Homeಕರ್ನಾಟಕವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ವರ್ಷ ಕಳೆದರೂ ದೇವರಾಜ ಅರಸು ಪ್ರಶಸ್ತಿ ಪ್ರಕಟಿಸದ ಬಿಜೆಪಿ ಸರ್ಕಾರ : ಏನಿರಬಹುದು ಹುನ್ನಾರ?

ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ" ಎನ್ನುತ್ತಾರೆ ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌.

- Advertisement -
- Advertisement -

ಪ್ರತಿ ವರ್ಷ ರಾಜ್ಯ ಸರ್ಕಾರ ದೇವರಾಜ ಅರಸು ಹೆಸರಿನಲ್ಲಿ ಕೊಡುತ್ತಿದ್ದ ಪ್ರಶಸ್ತಿಯನ್ನು ಈ ಬಾರಿ ವರ್ಷ ಮುಗಿದರೂ ಈ ಸರ್ಕಾರ ನೆನಪಿಸಿಕೊಂಡಂತಿಲ್ಲ. ಇದಕ್ಕಾಗಿ ಅದು ಕೊಡುತ್ತಿರುವ ಕಾರಣ, ರಾಜ್ಯದಲ್ಲಿ ನೆರೆಹಾವಳಿಯಿಂದಾಗಿ ಪ್ರಶಸ್ತಿ ಕೊಡಲು ಸರ್ಕಾರದ ಬಳಿ ಸಮಯ ಮತ್ತು ಹಣವಿಲ್ಲವಂತೆ. ಅದು ಎಷ್ಟು ಎಂದರೆ ಕೇವಲ ಐದು ಲಕ್ಷ…!

ಪ್ರತಿ ವರ್ಷ ದೇವರಾಜು ಅರಸುರವರ ಜನ್ಮದಿನವಾದ ಆಗಸ್ಟ್‌ 20ರಂದು ಸರ್ಕಾರ ಈ ಪ್ರಶಸ್ತಿಯನ್ನು ನೀಡುತ್ತಿತ್ತು. ಕಳೆದ ಬಾರಿ ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಸಮಿತಿ ಸಾಮಾಜಿಕ ಹೋರಾಟಗಾರ ಶಿವಾಜಿ ಕಾಗುಣಿಕಾರರಿನ್ನು ಆರಿಸಿತ್ತು. ಅಟಲ್‌ ಬಿಹಾರಿ ವಾಜಪೇಯಿಯವರು ನಿಧನದ ಕಾರಣದಿಂದ ಡಿಸೆಂಬರ್‌ನಲ್ಲಿ ಪ್ರಶಸ್ತಿ ನೀಡಲಾಗಿತ್ತು. ಈ ಮೊದಲು ಬಿ.ಎ ಮೋಹಿದ್ದೀನ್, ದಿನೇಶ್ ಅಮೀನ್ ಮಟ್ಟು, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮಹತ್ವದ ಸಾಧಕರಿಗೆ ಈ ಪ್ರಶಸ್ತಿ ಒಲಿದಿದೆ.

ಈ ಬಾರಿ ಆಗಸ್ಟ್‌ ಕಳೆದು ನವೆಂಬರ್‌ ಮುಗಿಯುತ್ತಾ ಬಂದಿದೆ. ಇನ್ನೊಂದು ತಿಂಗಳಲ್ಲಿ ಈ ವರ್ಷವೆ ಮುಗಿದುಬಿಡಲಿದೆ. ಆದರೂ ಸರ್ಕಾರ ಪ್ರಶಸ್ತಿ ನೀಡುವುದನ್ನು ಮರೆತಿದೆಯೋ ಅಥವಾ ಬೇಕಂತಲೇ ವಿಳಂಬ ಮಾಡುತ್ತಿದೆಯೋ?

ಈ ವರ್ಷ ಜುಲೈ 26 ರಂದೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತಲ್ಲದೇ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾದರು. ಆಗಸ್ಟ್‌ ಅಂತ್ಯದೊಳಗೆ ಸಚಿವ ಸಂಪುಟವನ್ನು ರಚಿಸಿದರು. ಸೆಪ್ಟಂಬರ್‌, ಅಕ್ಟೋಬರ್‌, ನವೆಂಬರ್‌ ಮೂರು ತಿಂಗಳು ಕಳೆದರೂ ಅವರ್‍ಯಾರು ಈ ಪ್ರಶಸ್ತಿಯ ಬಗ್ಗೆ ಸೊಲೆತ್ತಿಲ್ಲ.

ಈ ಕುರಿತು ಮಾಹಿತಿ ಪಡೆಯಲು ಹಿಂದುಳಿದ ವರ್ಗಗಳ ಇಲಾಖೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸನ್‌ರವರನ್ನು ಸಂಪರ್ಕಿಸಿಲಾಯಿತು. ಆಗ ಅವರು “ಕುವೆಂಪು ವಿ.ವಿಯ ನಿವೃತ್ತ ಕುಲಪತಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು ಸಮಿತಿಯು ಹೆಸರನ್ನು ಅಂತಿಮಗೊಳಿಸಿದೆ. ಆದರೆ ಫೈಲ್‌ ಅನುಮೋದನೆಗಾಗಿ ನಮ್ಮ ಬಳಿ ಇನ್ನೂ ಬಂದಿಲ್ಲ” ಎನ್ನುತ್ತಾರೆ.

ಸರ್ಕಾರದ ಈ ಧೋರಣೆಯು ಭೂಸುಧಾರಣೆಯ ಶಿಲ್ಪಿ, ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಎಂದೇ ಪ್ರಖ್ಯಾತರಾದ ದೇವರಾಜು ಅರಸುರವರ ಬಗ್ಗೆ ಗೌರವವಿಲ್ಲವೆಂಬುದನ್ನು ತೋರಿಸುತ್ತದೆ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಸಂಬಂಧಪಟ್ಟ ಹೋರಾಟಗಾರನ್ನು ಮಾತನಾಡಿಸಿತು. ಅವರು ಏನು ಹೇಳಿದ್ದಾರೆ ಇಲ್ಲಿದೆ ನೋಡಿ.

ಡಾ. ಸಿ.ಎಸ್‌ ದ್ವಾರಕನಾಥ್‌, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು.

“ನೆರೆಯ ಕಾರಣ ಹೇಳಿ ಪ್ರಶಸ್ತಿ ನೀಡುವುದನ್ನು ತಪ್ಪಿಸುವುದಾದರೆ ತಪ್ಪಿಸಲಿ. ಅದರೆ ಬಹಳಷ್ಟು ಪ್ರಶಸ್ತಿಗಳನ್ನು ಈಗಾಗಲೇ ಪ್ರಕಟ ಮಾಡಿ, ದೇವರಾಜ್ ಅರಸ್ ಅವರ ಪ್ರಶಸ್ತಿಯನ್ನು ಮಾತ್ರ ತಪ್ಪಿಸುತ್ತಾರೆ ಅಂದರೆ ಏನರ್ಥ..? ಮೊನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಿದರು. ಆದರೆ ದೇವರಾಜ್‌ ಅರಸ್ ಅವರ ಪ್ರಶಸ್ತಿ ಮಾತ್ರ ತಪ್ಪಿಸಿರುವುದರ ಹಿಂದಿನ ಹುನ್ನಾರವಾದರೂ ಏನು..? ಎಲ್ಲಾ ಪ್ರಶಸ್ತಿಗಳನ್ನು ನೀಡಿ, ಕೇವಲ ಅರಸ್ ಅವರ ಪ್ರಶಸ್ತಿ ಮಾತ್ರ ನೀಡದಿರುವುದು ಆಶ್ಚರ್ಯಕರ ಸಂಗತಿಯಾಗಿದೆ.

==========

ಕೆ.ಎಸ್‌ ಶಿವರಾಂ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ, ಮೈಸೂರು.

“ದೇವರಾಜ್‌ ಅರಸ್‌ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ತಳ ಸಮುದಾಯದವರಿಗೆ ಅನೇಕ ಸವಲತ್ತುಗಳನ್ನು ನೀಡಿ, ಮುಖ್ಯವಾಹಿನಿಗೆ ತಂದಂತವರು ಅರಸ್. ಆದರೆ ಬಿಜೆಪಿಗೆ ಸಮಾನತೆ, ಮತ್ತು ಸಾಮಾಜಿಕ ನ್ಯಾಯ ಬೇಕಾಗಿಲ್ಲ. ಬಿಜೆಪಿ ಸರ್ಕಾರ ಹಿಂದುತ್ವ, ಕೋಮುಶಕ್ತಿಗಳನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದಿದೆ. ಹಾಗಾಗಿಯೇ ಹಿಂದುಳಿದ ವರ್ಗದ ಹಿತಾಸಕ್ತಿಗೆ ದುಡಿದವರ ಬಗ್ಗೆ ಬಿಜೆಪಿ ತಾತ್ಸಾರ ಮಾಡುತ್ತಿದೆ. ಸಾವರ್ಕರ್‌ ಅಂತವರನ್ನು ವಿಜೃಂಭಿಸಿ, ಸಾಮಾಜಿಕ ನ್ಯಾಯದ ಪರ ದುಡಿದ ಅಂಬೇಡ್ಕರ್‌ ಮತ್ತು ಅರಸ್‌ರಂತವರನ್ನು ಜನಮಾನಸದಿಂದ ತೆಗೆದು ಹಾಕಲು ಬಿಜೆಪಿ ಸರ್ಕಾರ ಹೀಗೆ ಮಾಡುತ್ತಿದೆ. ಆರ್‌ಎಸ್‌ಎಸ್‌ನ್ನು ವಿಜೃಂಭಿಸಲು ಹೀಗೆಲ್ಲಾ ಮಾಡ್ತಿದ್ದಾರೆ. ಇದೆಲ್ಲಾ ಬಿಜೆಪಿ ರಚಿಸಿರುವ ಹುನ್ನಾರ. ಈ ಕೂಡಲೇ ದೇವರಾಜ್‌ ಅರಸ್‌ ಪ್ರಶಸ್ತಿ ಪ್ರಕಟ ಮಾಡಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ.

================

ರಮೇಶ್‌ ಅಭಿಮನ್ಯು, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರು ಮತ್ತು ಪತ್ರಕರ್ತರು

“ದೇವರಾಜ್‌ ಅರಸ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋದ ಸಿಎಂ ಯಡಿಯೂರಪ್ಪನವರು ಪ್ರಶಸ್ತಿ ಬಗ್ಗೆ ಮಾತನಾಡಲೇ ಇಲ್ಲ. ಹಿಂದುಳಿದ ಹಾಗೂ ತಳ ಸಮುದಾಯದ ನಾಯಕನನ್ನು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಇದನ್ನು ನಾವು ಖಂಡತುಂಡವಾಗಿ ಖಂಡಿಸುತ್ತೇವೆ. ಬಿಜೆಪಿ ಸರ್ಕಾರ ಕೇವಲ ಅಧಿಕಾರ, ಆಪರೇಷನ್ ಕಮಲ ಮಾಡುವುದರಲ್ಲಿ ಬ್ಯುಸಿಯಾಗಿದೆ. ಹಿಂದುಳಿದ ಸಮುದಾಯಗಳನ್ನು ಮರೆತಿದ್ದಾರೆ. ದೇವರಾಜ್‌ ಅರಸ್ ಅವರಂತಹ ಮಹಾನ್‌ ನಾಯಕನನ್ನು ಆದರ್ಶವಾಗಿಟ್ಟುಕೊಂಡು ಬಿಜೆಪಿ ಅಧಿಕಾರ ನಡೆಸಬೇಕಿತ್ತು. ಆದರೆ ಅಂತಹ ನಾಯಕನಿಗೆ ಬಿಜೆಪಿ ಅವಮಾನ ಮಾಡಿದೆ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...