Homeಕರ್ನಾಟಕವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ" ಎನ್ನುತ್ತಾರೆ ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌.

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿ ವರ್ಷ ಮುಗಿದರೂ ಈ ಸರ್ಕಾರ ನೆನಪಿಸಿಕೊಂಡಂತಿಲ್ಲ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಸಮಯ ಮತ್ತು ಹಣವಿಲ್ಲವಂತೆ. ಅದು ಎಷ್ಟು ಎಂದರೆ ಕೇವಲ ಐದು ಲಕ್ಷ…!

ಪ್ರತಿ ವರ್ಷ ದೇವರಾಜು ಅರಸುರವರ ಜನ್ಮದಿನವಾದ ಆಗಸ್ಟ್‌ 20ರಂದು ಸರ್ಕಾರ ಈ ಪ್ರಶಸ್ತಿಯನ್ನು ನೀಡುತ್ತಿತ್ತು. ಕಳೆದ ಬಾರಿ ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಸಮಿತಿ ಸಾಮಾಜಿಕ ಹೋರಾಟಗಾರ ಶಿವಾಜಿ ಕಾಗುಣಿಕಾರರಿನ್ನು ಆರಿಸಿತ್ತು. ಅಟಲ್‌ ಬಿಹಾರಿ ವಾಜಪೇಯಿಯವರು ನಿಧನದ ಕಾರಣದಿಂದ ಡಿಸೆಂಬರ್‌ನಲ್ಲಿ ಪ್ರಶಸ್ತಿ ನೀಡಲಾಗಿತ್ತು. ಈ ಮೊದಲು ಬಿ.ಎ ಮೋಹಿದ್ದೀನ್, ದಿನೇಶ್ ಅಮೀನ್ ಮಟ್ಟು, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮಹತ್ವದ ಸಾಧಕರಿಗೆ ಈ ಪ್ರಶಸ್ತಿ ಒಲಿದಿದೆ.

ಈ ಬಾರಿ ಆಗಸ್ಟ್‌ ಕಳೆದು ನವೆಂಬರ್‌ ಮುಗಿಯುತ್ತಾ ಬಂದಿದೆ. ಇನ್ನೊಂದು ತಿಂಗಳಲ್ಲಿ ಈ ವರ್ಷವೆ ಮುಗಿದುಬಿಡಲಿದೆ. ಆದರೂ ಸರ್ಕಾರ ಪ್ರಶಸ್ತಿ ನೀಡುವುದನ್ನು ಮರೆತಿದೆಯೋ ಅಥವಾ ಬೇಕಂತಲೇ ವಿಳಂಬ ಮಾಡುತ್ತಿದೆಯೋ?

ಈ ವರ್ಷ ಜುಲೈ 26 ರಂದೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತಲ್ಲದೇ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾದರು. ಆಗಸ್ಟ್‌ ಅಂತ್ಯದೊಳಗೆ ಸಚಿವ ಸಂಪುಟವನ್ನು ರಚಿಸಿದರು. ಸೆಪ್ಟಂಬರ್‌, ಅಕ್ಟೋಬರ್‌, ನವೆಂಬರ್‌ ಮೂರು ತಿಂಗಳು ಕಳೆದರೂ ಅವರ್‍ಯಾರು ಈ ಪ್ರಶಸ್ತಿಯ ಬಗ್ಗೆ ಸೊಲೆತ್ತಿಲ್ಲ.

ಈ ಕುರಿತು ಮಾಹಿತಿ ಪಡೆಯಲು ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌ರವರನ್ನು ಸಂಪರ್ಕಿಸಿಲಾಯಿತು. ಆಗ ಅವರು “ಕುವೆಂಪು ವಿ.ವಿಯ ನಿವೃತ್ತ ಕುಲಪತಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ” ಎನ್ನುತ್ತಾರೆ.

ಸರ್ಕಾರದ ಈ ಧೋರಣೆಯು ಭೂಸುಧಾರಣೆಯ ಶಿಲ್ಪಿ, ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಎಂದೇ ಪ್ರಖ್ಯಾತರಾದ ದೇವರಾಜು ಅರಸುರವರ ಬಗ್ಗೆ ಗೌರವವಿಲ್ಲವೆಂಬುದನ್ನು ತೋರಿಸುತ್ತದೆ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಂಬಂಧಪಟ್ಟ ಹೋರಾಟಗಾರನ್ನು ಮಾತನಾಡಿಸಿತು. ಅವರು ಏನು ಹೇಳಿದ್ದಾರೆ ಇಲ್ಲಿದೆ ನೋಡಿ.

ಡಾ. ಸಿ.ಎಸ್‌ ದ್ವಾರಕನಾಥ್‌, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು.

“ನೆರೆಯ ಕಾರಣ ಹೇಳಿ ಪ್ರಶಸ್ತಿ ನೀಡುವುದನ್ನು ತಪ್ಪಿಸುವುದಾದರೆ ತಪ್ಪಿಸಲಿ. ಅದರೆ ಬಹಳಷ್ಟು ಪ್ರಶಸ್ತಿಗಳನ್ನು ಈಗಾಗಲೇ ಪ್ರಕಟ ಮಾಡಿ, ದೇವರಾಜ್ ಅರಸ್ ಅವರ ಪ್ರಶಸ್ತಿಯನ್ನು ಮಾತ್ರ ತಪ್ಪಿಸುತ್ತಾರೆ ಅಂದರೆ ಏನರ್ಥ..? ಮೊನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಿದರು. ಆದರೆ ದೇವರಾಜ್‌ ಅರಸ್ ಅವರ ಪ್ರಶಸ್ತಿ ಮಾತ್ರ ತಪ್ಪಿಸಿರುವುದರ ಹಿಂದಿನ ಹುನ್ನಾರವಾದರೂ ಏನು..? ಎಲ್ಲಾ ಪ್ರಶಸ್ತಿಗಳನ್ನು ನೀಡಿ, ಕೇವಲ ಅರಸ್ ಅವರ ಪ್ರಶಸ್ತಿ ಮಾತ್ರ ನೀಡದಿರುವುದು ಆಶ್ಚರ್ಯಕರ ಸಂಗತಿಯಾಗಿದೆ.

==========

ಕೆ.ಎಸ್‌ ಶಿವರಾಂ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ, ಮೈಸೂರು.

“ದೇವರಾಜ್‌ ಅರಸ್‌ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ತಳ ಸಮುದಾಯದವರಿಗೆ ಅನೇಕ ಸವಲತ್ತುಗಳನ್ನು ನೀಡಿ, ಮುಖ್ಯವಾಹಿನಿಗೆ ತಂದಂತವರು ಅರಸ್. ಆದರೆ ಬಿಜೆಪಿಗೆ ಸಮಾನತೆ, ಮತ್ತು ಸಾಮಾಜಿಕ ನ್ಯಾಯ ಬೇಕಾಗಿಲ್ಲ. ಬಿಜೆಪಿ ಸರ್ಕಾರ ಹಿಂದುತ್ವ, ಕೋಮುಶಕ್ತಿಗಳನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದಿದೆ. ಹಾಗಾಗಿಯೇ ಹಿಂದುಳಿದ ವರ್ಗದ ಹಿತಾಸಕ್ತಿಗೆ ದುಡಿದವರ ಬಗ್ಗೆ ಬಿಜೆಪಿ ತಾತ್ಸಾರ ಮಾಡುತ್ತಿದೆ. ಸಾವರ್ಕರ್‌ ಅಂತವರನ್ನು ವಿಜೃಂಭಿಸಿ, ಸಾಮಾಜಿಕ ನ್ಯಾಯದ ಪರ ದುಡಿದ ಅಂಬೇಡ್ಕರ್‌ ಮತ್ತು ಅರಸ್‌ರಂತವರನ್ನು ಜನಮಾನಸದಿಂದ ತೆಗೆದು ಹಾಕಲು ಬಿಜೆಪಿ ಸರ್ಕಾರ ಹೀಗೆ ಮಾಡುತ್ತಿದೆ. ಆರ್‌ಎಸ್‌ಎಸ್‌ನ್ನು ವಿಜೃಂಭಿಸಲು ಹೀಗೆಲ್ಲಾ ಮಾಡ್ತಿದ್ದಾರೆ. ಇದೆಲ್ಲಾ ಬಿಜೆಪಿ ರಚಿಸಿರುವ ಹುನ್ನಾರ. ಈ ಕೂಡಲೇ ದೇವರಾಜ್‌ ಅರಸ್‌ ಪ್ರಶಸ್ತಿ ಪ್ರಕಟ ಮಾಡಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ.

================

ರಮೇಶ್‌ ಅಭಿಮನ್ಯು, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರು ಮತ್ತು ಪತ್ರಕರ್ತರು

“ದೇವರಾಜ್‌ ಅರಸ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋದ ಸಿಎಂ ಯಡಿಯೂರಪ್ಪನವರು ಪ್ರಶಸ್ತಿ ಬಗ್ಗೆ ಮಾತನಾಡಲೇ ಇಲ್ಲ. ಹಿಂದುಳಿದ ಹಾಗೂ ತಳ ಸಮುದಾಯದ ನಾಯಕನನ್ನು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಇದನ್ನು ನಾವು ಖಂಡತುಂಡವಾಗಿ ಖಂಡಿಸುತ್ತೇವೆ. ಬಿಜೆಪಿ ಸರ್ಕಾರ ಕೇವಲ ಅಧಿಕಾರ, ಆಪರೇಷನ್ ಕಮಲ ಮಾಡುವುದರಲ್ಲಿ ಬ್ಯುಸಿಯಾಗಿದೆ. ಹಿಂದುಳಿದ ಸಮುದಾಯಗಳನ್ನು ಮರೆತಿದ್ದಾರೆ. ದೇವರಾಜ್‌ ಅರಸ್ ಅವರಂತಹ ಮಹಾನ್‌ ನಾಯಕನನ್ನು ಆದರ್ಶವಾಗಿಟ್ಟುಕೊಂಡು ಬಿಜೆಪಿ ಅಧಿಕಾರ ನಡೆಸಬೇಕಿತ್ತು. ಆದರೆ ಅಂತಹ ನಾಯಕನಿಗೆ ಬಿಜೆಪಿ ಅವಮಾನ ಮಾಡಿದೆ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...