Homeಕರ್ನಾಟಕವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ" ಎನ್ನುತ್ತಾರೆ ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌.

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿ ವರ್ಷ ಮುಗಿದರೂ ಈ ಸರ್ಕಾರ ನೆನಪಿಸಿಕೊಂಡಂತಿಲ್ಲ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಸಮಯ ಮತ್ತು ಹಣವಿಲ್ಲವಂತೆ. ಅದು ಎಷ್ಟು ಎಂದರೆ ಕೇವಲ ಐದು ಲಕ್ಷ…!

ಪ್ರತಿ ವರ್ಷ ದೇವರಾಜು ಅರಸುರವರ ಜನ್ಮದಿನವಾದ ಆಗಸ್ಟ್‌ 20ರಂದು ಸರ್ಕಾರ ಈ ಪ್ರಶಸ್ತಿಯನ್ನು ನೀಡುತ್ತಿತ್ತು. ಕಳೆದ ಬಾರಿ ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಸಮಿತಿ ಸಾಮಾಜಿಕ ಹೋರಾಟಗಾರ ಶಿವಾಜಿ ಕಾಗುಣಿಕಾರರಿನ್ನು ಆರಿಸಿತ್ತು. ಅಟಲ್‌ ಬಿಹಾರಿ ವಾಜಪೇಯಿಯವರು ನಿಧನದ ಕಾರಣದಿಂದ ಡಿಸೆಂಬರ್‌ನಲ್ಲಿ ಪ್ರಶಸ್ತಿ ನೀಡಲಾಗಿತ್ತು. ಈ ಮೊದಲು ಬಿ.ಎ ಮೋಹಿದ್ದೀನ್, ದಿನೇಶ್ ಅಮೀನ್ ಮಟ್ಟು, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮಹತ್ವದ ಸಾಧಕರಿಗೆ ಈ ಪ್ರಶಸ್ತಿ ಒಲಿದಿದೆ.

ಈ ಬಾರಿ ಆಗಸ್ಟ್‌ ಕಳೆದು ನವೆಂಬರ್‌ ಮುಗಿಯುತ್ತಾ ಬಂದಿದೆ. ಇನ್ನೊಂದು ತಿಂಗಳಲ್ಲಿ ಈ ವರ್ಷವೆ ಮುಗಿದುಬಿಡಲಿದೆ. ಆದರೂ ಸರ್ಕಾರ ಪ್ರಶಸ್ತಿ ನೀಡುವುದನ್ನು ಮರೆತಿದೆಯೋ ಅಥವಾ ಬೇಕಂತಲೇ ವಿಳಂಬ ಮಾಡುತ್ತಿದೆಯೋ?

ಈ ವರ್ಷ ಜುಲೈ 26 ರಂದೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತಲ್ಲದೇ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾದರು. ಆಗಸ್ಟ್‌ ಅಂತ್ಯದೊಳಗೆ ಸಚಿವ ಸಂಪುಟವನ್ನು ರಚಿಸಿದರು. ಸೆಪ್ಟಂಬರ್‌, ಅಕ್ಟೋಬರ್‌, ನವೆಂಬರ್‌ ಮೂರು ತಿಂಗಳು ಕಳೆದರೂ ಅವರ್‍ಯಾರು ಈ ಪ್ರಶಸ್ತಿಯ ಬಗ್ಗೆ ಸೊಲೆತ್ತಿಲ್ಲ.

ಈ ಕುರಿತು ಮಾಹಿತಿ ಪಡೆಯಲು ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌ರವರನ್ನು ಸಂಪರ್ಕಿಸಿಲಾಯಿತು. ಆಗ ಅವರು “ಕುವೆಂಪು ವಿ.ವಿಯ ನಿವೃತ್ತ ಕುಲಪತಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ” ಎನ್ನುತ್ತಾರೆ.

ಸರ್ಕಾರದ ಈ ಧೋರಣೆಯು ಭೂಸುಧಾರಣೆಯ ಶಿಲ್ಪಿ, ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಎಂದೇ ಪ್ರಖ್ಯಾತರಾದ ದೇವರಾಜು ಅರಸುರವರ ಬಗ್ಗೆ ಗೌರವವಿಲ್ಲವೆಂಬುದನ್ನು ತೋರಿಸುತ್ತದೆ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಂಬಂಧಪಟ್ಟ ಹೋರಾಟಗಾರನ್ನು ಮಾತನಾಡಿಸಿತು. ಅವರು ಏನು ಹೇಳಿದ್ದಾರೆ ಇಲ್ಲಿದೆ ನೋಡಿ.

ಡಾ. ಸಿ.ಎಸ್‌ ದ್ವಾರಕನಾಥ್‌, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು.

“ನೆರೆಯ ಕಾರಣ ಹೇಳಿ ಪ್ರಶಸ್ತಿ ನೀಡುವುದನ್ನು ತಪ್ಪಿಸುವುದಾದರೆ ತಪ್ಪಿಸಲಿ. ಅದರೆ ಬಹಳಷ್ಟು ಪ್ರಶಸ್ತಿಗಳನ್ನು ಈಗಾಗಲೇ ಪ್ರಕಟ ಮಾಡಿ, ದೇವರಾಜ್ ಅರಸ್ ಅವರ ಪ್ರಶಸ್ತಿಯನ್ನು ಮಾತ್ರ ತಪ್ಪಿಸುತ್ತಾರೆ ಅಂದರೆ ಏನರ್ಥ..? ಮೊನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಿದರು. ಆದರೆ ದೇವರಾಜ್‌ ಅರಸ್ ಅವರ ಪ್ರಶಸ್ತಿ ಮಾತ್ರ ತಪ್ಪಿಸಿರುವುದರ ಹಿಂದಿನ ಹುನ್ನಾರವಾದರೂ ಏನು..? ಎಲ್ಲಾ ಪ್ರಶಸ್ತಿಗಳನ್ನು ನೀಡಿ, ಕೇವಲ ಅರಸ್ ಅವರ ಪ್ರಶಸ್ತಿ ಮಾತ್ರ ನೀಡದಿರುವುದು ಆಶ್ಚರ್ಯಕರ ಸಂಗತಿಯಾಗಿದೆ.

==========

ಕೆ.ಎಸ್‌ ಶಿವರಾಂ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ, ಮೈಸೂರು.

“ದೇವರಾಜ್‌ ಅರಸ್‌ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ತಳ ಸಮುದಾಯದವರಿಗೆ ಅನೇಕ ಸವಲತ್ತುಗಳನ್ನು ನೀಡಿ, ಮುಖ್ಯವಾಹಿನಿಗೆ ತಂದಂತವರು ಅರಸ್. ಆದರೆ ಬಿಜೆಪಿಗೆ ಸಮಾನತೆ, ಮತ್ತು ಸಾಮಾಜಿಕ ನ್ಯಾಯ ಬೇಕಾಗಿಲ್ಲ. ಬಿಜೆಪಿ ಸರ್ಕಾರ ಹಿಂದುತ್ವ, ಕೋಮುಶಕ್ತಿಗಳನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದಿದೆ. ಹಾಗಾಗಿಯೇ ಹಿಂದುಳಿದ ವರ್ಗದ ಹಿತಾಸಕ್ತಿಗೆ ದುಡಿದವರ ಬಗ್ಗೆ ಬಿಜೆಪಿ ತಾತ್ಸಾರ ಮಾಡುತ್ತಿದೆ. ಸಾವರ್ಕರ್‌ ಅಂತವರನ್ನು ವಿಜೃಂಭಿಸಿ, ಸಾಮಾಜಿಕ ನ್ಯಾಯದ ಪರ ದುಡಿದ ಅಂಬೇಡ್ಕರ್‌ ಮತ್ತು ಅರಸ್‌ರಂತವರನ್ನು ಜನಮಾನಸದಿಂದ ತೆಗೆದು ಹಾಕಲು ಬಿಜೆಪಿ ಸರ್ಕಾರ ಹೀಗೆ ಮಾಡುತ್ತಿದೆ. ಆರ್‌ಎಸ್‌ಎಸ್‌ನ್ನು ವಿಜೃಂಭಿಸಲು ಹೀಗೆಲ್ಲಾ ಮಾಡ್ತಿದ್ದಾರೆ. ಇದೆಲ್ಲಾ ಬಿಜೆಪಿ ರಚಿಸಿರುವ ಹುನ್ನಾರ. ಈ ಕೂಡಲೇ ದೇವರಾಜ್‌ ಅರಸ್‌ ಪ್ರಶಸ್ತಿ ಪ್ರಕಟ ಮಾಡಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ.

================

ರಮೇಶ್‌ ಅಭಿಮನ್ಯು, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರು ಮತ್ತು ಪತ್ರಕರ್ತರು

“ದೇವರಾಜ್‌ ಅರಸ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋದ ಸಿಎಂ ಯಡಿಯೂರಪ್ಪನವರು ಪ್ರಶಸ್ತಿ ಬಗ್ಗೆ ಮಾತನಾಡಲೇ ಇಲ್ಲ. ಹಿಂದುಳಿದ ಹಾಗೂ ತಳ ಸಮುದಾಯದ ನಾಯಕನನ್ನು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಇದನ್ನು ನಾವು ಖಂಡತುಂಡವಾಗಿ ಖಂಡಿಸುತ್ತೇವೆ. ಬಿಜೆಪಿ ಸರ್ಕಾರ ಕೇವಲ ಅಧಿಕಾರ, ಆಪರೇಷನ್ ಕಮಲ ಮಾಡುವುದರಲ್ಲಿ ಬ್ಯುಸಿಯಾಗಿದೆ. ಹಿಂದುಳಿದ ಸಮುದಾಯಗಳನ್ನು ಮರೆತಿದ್ದಾರೆ. ದೇವರಾಜ್‌ ಅರಸ್ ಅವರಂತಹ ಮಹಾನ್‌ ನಾಯಕನನ್ನು ಆದರ್ಶವಾಗಿಟ್ಟುಕೊಂಡು ಬಿಜೆಪಿ ಅಧಿಕಾರ ನಡೆಸಬೇಕಿತ್ತು. ಆದರೆ ಅಂತಹ ನಾಯಕನಿಗೆ ಬಿಜೆಪಿ ಅವಮಾನ ಮಾಡಿದೆ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...