Homeಕರ್ನಾಟಕವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ" ಎನ್ನುತ್ತಾರೆ ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌.

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿ ವರ್ಷ ಮುಗಿದರೂ ಈ ಸರ್ಕಾರ ನೆನಪಿಸಿಕೊಂಡಂತಿಲ್ಲ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಸಮಯ ಮತ್ತು ಹಣವಿಲ್ಲವಂತೆ. ಅದು ಎಷ್ಟು ಎಂದರೆ ಕೇವಲ ಐದು ಲಕ್ಷ…!

ಪ್ರತಿ ವರ್ಷ ದೇವರಾಜು ಅರಸುರವರ ಜನ್ಮದಿನವಾದ ಆಗಸ್ಟ್‌ 20ರಂದು ಸರ್ಕಾರ ಈ ಪ್ರಶಸ್ತಿಯನ್ನು ನೀಡುತ್ತಿತ್ತು. ಕಳೆದ ಬಾರಿ ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಸಮಿತಿ ಸಾಮಾಜಿಕ ಹೋರಾಟಗಾರ ಶಿವಾಜಿ ಕಾಗುಣಿಕಾರರಿನ್ನು ಆರಿಸಿತ್ತು. ಅಟಲ್‌ ಬಿಹಾರಿ ವಾಜಪೇಯಿಯವರು ನಿಧನದ ಕಾರಣದಿಂದ ಡಿಸೆಂಬರ್‌ನಲ್ಲಿ ಪ್ರಶಸ್ತಿ ನೀಡಲಾಗಿತ್ತು. ಈ ಮೊದಲು ಬಿ.ಎ ಮೋಹಿದ್ದೀನ್, ದಿನೇಶ್ ಅಮೀನ್ ಮಟ್ಟು, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮಹತ್ವದ ಸಾಧಕರಿಗೆ ಈ ಪ್ರಶಸ್ತಿ ಒಲಿದಿದೆ.

ಈ ಬಾರಿ ಆಗಸ್ಟ್‌ ಕಳೆದು ನವೆಂಬರ್‌ ಮುಗಿಯುತ್ತಾ ಬಂದಿದೆ. ಇನ್ನೊಂದು ತಿಂಗಳಲ್ಲಿ ಈ ವರ್ಷವೆ ಮುಗಿದುಬಿಡಲಿದೆ. ಆದರೂ ಸರ್ಕಾರ ಪ್ರಶಸ್ತಿ ನೀಡುವುದನ್ನು ಮರೆತಿದೆಯೋ ಅಥವಾ ಬೇಕಂತಲೇ ವಿಳಂಬ ಮಾಡುತ್ತಿದೆಯೋ?

ಈ ವರ್ಷ ಜುಲೈ 26 ರಂದೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತಲ್ಲದೇ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾದರು. ಆಗಸ್ಟ್‌ ಅಂತ್ಯದೊಳಗೆ ಸಚಿವ ಸಂಪುಟವನ್ನು ರಚಿಸಿದರು. ಸೆಪ್ಟಂಬರ್‌, ಅಕ್ಟೋಬರ್‌, ನವೆಂಬರ್‌ ಮೂರು ತಿಂಗಳು ಕಳೆದರೂ ಅವರ್‍ಯಾರು ಈ ಪ್ರಶಸ್ತಿಯ ಬಗ್ಗೆ ಸೊಲೆತ್ತಿಲ್ಲ.

ಈ ಕುರಿತು ಮಾಹಿತಿ ಪಡೆಯಲು ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌ರವರನ್ನು ಸಂಪರ್ಕಿಸಿಲಾಯಿತು. ಆಗ ಅವರು “ಕುವೆಂಪು ವಿ.ವಿಯ ನಿವೃತ್ತ ಕುಲಪತಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ” ಎನ್ನುತ್ತಾರೆ.

ಸರ್ಕಾರದ ಈ ಧೋರಣೆಯು ಭೂಸುಧಾರಣೆಯ ಶಿಲ್ಪಿ, ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಎಂದೇ ಪ್ರಖ್ಯಾತರಾದ ದೇವರಾಜು ಅರಸುರವರ ಬಗ್ಗೆ ಗೌರವವಿಲ್ಲವೆಂಬುದನ್ನು ತೋರಿಸುತ್ತದೆ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಂಬಂಧಪಟ್ಟ ಹೋರಾಟಗಾರನ್ನು ಮಾತನಾಡಿಸಿತು. ಅವರು ಏನು ಹೇಳಿದ್ದಾರೆ ಇಲ್ಲಿದೆ ನೋಡಿ.

ಡಾ. ಸಿ.ಎಸ್‌ ದ್ವಾರಕನಾಥ್‌, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು.

“ನೆರೆಯ ಕಾರಣ ಹೇಳಿ ಪ್ರಶಸ್ತಿ ನೀಡುವುದನ್ನು ತಪ್ಪಿಸುವುದಾದರೆ ತಪ್ಪಿಸಲಿ. ಅದರೆ ಬಹಳಷ್ಟು ಪ್ರಶಸ್ತಿಗಳನ್ನು ಈಗಾಗಲೇ ಪ್ರಕಟ ಮಾಡಿ, ದೇವರಾಜ್ ಅರಸ್ ಅವರ ಪ್ರಶಸ್ತಿಯನ್ನು ಮಾತ್ರ ತಪ್ಪಿಸುತ್ತಾರೆ ಅಂದರೆ ಏನರ್ಥ..? ಮೊನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಿದರು. ಆದರೆ ದೇವರಾಜ್‌ ಅರಸ್ ಅವರ ಪ್ರಶಸ್ತಿ ಮಾತ್ರ ತಪ್ಪಿಸಿರುವುದರ ಹಿಂದಿನ ಹುನ್ನಾರವಾದರೂ ಏನು..? ಎಲ್ಲಾ ಪ್ರಶಸ್ತಿಗಳನ್ನು ನೀಡಿ, ಕೇವಲ ಅರಸ್ ಅವರ ಪ್ರಶಸ್ತಿ ಮಾತ್ರ ನೀಡದಿರುವುದು ಆಶ್ಚರ್ಯಕರ ಸಂಗತಿಯಾಗಿದೆ.

==========

ಕೆ.ಎಸ್‌ ಶಿವರಾಂ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ, ಮೈಸೂರು.

“ದೇವರಾಜ್‌ ಅರಸ್‌ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ತಳ ಸಮುದಾಯದವರಿಗೆ ಅನೇಕ ಸವಲತ್ತುಗಳನ್ನು ನೀಡಿ, ಮುಖ್ಯವಾಹಿನಿಗೆ ತಂದಂತವರು ಅರಸ್. ಆದರೆ ಬಿಜೆಪಿಗೆ ಸಮಾನತೆ, ಮತ್ತು ಸಾಮಾಜಿಕ ನ್ಯಾಯ ಬೇಕಾಗಿಲ್ಲ. ಬಿಜೆಪಿ ಸರ್ಕಾರ ಹಿಂದುತ್ವ, ಕೋಮುಶಕ್ತಿಗಳನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದಿದೆ. ಹಾಗಾಗಿಯೇ ಹಿಂದುಳಿದ ವರ್ಗದ ಹಿತಾಸಕ್ತಿಗೆ ದುಡಿದವರ ಬಗ್ಗೆ ಬಿಜೆಪಿ ತಾತ್ಸಾರ ಮಾಡುತ್ತಿದೆ. ಸಾವರ್ಕರ್‌ ಅಂತವರನ್ನು ವಿಜೃಂಭಿಸಿ, ಸಾಮಾಜಿಕ ನ್ಯಾಯದ ಪರ ದುಡಿದ ಅಂಬೇಡ್ಕರ್‌ ಮತ್ತು ಅರಸ್‌ರಂತವರನ್ನು ಜನಮಾನಸದಿಂದ ತೆಗೆದು ಹಾಕಲು ಬಿಜೆಪಿ ಸರ್ಕಾರ ಹೀಗೆ ಮಾಡುತ್ತಿದೆ. ಆರ್‌ಎಸ್‌ಎಸ್‌ನ್ನು ವಿಜೃಂಭಿಸಲು ಹೀಗೆಲ್ಲಾ ಮಾಡ್ತಿದ್ದಾರೆ. ಇದೆಲ್ಲಾ ಬಿಜೆಪಿ ರಚಿಸಿರುವ ಹುನ್ನಾರ. ಈ ಕೂಡಲೇ ದೇವರಾಜ್‌ ಅರಸ್‌ ಪ್ರಶಸ್ತಿ ಪ್ರಕಟ ಮಾಡಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ.

================

ರಮೇಶ್‌ ಅಭಿಮನ್ಯು, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರು ಮತ್ತು ಪತ್ರಕರ್ತರು

“ದೇವರಾಜ್‌ ಅರಸ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋದ ಸಿಎಂ ಯಡಿಯೂರಪ್ಪನವರು ಪ್ರಶಸ್ತಿ ಬಗ್ಗೆ ಮಾತನಾಡಲೇ ಇಲ್ಲ. ಹಿಂದುಳಿದ ಹಾಗೂ ತಳ ಸಮುದಾಯದ ನಾಯಕನನ್ನು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಇದನ್ನು ನಾವು ಖಂಡತುಂಡವಾಗಿ ಖಂಡಿಸುತ್ತೇವೆ. ಬಿಜೆಪಿ ಸರ್ಕಾರ ಕೇವಲ ಅಧಿಕಾರ, ಆಪರೇಷನ್ ಕಮಲ ಮಾಡುವುದರಲ್ಲಿ ಬ್ಯುಸಿಯಾಗಿದೆ. ಹಿಂದುಳಿದ ಸಮುದಾಯಗಳನ್ನು ಮರೆತಿದ್ದಾರೆ. ದೇವರಾಜ್‌ ಅರಸ್ ಅವರಂತಹ ಮಹಾನ್‌ ನಾಯಕನನ್ನು ಆದರ್ಶವಾಗಿಟ್ಟುಕೊಂಡು ಬಿಜೆಪಿ ಅಧಿಕಾರ ನಡೆಸಬೇಕಿತ್ತು. ಆದರೆ ಅಂತಹ ನಾಯಕನಿಗೆ ಬಿಜೆಪಿ ಅವಮಾನ ಮಾಡಿದೆ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...