Homeಕರ್ನಾಟಕವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ" ಎನ್ನುತ್ತಾರೆ ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌.

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿ ವರ್ಷ ಮುಗಿದರೂ ಈ ಸರ್ಕಾರ ನೆನಪಿಸಿಕೊಂಡಂತಿಲ್ಲ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಸಮಯ ಮತ್ತು ಹಣವಿಲ್ಲವಂತೆ. ಅದು ಎಷ್ಟು ಎಂದರೆ ಕೇವಲ ಐದು ಲಕ್ಷ…!

ಪ್ರತಿ ವರ್ಷ ದೇವರಾಜು ಅರಸುರವರ ಜನ್ಮದಿನವಾದ ಆಗಸ್ಟ್‌ 20ರಂದು ಸರ್ಕಾರ ಈ ಪ್ರಶಸ್ತಿಯನ್ನು ನೀಡುತ್ತಿತ್ತು. ಕಳೆದ ಬಾರಿ ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಸಮಿತಿ ಸಾಮಾಜಿಕ ಹೋರಾಟಗಾರ ಶಿವಾಜಿ ಕಾಗುಣಿಕಾರರಿನ್ನು ಆರಿಸಿತ್ತು. ಅಟಲ್‌ ಬಿಹಾರಿ ವಾಜಪೇಯಿಯವರು ನಿಧನದ ಕಾರಣದಿಂದ ಡಿಸೆಂಬರ್‌ನಲ್ಲಿ ಪ್ರಶಸ್ತಿ ನೀಡಲಾಗಿತ್ತು. ಈ ಮೊದಲು ಬಿ.ಎ ಮೋಹಿದ್ದೀನ್, ದಿನೇಶ್ ಅಮೀನ್ ಮಟ್ಟು, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮಹತ್ವದ ಸಾಧಕರಿಗೆ ಈ ಪ್ರಶಸ್ತಿ ಒಲಿದಿದೆ.

ಈ ಬಾರಿ ಆಗಸ್ಟ್‌ ಕಳೆದು ನವೆಂಬರ್‌ ಮುಗಿಯುತ್ತಾ ಬಂದಿದೆ. ಇನ್ನೊಂದು ತಿಂಗಳಲ್ಲಿ ಈ ವರ್ಷವೆ ಮುಗಿದುಬಿಡಲಿದೆ. ಆದರೂ ಸರ್ಕಾರ ಪ್ರಶಸ್ತಿ ನೀಡುವುದನ್ನು ಮರೆತಿದೆಯೋ ಅಥವಾ ಬೇಕಂತಲೇ ವಿಳಂಬ ಮಾಡುತ್ತಿದೆಯೋ?

ಈ ವರ್ಷ ಜುಲೈ 26 ರಂದೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತಲ್ಲದೇ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾದರು. ಆಗಸ್ಟ್‌ ಅಂತ್ಯದೊಳಗೆ ಸಚಿವ ಸಂಪುಟವನ್ನು ರಚಿಸಿದರು. ಸೆಪ್ಟಂಬರ್‌, ಅಕ್ಟೋಬರ್‌, ನವೆಂಬರ್‌ ಮೂರು ತಿಂಗಳು ಕಳೆದರೂ ಅವರ್‍ಯಾರು ಈ ಪ್ರಶಸ್ತಿಯ ಬಗ್ಗೆ ಸೊಲೆತ್ತಿಲ್ಲ.

ಈ ಕುರಿತು ಮಾಹಿತಿ ಪಡೆಯಲು ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌ರವರನ್ನು ಸಂಪರ್ಕಿಸಿಲಾಯಿತು. ಆಗ ಅವರು “ಕುವೆಂಪು ವಿ.ವಿಯ ನಿವೃತ್ತ ಕುಲಪತಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ” ಎನ್ನುತ್ತಾರೆ.

ಸರ್ಕಾರದ ಈ ಧೋರಣೆಯು ಭೂಸುಧಾರಣೆಯ ಶಿಲ್ಪಿ, ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಎಂದೇ ಪ್ರಖ್ಯಾತರಾದ ದೇವರಾಜು ಅರಸುರವರ ಬಗ್ಗೆ ಗೌರವವಿಲ್ಲವೆಂಬುದನ್ನು ತೋರಿಸುತ್ತದೆ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಂಬಂಧಪಟ್ಟ ಹೋರಾಟಗಾರನ್ನು ಮಾತನಾಡಿಸಿತು. ಅವರು ಏನು ಹೇಳಿದ್ದಾರೆ ಇಲ್ಲಿದೆ ನೋಡಿ.

ಡಾ. ಸಿ.ಎಸ್‌ ದ್ವಾರಕನಾಥ್‌, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು.

“ನೆರೆಯ ಕಾರಣ ಹೇಳಿ ಪ್ರಶಸ್ತಿ ನೀಡುವುದನ್ನು ತಪ್ಪಿಸುವುದಾದರೆ ತಪ್ಪಿಸಲಿ. ಅದರೆ ಬಹಳಷ್ಟು ಪ್ರಶಸ್ತಿಗಳನ್ನು ಈಗಾಗಲೇ ಪ್ರಕಟ ಮಾಡಿ, ದೇವರಾಜ್ ಅರಸ್ ಅವರ ಪ್ರಶಸ್ತಿಯನ್ನು ಮಾತ್ರ ತಪ್ಪಿಸುತ್ತಾರೆ ಅಂದರೆ ಏನರ್ಥ..? ಮೊನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಿದರು. ಆದರೆ ದೇವರಾಜ್‌ ಅರಸ್ ಅವರ ಪ್ರಶಸ್ತಿ ಮಾತ್ರ ತಪ್ಪಿಸಿರುವುದರ ಹಿಂದಿನ ಹುನ್ನಾರವಾದರೂ ಏನು..? ಎಲ್ಲಾ ಪ್ರಶಸ್ತಿಗಳನ್ನು ನೀಡಿ, ಕೇವಲ ಅರಸ್ ಅವರ ಪ್ರಶಸ್ತಿ ಮಾತ್ರ ನೀಡದಿರುವುದು ಆಶ್ಚರ್ಯಕರ ಸಂಗತಿಯಾಗಿದೆ.

==========

ಕೆ.ಎಸ್‌ ಶಿವರಾಂ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ, ಮೈಸೂರು.

“ದೇವರಾಜ್‌ ಅರಸ್‌ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ತಳ ಸಮುದಾಯದವರಿಗೆ ಅನೇಕ ಸವಲತ್ತುಗಳನ್ನು ನೀಡಿ, ಮುಖ್ಯವಾಹಿನಿಗೆ ತಂದಂತವರು ಅರಸ್. ಆದರೆ ಬಿಜೆಪಿಗೆ ಸಮಾನತೆ, ಮತ್ತು ಸಾಮಾಜಿಕ ನ್ಯಾಯ ಬೇಕಾಗಿಲ್ಲ. ಬಿಜೆಪಿ ಸರ್ಕಾರ ಹಿಂದುತ್ವ, ಕೋಮುಶಕ್ತಿಗಳನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದಿದೆ. ಹಾಗಾಗಿಯೇ ಹಿಂದುಳಿದ ವರ್ಗದ ಹಿತಾಸಕ್ತಿಗೆ ದುಡಿದವರ ಬಗ್ಗೆ ಬಿಜೆಪಿ ತಾತ್ಸಾರ ಮಾಡುತ್ತಿದೆ. ಸಾವರ್ಕರ್‌ ಅಂತವರನ್ನು ವಿಜೃಂಭಿಸಿ, ಸಾಮಾಜಿಕ ನ್ಯಾಯದ ಪರ ದುಡಿದ ಅಂಬೇಡ್ಕರ್‌ ಮತ್ತು ಅರಸ್‌ರಂತವರನ್ನು ಜನಮಾನಸದಿಂದ ತೆಗೆದು ಹಾಕಲು ಬಿಜೆಪಿ ಸರ್ಕಾರ ಹೀಗೆ ಮಾಡುತ್ತಿದೆ. ಆರ್‌ಎಸ್‌ಎಸ್‌ನ್ನು ವಿಜೃಂಭಿಸಲು ಹೀಗೆಲ್ಲಾ ಮಾಡ್ತಿದ್ದಾರೆ. ಇದೆಲ್ಲಾ ಬಿಜೆಪಿ ರಚಿಸಿರುವ ಹುನ್ನಾರ. ಈ ಕೂಡಲೇ ದೇವರಾಜ್‌ ಅರಸ್‌ ಪ್ರಶಸ್ತಿ ಪ್ರಕಟ ಮಾಡಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ.

================

ರಮೇಶ್‌ ಅಭಿಮನ್ಯು, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರು ಮತ್ತು ಪತ್ರಕರ್ತರು

“ದೇವರಾಜ್‌ ಅರಸ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋದ ಸಿಎಂ ಯಡಿಯೂರಪ್ಪನವರು ಪ್ರಶಸ್ತಿ ಬಗ್ಗೆ ಮಾತನಾಡಲೇ ಇಲ್ಲ. ಹಿಂದುಳಿದ ಹಾಗೂ ತಳ ಸಮುದಾಯದ ನಾಯಕನನ್ನು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಇದನ್ನು ನಾವು ಖಂಡತುಂಡವಾಗಿ ಖಂಡಿಸುತ್ತೇವೆ. ಬಿಜೆಪಿ ಸರ್ಕಾರ ಕೇವಲ ಅಧಿಕಾರ, ಆಪರೇಷನ್ ಕಮಲ ಮಾಡುವುದರಲ್ಲಿ ಬ್ಯುಸಿಯಾಗಿದೆ. ಹಿಂದುಳಿದ ಸಮುದಾಯಗಳನ್ನು ಮರೆತಿದ್ದಾರೆ. ದೇವರಾಜ್‌ ಅರಸ್ ಅವರಂತಹ ಮಹಾನ್‌ ನಾಯಕನನ್ನು ಆದರ್ಶವಾಗಿಟ್ಟುಕೊಂಡು ಬಿಜೆಪಿ ಅಧಿಕಾರ ನಡೆಸಬೇಕಿತ್ತು. ಆದರೆ ಅಂತಹ ನಾಯಕನಿಗೆ ಬಿಜೆಪಿ ಅವಮಾನ ಮಾಡಿದೆ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...