Homeಕರ್ನಾಟಕ’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

- Advertisement -
- Advertisement -

ಘನತೆ, ಮನ್ನಣೆ, ಸಾಮಾಜಿಕ ಭದ್ರತೆಗೆ ಆಗ್ರಹಿಸಿರುವ ಗೃಹ ಕಾರ್ಮಿಕರು ನವೆಂಬರ್‌ 20 ರಂದು ಮೂರು ಜಿಲ್ಲೆಗಳ ಕಾರ್ಮಿಕರ ಭವನದ ಬಳಿ ಮಹಿಳಾ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಗೃಹ ಕಾರ್ಮಿಕ ಹಕ್ಕುಗಳ ಯೂನಿಯನ್ (DWRU) ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

“ನಾವು ನಿಮ್ಮಂತೆಯೇ ಮನುಷ್ಯರು. ನಿಮ್ಮಂತೆಯೆ ದುಡಿದು ತಿನ್ನುವ ನೈತಿಕ ಜವಾಬ್ದಾರಿ ಹೊತ್ತಿರುವ ಕಾರ್ಮಿಕರು. ಬದುಕಿನುದ್ದಕ್ಕೂ ಅನೇಕ ಸವಾಲುಗಳನ್ನೆದುರಿಸಿ ಪ್ರತಿ ದಿನವನ್ನು ಹೋರಾಟದ ಬದುಕನ್ನಾಗಿಸಿಕೊಂಡು ಯಶಸ್ಸು ಕಾಣಬಯಸಿರುವ ಕನಸಿಗರು. ಕಟ್ಟಡ ನಿರ್ಮಾಣ ಕೆಲಸದಲ್ಲಿ, ಬೀದಿ ವ್ಯಾಪಾರದಲ್ಲಿ, ರಸ್ತೆ ನಿರ್ಮಾಣ, ಮನೆಗೆಲಸ, ಕಂಪನಿ, ಹೋಟೆಲ್‌ಗಳಲ್ಲಿ ಸ್ವಚ್ಛ ಮಾಡಿ ಗುಡಿಸಿ ಚೆಂದ ಮಾಡುವ ಇನ್ನೂ ಅನೇಕ ಅಸಂಘಟಿತ ವಲಯದ ಕೆಲಸಗಳಲ್ಲಿ ಭಾಗಿಯಾಗಿದ್ದೇವೆ. ಇಂತಹ ನಮ್ಮ ಬದುಕಿನ ಪ್ರಶ್ನೆಗಳಿಗೆ ಸರ್ಕಾರವೇ ಉತ್ತರ ಕೊಡಬೇಕು” ಎಂದು ಕಾರ್ಮಿಕರು ಆಗ್ರಹಿಸಿದ್ದಾರೆ.

ಬೆಂಗಳೂರು, ಮಂಗಳೂರು ಮತ್ತು ಬೆಳಗಾವಿ ಜಿಲ್ಲೆಗಳ ಕಾರ್ಮಿಕರ ಭವನದ ಬಳಿ Domestic Workers Rights Union (DWRU) ನೇತೃತ್ವದಲ್ಲಿ ಏಕಕಾಲಕ್ಕೆ ಕಾರ್ಮಿಕರು ಪ್ರತಿಭಟನೆ ನಡೆಸಿ, ತಮ್ಮ ಹಕ್ಕುಗಳಿಗೆ ಆಗ್ರಹಿಸಲಿದ್ದಾರೆ.

ಇದನ್ನೂ ಓದಿ: ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

“ದೇಶದಾದ್ಯಂತ ಸಾವಿರಾರು ಹುಡುಗಿಯರು ಜೀವನೋಪಾಯದ ಹುಡುಕಾಟದಲ್ಲಿ ಪ್ಲೇಸ್‌ ಮೆಂಟ್‌ ಎಜೆನ್ಸಿಗಳ ಜಾಲಕ್ಕೆ ಸಿಲುಕಿ ಕಳ್ಳಸಾಗಾಣಿಕೆಗೆ ಬಲಿಯಾಗುತ್ತಿದ್ದಾರೆ, ದುಡಿತಕ್ಕೆ ತಕ್ಕ ಸಂಬಳ ಸಿಗುವುದಿಲ್ಲ. ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ಅಸ್ಪೃಶ್ಯತೆ ಮತ್ತು ಅನಾರೋಗ್ಯವನ್ನು ಎದುರಿಸುತ್ತಿದ್ದಾರೆ. ಎಲ್ಲಾ ಬೃಹತ್‌ ನಗರ ಮತ್ತು ನಗರ, ಮನೆಗಳಲ್ಲಿ ಕಂಡುಬರುವ ಸಾವಿರಾರು ಮನೆಕೆಲಸಗಾರರು ಅದೃಶ್ಯರಾಗಿದ್ದಾರೆ, ಆರ್ಥಿಕತೆ, ಸಮಾಜ ಮತ್ತು ಕುಟುಂಬಕ್ಕೆ ಕೊಡುಗೆ ನೀಡುತ್ತಾ ಬಂದಿದ್ದಾರೆ”.

“ಈ ಪಾರ್ಟ್‌ಟೈಮರ್‌ಗಳಲ್ಲಿ ಅನೇಕರು ಮುಂಜಾನೆ 5 ಗಂಟೆಗೆ ಮನೆ ಕೆಲಸಕ್ಕೆ ತೆರಳುತ್ತಾರೆ. ಅನೇಕ ಮನೆಗಳಲ್ಲಿ, ಜಾತಿ ತಾರತಮ್ಯವನ್ನು ಎದುರಿಸುತ್ತಾರೆ. ಅವರ ಘನತೆಯ ಮೇಲೆ ಹಲ್ಲೆ ನಡೆಸಲಾಗುತ್ತದೆ. ಇವರಿಗೆ ಸಾಮಾಜಿಕ ಭದ್ರತೆ ಇಲ್ಲ, ರಜೆ ಇಲ್ಲ, ರಕ್ಷಣೆ ಇಲ್ಲ, ಇತರ ಕಾರ್ಮಿಕರಂತೆ ಯಾವುದೇ ಹಕ್ಕುಗಳಿಲ್ಲ. ಆದ್ದರಿಂದ ಬಹುಪಾಲು ಮಹಿಳೆಯರು, ಬಾಲಕಿಯರು ಅದೃಶ್ಯರಾಗಿದ್ದಾರೆ. ಜೊತೆಗೆ ಗುಲಾಮಗಿರಿಯಂತಹ ಪರಿಸ್ಥಿತಿಗಳಲ್ಲಿ ಉಳಿದಿದ್ದಾರೆ” ಎಂದು ಗೃಹ ಕಾರ್ಮಿಕರ ಸಂಘಟನೆ ತಿಳಿಸಿದೆ.

 ಪ್ರಶ್ನೆಗಳು ಮತ್ತು ಹಕ್ಕೊತ್ತಾಯಗಳು: 
1. ಗೃಹ ಕಾರ್ಮಿಕರನ್ನು ಗುರುತಿಸುವ ಮತ್ತು ಅವರನ್ನು ಘನತೆಯಿಂದ ನಡೆಸಿಕೊಳ್ಳುವ ಉದ್ದೇಶದ ಬಗ್ಗೆ ಸರ್ಕಾರವು ಗಂಭೀರವಾಗಿದೆಯೇ..? ಅಸಂಘಟಿತ ಕಾರ್ಮಿಕ ವಲಕ್ಕೆ ಸರ್ಕಾರವು ನಿಗದಿ ಪಡಿಸಿದ ಹಣಕಾಸಿನ(ಬಜೆಟ್) ಹಂಚಿಕೆಯ ಬಗೆಗಿನ ವಿವರದ ಮಾಹಿತಿ ಜನರಿಗೆ ಯಾಕೆ ತಲುಪುವುದಿಲ್ಲ..?

2. ಯೋಜನೆಯಿಲ್ಲದ, ಯಾವುದೇ ಪ್ರಯೋಜನಗಳಿಲ್ಲದ, ಕೇವಲ ಪ್ಲಾಸ್ಟಿಕ್ ಪೇಪರ್ ಕಾರ್ಡ್ ಏನು ಸೇವೆ ನೀಡುತ್ತದೆ..?

3. 2016 ರಿಂದ 2021ರ ಈ ನಾಲ್ಕು ವರ್ಷಗಳು ಕಳೆದರು ಸರ್ಕಾರವು ತೀವ್ರ ಮಂದಗತಿಯಲ್ಲಿ ಗೃಹ ಕಾರ್ಮಿಕರನ್ನು ತಲುಪಿರುವುದಾದರು ಯಾಕೆ..? ಗೃಹ ಕಾರ್ಮಿಕರು ಬಹುತೇಕರು ದಲಿತರು ಮತ್ತು ಮುಸ್ಲಿಮರು ಎಂಬ ಕಾರಣಕ್ಕೆ ಸರ್ಕಾರದ ಕಣ್ಣಿಗೆ ಕಾಣಿಸುತ್ತಿಲ್ಲವೆ..?

4.2020-2021ರ ಈ ಎರಡು ವರ್ಷಗಳ ಭೀಕರ ಕೊರೊನಾ ಪರಿಸ್ಥಿತಿಯಲ್ಲಿ ಕೆಲಸಗಳಿಲ್ಲದೆ, ಯಾವುದೇ ಆದಾಯವಿಲ್ಲದೆ, ಸರ್ಕಾರದ ಯಾವ ಸೌಲಭ್ಯಗಳಿಲ್ಲದೆ, ಕಡಿಮೆ ವೈದ್ಯಕೀಯ ಸೌಲಭ್ಯಗಳ ಪರಿಸ್ಥಿತಿಯಲ್ಲಿ ಸ್ಮಾರ್ಟ್ ಕಾರ್ಡ್ ನೋಂದಾವಣಿಯನ್ನು ಏಕೆ ನಿಲ್ಲಿಸಲಾಯಿತು..?

5. ವಲಸೆ ಗೃಹ ಕಾರ್ಮಿಕರನ್ನು ಸ್ಮಾರ್ಟ್ ಕಾರ್ಡ್ ಯೋಜನೆಯಿಂದ ಏಕೆ ಹೊರಗಿಡಲಾಗಿದೆ..? ಮಾಲೀಕರ ಮನೆಯಲ್ಲೇ ಉಳಿದುಕೊಂಡು ಕೆಲಸ ಮಾಡುವ ಮಹಿಳಾ ಕಾರ್ಮಿಕರು ಒಂದು ರೀತಿಯ ಜೀತವನ್ನು ಪ್ರತಿ ದಿನವೂ ಅನುಭವಿಸುತ್ತಿದ್ದಾರೆ ಇವರ ಬಗೆಗೆ ನಿಮ್ಮ ನಿಲುವೇನು..?

6. ಮಾಲೀಕರ ವಿವರಗಳನ್ನು ಮಂಡಳಿಯಲ್ಲಿ ಏಕೆ ನೋಂದಾಯಿಸಲಾಗಿಲ್ಲ..?

7. ಸೆಪ್ಟೆಂಬರ್ 2021 ರಿಂದ ಸ್ಮಾರ್ಟ್ ಕಾರ್ಡ್ ನೋಂದಾವಣೆಯಲ್ಲಿ BPL/PPH ಕಾರ್ಡ್‌ಗಳನ್ನು ಏಕೆ ಹೊಸದಾಗಿ ಪರಿಚಯಿಸಬೇಕು.? ಸರ್ಕಾರ ಗೃಹ ಕಾರ್ಮಿಕರ ಕಲ್ಯಾಣವನ್ನು ಬಯಸುವುದಾದರೆ ಕಲ್ಯಾಣ ಯೋಜನೆಗಳಲ್ಲಿ ತಾರತಮ್ಯ ಏಕೆ..?

8. ಸಮತೆಯ ಹರಿಕಾರ ಡಾ. ಬಿ. ಆರ್ ಅಂಬೇಡ್ಕರ್ ಅವರ ಹೆಸರನ್ನು ಹೊಂದಿರುವ ಯೋಜನೆಯಡಿಯಲ್ಲಿ ಸಂವಿಧಾನದಲ್ಲಿನ ಎಲ್ಲಾ ತತ್ವಗಳನ್ನು ಉಲ್ಲಂಘಿಸಲಾಗಿದ್ದು ಇದು ನಿರ್ಲಜ್ಜವಾಗಿ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

9. ಕೋವಿಡ್ ತಂದೊಡ್ಡಿದ್ದ ಭೀಕರ ಪರಿಸ್ಥಿತಿಯಲ್ಲಿ ಕಾರ್ಮಿಕಾ ಕೋಡ್ ಅನ್ನು ಕಾರ್ಮಿಕರ ಹಿತಾಸಕ್ತಿ ಇಲ್ಲದೆ, ನ್ಯಾಯ ಸಮ್ಮತ ಇಲ್ಲದೆ ಅಂಗೀಕರಿಸಿರುವುದು ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆ ತೋರಿಸುವುದಿಲ್ಲವೇ..?

10. “ರೈತರು ಮತ್ತು ಕಾರ್ಮಿಕರನ್ನು” ದ್ರೋಹ ಬಗೆದವರು ಎಂಬ ರೀತಿಯಲ್ಲಿ ಕಾಣುವ ರಾಜ್ಯದಲ್ಲಿ ಯಾವುದೇ ಗೌರವ ಇಲ್ಲದೇ ಗೃಹ ಕಾರ್ಮಿಕರನ್ನು ಪ್ರತ್ಯೇಕವಾಗಿ ಕಾಣುತ್ತಿರುವುದಾದರೂ ಯಾಕೆ..? ಪ್ರತಿ ಸಲ ನಾವು “ರಾಷ್ಟ್ರ ವಿರೋಧಿಗಳು” ಎಂಬ ಪದವನ್ನು ಕೇಳಿಸಿಕೊಳ್ಳುತ್ತಿದ್ದೇವೆ. ಹಾಗಾದರೆ ಯಾರು ನಿಮ್ಮ ಪ್ರಕಾರ ರಾಷ್ಟ್ರ ವಿರೋಧಿಗಳು..?

ಎಂಬ 10 ಪ್ರಶ್ನೆಗಳನ್ನು ಇಟ್ಟುಕೊಂಡು, ಘನತೆ, ಮನ್ನಣೆ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ಮಹಿಳಾ ಚಲೋ ನಡೆಸಲು ನಿರ್ಧರಿಸಲಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ:ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...