Homeಕರ್ನಾಟಕಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ಬಿಜೆಪಿಯಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದೆ- ಸಿ.ಸಿ ಪಾಟೀಲ್

ಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ಬಿಜೆಪಿಯಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದೆ- ಸಿ.ಸಿ ಪಾಟೀಲ್

- Advertisement -
- Advertisement -

ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣ ದಿನೇ ದಿನೇ ರಾಜಕೀಯ ಕೆಲಸರೆರಚಾಟಕ್ಕೆ ಕಾರಣವಾಗುತ್ತಿದ್ದು, ಕಾಂಗ್ರೆಸ್- ಬಿಜೆಪಿ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿಕೊಂಡಿದ್ದಾರೆ. ಇದೇ ವೇಳೆ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನಾಯಕರೇ ತಮಗೆ ಬಿಟ್-ಕಾಯಿನ್ ಹಗರಣದ ಮಾಹಿತಿ ನೀಡುತ್ತಿದ್ದಾರೆ ಎನ್ನುವ ಮೂಲಕ ಕಾಂಗ್ರೆಸ್  ಬಿಜೆಪಿಯಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

“ರಾಜ್ಯದಲ್ಲಿ ಯಾವುದೇ  ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಜನಪರವಾದ ಆಡಳಿತವನ್ನು ನೀಡುತ್ತಾ, ಯಶಸ್ವಿಯಾಗಿ ಶತದಿನಗಳನ್ನು ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತದ ಕಾರ್ಯಸಾಧನೆಯನ್ನು ಕಂಡು ಹತಾಶರಾಗಿ ಕಾಂಗ್ರೆಸ್ ನಾಯಕರು ಬಿಟ್-ಕಾಯಿನ್ ಹೆಸರಿನಲ್ಲಿ ವಿನಾಕಾರಣ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸಲು ಹವಣಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

“ಬಿಟ್-ಕಾಯಿನ್ ವಿಚಾರದಲ್ಲಿ ವಿವಾದ ಸೃಷ್ಟಿಸಿ ಅದರಿಂದ ರಾಜಕೀಯ ದುರ್ಲಾಭ ಪಡೆದುಕೊಳ್ಳಬಹುದು ಎಂಬ ಹಗಲುಗನಸು ಕಾಣುತ್ತಿರುವ ಕಾಂಗ್ರೆಸ್ ಮುಖಂಡರಿಗೆ, ಇದೇ ಬಿಟ್-ಕಾಯಿನ್ ತಿರುಗುಬಾಣವಾಗಿ ಮುಳುವಾಗಲಿದೆ ಎಂಬುದು ಮುಂದಿನ ದಿನಗಳಲ್ಲಿ ಸಾಬೀತಾಗುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

’ಬಿಜೆಪಿ ನಾಯಕರೇ ತಮಗೆ ಬಿಟ್-ಕಾಯಿನ್ ಹಗರಣದ ಮಾಹಿತಿ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ಸಿನ ಮುಖಂಡರೊಬ್ಬರು ಹೇಳುವ ಮೂಲಕ ಈ ತನಿಖೆಯ ಹಾದಿ ತಪ್ಪಿಸಲು ಮತ್ತು ಬಿಜೆಪಿಯಲ್ಲಿ ಹುಳಿ ಹಿಂಡಿ ಒಡಕು ಸೃಷ್ಟಿಸಲು ಹವಣಿ ಸಿರುವುದು ಸ್ಪಷ್ಟವಾಗಿದೆ. ಆದರೆ ಇಂತಹ ಹುನ್ನಾರಗಳ ಆಟ ನಡೆಯುವುದಿಲ್ಲ” ಎಂದು ಸಿ.ಸಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ.

’ಕಾಂಗ್ರೆಸ್ಸಿನ ಹಾಗೆ “ಒಂದು ಮನೆ ಹಲವು ಬಾಗಿಲು” ಎಂಬಂಥ ಪರಿಸ್ಥಿತಿ ನಮ್ಮಲ್ಲಿಲ್ಲ. ಬಿಟ್ ಕಾಯಿನ್ ಹಗರಣ ಈಗಾಗಲೇ ಕೆಲವು ಕಾಂಗ್ರೆಸ್ ಮುಖಂಡರಿಗೆ ಸುತ್ತಿಕೊಂಡಿರುವುದು ಬಹಿರಂಗವಾಗಿದ್ದರೂ, ತಾವೇ ಸ್ವತಃ ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವ ದುಸ್ಸಾಹಸಕ್ಕೆ ಕಾಂಗ್ರೆಸ್ ಮುಖಂಡರು ಇಳಿಯುತ್ತಿರುವ ವರ್ತನೆ ನಿಜಕ್ಕೂ ವಿಚಿತ್ರವಾಗಿದೆ’ ಎಂದಿದ್ದಾರೆ.

’ಹಗರಣದ ಬಗ್ಗೆ ಸೂಕ್ತ ತನಿಖೆಗೆ ಇಡಿ, ಸಿಬಿಐಗೆ ಶಿಫಾರಸು ಮಾಡಿದ್ದೆ, ನಮ್ಮ ಸರ್ಕಾರ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ವತಃ ಮುಖ್ಯಮಂತ್ರಿಯವರೇ ಸ್ಪಷ್ಟಪಡಿಸಿದ್ದಾರೆ.. ಅದರಂತೆ  ಈಗ ತನಿಖೆ ಸರಿಯಾದ ದಿಕ್ಕಿನಲ್ಲಿಯೇ ನಡೆಯುತ್ತಿರುವುದರಿಂದ ಯಾರೂ ರಾಜಕೀಯ ಪ್ರೇರಿತ ಹೇಳಿಕೆ ನೀಡುವುದು ಸರಿಯಲ್ಲ’ ಎಂದು ಸೂಚನೆ ನೀಡಿದ್ದಾರೆ.


ಇದನ್ನೂ ಓದಿ: ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...