Homeಕರ್ನಾಟಕಟಿಪ್ಪು ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ, ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ: ಬಿಕೆ ಹರಿಪ್ರಸಾದ್

ಟಿಪ್ಪು ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ, ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ: ಬಿಕೆ ಹರಿಪ್ರಸಾದ್

- Advertisement -
- Advertisement -

ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ ಎಂದಿದ್ದ ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿಕೆಗೆ ತಿರುಗೇಟು ನೀಡಿರುವ ಪರಿಷತ್ ವಿಪಕ್ಷ ನಾಯಕರಾದ ಬಿಕೆ ಹರಿಪ್ರಸಾದ್, ’ಟಿಪ್ಪು ಸುಲ್ತಾನ್ ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ ಹಾಗೂ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ. ಅನುಮಾನವಿದ್ದರೆ ಎದೆ ಬಗೆದು ನೋಡಿ’ ಎಂದಿದ್ದಾರೆ.

’ಪಠ್ಯ ಪುಸ್ತಕದಲ್ಲಿ ಉದ್ದೇಶಪೂರ್ವಕವಾಗಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಬಿಜೆಪಿ ಸರ್ಕಾರ ಮಾಡಿರುವ ಘನಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಟಿಪ್ಪು ಸುಲ್ತಾನರ ವಿಷಯವನ್ನ ಮತ್ತೆ ಮುನ್ನಲೆಗೆ ತಂದು ವಿಷಯವನ್ನ ಡೈವರ್ಟ್ ಮಾಡಲು ಸಚಿವ ಆರ್.ಅಶೋಕ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ’ ಎಂದು ಹೇಳಿದ್ದಾರೆ.

’ಟಿಪ್ಪು ಸುಲ್ತಾನರಿಗೆ ವೀರಾಧಿವೀರ, ಶೂರಾಧಿ ಶೂರ, ಮಹಾನ್ ಪರಾಕ್ರಮಿ, “ಮೈಸೂರಿನ ಹುಲಿ” ಎಂಬ ಬಿರುದುಗಳನ್ನ ಕಾಂಗ್ರೆಸ್ ಪಕ್ಷ ನೀಡಿದ್ದಲ್ಲ ಸ್ವಾಮಿ ಇತಿಹಾಸಕಾರರು. ಅದನ್ನ ಎಥಾವತ್ತು ಟಿಪ್ಪುವಿನ ಪರಾಕ್ರಮವನ್ನ, ಧೈರ್ಯ, ಸಾಹಸ, ದೇಶಪ್ರೇಮದ ಕಥನಗಳನ್ನ 425 ಪುಟಗಳ ಪುಸ್ತಕವನ್ನ ಪ್ರಕಟಿಸಿದ್ದು ಬಿಜೆಪಿ ಸರ್ಕಾರ ಎಂಬುದು ಅಷ್ಟು ಬೇಗ ಮರೆತು ಹೋಯಿತಾ..? ಪುಸ್ತಕದ ಮುನ್ನುಡಿಯಲ್ಲಿ 2012-13ರಲ್ಲಿ ಸಿಎಂ ಆಗಿದ್ದ ಜಗದೀಶ್ ಶೆಟ್ಟರ್ ಹಾಗೂ ಕನ್ನಡ ಸಂಸ್ಕೃತಿ ಸಚಿವರಾಗಿದ್ದ ಗೋವಿಂದ ಕಾರಜೋಳರು ಪುಸ್ತಕದಲ್ಲಿ ಬರೆದಿರುವ ಮುನ್ನಡಿಯನ್ನ ಕೋಮುವಾದದ ಕನ್ನಡಕ ತೆಗದು ಓದಿ’ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

“ಕರ್ನಾಟಕ ಇತಿಹಾಸದಲ್ಲಿ 1782-1799ರ ನಡುವಿನ ಅವಧಿಯು ವಿಶಿಷ್ಟವಾದದ್ದು. ಈ ಅವಧಿಯಲ್ಲಿ ಮೈಸೂರು ಸಾಮ್ರಾಜ್ಯ ಟಿಪ್ಪು ಸುಲ್ತಾನನ ಆಡಳಿತಕ್ಕೆ ಒಳಪಟ್ಟಿತ್ತು. ಏಕಾಂಗಿಯಾಗಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ತೀವ್ರವಾಗಿ ಹೋರಾಡಿ, ಅವರಿಗೆ ಸೋಲಿನ ರುಚಿಯನ್ನು ತೋರಿಸುವಲ್ಲೂ ಯಶಸ್ವಿಯಾಗಿದ್ದ. ಅದು ಕೂಡಾ ಒಂದು ಬಾರಿ ಅಲ್ಲ, ಎರಡು ಬಾರಿ. ಅದಾಗ್ಯೂ ನಾಲ್ಕನೇ ಆಂಗ್ಲೋ- ಮೈಸೂರು ಯುದ್ಧದಲ್ಲಿ ಬ್ರಿಟಿಷರ ವಿರುದ್ಧ ಕೊನೆಯವರೆಗೂ ಹೋರಾಡಿ ರಣರಂಗದಲ್ಲೇ ವೀರಮರಣವನ್ನಪ್ಪಿದ. ಈ ವಾಕ್ಯಗಳನ್ನ ಸರ್ಕಾರವೇ ಪ್ರಕಟಿಸಿದ ಪುಸ್ತಕದಲ್ಲಿ ಸಚಿವ ಗೋವಿಂದ ಕಾರಜೋಳ ಅವರು ಮುನ್ನುಡಿಯಲ್ಲಿ ಬರೆದಿದ್ದಾರೆ. ಪುಸ್ತಕ ಖಾಲಿಯಾಗಿದ್ದರೆ ಇನ್ನೊಮ್ಮೆ ಪ್ರಕಟಿಸಿ ತೊಂದರೆ ಇಲ್ಲ. ಇತಿಹಾಸದ ಅರಿವು ನಿಮಗೆ ತೀರಾ ಅಗತ್ಯವಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಬಿಜೆಪಿಯವರು ಇತ್ತೀಚೆಗೆ ಇತಿಹಾಸ ಅಷ್ಟೇ ಬದಲಾಯಿಸುತ್ತಿಲ್ಲ, ತಾವೇ ಹೇಳಿದ್ದ ಹೇಳಿಕೆಗಳನ್ನು, ಪ್ರಕಟಿಸಿದ್ದ ಪುಸ್ತಕಗಳ ಬಗ್ಗೆಯೂ ಸುಳ್ಳನ್ನ ಹೇಳಲು ಆರಂಭಿಸಿದ್ದಾರೆ. ಬಹುಶಃ ವಾಟ್ಸಪ್ ಯುನಿವರ್ಸಿಟಿಯ ಪ್ರಾರಂಭ ಆಗಿದ್ದು 2014ರಲ್ಲಿ, ಜಗದೀಶ್ ಶೆಟ್ಟರ್ ಸಿಎಂ ಆಗಿದ್ದು 2012-13ರಲ್ಲಿ. ಹೀಗಾಗಿ 2014 ಮೊದಲ ಎಲ್ಲಾ ಇತಿಹಾಸವೂ ಬಿಜೆಪಿಗೆ ಸುಳ್ಳಂತೆ ಭಾವಿಸುತ್ತಿದೆ. ಇತ್ತೀಚೆಗೆ ಕೋಟ ಶ್ರೀನಿವಾಸ್ ಪೂಜಾರಿಯವರು ಕೂಡ ವಾಟ್ಸಪ್ ಮಾಹಿತಿ ಹಾಕಿ ತಮ್ಮ ಇತಿಹಾಸ ತಿಳುವಳಿಕೆಯನ್ನ ಜಗಜ್ಜಾಹೀರು ಮಾಡಿಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

’ಶಿಕ್ಷಣ ಇಲಾಖೆಯಲ್ಲಿ ಪಠ್ಯ ಪರಿಷ್ಕರಣೆ ಹೆಸರಿನಲ್ಲಿ ನಡೆದಿರುವ ಪ್ರಮಾದಗಳಿಗೆ ಉತ್ತರ ಕೊಡಲು ಶಿಕ್ಷಣ ಸಚಿವರು ಅಸಮರ್ಥರು ಎಂಬುದನ್ನ ಸಾಬೀತು ಮಾಡಿದ್ದಾರೆ. ಶಿಕ್ಷಣ ಕ್ಷೇತ್ರದ ಬಗ್ಗೆ ಕಂದಾಯ ಸಚಿವರು ಉತ್ತರ ನೀಡುತ್ತಿರುವುದು ಸಂದೇಶವೇನು..? ಮಾಜಿ ಪ್ರಧಾನಿ ದೇವೇಗೌಡರಾದಿಯಾಗಿ, ಈ ನಾಡಿನ ಶಿಕ್ಷಣ ಪ್ರೇಮಿಗಳು, ಸಾಹಿತಿ ಚಿಂತಕರು, ಸ್ವಾಮೀಜಿಗಳು ಮುಖ್ಯಮಂತ್ರಿಗಳಿಗೆ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆಯುತ್ತಲೇ ಇದ್ದಾರೆ. ಕನಿಷ್ಠ ಸೌಜನ್ಯಕ್ಕೂ ಸಿಎಂ ಸಭೆ ಕರೆದು ಸ್ಪಷ್ಟಿಕರಣ ನೀಡಲು ಸಾಧ್ಯವಾಗುತ್ತಿಲ್ಲ. ಇದು ಪ್ರಜಾಪ್ರಭುತ್ವ ನಡೆಯಲ್ಲ. ಈಗಲು ಕಾಲ ಮಿಂಚಿಲ್ಲ, ಕೂಡಲೇ ಅವಿವೇಕಿಯೊಬ್ಬ ಮಾತ್ರ ಮಾಡಿರುವ ಪಠ್ಯ ಪರಿಷ್ಕರಣೆಯನ್ನ ರದ್ದುಗೊಳಿಸಿ, ಕೂಡಲೇ ಹಿಂದಿನ ಪಠ್ಯ ಪುಸ್ತಕವನ್ನೇ ಭೋದಿಸಲು ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ: ಬರ್ಬರವಾಗಿ ಕೊಲೆಯಾದ ಮಹಿಳೆಯರ ಸುಳಿವು ನೀಡಿದರೆ 1 ಲಕ್ಷ ಬಹುಮಾನ

ಬಿಜೆಪಿ ನಾಯಕರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು, ”ಕಂದಾಯ ಸಚಿವ ಆರ್ ಅಶೋಕ್ ಅವರೇ ಈ ಫೋಟೋ ನೆನಪಿದ್ಯಾ..? ಇದು ಟಿಪ್ಪುವಿನ ಪೋಷಕು ಧರಿಸಿ ಆಗಿನ ಸಿಎಂ ಶೆಟ್ಟರ್ ಜೊತೆಗೆ ಪೋಸ್ ನೀಡಿದವರು ತಾವೇ ಅಲ್ಲವೇ..? ಆಗ ಮೈಮೇಲಷ್ಟೆಯಲ್ಲ, ತಲೆ ಮೇಲೆ ಹೊತ್ತು ಮೆರೆಸಿದ್ದನ್ನ ಮರೆತಿದ್ದೀರಾ..? ಇತಿಹಾಸ ದಾಖಲೆ ಸಮೇತ ಸುಳ್ಳನ್ನ ಬೆತ್ತಲೆ ಮಾಡಿ ಬಿಡುತ್ತೆ ಹುಶಾರ್…!’ ಎಂದಿದ್ದಾರೆ.

 


ಇದನ್ನೂ ಓದಿ: ಮೋದಿ ಭೇಟಿಗಾಗಿ ಡಾಂಬರೀಕರಣ ಮಾಡಿದ್ದ 6 ಕೋಟಿ ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ವರದಿ ಕೇಳಿದ ಪ್ರಧಾನಿ ಕಚೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...