Homeಕರ್ನಾಟಕವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ" ಎನ್ನುತ್ತಾರೆ ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌.

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿ ವರ್ಷ ಮುಗಿದರೂ ಈ ಸರ್ಕಾರ ನೆನಪಿಸಿಕೊಂಡಂತಿಲ್ಲ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಸಮಯ ಮತ್ತು ಹಣವಿಲ್ಲವಂತೆ. ಅದು ಎಷ್ಟು ಎಂದರೆ ಕೇವಲ ಐದು ಲಕ್ಷ…!

ಪ್ರತಿ ವರ್ಷ ದೇವರಾಜು ಅರಸುರವರ ಜನ್ಮದಿನವಾದ ಆಗಸ್ಟ್‌ 20ರಂದು ಸರ್ಕಾರ ಈ ಪ್ರಶಸ್ತಿಯನ್ನು ನೀಡುತ್ತಿತ್ತು. ಕಳೆದ ಬಾರಿ ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಸಮಿತಿ ಸಾಮಾಜಿಕ ಹೋರಾಟಗಾರ ಶಿವಾಜಿ ಕಾಗುಣಿಕಾರರಿನ್ನು ಆರಿಸಿತ್ತು. ಅಟಲ್‌ ಬಿಹಾರಿ ವಾಜಪೇಯಿಯವರು ನಿಧನದ ಕಾರಣದಿಂದ ಡಿಸೆಂಬರ್‌ನಲ್ಲಿ ಪ್ರಶಸ್ತಿ ನೀಡಲಾಗಿತ್ತು. ಈ ಮೊದಲು ಬಿ.ಎ ಮೋಹಿದ್ದೀನ್, ದಿನೇಶ್ ಅಮೀನ್ ಮಟ್ಟು, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮಹತ್ವದ ಸಾಧಕರಿಗೆ ಈ ಪ್ರಶಸ್ತಿ ಒಲಿದಿದೆ.

ಈ ಬಾರಿ ಆಗಸ್ಟ್‌ ಕಳೆದು ನವೆಂಬರ್‌ ಮುಗಿಯುತ್ತಾ ಬಂದಿದೆ. ಇನ್ನೊಂದು ತಿಂಗಳಲ್ಲಿ ಈ ವರ್ಷವೆ ಮುಗಿದುಬಿಡಲಿದೆ. ಆದರೂ ಸರ್ಕಾರ ಪ್ರಶಸ್ತಿ ನೀಡುವುದನ್ನು ಮರೆತಿದೆಯೋ ಅಥವಾ ಬೇಕಂತಲೇ ವಿಳಂಬ ಮಾಡುತ್ತಿದೆಯೋ?

ಈ ವರ್ಷ ಜುಲೈ 26 ರಂದೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತಲ್ಲದೇ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾದರು. ಆಗಸ್ಟ್‌ ಅಂತ್ಯದೊಳಗೆ ಸಚಿವ ಸಂಪುಟವನ್ನು ರಚಿಸಿದರು. ಸೆಪ್ಟಂಬರ್‌, ಅಕ್ಟೋಬರ್‌, ನವೆಂಬರ್‌ ಮೂರು ತಿಂಗಳು ಕಳೆದರೂ ಅವರ್‍ಯಾರು ಈ ಪ್ರಶಸ್ತಿಯ ಬಗ್ಗೆ ಸೊಲೆತ್ತಿಲ್ಲ.

ಈ ಕುರಿತು ಮಾಹಿತಿ ಪಡೆಯಲು ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌ರವರನ್ನು ಸಂಪರ್ಕಿಸಿಲಾಯಿತು. ಆಗ ಅವರು “ಕುವೆಂಪು ವಿ.ವಿಯ ನಿವೃತ್ತ ಕುಲಪತಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ” ಎನ್ನುತ್ತಾರೆ.

ಸರ್ಕಾರದ ಈ ಧೋರಣೆಯು ಭೂಸುಧಾರಣೆಯ ಶಿಲ್ಪಿ, ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಎಂದೇ ಪ್ರಖ್ಯಾತರಾದ ದೇವರಾಜು ಅರಸುರವರ ಬಗ್ಗೆ ಗೌರವವಿಲ್ಲವೆಂಬುದನ್ನು ತೋರಿಸುತ್ತದೆ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಂಬಂಧಪಟ್ಟ ಹೋರಾಟಗಾರನ್ನು ಮಾತನಾಡಿಸಿತು. ಅವರು ಏನು ಹೇಳಿದ್ದಾರೆ ಇಲ್ಲಿದೆ ನೋಡಿ.

ಡಾ. ಸಿ.ಎಸ್‌ ದ್ವಾರಕನಾಥ್‌, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು.

“ನೆರೆಯ ಕಾರಣ ಹೇಳಿ ಪ್ರಶಸ್ತಿ ನೀಡುವುದನ್ನು ತಪ್ಪಿಸುವುದಾದರೆ ತಪ್ಪಿಸಲಿ. ಅದರೆ ಬಹಳಷ್ಟು ಪ್ರಶಸ್ತಿಗಳನ್ನು ಈಗಾಗಲೇ ಪ್ರಕಟ ಮಾಡಿ, ದೇವರಾಜ್ ಅರಸ್ ಅವರ ಪ್ರಶಸ್ತಿಯನ್ನು ಮಾತ್ರ ತಪ್ಪಿಸುತ್ತಾರೆ ಅಂದರೆ ಏನರ್ಥ..? ಮೊನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಿದರು. ಆದರೆ ದೇವರಾಜ್‌ ಅರಸ್ ಅವರ ಪ್ರಶಸ್ತಿ ಮಾತ್ರ ತಪ್ಪಿಸಿರುವುದರ ಹಿಂದಿನ ಹುನ್ನಾರವಾದರೂ ಏನು..? ಎಲ್ಲಾ ಪ್ರಶಸ್ತಿಗಳನ್ನು ನೀಡಿ, ಕೇವಲ ಅರಸ್ ಅವರ ಪ್ರಶಸ್ತಿ ಮಾತ್ರ ನೀಡದಿರುವುದು ಆಶ್ಚರ್ಯಕರ ಸಂಗತಿಯಾಗಿದೆ.

==========

ಕೆ.ಎಸ್‌ ಶಿವರಾಂ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ, ಮೈಸೂರು.

“ದೇವರಾಜ್‌ ಅರಸ್‌ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ತಳ ಸಮುದಾಯದವರಿಗೆ ಅನೇಕ ಸವಲತ್ತುಗಳನ್ನು ನೀಡಿ, ಮುಖ್ಯವಾಹಿನಿಗೆ ತಂದಂತವರು ಅರಸ್. ಆದರೆ ಬಿಜೆಪಿಗೆ ಸಮಾನತೆ, ಮತ್ತು ಸಾಮಾಜಿಕ ನ್ಯಾಯ ಬೇಕಾಗಿಲ್ಲ. ಬಿಜೆಪಿ ಸರ್ಕಾರ ಹಿಂದುತ್ವ, ಕೋಮುಶಕ್ತಿಗಳನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದಿದೆ. ಹಾಗಾಗಿಯೇ ಹಿಂದುಳಿದ ವರ್ಗದ ಹಿತಾಸಕ್ತಿಗೆ ದುಡಿದವರ ಬಗ್ಗೆ ಬಿಜೆಪಿ ತಾತ್ಸಾರ ಮಾಡುತ್ತಿದೆ. ಸಾವರ್ಕರ್‌ ಅಂತವರನ್ನು ವಿಜೃಂಭಿಸಿ, ಸಾಮಾಜಿಕ ನ್ಯಾಯದ ಪರ ದುಡಿದ ಅಂಬೇಡ್ಕರ್‌ ಮತ್ತು ಅರಸ್‌ರಂತವರನ್ನು ಜನಮಾನಸದಿಂದ ತೆಗೆದು ಹಾಕಲು ಬಿಜೆಪಿ ಸರ್ಕಾರ ಹೀಗೆ ಮಾಡುತ್ತಿದೆ. ಆರ್‌ಎಸ್‌ಎಸ್‌ನ್ನು ವಿಜೃಂಭಿಸಲು ಹೀಗೆಲ್ಲಾ ಮಾಡ್ತಿದ್ದಾರೆ. ಇದೆಲ್ಲಾ ಬಿಜೆಪಿ ರಚಿಸಿರುವ ಹುನ್ನಾರ. ಈ ಕೂಡಲೇ ದೇವರಾಜ್‌ ಅರಸ್‌ ಪ್ರಶಸ್ತಿ ಪ್ರಕಟ ಮಾಡಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ.

================

ರಮೇಶ್‌ ಅಭಿಮನ್ಯು, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರು ಮತ್ತು ಪತ್ರಕರ್ತರು

“ದೇವರಾಜ್‌ ಅರಸ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋದ ಸಿಎಂ ಯಡಿಯೂರಪ್ಪನವರು ಪ್ರಶಸ್ತಿ ಬಗ್ಗೆ ಮಾತನಾಡಲೇ ಇಲ್ಲ. ಹಿಂದುಳಿದ ಹಾಗೂ ತಳ ಸಮುದಾಯದ ನಾಯಕನನ್ನು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಇದನ್ನು ನಾವು ಖಂಡತುಂಡವಾಗಿ ಖಂಡಿಸುತ್ತೇವೆ. ಬಿಜೆಪಿ ಸರ್ಕಾರ ಕೇವಲ ಅಧಿಕಾರ, ಆಪರೇಷನ್ ಕಮಲ ಮಾಡುವುದರಲ್ಲಿ ಬ್ಯುಸಿಯಾಗಿದೆ. ಹಿಂದುಳಿದ ಸಮುದಾಯಗಳನ್ನು ಮರೆತಿದ್ದಾರೆ. ದೇವರಾಜ್‌ ಅರಸ್ ಅವರಂತಹ ಮಹಾನ್‌ ನಾಯಕನನ್ನು ಆದರ್ಶವಾಗಿಟ್ಟುಕೊಂಡು ಬಿಜೆಪಿ ಅಧಿಕಾರ ನಡೆಸಬೇಕಿತ್ತು. ಆದರೆ ಅಂತಹ ನಾಯಕನಿಗೆ ಬಿಜೆಪಿ ಅವಮಾನ ಮಾಡಿದೆ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...