Homeಕರ್ನಾಟಕಟಿಪ್ಪು ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ, ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ: ಬಿಕೆ ಹರಿಪ್ರಸಾದ್

ಟಿಪ್ಪು ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ, ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ: ಬಿಕೆ ಹರಿಪ್ರಸಾದ್

- Advertisement -
- Advertisement -

ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ ಎಂದಿದ್ದ ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿಕೆಗೆ ತಿರುಗೇಟು ನೀಡಿರುವ ಪರಿಷತ್ ವಿಪಕ್ಷ ನಾಯಕರಾದ ಬಿಕೆ ಹರಿಪ್ರಸಾದ್, ’ಟಿಪ್ಪು ಸುಲ್ತಾನ್ ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ ಹಾಗೂ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ. ಅನುಮಾನವಿದ್ದರೆ ಎದೆ ಬಗೆದು ನೋಡಿ’ ಎಂದಿದ್ದಾರೆ.

’ಪಠ್ಯ ಪುಸ್ತಕದಲ್ಲಿ ಉದ್ದೇಶಪೂರ್ವಕವಾಗಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಬಿಜೆಪಿ ಸರ್ಕಾರ ಮಾಡಿರುವ ಘನಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಟಿಪ್ಪು ಸುಲ್ತಾನರ ವಿಷಯವನ್ನ ಮತ್ತೆ ಮುನ್ನಲೆಗೆ ತಂದು ವಿಷಯವನ್ನ ಡೈವರ್ಟ್ ಮಾಡಲು ಸಚಿವ ಆರ್.ಅಶೋಕ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ’ ಎಂದು ಹೇಳಿದ್ದಾರೆ.

’ಟಿಪ್ಪು ಸುಲ್ತಾನರಿಗೆ ವೀರಾಧಿವೀರ, ಶೂರಾಧಿ ಶೂರ, ಮಹಾನ್ ಪರಾಕ್ರಮಿ, “ಮೈಸೂರಿನ ಹುಲಿ” ಎಂಬ ಬಿರುದುಗಳನ್ನ ಕಾಂಗ್ರೆಸ್ ಪಕ್ಷ ನೀಡಿದ್ದಲ್ಲ ಸ್ವಾಮಿ ಇತಿಹಾಸಕಾರರು. ಅದನ್ನ ಎಥಾವತ್ತು ಟಿಪ್ಪುವಿನ ಪರಾಕ್ರಮವನ್ನ, ಧೈರ್ಯ, ಸಾಹಸ, ದೇಶಪ್ರೇಮದ ಕಥನಗಳನ್ನ 425 ಪುಟಗಳ ಪುಸ್ತಕವನ್ನ ಪ್ರಕಟಿಸಿದ್ದು ಬಿಜೆಪಿ ಸರ್ಕಾರ ಎಂಬುದು ಅಷ್ಟು ಬೇಗ ಮರೆತು ಹೋಯಿತಾ..? ಪುಸ್ತಕದ ಮುನ್ನುಡಿಯಲ್ಲಿ 2012-13ರಲ್ಲಿ ಸಿಎಂ ಆಗಿದ್ದ ಜಗದೀಶ್ ಶೆಟ್ಟರ್ ಹಾಗೂ ಕನ್ನಡ ಸಂಸ್ಕೃತಿ ಸಚಿವರಾಗಿದ್ದ ಗೋವಿಂದ ಕಾರಜೋಳರು ಪುಸ್ತಕದಲ್ಲಿ ಬರೆದಿರುವ ಮುನ್ನಡಿಯನ್ನ ಕೋಮುವಾದದ ಕನ್ನಡಕ ತೆಗದು ಓದಿ’ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

“ಕರ್ನಾಟಕ ಇತಿಹಾಸದಲ್ಲಿ 1782-1799ರ ನಡುವಿನ ಅವಧಿಯು ವಿಶಿಷ್ಟವಾದದ್ದು. ಈ ಅವಧಿಯಲ್ಲಿ ಮೈಸೂರು ಸಾಮ್ರಾಜ್ಯ ಟಿಪ್ಪು ಸುಲ್ತಾನನ ಆಡಳಿತಕ್ಕೆ ಒಳಪಟ್ಟಿತ್ತು. ಏಕಾಂಗಿಯಾಗಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ತೀವ್ರವಾಗಿ ಹೋರಾಡಿ, ಅವರಿಗೆ ಸೋಲಿನ ರುಚಿಯನ್ನು ತೋರಿಸುವಲ್ಲೂ ಯಶಸ್ವಿಯಾಗಿದ್ದ. ಅದು ಕೂಡಾ ಒಂದು ಬಾರಿ ಅಲ್ಲ, ಎರಡು ಬಾರಿ. ಅದಾಗ್ಯೂ ನಾಲ್ಕನೇ ಆಂಗ್ಲೋ- ಮೈಸೂರು ಯುದ್ಧದಲ್ಲಿ ಬ್ರಿಟಿಷರ ವಿರುದ್ಧ ಕೊನೆಯವರೆಗೂ ಹೋರಾಡಿ ರಣರಂಗದಲ್ಲೇ ವೀರಮರಣವನ್ನಪ್ಪಿದ. ಈ ವಾಕ್ಯಗಳನ್ನ ಸರ್ಕಾರವೇ ಪ್ರಕಟಿಸಿದ ಪುಸ್ತಕದಲ್ಲಿ ಸಚಿವ ಗೋವಿಂದ ಕಾರಜೋಳ ಅವರು ಮುನ್ನುಡಿಯಲ್ಲಿ ಬರೆದಿದ್ದಾರೆ. ಪುಸ್ತಕ ಖಾಲಿಯಾಗಿದ್ದರೆ ಇನ್ನೊಮ್ಮೆ ಪ್ರಕಟಿಸಿ ತೊಂದರೆ ಇಲ್ಲ. ಇತಿಹಾಸದ ಅರಿವು ನಿಮಗೆ ತೀರಾ ಅಗತ್ಯವಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಬಿಜೆಪಿಯವರು ಇತ್ತೀಚೆಗೆ ಇತಿಹಾಸ ಅಷ್ಟೇ ಬದಲಾಯಿಸುತ್ತಿಲ್ಲ, ತಾವೇ ಹೇಳಿದ್ದ ಹೇಳಿಕೆಗಳನ್ನು, ಪ್ರಕಟಿಸಿದ್ದ ಪುಸ್ತಕಗಳ ಬಗ್ಗೆಯೂ ಸುಳ್ಳನ್ನ ಹೇಳಲು ಆರಂಭಿಸಿದ್ದಾರೆ. ಬಹುಶಃ ವಾಟ್ಸಪ್ ಯುನಿವರ್ಸಿಟಿಯ ಪ್ರಾರಂಭ ಆಗಿದ್ದು 2014ರಲ್ಲಿ, ಜಗದೀಶ್ ಶೆಟ್ಟರ್ ಸಿಎಂ ಆಗಿದ್ದು 2012-13ರಲ್ಲಿ. ಹೀಗಾಗಿ 2014 ಮೊದಲ ಎಲ್ಲಾ ಇತಿಹಾಸವೂ ಬಿಜೆಪಿಗೆ ಸುಳ್ಳಂತೆ ಭಾವಿಸುತ್ತಿದೆ. ಇತ್ತೀಚೆಗೆ ಕೋಟ ಶ್ರೀನಿವಾಸ್ ಪೂಜಾರಿಯವರು ಕೂಡ ವಾಟ್ಸಪ್ ಮಾಹಿತಿ ಹಾಕಿ ತಮ್ಮ ಇತಿಹಾಸ ತಿಳುವಳಿಕೆಯನ್ನ ಜಗಜ್ಜಾಹೀರು ಮಾಡಿಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

’ಶಿಕ್ಷಣ ಇಲಾಖೆಯಲ್ಲಿ ಪಠ್ಯ ಪರಿಷ್ಕರಣೆ ಹೆಸರಿನಲ್ಲಿ ನಡೆದಿರುವ ಪ್ರಮಾದಗಳಿಗೆ ಉತ್ತರ ಕೊಡಲು ಶಿಕ್ಷಣ ಸಚಿವರು ಅಸಮರ್ಥರು ಎಂಬುದನ್ನ ಸಾಬೀತು ಮಾಡಿದ್ದಾರೆ. ಶಿಕ್ಷಣ ಕ್ಷೇತ್ರದ ಬಗ್ಗೆ ಕಂದಾಯ ಸಚಿವರು ಉತ್ತರ ನೀಡುತ್ತಿರುವುದು ಸಂದೇಶವೇನು..? ಮಾಜಿ ಪ್ರಧಾನಿ ದೇವೇಗೌಡರಾದಿಯಾಗಿ, ಈ ನಾಡಿನ ಶಿಕ್ಷಣ ಪ್ರೇಮಿಗಳು, ಸಾಹಿತಿ ಚಿಂತಕರು, ಸ್ವಾಮೀಜಿಗಳು ಮುಖ್ಯಮಂತ್ರಿಗಳಿಗೆ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆಯುತ್ತಲೇ ಇದ್ದಾರೆ. ಕನಿಷ್ಠ ಸೌಜನ್ಯಕ್ಕೂ ಸಿಎಂ ಸಭೆ ಕರೆದು ಸ್ಪಷ್ಟಿಕರಣ ನೀಡಲು ಸಾಧ್ಯವಾಗುತ್ತಿಲ್ಲ. ಇದು ಪ್ರಜಾಪ್ರಭುತ್ವ ನಡೆಯಲ್ಲ. ಈಗಲು ಕಾಲ ಮಿಂಚಿಲ್ಲ, ಕೂಡಲೇ ಅವಿವೇಕಿಯೊಬ್ಬ ಮಾತ್ರ ಮಾಡಿರುವ ಪಠ್ಯ ಪರಿಷ್ಕರಣೆಯನ್ನ ರದ್ದುಗೊಳಿಸಿ, ಕೂಡಲೇ ಹಿಂದಿನ ಪಠ್ಯ ಪುಸ್ತಕವನ್ನೇ ಭೋದಿಸಲು ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ: ಬರ್ಬರವಾಗಿ ಕೊಲೆಯಾದ ಮಹಿಳೆಯರ ಸುಳಿವು ನೀಡಿದರೆ 1 ಲಕ್ಷ ಬಹುಮಾನ

ಬಿಜೆಪಿ ನಾಯಕರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು, ”ಕಂದಾಯ ಸಚಿವ ಆರ್ ಅಶೋಕ್ ಅವರೇ ಈ ಫೋಟೋ ನೆನಪಿದ್ಯಾ..? ಇದು ಟಿಪ್ಪುವಿನ ಪೋಷಕು ಧರಿಸಿ ಆಗಿನ ಸಿಎಂ ಶೆಟ್ಟರ್ ಜೊತೆಗೆ ಪೋಸ್ ನೀಡಿದವರು ತಾವೇ ಅಲ್ಲವೇ..? ಆಗ ಮೈಮೇಲಷ್ಟೆಯಲ್ಲ, ತಲೆ ಮೇಲೆ ಹೊತ್ತು ಮೆರೆಸಿದ್ದನ್ನ ಮರೆತಿದ್ದೀರಾ..? ಇತಿಹಾಸ ದಾಖಲೆ ಸಮೇತ ಸುಳ್ಳನ್ನ ಬೆತ್ತಲೆ ಮಾಡಿ ಬಿಡುತ್ತೆ ಹುಶಾರ್…!’ ಎಂದಿದ್ದಾರೆ.

 


ಇದನ್ನೂ ಓದಿ: ಮೋದಿ ಭೇಟಿಗಾಗಿ ಡಾಂಬರೀಕರಣ ಮಾಡಿದ್ದ 6 ಕೋಟಿ ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ವರದಿ ಕೇಳಿದ ಪ್ರಧಾನಿ ಕಚೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...