Homeಕರ್ನಾಟಕಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ಬಿಜೆಪಿಯಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದೆ- ಸಿ.ಸಿ ಪಾಟೀಲ್

ಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ಬಿಜೆಪಿಯಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದೆ- ಸಿ.ಸಿ ಪಾಟೀಲ್

- Advertisement -
- Advertisement -

ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣ ದಿನೇ ದಿನೇ ರಾಜಕೀಯ ಕೆಲಸರೆರಚಾಟಕ್ಕೆ ಕಾರಣವಾಗುತ್ತಿದ್ದು, ಕಾಂಗ್ರೆಸ್- ಬಿಜೆಪಿ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿಕೊಂಡಿದ್ದಾರೆ. ಇದೇ ವೇಳೆ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನಾಯಕರೇ ತಮಗೆ ಬಿಟ್-ಕಾಯಿನ್ ಹಗರಣದ ಮಾಹಿತಿ ನೀಡುತ್ತಿದ್ದಾರೆ ಎನ್ನುವ ಮೂಲಕ ಕಾಂಗ್ರೆಸ್  ಬಿಜೆಪಿಯಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

“ರಾಜ್ಯದಲ್ಲಿ ಯಾವುದೇ  ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಜನಪರವಾದ ಆಡಳಿತವನ್ನು ನೀಡುತ್ತಾ, ಯಶಸ್ವಿಯಾಗಿ ಶತದಿನಗಳನ್ನು ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತದ ಕಾರ್ಯಸಾಧನೆಯನ್ನು ಕಂಡು ಹತಾಶರಾಗಿ ಕಾಂಗ್ರೆಸ್ ನಾಯಕರು ಬಿಟ್-ಕಾಯಿನ್ ಹೆಸರಿನಲ್ಲಿ ವಿನಾಕಾರಣ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸಲು ಹವಣಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

“ಬಿಟ್-ಕಾಯಿನ್ ವಿಚಾರದಲ್ಲಿ ವಿವಾದ ಸೃಷ್ಟಿಸಿ ಅದರಿಂದ ರಾಜಕೀಯ ದುರ್ಲಾಭ ಪಡೆದುಕೊಳ್ಳಬಹುದು ಎಂಬ ಹಗಲುಗನಸು ಕಾಣುತ್ತಿರುವ ಕಾಂಗ್ರೆಸ್ ಮುಖಂಡರಿಗೆ, ಇದೇ ಬಿಟ್-ಕಾಯಿನ್ ತಿರುಗುಬಾಣವಾಗಿ ಮುಳುವಾಗಲಿದೆ ಎಂಬುದು ಮುಂದಿನ ದಿನಗಳಲ್ಲಿ ಸಾಬೀತಾಗುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

’ಬಿಜೆಪಿ ನಾಯಕರೇ ತಮಗೆ ಬಿಟ್-ಕಾಯಿನ್ ಹಗರಣದ ಮಾಹಿತಿ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ಸಿನ ಮುಖಂಡರೊಬ್ಬರು ಹೇಳುವ ಮೂಲಕ ಈ ತನಿಖೆಯ ಹಾದಿ ತಪ್ಪಿಸಲು ಮತ್ತು ಬಿಜೆಪಿಯಲ್ಲಿ ಹುಳಿ ಹಿಂಡಿ ಒಡಕು ಸೃಷ್ಟಿಸಲು ಹವಣಿ ಸಿರುವುದು ಸ್ಪಷ್ಟವಾಗಿದೆ. ಆದರೆ ಇಂತಹ ಹುನ್ನಾರಗಳ ಆಟ ನಡೆಯುವುದಿಲ್ಲ” ಎಂದು ಸಿ.ಸಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ.

’ಕಾಂಗ್ರೆಸ್ಸಿನ ಹಾಗೆ “ಒಂದು ಮನೆ ಹಲವು ಬಾಗಿಲು” ಎಂಬಂಥ ಪರಿಸ್ಥಿತಿ ನಮ್ಮಲ್ಲಿಲ್ಲ. ಬಿಟ್ ಕಾಯಿನ್ ಹಗರಣ ಈಗಾಗಲೇ ಕೆಲವು ಕಾಂಗ್ರೆಸ್ ಮುಖಂಡರಿಗೆ ಸುತ್ತಿಕೊಂಡಿರುವುದು ಬಹಿರಂಗವಾಗಿದ್ದರೂ, ತಾವೇ ಸ್ವತಃ ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವ ದುಸ್ಸಾಹಸಕ್ಕೆ ಕಾಂಗ್ರೆಸ್ ಮುಖಂಡರು ಇಳಿಯುತ್ತಿರುವ ವರ್ತನೆ ನಿಜಕ್ಕೂ ವಿಚಿತ್ರವಾಗಿದೆ’ ಎಂದಿದ್ದಾರೆ.

’ಹಗರಣದ ಬಗ್ಗೆ ಸೂಕ್ತ ತನಿಖೆಗೆ ಇಡಿ, ಸಿಬಿಐಗೆ ಶಿಫಾರಸು ಮಾಡಿದ್ದೆ, ನಮ್ಮ ಸರ್ಕಾರ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ವತಃ ಮುಖ್ಯಮಂತ್ರಿಯವರೇ ಸ್ಪಷ್ಟಪಡಿಸಿದ್ದಾರೆ.. ಅದರಂತೆ  ಈಗ ತನಿಖೆ ಸರಿಯಾದ ದಿಕ್ಕಿನಲ್ಲಿಯೇ ನಡೆಯುತ್ತಿರುವುದರಿಂದ ಯಾರೂ ರಾಜಕೀಯ ಪ್ರೇರಿತ ಹೇಳಿಕೆ ನೀಡುವುದು ಸರಿಯಲ್ಲ’ ಎಂದು ಸೂಚನೆ ನೀಡಿದ್ದಾರೆ.


ಇದನ್ನೂ ಓದಿ: ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...