Homeಕರ್ನಾಟಕವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ" ಎನ್ನುತ್ತಾರೆ ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌.

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿ ವರ್ಷ ಮುಗಿದರೂ ಈ ಸರ್ಕಾರ ನೆನಪಿಸಿಕೊಂಡಂತಿಲ್ಲ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಸಮಯ ಮತ್ತು ಹಣವಿಲ್ಲವಂತೆ. ಅದು ಎಷ್ಟು ಎಂದರೆ ಕೇವಲ ಐದು ಲಕ್ಷ…!

ಪ್ರತಿ ವರ್ಷ ದೇವರಾಜು ಅರಸುರವರ ಜನ್ಮದಿನವಾದ ಆಗಸ್ಟ್‌ 20ರಂದು ಸರ್ಕಾರ ಈ ಪ್ರಶಸ್ತಿಯನ್ನು ನೀಡುತ್ತಿತ್ತು. ಕಳೆದ ಬಾರಿ ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಸಮಿತಿ ಸಾಮಾಜಿಕ ಹೋರಾಟಗಾರ ಶಿವಾಜಿ ಕಾಗುಣಿಕಾರರಿನ್ನು ಆರಿಸಿತ್ತು. ಅಟಲ್‌ ಬಿಹಾರಿ ವಾಜಪೇಯಿಯವರು ನಿಧನದ ಕಾರಣದಿಂದ ಡಿಸೆಂಬರ್‌ನಲ್ಲಿ ಪ್ರಶಸ್ತಿ ನೀಡಲಾಗಿತ್ತು. ಈ ಮೊದಲು ಬಿ.ಎ ಮೋಹಿದ್ದೀನ್, ದಿನೇಶ್ ಅಮೀನ್ ಮಟ್ಟು, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮಹತ್ವದ ಸಾಧಕರಿಗೆ ಈ ಪ್ರಶಸ್ತಿ ಒಲಿದಿದೆ.

ಈ ಬಾರಿ ಆಗಸ್ಟ್‌ ಕಳೆದು ನವೆಂಬರ್‌ ಮುಗಿಯುತ್ತಾ ಬಂದಿದೆ. ಇನ್ನೊಂದು ತಿಂಗಳಲ್ಲಿ ಈ ವರ್ಷವೆ ಮುಗಿದುಬಿಡಲಿದೆ. ಆದರೂ ಸರ್ಕಾರ ಪ್ರಶಸ್ತಿ ನೀಡುವುದನ್ನು ಮರೆತಿದೆಯೋ ಅಥವಾ ಬೇಕಂತಲೇ ವಿಳಂಬ ಮಾಡುತ್ತಿದೆಯೋ?

ಈ ವರ್ಷ ಜುಲೈ 26 ರಂದೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತಲ್ಲದೇ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾದರು. ಆಗಸ್ಟ್‌ ಅಂತ್ಯದೊಳಗೆ ಸಚಿವ ಸಂಪುಟವನ್ನು ರಚಿಸಿದರು. ಸೆಪ್ಟಂಬರ್‌, ಅಕ್ಟೋಬರ್‌, ನವೆಂಬರ್‌ ಮೂರು ತಿಂಗಳು ಕಳೆದರೂ ಅವರ್‍ಯಾರು ಈ ಪ್ರಶಸ್ತಿಯ ಬಗ್ಗೆ ಸೊಲೆತ್ತಿಲ್ಲ.

ಈ ಕುರಿತು ಮಾಹಿತಿ ಪಡೆಯಲು ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌ರವರನ್ನು ಸಂಪರ್ಕಿಸಿಲಾಯಿತು. ಆಗ ಅವರು “ಕುವೆಂಪು ವಿ.ವಿಯ ನಿವೃತ್ತ ಕುಲಪತಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ” ಎನ್ನುತ್ತಾರೆ.

ಸರ್ಕಾರದ ಈ ಧೋರಣೆಯು ಭೂಸುಧಾರಣೆಯ ಶಿಲ್ಪಿ, ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಎಂದೇ ಪ್ರಖ್ಯಾತರಾದ ದೇವರಾಜು ಅರಸುರವರ ಬಗ್ಗೆ ಗೌರವವಿಲ್ಲವೆಂಬುದನ್ನು ತೋರಿಸುತ್ತದೆ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಂಬಂಧಪಟ್ಟ ಹೋರಾಟಗಾರನ್ನು ಮಾತನಾಡಿಸಿತು. ಅವರು ಏನು ಹೇಳಿದ್ದಾರೆ ಇಲ್ಲಿದೆ ನೋಡಿ.

ಡಾ. ಸಿ.ಎಸ್‌ ದ್ವಾರಕನಾಥ್‌, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು.

“ನೆರೆಯ ಕಾರಣ ಹೇಳಿ ಪ್ರಶಸ್ತಿ ನೀಡುವುದನ್ನು ತಪ್ಪಿಸುವುದಾದರೆ ತಪ್ಪಿಸಲಿ. ಅದರೆ ಬಹಳಷ್ಟು ಪ್ರಶಸ್ತಿಗಳನ್ನು ಈಗಾಗಲೇ ಪ್ರಕಟ ಮಾಡಿ, ದೇವರಾಜ್ ಅರಸ್ ಅವರ ಪ್ರಶಸ್ತಿಯನ್ನು ಮಾತ್ರ ತಪ್ಪಿಸುತ್ತಾರೆ ಅಂದರೆ ಏನರ್ಥ..? ಮೊನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಿದರು. ಆದರೆ ದೇವರಾಜ್‌ ಅರಸ್ ಅವರ ಪ್ರಶಸ್ತಿ ಮಾತ್ರ ತಪ್ಪಿಸಿರುವುದರ ಹಿಂದಿನ ಹುನ್ನಾರವಾದರೂ ಏನು..? ಎಲ್ಲಾ ಪ್ರಶಸ್ತಿಗಳನ್ನು ನೀಡಿ, ಕೇವಲ ಅರಸ್ ಅವರ ಪ್ರಶಸ್ತಿ ಮಾತ್ರ ನೀಡದಿರುವುದು ಆಶ್ಚರ್ಯಕರ ಸಂಗತಿಯಾಗಿದೆ.

==========

ಕೆ.ಎಸ್‌ ಶಿವರಾಂ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ, ಮೈಸೂರು.

“ದೇವರಾಜ್‌ ಅರಸ್‌ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ತಳ ಸಮುದಾಯದವರಿಗೆ ಅನೇಕ ಸವಲತ್ತುಗಳನ್ನು ನೀಡಿ, ಮುಖ್ಯವಾಹಿನಿಗೆ ತಂದಂತವರು ಅರಸ್. ಆದರೆ ಬಿಜೆಪಿಗೆ ಸಮಾನತೆ, ಮತ್ತು ಸಾಮಾಜಿಕ ನ್ಯಾಯ ಬೇಕಾಗಿಲ್ಲ. ಬಿಜೆಪಿ ಸರ್ಕಾರ ಹಿಂದುತ್ವ, ಕೋಮುಶಕ್ತಿಗಳನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದಿದೆ. ಹಾಗಾಗಿಯೇ ಹಿಂದುಳಿದ ವರ್ಗದ ಹಿತಾಸಕ್ತಿಗೆ ದುಡಿದವರ ಬಗ್ಗೆ ಬಿಜೆಪಿ ತಾತ್ಸಾರ ಮಾಡುತ್ತಿದೆ. ಸಾವರ್ಕರ್‌ ಅಂತವರನ್ನು ವಿಜೃಂಭಿಸಿ, ಸಾಮಾಜಿಕ ನ್ಯಾಯದ ಪರ ದುಡಿದ ಅಂಬೇಡ್ಕರ್‌ ಮತ್ತು ಅರಸ್‌ರಂತವರನ್ನು ಜನಮಾನಸದಿಂದ ತೆಗೆದು ಹಾಕಲು ಬಿಜೆಪಿ ಸರ್ಕಾರ ಹೀಗೆ ಮಾಡುತ್ತಿದೆ. ಆರ್‌ಎಸ್‌ಎಸ್‌ನ್ನು ವಿಜೃಂಭಿಸಲು ಹೀಗೆಲ್ಲಾ ಮಾಡ್ತಿದ್ದಾರೆ. ಇದೆಲ್ಲಾ ಬಿಜೆಪಿ ರಚಿಸಿರುವ ಹುನ್ನಾರ. ಈ ಕೂಡಲೇ ದೇವರಾಜ್‌ ಅರಸ್‌ ಪ್ರಶಸ್ತಿ ಪ್ರಕಟ ಮಾಡಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ.

================

ರಮೇಶ್‌ ಅಭಿಮನ್ಯು, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರು ಮತ್ತು ಪತ್ರಕರ್ತರು

“ದೇವರಾಜ್‌ ಅರಸ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋದ ಸಿಎಂ ಯಡಿಯೂರಪ್ಪನವರು ಪ್ರಶಸ್ತಿ ಬಗ್ಗೆ ಮಾತನಾಡಲೇ ಇಲ್ಲ. ಹಿಂದುಳಿದ ಹಾಗೂ ತಳ ಸಮುದಾಯದ ನಾಯಕನನ್ನು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಇದನ್ನು ನಾವು ಖಂಡತುಂಡವಾಗಿ ಖಂಡಿಸುತ್ತೇವೆ. ಬಿಜೆಪಿ ಸರ್ಕಾರ ಕೇವಲ ಅಧಿಕಾರ, ಆಪರೇಷನ್ ಕಮಲ ಮಾಡುವುದರಲ್ಲಿ ಬ್ಯುಸಿಯಾಗಿದೆ. ಹಿಂದುಳಿದ ಸಮುದಾಯಗಳನ್ನು ಮರೆತಿದ್ದಾರೆ. ದೇವರಾಜ್‌ ಅರಸ್ ಅವರಂತಹ ಮಹಾನ್‌ ನಾಯಕನನ್ನು ಆದರ್ಶವಾಗಿಟ್ಟುಕೊಂಡು ಬಿಜೆಪಿ ಅಧಿಕಾರ ನಡೆಸಬೇಕಿತ್ತು. ಆದರೆ ಅಂತಹ ನಾಯಕನಿಗೆ ಬಿಜೆಪಿ ಅವಮಾನ ಮಾಡಿದೆ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...