ದಿನವನ್ನು ಹೋರಾಟದ ಬದುಕನ್ನಾಗಿಸಿಕೊಂಡು ಯಶಸ್ಸು ಕಾಣಬಯಸಿರುವ ಕನಸಿಗರು. ಕಟ್ಟಡ ನಿರ್ಮಾಣ ಕೆಲಸದಲ್ಲಿ, ಬೀದಿ ವ್ಯಾಪಾರದಲ್ಲಿ, ರಸ್ತೆ ನಿರ್ಮಾಣ, ಮನೆಗೆಲಸ, ಕಂಪನಿ, ಹೋಟೆಲ್‌ಗಳಲ್ಲಿ ಸ್ವಚ್ಛ ಮಾಡಿ ಗುಡಿಸಿ ಚೆಂದ ಮಾಡುವ ಇನ್ನೂ ಅನೇಕ ಅಸಂಘಟಿತ ವಲಯದ ಕೆಲಸಗಳಲ್ಲಿ ಭಾಗಿಯಾಗಿದ್ದೇವೆ. ಇಂತಹ ನಮ್ಮ ಬದುಕಿನ ಪ್ರಶ್ನೆಗಳಿಗೆ ಸರ್ಕಾರವೇ ಉತ್ತರ ಕೊಡಬೇಕು” ಎಂದು ಕಾರ್ಮಿಕರು ಆಗ್ರಹಿಸಿದ್ದಾರೆ.

ಬೆಂಗಳೂರು, ಮಂಗಳೂರು ಮತ್ತು ಬೆಳಗಾವಿ ಜಿಲ್ಲೆಗಳ ಕಾರ್ಮಿಕರ ಭವನದ ಬಳಿ Domestic Workers Rights Union (DWRU) ನೇತೃತ್ವದಲ್ಲಿ ಏಕಕಾಲಕ್ಕೆ ಕಾರ್ಮಿಕರು ಪ್ರತಿಭಟನೆ ನಡೆಸಿ, ತಮ್ಮ ಹಕ್ಕುಗಳಿಗೆ ಆಗ್ರಹಿಸಲಿದ್ದಾರೆ.

ಇದನ್ನೂ ಓದಿ: ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

“ದೇಶದಾದ್ಯಂತ ಸಾವಿರಾರು ಹುಡುಗಿಯರು ಜೀವನೋಪಾಯದ ಹುಡುಕಾಟದಲ್ಲಿ ಪ್ಲೇಸ್‌ ಮೆಂಟ್‌ ಎಜೆನ್ಸಿಗಳ ಜಾಲಕ್ಕೆ ಸಿಲುಕಿ ಕಳ್ಳಸಾಗಾಣಿಕೆಗೆ ಬಲಿಯಾಗುತ್ತಿದ್ದಾರೆ, ದುಡಿತಕ್ಕೆ ತಕ್ಕ ಸಂಬಳ ಸಿಗುವುದಿಲ್ಲ. ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ಅಸ್ಪೃಶ್ಯತೆ ಮತ್ತು ಅನಾರೋಗ್ಯವನ್ನು ಎದುರಿಸುತ್ತಿದ್ದಾರೆ. ಎಲ್ಲಾ ಬೃಹತ್‌ ನಗರ ಮತ್ತು ನಗರ, ಮನೆಗಳಲ್ಲಿ ಕಂಡುಬರುವ ಸಾವಿರಾರು ಮನೆಕೆಲಸಗಾರರು ಅದೃಶ್ಯರಾಗಿದ್ದಾರೆ, ಆರ್ಥಿಕತೆ, ಸಮಾಜ ಮತ್ತು ಕುಟುಂಬಕ್ಕೆ ಕೊಡುಗೆ ನೀಡುತ್ತಾ ಬಂದಿದ್ದಾರೆ”.

“ಈ ಪಾರ್ಟ್‌ಟೈಮರ್‌ಗಳಲ್ಲಿ ಅನೇಕರು ಮುಂಜಾನೆ 5 ಗಂಟೆಗೆ ಮನೆ ಕೆಲಸಕ್ಕೆ ತೆರಳುತ್ತಾರೆ. ಅನೇಕ ಮನೆಗಳಲ್ಲಿ, ಜಾತಿ ತಾರತಮ್ಯವನ್ನು ಎದುರಿಸುತ್ತಾರೆ. ಅವರ ಘನತೆಯ ಮೇಲೆ ಹಲ್ಲೆ ನಡೆಸಲಾಗುತ್ತದೆ. ಇವರಿಗೆ ಸಾಮಾಜಿಕ ಭದ್ರತೆ ಇಲ್ಲ, ರಜೆ ಇಲ್ಲ, ರಕ್ಷಣೆ ಇಲ್ಲ, ಇತರ ಕಾರ್ಮಿಕರಂತೆ ಯಾವುದೇ ಹಕ್ಕುಗಳಿಲ್ಲ. ಆದ್ದರಿಂದ ಬಹುಪಾಲು ಮಹಿಳೆಯರು, ಬಾಲಕಿಯರು ಅದೃಶ್ಯರಾಗಿದ್ದಾರೆ. ಜೊತೆಗೆ ಗುಲಾಮಗಿರಿಯಂತಹ ಪರಿಸ್ಥಿತಿಗಳಲ್ಲಿ ಉಳಿದಿದ್ದಾರೆ” ಎಂದು ಗೃಹ ಕಾರ್ಮಿಕರ ಸಂಘಟನೆ ತಿಳಿಸಿದೆ.

 ಪ್ರಶ್ನೆಗಳು ಮತ್ತು ಹಕ್ಕೊತ್ತಾಯಗಳು: 
1. ಗೃಹ ಕಾರ್ಮಿಕರನ್ನು ಗುರುತಿಸುವ ಮತ್ತು ಅವರನ್ನು ಘನತೆಯಿಂದ ನಡೆಸಿಕೊಳ್ಳುವ ಉದ್ದೇಶದ ಬಗ್ಗೆ ಸರ್ಕಾರವು ಗಂಭೀರವಾಗಿದೆಯೇ..? ಅಸಂಘಟಿತ ಕಾರ್ಮಿಕ ವಲಕ್ಕೆ ಸರ್ಕಾರವು ನಿಗದಿ ಪಡಿಸಿದ ಹಣಕಾಸಿನ(ಬಜೆಟ್) ಹಂಚಿಕೆಯ ಬಗೆಗಿನ ವಿವರದ ಮಾಹಿತಿ ಜನರಿಗೆ ಯಾಕೆ ತಲುಪುವುದಿಲ್ಲ..?

2. ಯೋಜನೆಯಿಲ್ಲದ, ಯಾವುದೇ ಪ್ರಯೋಜನಗಳಿಲ್ಲದ, ಕೇವಲ ಪ್ಲಾಸ್ಟಿಕ್ ಪೇಪರ್ ಕಾರ್ಡ್ ಏನು ಸೇವೆ ನೀಡುತ್ತದೆ..?

3. 2016 ರಿಂದ 2021ರ ಈ ನಾಲ್ಕು ವರ್ಷಗಳು ಕಳೆದರು ಸರ್ಕಾರವು ತೀವ್ರ ಮಂದಗತಿಯಲ್ಲಿ ಗೃಹ ಕಾರ್ಮಿಕರನ್ನು ತಲುಪಿರುವುದಾದರು ಯಾಕೆ..? ಗೃಹ ಕಾರ್ಮಿಕರು ಬಹುತೇಕರು ದಲಿತರು ಮತ್ತು ಮುಸ್ಲಿಮರು ಎಂಬ ಕಾರಣಕ್ಕೆ ಸರ್ಕಾರದ ಕಣ್ಣಿಗೆ ಕಾಣಿಸುತ್ತಿಲ್ಲವೆ..?

4.2020-2021ರ ಈ ಎರಡು ವರ್ಷಗಳ ಭೀಕರ ಕೊರೊನಾ ಪರಿಸ್ಥಿತಿಯಲ್ಲಿ ಕೆಲಸಗಳಿಲ್ಲದೆ, ಯಾವುದೇ ಆದಾಯವಿಲ್ಲದೆ, ಸರ್ಕಾರದ ಯಾವ ಸೌಲಭ್ಯಗಳಿಲ್ಲದೆ, ಕಡಿಮೆ ವೈದ್ಯಕೀಯ ಸೌಲಭ್ಯಗಳ ಪರಿಸ್ಥಿತಿಯಲ್ಲಿ ಸ್ಮಾರ್ಟ್ ಕಾರ್ಡ್ ನೋಂದಾವಣಿಯನ್ನು ಏಕೆ ನಿಲ್ಲಿಸಲಾಯಿತು..?

5. ವಲಸೆ ಗೃಹ ಕಾರ್ಮಿಕರನ್ನು ಸ್ಮಾರ್ಟ್ ಕಾರ್ಡ್ ಯೋಜನೆಯಿಂದ ಏಕೆ ಹೊರಗಿಡಲಾಗಿದೆ..? ಮಾಲೀಕರ ಮನೆಯಲ್ಲೇ ಉಳಿದುಕೊಂಡು ಕೆಲಸ ಮಾಡುವ ಮಹಿಳಾ ಕಾರ್ಮಿಕರು ಒಂದು ರೀತಿಯ ಜೀತವನ್ನು ಪ್ರತಿ ದಿನವೂ ಅನುಭವಿಸುತ್ತಿದ್ದಾರೆ ಇವರ ಬಗೆಗೆ ನಿಮ್ಮ ನಿಲುವೇನು..?

6. ಮಾಲೀಕರ ವಿವರಗಳನ್ನು ಮಂಡಳಿಯಲ್ಲಿ ಏಕೆ ನೋಂದಾಯಿಸಲಾಗಿಲ್ಲ..?

7. ಸೆಪ್ಟೆಂಬರ್ 2021 ರಿಂದ ಸ್ಮಾರ್ಟ್ ಕಾರ್ಡ್ ನೋಂದಾವಣೆಯಲ್ಲಿ BPL/PPH ಕಾರ್ಡ್‌ಗಳನ್ನು ಏಕೆ ಹೊಸದಾಗಿ ಪರಿಚಯಿಸಬೇಕು.? ಸರ್ಕಾರ ಗೃಹ ಕಾರ್ಮಿಕರ ಕಲ್ಯಾಣವನ್ನು ಬಯಸುವುದಾದರೆ ಕಲ್ಯಾಣ ಯೋಜನೆಗಳಲ್ಲಿ ತಾರತಮ್ಯ ಏಕೆ..?

8. ಸಮತೆಯ ಹರಿಕಾರ ಡಾ. ಬಿ. ಆರ್ ಅಂಬೇಡ್ಕರ್ ಅವರ ಹೆಸರನ್ನು ಹೊಂದಿರುವ ಯೋಜನೆಯಡಿಯಲ್ಲಿ ಸಂವಿಧಾನದಲ್ಲಿನ ಎಲ್ಲಾ ತತ್ವಗಳನ್ನು ಉಲ್ಲಂಘಿಸಲಾಗಿದ್ದು ಇದು ನಿರ್ಲಜ್ಜವಾಗಿ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

9. ಕೋವಿಡ್ ತಂದೊಡ್ಡಿದ್ದ ಭೀಕರ ಪರಿಸ್ಥಿತಿಯಲ್ಲಿ ಕಾರ್ಮಿಕಾ ಕೋಡ್ ಅನ್ನು ಕಾರ್ಮಿಕರ ಹಿತಾಸಕ್ತಿ ಇಲ್ಲದೆ, ನ್ಯಾಯ ಸಮ್ಮತ ಇಲ್ಲದೆ ಅಂಗೀಕರಿಸಿರುವುದು ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆ ತೋರಿಸುವುದಿಲ್ಲವೇ..?

10. “ರೈತರು ಮತ್ತು ಕಾರ್ಮಿಕರನ್ನು” ದ್ರೋಹ ಬಗೆದವರು ಎಂಬ ರೀತಿಯಲ್ಲಿ ಕಾಣುವ ರಾಜ್ಯದಲ್ಲಿ ಯಾವುದೇ ಗೌರವ ಇಲ್ಲದೇ ಗೃಹ ಕಾರ್ಮಿಕರನ್ನು ಪ್ರತ್ಯೇಕವಾಗಿ ಕಾಣುತ್ತಿರುವುದಾದರೂ ಯಾಕೆ..? ಪ್ರತಿ ಸಲ ನಾವು “ರಾಷ್ಟ್ರ ವಿರೋಧಿಗಳು” ಎಂಬ ಪದವನ್ನು ಕೇಳಿಸಿಕೊಳ್ಳುತ್ತಿದ್ದೇವೆ. ಹಾಗಾದರೆ ಯಾರು ನಿಮ್ಮ ಪ್ರಕಾರ ರಾಷ್ಟ್ರ ವಿರೋಧಿಗಳು..?

ಎಂಬ 10 ಪ್ರಶ್ನೆಗಳನ್ನು ಇಟ್ಟುಕೊಂಡು, ಘನತೆ, ಮನ್ನಣೆ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ಮಹಿಳಾ ಚಲೋ ನಡೆಸಲು ನಿರ್ಧರಿಸಲಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ:ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...