Homeಕರ್ನಾಟಕ’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

’ನಿಮ್ಮ ಸಭ್ಯತೆ, ನನ್ನ ಘನತೆ’: ನ.20ಕ್ಕೆ ಗೃಹ ಕಾರ್ಮಿಕರಿಂದ ಮಹಿಳಾ ಚಲೋ

- Advertisement -
- Advertisement -

ಘನತೆ, ಮನ್ನಣೆ, ಸಾಮಾಜಿಕ ಭದ್ರತೆಗೆ ಆಗ್ರಹಿಸಿರುವ ಗೃಹ ಕಾರ್ಮಿಕರು ನವೆಂಬರ್‌ 20 ರಂದು ಮೂರು ಜಿಲ್ಲೆಗಳ ಕಾರ್ಮಿಕರ ಭವನದ ಬಳಿ ಮಹಿಳಾ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಗೃಹ ಕಾರ್ಮಿಕ ಹಕ್ಕುಗಳ ಯೂನಿಯನ್ (DWRU) ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

“ನಾವು ನಿಮ್ಮಂತೆಯೇ ಮನುಷ್ಯರು. ನಿಮ್ಮಂತೆಯೆ ದುಡಿದು ತಿನ್ನುವ ನೈತಿಕ ಜವಾಬ್ದಾರಿ ಹೊತ್ತಿರುವ ಕಾರ್ಮಿಕರು. ಬದುಕಿನುದ್ದಕ್ಕೂ ಅನೇಕ ಸವಾಲುಗಳನ್ನೆದುರಿಸಿ ಪ್ರತಿ ದಿನವನ್ನು ಹೋರಾಟದ ಬದುಕನ್ನಾಗಿಸಿಕೊಂಡು ಯಶಸ್ಸು ಕಾಣಬಯಸಿರುವ ಕನಸಿಗರು. ಕಟ್ಟಡ ನಿರ್ಮಾಣ ಕೆಲಸದಲ್ಲಿ, ಬೀದಿ ವ್ಯಾಪಾರದಲ್ಲಿ, ರಸ್ತೆ ನಿರ್ಮಾಣ, ಮನೆಗೆಲಸ, ಕಂಪನಿ, ಹೋಟೆಲ್‌ಗಳಲ್ಲಿ ಸ್ವಚ್ಛ ಮಾಡಿ ಗುಡಿಸಿ ಚೆಂದ ಮಾಡುವ ಇನ್ನೂ ಅನೇಕ ಅಸಂಘಟಿತ ವಲಯದ ಕೆಲಸಗಳಲ್ಲಿ ಭಾಗಿಯಾಗಿದ್ದೇವೆ. ಇಂತಹ ನಮ್ಮ ಬದುಕಿನ ಪ್ರಶ್ನೆಗಳಿಗೆ ಸರ್ಕಾರವೇ ಉತ್ತರ ಕೊಡಬೇಕು” ಎಂದು ಕಾರ್ಮಿಕರು ಆಗ್ರಹಿಸಿದ್ದಾರೆ.

ಬೆಂಗಳೂರು, ಮಂಗಳೂರು ಮತ್ತು ಬೆಳಗಾವಿ ಜಿಲ್ಲೆಗಳ ಕಾರ್ಮಿಕರ ಭವನದ ಬಳಿ Domestic Workers Rights Union (DWRU) ನೇತೃತ್ವದಲ್ಲಿ ಏಕಕಾಲಕ್ಕೆ ಕಾರ್ಮಿಕರು ಪ್ರತಿಭಟನೆ ನಡೆಸಿ, ತಮ್ಮ ಹಕ್ಕುಗಳಿಗೆ ಆಗ್ರಹಿಸಲಿದ್ದಾರೆ.

ಇದನ್ನೂ ಓದಿ: ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

“ದೇಶದಾದ್ಯಂತ ಸಾವಿರಾರು ಹುಡುಗಿಯರು ಜೀವನೋಪಾಯದ ಹುಡುಕಾಟದಲ್ಲಿ ಪ್ಲೇಸ್‌ ಮೆಂಟ್‌ ಎಜೆನ್ಸಿಗಳ ಜಾಲಕ್ಕೆ ಸಿಲುಕಿ ಕಳ್ಳಸಾಗಾಣಿಕೆಗೆ ಬಲಿಯಾಗುತ್ತಿದ್ದಾರೆ, ದುಡಿತಕ್ಕೆ ತಕ್ಕ ಸಂಬಳ ಸಿಗುವುದಿಲ್ಲ. ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ಅಸ್ಪೃಶ್ಯತೆ ಮತ್ತು ಅನಾರೋಗ್ಯವನ್ನು ಎದುರಿಸುತ್ತಿದ್ದಾರೆ. ಎಲ್ಲಾ ಬೃಹತ್‌ ನಗರ ಮತ್ತು ನಗರ, ಮನೆಗಳಲ್ಲಿ ಕಂಡುಬರುವ ಸಾವಿರಾರು ಮನೆಕೆಲಸಗಾರರು ಅದೃಶ್ಯರಾಗಿದ್ದಾರೆ, ಆರ್ಥಿಕತೆ, ಸಮಾಜ ಮತ್ತು ಕುಟುಂಬಕ್ಕೆ ಕೊಡುಗೆ ನೀಡುತ್ತಾ ಬಂದಿದ್ದಾರೆ”.

“ಈ ಪಾರ್ಟ್‌ಟೈಮರ್‌ಗಳಲ್ಲಿ ಅನೇಕರು ಮುಂಜಾನೆ 5 ಗಂಟೆಗೆ ಮನೆ ಕೆಲಸಕ್ಕೆ ತೆರಳುತ್ತಾರೆ. ಅನೇಕ ಮನೆಗಳಲ್ಲಿ, ಜಾತಿ ತಾರತಮ್ಯವನ್ನು ಎದುರಿಸುತ್ತಾರೆ. ಅವರ ಘನತೆಯ ಮೇಲೆ ಹಲ್ಲೆ ನಡೆಸಲಾಗುತ್ತದೆ. ಇವರಿಗೆ ಸಾಮಾಜಿಕ ಭದ್ರತೆ ಇಲ್ಲ, ರಜೆ ಇಲ್ಲ, ರಕ್ಷಣೆ ಇಲ್ಲ, ಇತರ ಕಾರ್ಮಿಕರಂತೆ ಯಾವುದೇ ಹಕ್ಕುಗಳಿಲ್ಲ. ಆದ್ದರಿಂದ ಬಹುಪಾಲು ಮಹಿಳೆಯರು, ಬಾಲಕಿಯರು ಅದೃಶ್ಯರಾಗಿದ್ದಾರೆ. ಜೊತೆಗೆ ಗುಲಾಮಗಿರಿಯಂತಹ ಪರಿಸ್ಥಿತಿಗಳಲ್ಲಿ ಉಳಿದಿದ್ದಾರೆ” ಎಂದು ಗೃಹ ಕಾರ್ಮಿಕರ ಸಂಘಟನೆ ತಿಳಿಸಿದೆ.

 ಪ್ರಶ್ನೆಗಳು ಮತ್ತು ಹಕ್ಕೊತ್ತಾಯಗಳು: 
1. ಗೃಹ ಕಾರ್ಮಿಕರನ್ನು ಗುರುತಿಸುವ ಮತ್ತು ಅವರನ್ನು ಘನತೆಯಿಂದ ನಡೆಸಿಕೊಳ್ಳುವ ಉದ್ದೇಶದ ಬಗ್ಗೆ ಸರ್ಕಾರವು ಗಂಭೀರವಾಗಿದೆಯೇ..? ಅಸಂಘಟಿತ ಕಾರ್ಮಿಕ ವಲಕ್ಕೆ ಸರ್ಕಾರವು ನಿಗದಿ ಪಡಿಸಿದ ಹಣಕಾಸಿನ(ಬಜೆಟ್) ಹಂಚಿಕೆಯ ಬಗೆಗಿನ ವಿವರದ ಮಾಹಿತಿ ಜನರಿಗೆ ಯಾಕೆ ತಲುಪುವುದಿಲ್ಲ..?

2. ಯೋಜನೆಯಿಲ್ಲದ, ಯಾವುದೇ ಪ್ರಯೋಜನಗಳಿಲ್ಲದ, ಕೇವಲ ಪ್ಲಾಸ್ಟಿಕ್ ಪೇಪರ್ ಕಾರ್ಡ್ ಏನು ಸೇವೆ ನೀಡುತ್ತದೆ..?

3. 2016 ರಿಂದ 2021ರ ಈ ನಾಲ್ಕು ವರ್ಷಗಳು ಕಳೆದರು ಸರ್ಕಾರವು ತೀವ್ರ ಮಂದಗತಿಯಲ್ಲಿ ಗೃಹ ಕಾರ್ಮಿಕರನ್ನು ತಲುಪಿರುವುದಾದರು ಯಾಕೆ..? ಗೃಹ ಕಾರ್ಮಿಕರು ಬಹುತೇಕರು ದಲಿತರು ಮತ್ತು ಮುಸ್ಲಿಮರು ಎಂಬ ಕಾರಣಕ್ಕೆ ಸರ್ಕಾರದ ಕಣ್ಣಿಗೆ ಕಾಣಿಸುತ್ತಿಲ್ಲವೆ..?

4.2020-2021ರ ಈ ಎರಡು ವರ್ಷಗಳ ಭೀಕರ ಕೊರೊನಾ ಪರಿಸ್ಥಿತಿಯಲ್ಲಿ ಕೆಲಸಗಳಿಲ್ಲದೆ, ಯಾವುದೇ ಆದಾಯವಿಲ್ಲದೆ, ಸರ್ಕಾರದ ಯಾವ ಸೌಲಭ್ಯಗಳಿಲ್ಲದೆ, ಕಡಿಮೆ ವೈದ್ಯಕೀಯ ಸೌಲಭ್ಯಗಳ ಪರಿಸ್ಥಿತಿಯಲ್ಲಿ ಸ್ಮಾರ್ಟ್ ಕಾರ್ಡ್ ನೋಂದಾವಣಿಯನ್ನು ಏಕೆ ನಿಲ್ಲಿಸಲಾಯಿತು..?

5. ವಲಸೆ ಗೃಹ ಕಾರ್ಮಿಕರನ್ನು ಸ್ಮಾರ್ಟ್ ಕಾರ್ಡ್ ಯೋಜನೆಯಿಂದ ಏಕೆ ಹೊರಗಿಡಲಾಗಿದೆ..? ಮಾಲೀಕರ ಮನೆಯಲ್ಲೇ ಉಳಿದುಕೊಂಡು ಕೆಲಸ ಮಾಡುವ ಮಹಿಳಾ ಕಾರ್ಮಿಕರು ಒಂದು ರೀತಿಯ ಜೀತವನ್ನು ಪ್ರತಿ ದಿನವೂ ಅನುಭವಿಸುತ್ತಿದ್ದಾರೆ ಇವರ ಬಗೆಗೆ ನಿಮ್ಮ ನಿಲುವೇನು..?

6. ಮಾಲೀಕರ ವಿವರಗಳನ್ನು ಮಂಡಳಿಯಲ್ಲಿ ಏಕೆ ನೋಂದಾಯಿಸಲಾಗಿಲ್ಲ..?

7. ಸೆಪ್ಟೆಂಬರ್ 2021 ರಿಂದ ಸ್ಮಾರ್ಟ್ ಕಾರ್ಡ್ ನೋಂದಾವಣೆಯಲ್ಲಿ BPL/PPH ಕಾರ್ಡ್‌ಗಳನ್ನು ಏಕೆ ಹೊಸದಾಗಿ ಪರಿಚಯಿಸಬೇಕು.? ಸರ್ಕಾರ ಗೃಹ ಕಾರ್ಮಿಕರ ಕಲ್ಯಾಣವನ್ನು ಬಯಸುವುದಾದರೆ ಕಲ್ಯಾಣ ಯೋಜನೆಗಳಲ್ಲಿ ತಾರತಮ್ಯ ಏಕೆ..?

8. ಸಮತೆಯ ಹರಿಕಾರ ಡಾ. ಬಿ. ಆರ್ ಅಂಬೇಡ್ಕರ್ ಅವರ ಹೆಸರನ್ನು ಹೊಂದಿರುವ ಯೋಜನೆಯಡಿಯಲ್ಲಿ ಸಂವಿಧಾನದಲ್ಲಿನ ಎಲ್ಲಾ ತತ್ವಗಳನ್ನು ಉಲ್ಲಂಘಿಸಲಾಗಿದ್ದು ಇದು ನಿರ್ಲಜ್ಜವಾಗಿ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

9. ಕೋವಿಡ್ ತಂದೊಡ್ಡಿದ್ದ ಭೀಕರ ಪರಿಸ್ಥಿತಿಯಲ್ಲಿ ಕಾರ್ಮಿಕಾ ಕೋಡ್ ಅನ್ನು ಕಾರ್ಮಿಕರ ಹಿತಾಸಕ್ತಿ ಇಲ್ಲದೆ, ನ್ಯಾಯ ಸಮ್ಮತ ಇಲ್ಲದೆ ಅಂಗೀಕರಿಸಿರುವುದು ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆ ತೋರಿಸುವುದಿಲ್ಲವೇ..?

10. “ರೈತರು ಮತ್ತು ಕಾರ್ಮಿಕರನ್ನು” ದ್ರೋಹ ಬಗೆದವರು ಎಂಬ ರೀತಿಯಲ್ಲಿ ಕಾಣುವ ರಾಜ್ಯದಲ್ಲಿ ಯಾವುದೇ ಗೌರವ ಇಲ್ಲದೇ ಗೃಹ ಕಾರ್ಮಿಕರನ್ನು ಪ್ರತ್ಯೇಕವಾಗಿ ಕಾಣುತ್ತಿರುವುದಾದರೂ ಯಾಕೆ..? ಪ್ರತಿ ಸಲ ನಾವು “ರಾಷ್ಟ್ರ ವಿರೋಧಿಗಳು” ಎಂಬ ಪದವನ್ನು ಕೇಳಿಸಿಕೊಳ್ಳುತ್ತಿದ್ದೇವೆ. ಹಾಗಾದರೆ ಯಾರು ನಿಮ್ಮ ಪ್ರಕಾರ ರಾಷ್ಟ್ರ ವಿರೋಧಿಗಳು..?

ಎಂಬ 10 ಪ್ರಶ್ನೆಗಳನ್ನು ಇಟ್ಟುಕೊಂಡು, ಘನತೆ, ಮನ್ನಣೆ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ಮಹಿಳಾ ಚಲೋ ನಡೆಸಲು ನಿರ್ಧರಿಸಲಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ವೇಳೆ ಬಂಧಿತರಾಗಿದ್ದ 83 ಮಂದಿಗೆ ತಲಾ 2 ಲಕ್ಷ ರೂ. ಪರಿಹಾರ:ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...