Homeಕರ್ನಾಟಕಟಿಪ್ಪು ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ, ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ: ಬಿಕೆ ಹರಿಪ್ರಸಾದ್

ಟಿಪ್ಪು ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ, ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ: ಬಿಕೆ ಹರಿಪ್ರಸಾದ್

- Advertisement -
- Advertisement -

ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ ಎಂದಿದ್ದ ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿಕೆಗೆ ತಿರುಗೇಟು ನೀಡಿರುವ ಪರಿಷತ್ ವಿಪಕ್ಷ ನಾಯಕರಾದ ಬಿಕೆ ಹರಿಪ್ರಸಾದ್, ’ಟಿಪ್ಪು ಸುಲ್ತಾನ್ ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ ಹಾಗೂ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ. ಅನುಮಾನವಿದ್ದರೆ ಎದೆ ಬಗೆದು ನೋಡಿ’ ಎಂದಿದ್ದಾರೆ.

’ಪಠ್ಯ ಪುಸ್ತಕದಲ್ಲಿ ಉದ್ದೇಶಪೂರ್ವಕವಾಗಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಬಿಜೆಪಿ ಸರ್ಕಾರ ಮಾಡಿರುವ ಘನಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಟಿಪ್ಪು ಸುಲ್ತಾನರ ವಿಷಯವನ್ನ ಮತ್ತೆ ಮುನ್ನಲೆಗೆ ತಂದು ವಿಷಯವನ್ನ ಡೈವರ್ಟ್ ಮಾಡಲು ಸಚಿವ ಆರ್.ಅಶೋಕ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ’ ಎಂದು ಹೇಳಿದ್ದಾರೆ.

’ಟಿಪ್ಪು ಸುಲ್ತಾನರಿಗೆ ವೀರಾಧಿವೀರ, ಶೂರಾಧಿ ಶೂರ, ಮಹಾನ್ ಪರಾಕ್ರಮಿ, “ಮೈಸೂರಿನ ಹುಲಿ” ಎಂಬ ಬಿರುದುಗಳನ್ನ ಕಾಂಗ್ರೆಸ್ ಪಕ್ಷ ನೀಡಿದ್ದಲ್ಲ ಸ್ವಾಮಿ ಇತಿಹಾಸಕಾರರು. ಅದನ್ನ ಎಥಾವತ್ತು ಟಿಪ್ಪುವಿನ ಪರಾಕ್ರಮವನ್ನ, ಧೈರ್ಯ, ಸಾಹಸ, ದೇಶಪ್ರೇಮದ ಕಥನಗಳನ್ನ 425 ಪುಟಗಳ ಪುಸ್ತಕವನ್ನ ಪ್ರಕಟಿಸಿದ್ದು ಬಿಜೆಪಿ ಸರ್ಕಾರ ಎಂಬುದು ಅಷ್ಟು ಬೇಗ ಮರೆತು ಹೋಯಿತಾ..? ಪುಸ್ತಕದ ಮುನ್ನುಡಿಯಲ್ಲಿ 2012-13ರಲ್ಲಿ ಸಿಎಂ ಆಗಿದ್ದ ಜಗದೀಶ್ ಶೆಟ್ಟರ್ ಹಾಗೂ ಕನ್ನಡ ಸಂಸ್ಕೃತಿ ಸಚಿವರಾಗಿದ್ದ ಗೋವಿಂದ ಕಾರಜೋಳರು ಪುಸ್ತಕದಲ್ಲಿ ಬರೆದಿರುವ ಮುನ್ನಡಿಯನ್ನ ಕೋಮುವಾದದ ಕನ್ನಡಕ ತೆಗದು ಓದಿ’ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

“ಕರ್ನಾಟಕ ಇತಿಹಾಸದಲ್ಲಿ 1782-1799ರ ನಡುವಿನ ಅವಧಿಯು ವಿಶಿಷ್ಟವಾದದ್ದು. ಈ ಅವಧಿಯಲ್ಲಿ ಮೈಸೂರು ಸಾಮ್ರಾಜ್ಯ ಟಿಪ್ಪು ಸುಲ್ತಾನನ ಆಡಳಿತಕ್ಕೆ ಒಳಪಟ್ಟಿತ್ತು. ಏಕಾಂಗಿಯಾಗಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ತೀವ್ರವಾಗಿ ಹೋರಾಡಿ, ಅವರಿಗೆ ಸೋಲಿನ ರುಚಿಯನ್ನು ತೋರಿಸುವಲ್ಲೂ ಯಶಸ್ವಿಯಾಗಿದ್ದ. ಅದು ಕೂಡಾ ಒಂದು ಬಾರಿ ಅಲ್ಲ, ಎರಡು ಬಾರಿ. ಅದಾಗ್ಯೂ ನಾಲ್ಕನೇ ಆಂಗ್ಲೋ- ಮೈಸೂರು ಯುದ್ಧದಲ್ಲಿ ಬ್ರಿಟಿಷರ ವಿರುದ್ಧ ಕೊನೆಯವರೆಗೂ ಹೋರಾಡಿ ರಣರಂಗದಲ್ಲೇ ವೀರಮರಣವನ್ನಪ್ಪಿದ. ಈ ವಾಕ್ಯಗಳನ್ನ ಸರ್ಕಾರವೇ ಪ್ರಕಟಿಸಿದ ಪುಸ್ತಕದಲ್ಲಿ ಸಚಿವ ಗೋವಿಂದ ಕಾರಜೋಳ ಅವರು ಮುನ್ನುಡಿಯಲ್ಲಿ ಬರೆದಿದ್ದಾರೆ. ಪುಸ್ತಕ ಖಾಲಿಯಾಗಿದ್ದರೆ ಇನ್ನೊಮ್ಮೆ ಪ್ರಕಟಿಸಿ ತೊಂದರೆ ಇಲ್ಲ. ಇತಿಹಾಸದ ಅರಿವು ನಿಮಗೆ ತೀರಾ ಅಗತ್ಯವಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಬಿಜೆಪಿಯವರು ಇತ್ತೀಚೆಗೆ ಇತಿಹಾಸ ಅಷ್ಟೇ ಬದಲಾಯಿಸುತ್ತಿಲ್ಲ, ತಾವೇ ಹೇಳಿದ್ದ ಹೇಳಿಕೆಗಳನ್ನು, ಪ್ರಕಟಿಸಿದ್ದ ಪುಸ್ತಕಗಳ ಬಗ್ಗೆಯೂ ಸುಳ್ಳನ್ನ ಹೇಳಲು ಆರಂಭಿಸಿದ್ದಾರೆ. ಬಹುಶಃ ವಾಟ್ಸಪ್ ಯುನಿವರ್ಸಿಟಿಯ ಪ್ರಾರಂಭ ಆಗಿದ್ದು 2014ರಲ್ಲಿ, ಜಗದೀಶ್ ಶೆಟ್ಟರ್ ಸಿಎಂ ಆಗಿದ್ದು 2012-13ರಲ್ಲಿ. ಹೀಗಾಗಿ 2014 ಮೊದಲ ಎಲ್ಲಾ ಇತಿಹಾಸವೂ ಬಿಜೆಪಿಗೆ ಸುಳ್ಳಂತೆ ಭಾವಿಸುತ್ತಿದೆ. ಇತ್ತೀಚೆಗೆ ಕೋಟ ಶ್ರೀನಿವಾಸ್ ಪೂಜಾರಿಯವರು ಕೂಡ ವಾಟ್ಸಪ್ ಮಾಹಿತಿ ಹಾಕಿ ತಮ್ಮ ಇತಿಹಾಸ ತಿಳುವಳಿಕೆಯನ್ನ ಜಗಜ್ಜಾಹೀರು ಮಾಡಿಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

’ಶಿಕ್ಷಣ ಇಲಾಖೆಯಲ್ಲಿ ಪಠ್ಯ ಪರಿಷ್ಕರಣೆ ಹೆಸರಿನಲ್ಲಿ ನಡೆದಿರುವ ಪ್ರಮಾದಗಳಿಗೆ ಉತ್ತರ ಕೊಡಲು ಶಿಕ್ಷಣ ಸಚಿವರು ಅಸಮರ್ಥರು ಎಂಬುದನ್ನ ಸಾಬೀತು ಮಾಡಿದ್ದಾರೆ. ಶಿಕ್ಷಣ ಕ್ಷೇತ್ರದ ಬಗ್ಗೆ ಕಂದಾಯ ಸಚಿವರು ಉತ್ತರ ನೀಡುತ್ತಿರುವುದು ಸಂದೇಶವೇನು..? ಮಾಜಿ ಪ್ರಧಾನಿ ದೇವೇಗೌಡರಾದಿಯಾಗಿ, ಈ ನಾಡಿನ ಶಿಕ್ಷಣ ಪ್ರೇಮಿಗಳು, ಸಾಹಿತಿ ಚಿಂತಕರು, ಸ್ವಾಮೀಜಿಗಳು ಮುಖ್ಯಮಂತ್ರಿಗಳಿಗೆ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆಯುತ್ತಲೇ ಇದ್ದಾರೆ. ಕನಿಷ್ಠ ಸೌಜನ್ಯಕ್ಕೂ ಸಿಎಂ ಸಭೆ ಕರೆದು ಸ್ಪಷ್ಟಿಕರಣ ನೀಡಲು ಸಾಧ್ಯವಾಗುತ್ತಿಲ್ಲ. ಇದು ಪ್ರಜಾಪ್ರಭುತ್ವ ನಡೆಯಲ್ಲ. ಈಗಲು ಕಾಲ ಮಿಂಚಿಲ್ಲ, ಕೂಡಲೇ ಅವಿವೇಕಿಯೊಬ್ಬ ಮಾತ್ರ ಮಾಡಿರುವ ಪಠ್ಯ ಪರಿಷ್ಕರಣೆಯನ್ನ ರದ್ದುಗೊಳಿಸಿ, ಕೂಡಲೇ ಹಿಂದಿನ ಪಠ್ಯ ಪುಸ್ತಕವನ್ನೇ ಭೋದಿಸಲು ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ: ಬರ್ಬರವಾಗಿ ಕೊಲೆಯಾದ ಮಹಿಳೆಯರ ಸುಳಿವು ನೀಡಿದರೆ 1 ಲಕ್ಷ ಬಹುಮಾನ

ಬಿಜೆಪಿ ನಾಯಕರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು, ”ಕಂದಾಯ ಸಚಿವ ಆರ್ ಅಶೋಕ್ ಅವರೇ ಈ ಫೋಟೋ ನೆನಪಿದ್ಯಾ..? ಇದು ಟಿಪ್ಪುವಿನ ಪೋಷಕು ಧರಿಸಿ ಆಗಿನ ಸಿಎಂ ಶೆಟ್ಟರ್ ಜೊತೆಗೆ ಪೋಸ್ ನೀಡಿದವರು ತಾವೇ ಅಲ್ಲವೇ..? ಆಗ ಮೈಮೇಲಷ್ಟೆಯಲ್ಲ, ತಲೆ ಮೇಲೆ ಹೊತ್ತು ಮೆರೆಸಿದ್ದನ್ನ ಮರೆತಿದ್ದೀರಾ..? ಇತಿಹಾಸ ದಾಖಲೆ ಸಮೇತ ಸುಳ್ಳನ್ನ ಬೆತ್ತಲೆ ಮಾಡಿ ಬಿಡುತ್ತೆ ಹುಶಾರ್…!’ ಎಂದಿದ್ದಾರೆ.

 


ಇದನ್ನೂ ಓದಿ: ಮೋದಿ ಭೇಟಿಗಾಗಿ ಡಾಂಬರೀಕರಣ ಮಾಡಿದ್ದ 6 ಕೋಟಿ ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ವರದಿ ಕೇಳಿದ ಪ್ರಧಾನಿ ಕಚೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...