Homeಕರ್ನಾಟಕವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ" ಎನ್ನುತ್ತಾರೆ ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌.

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿ ವರ್ಷ ಮುಗಿದರೂ ಈ ಸರ್ಕಾರ ನೆನಪಿಸಿಕೊಂಡಂತಿಲ್ಲ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಸಮಯ ಮತ್ತು ಹಣವಿಲ್ಲವಂತೆ. ಅದು ಎಷ್ಟು ಎಂದರೆ ಕೇವಲ ಐದು ಲಕ್ಷ…!

ಪ್ರತಿ ವರ್ಷ ದೇವರಾಜು ಅರಸುರವರ ಜನ್ಮದಿನವಾದ ಆಗಸ್ಟ್‌ 20ರಂದು ಸರ್ಕಾರ ಈ ಪ್ರಶಸ್ತಿಯನ್ನು ನೀಡುತ್ತಿತ್ತು. ಕಳೆದ ಬಾರಿ ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಸಮಿತಿ ಸಾಮಾಜಿಕ ಹೋರಾಟಗಾರ ಶಿವಾಜಿ ಕಾಗುಣಿಕಾರರಿನ್ನು ಆರಿಸಿತ್ತು. ಅಟಲ್‌ ಬಿಹಾರಿ ವಾಜಪೇಯಿಯವರು ನಿಧನದ ಕಾರಣದಿಂದ ಡಿಸೆಂಬರ್‌ನಲ್ಲಿ ಪ್ರಶಸ್ತಿ ನೀಡಲಾಗಿತ್ತು. ಈ ಮೊದಲು ಬಿ.ಎ ಮೋಹಿದ್ದೀನ್, ದಿನೇಶ್ ಅಮೀನ್ ಮಟ್ಟು, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮಹತ್ವದ ಸಾಧಕರಿಗೆ ಈ ಪ್ರಶಸ್ತಿ ಒಲಿದಿದೆ.

ಈ ಬಾರಿ ಆಗಸ್ಟ್‌ ಕಳೆದು ನವೆಂಬರ್‌ ಮುಗಿಯುತ್ತಾ ಬಂದಿದೆ. ಇನ್ನೊಂದು ತಿಂಗಳಲ್ಲಿ ಈ ವರ್ಷವೆ ಮುಗಿದುಬಿಡಲಿದೆ. ಆದರೂ ಸರ್ಕಾರ ಪ್ರಶಸ್ತಿ ನೀಡುವುದನ್ನು ಮರೆತಿದೆಯೋ ಅಥವಾ ಬೇಕಂತಲೇ ವಿಳಂಬ ಮಾಡುತ್ತಿದೆಯೋ?

ಈ ವರ್ಷ ಜುಲೈ 26 ರಂದೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತಲ್ಲದೇ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾದರು. ಆಗಸ್ಟ್‌ ಅಂತ್ಯದೊಳಗೆ ಸಚಿವ ಸಂಪುಟವನ್ನು ರಚಿಸಿದರು. ಸೆಪ್ಟಂಬರ್‌, ಅಕ್ಟೋಬರ್‌, ನವೆಂಬರ್‌ ಮೂರು ತಿಂಗಳು ಕಳೆದರೂ ಅವರ್‍ಯಾರು ಈ ಪ್ರಶಸ್ತಿಯ ಬಗ್ಗೆ ಸೊಲೆತ್ತಿಲ್ಲ.

ಈ ಕುರಿತು ಮಾಹಿತಿ ಪಡೆಯಲು ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌ರವರನ್ನು ಸಂಪರ್ಕಿಸಿಲಾಯಿತು. ಆಗ ಅವರು “ಕುವೆಂಪು ವಿ.ವಿಯ ನಿವೃತ್ತ ಕುಲಪತಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ” ಎನ್ನುತ್ತಾರೆ.

ಸರ್ಕಾರದ ಈ ಧೋರಣೆಯು ಭೂಸುಧಾರಣೆಯ ಶಿಲ್ಪಿ, ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಎಂದೇ ಪ್ರಖ್ಯಾತರಾದ ದೇವರಾಜು ಅರಸುರವರ ಬಗ್ಗೆ ಗೌರವವಿಲ್ಲವೆಂಬುದನ್ನು ತೋರಿಸುತ್ತದೆ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಂಬಂಧಪಟ್ಟ ಹೋರಾಟಗಾರನ್ನು ಮಾತನಾಡಿಸಿತು. ಅವರು ಏನು ಹೇಳಿದ್ದಾರೆ ಇಲ್ಲಿದೆ ನೋಡಿ.

ಡಾ. ಸಿ.ಎಸ್‌ ದ್ವಾರಕನಾಥ್‌, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು.

“ನೆರೆಯ ಕಾರಣ ಹೇಳಿ ಪ್ರಶಸ್ತಿ ನೀಡುವುದನ್ನು ತಪ್ಪಿಸುವುದಾದರೆ ತಪ್ಪಿಸಲಿ. ಅದರೆ ಬಹಳಷ್ಟು ಪ್ರಶಸ್ತಿಗಳನ್ನು ಈಗಾಗಲೇ ಪ್ರಕಟ ಮಾಡಿ, ದೇವರಾಜ್ ಅರಸ್ ಅವರ ಪ್ರಶಸ್ತಿಯನ್ನು ಮಾತ್ರ ತಪ್ಪಿಸುತ್ತಾರೆ ಅಂದರೆ ಏನರ್ಥ..? ಮೊನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಿದರು. ಆದರೆ ದೇವರಾಜ್‌ ಅರಸ್ ಅವರ ಪ್ರಶಸ್ತಿ ಮಾತ್ರ ತಪ್ಪಿಸಿರುವುದರ ಹಿಂದಿನ ಹುನ್ನಾರವಾದರೂ ಏನು..? ಎಲ್ಲಾ ಪ್ರಶಸ್ತಿಗಳನ್ನು ನೀಡಿ, ಕೇವಲ ಅರಸ್ ಅವರ ಪ್ರಶಸ್ತಿ ಮಾತ್ರ ನೀಡದಿರುವುದು ಆಶ್ಚರ್ಯಕರ ಸಂಗತಿಯಾಗಿದೆ.

==========

ಕೆ.ಎಸ್‌ ಶಿವರಾಂ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ, ಮೈಸೂರು.

“ದೇವರಾಜ್‌ ಅರಸ್‌ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ತಳ ಸಮುದಾಯದವರಿಗೆ ಅನೇಕ ಸವಲತ್ತುಗಳನ್ನು ನೀಡಿ, ಮುಖ್ಯವಾಹಿನಿಗೆ ತಂದಂತವರು ಅರಸ್. ಆದರೆ ಬಿಜೆಪಿಗೆ ಸಮಾನತೆ, ಮತ್ತು ಸಾಮಾಜಿಕ ನ್ಯಾಯ ಬೇಕಾಗಿಲ್ಲ. ಬಿಜೆಪಿ ಸರ್ಕಾರ ಹಿಂದುತ್ವ, ಕೋಮುಶಕ್ತಿಗಳನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದಿದೆ. ಹಾಗಾಗಿಯೇ ಹಿಂದುಳಿದ ವರ್ಗದ ಹಿತಾಸಕ್ತಿಗೆ ದುಡಿದವರ ಬಗ್ಗೆ ಬಿಜೆಪಿ ತಾತ್ಸಾರ ಮಾಡುತ್ತಿದೆ. ಸಾವರ್ಕರ್‌ ಅಂತವರನ್ನು ವಿಜೃಂಭಿಸಿ, ಸಾಮಾಜಿಕ ನ್ಯಾಯದ ಪರ ದುಡಿದ ಅಂಬೇಡ್ಕರ್‌ ಮತ್ತು ಅರಸ್‌ರಂತವರನ್ನು ಜನಮಾನಸದಿಂದ ತೆಗೆದು ಹಾಕಲು ಬಿಜೆಪಿ ಸರ್ಕಾರ ಹೀಗೆ ಮಾಡುತ್ತಿದೆ. ಆರ್‌ಎಸ್‌ಎಸ್‌ನ್ನು ವಿಜೃಂಭಿಸಲು ಹೀಗೆಲ್ಲಾ ಮಾಡ್ತಿದ್ದಾರೆ. ಇದೆಲ್ಲಾ ಬಿಜೆಪಿ ರಚಿಸಿರುವ ಹುನ್ನಾರ. ಈ ಕೂಡಲೇ ದೇವರಾಜ್‌ ಅರಸ್‌ ಪ್ರಶಸ್ತಿ ಪ್ರಕಟ ಮಾಡಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ.

================

ರಮೇಶ್‌ ಅಭಿಮನ್ಯು, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರು ಮತ್ತು ಪತ್ರಕರ್ತರು

“ದೇವರಾಜ್‌ ಅರಸ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋದ ಸಿಎಂ ಯಡಿಯೂರಪ್ಪನವರು ಪ್ರಶಸ್ತಿ ಬಗ್ಗೆ ಮಾತನಾಡಲೇ ಇಲ್ಲ. ಹಿಂದುಳಿದ ಹಾಗೂ ತಳ ಸಮುದಾಯದ ನಾಯಕನನ್ನು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಇದನ್ನು ನಾವು ಖಂಡತುಂಡವಾಗಿ ಖಂಡಿಸುತ್ತೇವೆ. ಬಿಜೆಪಿ ಸರ್ಕಾರ ಕೇವಲ ಅಧಿಕಾರ, ಆಪರೇಷನ್ ಕಮಲ ಮಾಡುವುದರಲ್ಲಿ ಬ್ಯುಸಿಯಾಗಿದೆ. ಹಿಂದುಳಿದ ಸಮುದಾಯಗಳನ್ನು ಮರೆತಿದ್ದಾರೆ. ದೇವರಾಜ್‌ ಅರಸ್ ಅವರಂತಹ ಮಹಾನ್‌ ನಾಯಕನನ್ನು ಆದರ್ಶವಾಗಿಟ್ಟುಕೊಂಡು ಬಿಜೆಪಿ ಅಧಿಕಾರ ನಡೆಸಬೇಕಿತ್ತು. ಆದರೆ ಅಂತಹ ನಾಯಕನಿಗೆ ಬಿಜೆಪಿ ಅವಮಾನ ಮಾಡಿದೆ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...