Homeಕರ್ನಾಟಕವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ" ಎನ್ನುತ್ತಾರೆ ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌.

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿ ವರ್ಷ ಮುಗಿದರೂ ಈ ಸರ್ಕಾರ ನೆನಪಿಸಿಕೊಂಡಂತಿಲ್ಲ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಸಮಯ ಮತ್ತು ಹಣವಿಲ್ಲವಂತೆ. ಅದು ಎಷ್ಟು ಎಂದರೆ ಕೇವಲ ಐದು ಲಕ್ಷ…!

ಪ್ರತಿ ವರ್ಷ ದೇವರಾಜು ಅರಸುರವರ ಜನ್ಮದಿನವಾದ ಆಗಸ್ಟ್‌ 20ರಂದು ಸರ್ಕಾರ ಈ ಪ್ರಶಸ್ತಿಯನ್ನು ನೀಡುತ್ತಿತ್ತು. ಕಳೆದ ಬಾರಿ ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಸಮಿತಿ ಸಾಮಾಜಿಕ ಹೋರಾಟಗಾರ ಶಿವಾಜಿ ಕಾಗುಣಿಕಾರರಿನ್ನು ಆರಿಸಿತ್ತು. ಅಟಲ್‌ ಬಿಹಾರಿ ವಾಜಪೇಯಿಯವರು ನಿಧನದ ಕಾರಣದಿಂದ ಡಿಸೆಂಬರ್‌ನಲ್ಲಿ ಪ್ರಶಸ್ತಿ ನೀಡಲಾಗಿತ್ತು. ಈ ಮೊದಲು ಬಿ.ಎ ಮೋಹಿದ್ದೀನ್, ದಿನೇಶ್ ಅಮೀನ್ ಮಟ್ಟು, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮಹತ್ವದ ಸಾಧಕರಿಗೆ ಈ ಪ್ರಶಸ್ತಿ ಒಲಿದಿದೆ.

ಈ ಬಾರಿ ಆಗಸ್ಟ್‌ ಕಳೆದು ನವೆಂಬರ್‌ ಮುಗಿಯುತ್ತಾ ಬಂದಿದೆ. ಇನ್ನೊಂದು ತಿಂಗಳಲ್ಲಿ ಈ ವರ್ಷವೆ ಮುಗಿದುಬಿಡಲಿದೆ. ಆದರೂ ಸರ್ಕಾರ ಪ್ರಶಸ್ತಿ ನೀಡುವುದನ್ನು ಮರೆತಿದೆಯೋ ಅಥವಾ ಬೇಕಂತಲೇ ವಿಳಂಬ ಮಾಡುತ್ತಿದೆಯೋ?

ಈ ವರ್ಷ ಜುಲೈ 26 ರಂದೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತಲ್ಲದೇ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾದರು. ಆಗಸ್ಟ್‌ ಅಂತ್ಯದೊಳಗೆ ಸಚಿವ ಸಂಪುಟವನ್ನು ರಚಿಸಿದರು. ಸೆಪ್ಟಂಬರ್‌, ಅಕ್ಟೋಬರ್‌, ನವೆಂಬರ್‌ ಮೂರು ತಿಂಗಳು ಕಳೆದರೂ ಅವರ್‍ಯಾರು ಈ ಪ್ರಶಸ್ತಿಯ ಬಗ್ಗೆ ಸೊಲೆತ್ತಿಲ್ಲ.

ಈ ಕುರಿತು ಮಾಹಿತಿ ಪಡೆಯಲು ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌ರವರನ್ನು ಸಂಪರ್ಕಿಸಿಲಾಯಿತು. ಆಗ ಅವರು “ಕುವೆಂಪು ವಿ.ವಿಯ ನಿವೃತ್ತ ಕುಲಪತಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ” ಎನ್ನುತ್ತಾರೆ.

ಸರ್ಕಾರದ ಈ ಧೋರಣೆಯು ಭೂಸುಧಾರಣೆಯ ಶಿಲ್ಪಿ, ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಎಂದೇ ಪ್ರಖ್ಯಾತರಾದ ದೇವರಾಜು ಅರಸುರವರ ಬಗ್ಗೆ ಗೌರವವಿಲ್ಲವೆಂಬುದನ್ನು ತೋರಿಸುತ್ತದೆ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಂಬಂಧಪಟ್ಟ ಹೋರಾಟಗಾರನ್ನು ಮಾತನಾಡಿಸಿತು. ಅವರು ಏನು ಹೇಳಿದ್ದಾರೆ ಇಲ್ಲಿದೆ ನೋಡಿ.

ಡಾ. ಸಿ.ಎಸ್‌ ದ್ವಾರಕನಾಥ್‌, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು.

“ನೆರೆಯ ಕಾರಣ ಹೇಳಿ ಪ್ರಶಸ್ತಿ ನೀಡುವುದನ್ನು ತಪ್ಪಿಸುವುದಾದರೆ ತಪ್ಪಿಸಲಿ. ಅದರೆ ಬಹಳಷ್ಟು ಪ್ರಶಸ್ತಿಗಳನ್ನು ಈಗಾಗಲೇ ಪ್ರಕಟ ಮಾಡಿ, ದೇವರಾಜ್ ಅರಸ್ ಅವರ ಪ್ರಶಸ್ತಿಯನ್ನು ಮಾತ್ರ ತಪ್ಪಿಸುತ್ತಾರೆ ಅಂದರೆ ಏನರ್ಥ..? ಮೊನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಿದರು. ಆದರೆ ದೇವರಾಜ್‌ ಅರಸ್ ಅವರ ಪ್ರಶಸ್ತಿ ಮಾತ್ರ ತಪ್ಪಿಸಿರುವುದರ ಹಿಂದಿನ ಹುನ್ನಾರವಾದರೂ ಏನು..? ಎಲ್ಲಾ ಪ್ರಶಸ್ತಿಗಳನ್ನು ನೀಡಿ, ಕೇವಲ ಅರಸ್ ಅವರ ಪ್ರಶಸ್ತಿ ಮಾತ್ರ ನೀಡದಿರುವುದು ಆಶ್ಚರ್ಯಕರ ಸಂಗತಿಯಾಗಿದೆ.

==========

ಕೆ.ಎಸ್‌ ಶಿವರಾಂ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ, ಮೈಸೂರು.

“ದೇವರಾಜ್‌ ಅರಸ್‌ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ತಳ ಸಮುದಾಯದವರಿಗೆ ಅನೇಕ ಸವಲತ್ತುಗಳನ್ನು ನೀಡಿ, ಮುಖ್ಯವಾಹಿನಿಗೆ ತಂದಂತವರು ಅರಸ್. ಆದರೆ ಬಿಜೆಪಿಗೆ ಸಮಾನತೆ, ಮತ್ತು ಸಾಮಾಜಿಕ ನ್ಯಾಯ ಬೇಕಾಗಿಲ್ಲ. ಬಿಜೆಪಿ ಸರ್ಕಾರ ಹಿಂದುತ್ವ, ಕೋಮುಶಕ್ತಿಗಳನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದಿದೆ. ಹಾಗಾಗಿಯೇ ಹಿಂದುಳಿದ ವರ್ಗದ ಹಿತಾಸಕ್ತಿಗೆ ದುಡಿದವರ ಬಗ್ಗೆ ಬಿಜೆಪಿ ತಾತ್ಸಾರ ಮಾಡುತ್ತಿದೆ. ಸಾವರ್ಕರ್‌ ಅಂತವರನ್ನು ವಿಜೃಂಭಿಸಿ, ಸಾಮಾಜಿಕ ನ್ಯಾಯದ ಪರ ದುಡಿದ ಅಂಬೇಡ್ಕರ್‌ ಮತ್ತು ಅರಸ್‌ರಂತವರನ್ನು ಜನಮಾನಸದಿಂದ ತೆಗೆದು ಹಾಕಲು ಬಿಜೆಪಿ ಸರ್ಕಾರ ಹೀಗೆ ಮಾಡುತ್ತಿದೆ. ಆರ್‌ಎಸ್‌ಎಸ್‌ನ್ನು ವಿಜೃಂಭಿಸಲು ಹೀಗೆಲ್ಲಾ ಮಾಡ್ತಿದ್ದಾರೆ. ಇದೆಲ್ಲಾ ಬಿಜೆಪಿ ರಚಿಸಿರುವ ಹುನ್ನಾರ. ಈ ಕೂಡಲೇ ದೇವರಾಜ್‌ ಅರಸ್‌ ಪ್ರಶಸ್ತಿ ಪ್ರಕಟ ಮಾಡಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ.

================

ರಮೇಶ್‌ ಅಭಿಮನ್ಯು, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರು ಮತ್ತು ಪತ್ರಕರ್ತರು

“ದೇವರಾಜ್‌ ಅರಸ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋದ ಸಿಎಂ ಯಡಿಯೂರಪ್ಪನವರು ಪ್ರಶಸ್ತಿ ಬಗ್ಗೆ ಮಾತನಾಡಲೇ ಇಲ್ಲ. ಹಿಂದುಳಿದ ಹಾಗೂ ತಳ ಸಮುದಾಯದ ನಾಯಕನನ್ನು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಇದನ್ನು ನಾವು ಖಂಡತುಂಡವಾಗಿ ಖಂಡಿಸುತ್ತೇವೆ. ಬಿಜೆಪಿ ಸರ್ಕಾರ ಕೇವಲ ಅಧಿಕಾರ, ಆಪರೇಷನ್ ಕಮಲ ಮಾಡುವುದರಲ್ಲಿ ಬ್ಯುಸಿಯಾಗಿದೆ. ಹಿಂದುಳಿದ ಸಮುದಾಯಗಳನ್ನು ಮರೆತಿದ್ದಾರೆ. ದೇವರಾಜ್‌ ಅರಸ್ ಅವರಂತಹ ಮಹಾನ್‌ ನಾಯಕನನ್ನು ಆದರ್ಶವಾಗಿಟ್ಟುಕೊಂಡು ಬಿಜೆಪಿ ಅಧಿಕಾರ ನಡೆಸಬೇಕಿತ್ತು. ಆದರೆ ಅಂತಹ ನಾಯಕನಿಗೆ ಬಿಜೆಪಿ ಅವಮಾನ ಮಾಡಿದೆ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...