Homeಕರ್ನಾಟಕರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಆರೋಪ: ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ FIR ದಾಖಲು

ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಆರೋಪ: ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ FIR ದಾಖಲು

- Advertisement -
- Advertisement -

ಬೆಂಗಳೂರು: ನಗರದ ಭಾರತಿನಗರ ಠಾಣೆಯ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ (44) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆ.ಆರ್.ಪುರಂನ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (FIR) ದಾಖಲಾಗಿದೆ. ಕೊಲೆಯಾದ ಶಿವಪ್ರಕಾಶ್ ಅವರ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕೊಲೆಯ ಹಿನ್ನೆಲೆ ಮತ್ತು ಆರೋಪಗಳು:

ಮಂಗಳವಾರ ರಾತ್ರಿ ಹಲಸೂರು ಕೆರೆಯ ಸಮೀಪದ ಹರ್ಮಿಟ್ ಕಾಲೋನಿಯ ಮೀನಿ ಅವೆನ್ಯೂ ರಸ್ತೆಯಲ್ಲಿರುವ ಶಿವಪ್ರಕಾಶ್ ಮನೆಯ ಮುಂದೆ ಈ ಕೊಲೆ ನಡೆದಿದೆ. ಬಿಕ್ಲು ಶಿವ ತನ್ನ ಚಾಲಕ ಇಮ್ರಾನ್ ಖಾನ್ ಮತ್ತು ಸ್ನೇಹಿತ ಲೋಕೇಶ್ ಜೊತೆ ಮಾತನಾಡುತ್ತಿದ್ದಾಗ, ಬಿಳಿ ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಬಂದ 8-9 ಮಂದಿ ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದೆ. ತಲೆಬುರುಡೆ ತುಂಡು ತುಂಡಾಗಿ ಒಡೆದಿದ್ದು, ಮುಖ ಸಂಪೂರ್ಣವಾಗಿ ವಿರೂಪಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯ ಭೀಕರತೆಯನ್ನು ಕಂಡು ಹೋಟೆಲ್‌ನಲ್ಲಿ ಊಟ ಮಾಡುತ್ತಿದ್ದ ಸಾಕ್ಷಿಗಳು ಭಯಭೀತರಾಗಿ ಓಡಿಹೋಗಿದ್ದಾರೆ.

ಕೊಲೆಯಾದ ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮಿ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಈ ಕೊಲೆಗೆ ಪೂರ್ವ ಬೆಂಗಳೂರಿನ ಕಿತ್ತಕನೂರು ಗ್ರಾಮದ ಜಮೀನು ವಿವಾದವೇ ಕಾರಣ ಎಂದು ಆರೋಪಿಸಿದ್ದಾರೆ. ಶಿವಪ್ರಕಾಶ್ 2023ರಲ್ಲಿ ಒಂದು ಆಸ್ತಿಯನ್ನು ಖರೀದಿಸಿ ಜನರಲ್ ಪವರ್ ಆಫ್ ಅಟಾರ್ನಿ (GPA) ಹೊಂದಿದ್ದ. ಆ ಜಾಗದಲ್ಲಿ ಶೆಡ್ ನಿರ್ಮಿಸಿ, ಇಬ್ಬರು ಮಹಿಳೆಯರನ್ನು ಭದ್ರತಾ ಸಿಬ್ಬಂದಿಯಾಗಿ ನೇಮಿಸಿದ್ದ.

ಫೆಬ್ರವರಿ 11ರಂದು, ಜಗದೀಶ್ (A1), ಕಿರಣ್ (A2), ವಿಮಲ್ (A3), ಅನಿಲ್ (A4) ಸೇರಿದಂತೆ ಆರೋಪಿಗಳ ಗುಂಪು ಆ ಸ್ಥಳಕ್ಕೆ ಆಗಮಿಸಿ, ಭದ್ರತಾ ಸಿಬ್ಬಂದಿ ಮಹಿಳೆಯರನ್ನು ಬಲವಂತವಾಗಿ ಹೊರಹಾಕಿ, ಶಿವನ GPA ಹಕ್ಕುಗಳನ್ನು ಜಗದೀಶ್‌ಗೆ ವರ್ಗಾಯಿಸುವಂತೆ ಬೆದರಿಕೆ ಹಾಕಿತ್ತು. ಈ ಬಗ್ಗೆ ಶಿವಪ್ರಕಾಶ್ ಫೆಬ್ರವರಿ 21ರಂದೇ ಭಾರತಿನಗರ ಠಾಣೆಯಲ್ಲಿ ಜಗದೀಶ್ ಮತ್ತು ಇತರರ ವಿರುದ್ಧ ಜೀವ ಬೆದರಿಕೆ ಮತ್ತು ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗಿದ್ದರೂ ಬೆದರಿಕೆಗಳು ಮುಂದುವರಿದಿದ್ದವು ಎಂದು ತಾಯಿ ವಿವರಿಸಿದ್ದಾರೆ.

ವಿಜಯಲಕ್ಷ್ಮಿ ಅವರ ದೂರಿನಲ್ಲಿ, “ಮಾಜಿ ಸಚಿವ ಬೈರತಿ ಬಸವರಾಜ್, ಜಗದೀಶ್ ಮತ್ತು ಇತರರಿಂದ ನನಗೆ ಪ್ರಾಣ ಬೆದರಿಕೆಯಿದೆ ಎಂದು ಹಲವು ಬಾರಿ ಮಗ ಹೇಳಿದ್ದ. ಬಸವರಾಜ್ ಕುಮ್ಮಕ್ಕಿನಿಂದಲೇ ಈ ಕೊಲೆ ನಡೆದಿದೆ” ಎಂದು ನೇರವಾಗಿ ಆರೋಪಿಸಿದ್ದಾರೆ. ದೂರಿನ ಸಂಬಂಧ, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103 (ಪಿತೂರಿ) ಮತ್ತು 190 (ಇತರ ಅಪರಾಧಕ್ಕೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. FIR ನಲ್ಲಿ ಬೈರತಿ ಬಸವರಾಜ್ ಅವರನ್ನು 5ನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ.

ಮಾಜಿ ಸಚಿವ ಬೈರತಿ ಬಸವರಾಜ್ ಪ್ರತಿಕ್ರಿಯೆ:

ತಮ್ಮ ವಿರುದ್ಧ FIR ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್, ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಕೊಲೆ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಕೊಲೆಯಾದವನ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ. ಯಾರೇ ಸುಮ್ಮನೆ ದೂರು ನೀಡಿದರೂ FIR ದಾಖಲಿಸಬಹುದೇ? FIR ದಾಖಲಿಸುವ ಮುನ್ನ ಪೊಲೀಸರು ನನ್ನಿಂದ ಮಾಹಿತಿ ಪಡೆದಿದ್ದಾರಾ?” ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

“ಈ ವಿಚಾರದಲ್ಲಿ ನನ್ನ ಹೆಸರು ತಂದಿದ್ದಕ್ಕೆ ತುಂಬಾ ಬೇಸರವಾಗಿದೆ. ಇದರ ಹಿಂದೆ ರಾಜಕೀಯ ದುರುದ್ದೇಶ ಇರಬಹುದು. ನಾನು ಕಾನೂನು ಹೋರಾಟ ಮಾಡುತ್ತೇನೆ” ಎಂದು ಬಸವರಾಜ್ ಹೇಳಿದ್ದಾರೆ.

ಪೊಲೀಸ್ ತನಿಖೆ:

ಜಂಟಿ ಪೊಲೀಸ್ ಆಯುಕ್ತ (ಪೂರ್ವ) ಬಿ. ರಮೇಶ್ ಅವರು, ದಾಳಿ ಮಾಡಿದವರು ಯಾರು ಎಂದು ತಿಳಿದರೆ ಕೊಲೆಯ ಹಿಂದಿನ ಉದ್ದೇಶ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ತನಿಖೆಯ ಭಾಗವಾಗಿ ಐವರು ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಯಾದ ಶಿವಪ್ರಕಾಶ್ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ 11 ಕ್ರಿಮಿನಲ್ ಪ್ರಕರಣಗಳಿದ್ದು, 2006ರಲ್ಲಿ ರೌಡಿಶೀಟ್ ತೆರೆಯಲಾಗಿತ್ತು. ಇತ್ತೀಚೆಗೆ ಅವರು ರೌಡಿ ಪೆರೇಡ್‌ನಲ್ಲಿ ಭಾಗವಹಿಸಿದ್ದರು.

ವರದಿ ಮಾಡುತ್ತಿದ್ದಾಗಲೇ ಪತ್ರಕರ್ತೆ ಮೇಲೆ ಭೀಕರ ಹಲ್ಲೆ: ಅಷ್ಟಕ್ಕೂ ಆಗಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...