Homeಕರ್ನಾಟಕಟಿಪ್ಪು ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ, ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ: ಬಿಕೆ ಹರಿಪ್ರಸಾದ್

ಟಿಪ್ಪು ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ, ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ: ಬಿಕೆ ಹರಿಪ್ರಸಾದ್

- Advertisement -
- Advertisement -

ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ ಎಂದಿದ್ದ ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿಕೆಗೆ ತಿರುಗೇಟು ನೀಡಿರುವ ಪರಿಷತ್ ವಿಪಕ್ಷ ನಾಯಕರಾದ ಬಿಕೆ ಹರಿಪ್ರಸಾದ್, ’ಟಿಪ್ಪು ಸುಲ್ತಾನ್ ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ ಹಾಗೂ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ. ಅನುಮಾನವಿದ್ದರೆ ಎದೆ ಬಗೆದು ನೋಡಿ’ ಎಂದಿದ್ದಾರೆ.

’ಪಠ್ಯ ಪುಸ್ತಕದಲ್ಲಿ ಉದ್ದೇಶಪೂರ್ವಕವಾಗಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಬಿಜೆಪಿ ಸರ್ಕಾರ ಮಾಡಿರುವ ಘನಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಟಿಪ್ಪು ಸುಲ್ತಾನರ ವಿಷಯವನ್ನ ಮತ್ತೆ ಮುನ್ನಲೆಗೆ ತಂದು ವಿಷಯವನ್ನ ಡೈವರ್ಟ್ ಮಾಡಲು ಸಚಿವ ಆರ್.ಅಶೋಕ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ’ ಎಂದು ಹೇಳಿದ್ದಾರೆ.

’ಟಿಪ್ಪು ಸುಲ್ತಾನರಿಗೆ ವೀರಾಧಿವೀರ, ಶೂರಾಧಿ ಶೂರ, ಮಹಾನ್ ಪರಾಕ್ರಮಿ, “ಮೈಸೂರಿನ ಹುಲಿ” ಎಂಬ ಬಿರುದುಗಳನ್ನ ಕಾಂಗ್ರೆಸ್ ಪಕ್ಷ ನೀಡಿದ್ದಲ್ಲ ಸ್ವಾಮಿ ಇತಿಹಾಸಕಾರರು. ಅದನ್ನ ಎಥಾವತ್ತು ಟಿಪ್ಪುವಿನ ಪರಾಕ್ರಮವನ್ನ, ಧೈರ್ಯ, ಸಾಹಸ, ದೇಶಪ್ರೇಮದ ಕಥನಗಳನ್ನ 425 ಪುಟಗಳ ಪುಸ್ತಕವನ್ನ ಪ್ರಕಟಿಸಿದ್ದು ಬಿಜೆಪಿ ಸರ್ಕಾರ ಎಂಬುದು ಅಷ್ಟು ಬೇಗ ಮರೆತು ಹೋಯಿತಾ..? ಪುಸ್ತಕದ ಮುನ್ನುಡಿಯಲ್ಲಿ 2012-13ರಲ್ಲಿ ಸಿಎಂ ಆಗಿದ್ದ ಜಗದೀಶ್ ಶೆಟ್ಟರ್ ಹಾಗೂ ಕನ್ನಡ ಸಂಸ್ಕೃತಿ ಸಚಿವರಾಗಿದ್ದ ಗೋವಿಂದ ಕಾರಜೋಳರು ಪುಸ್ತಕದಲ್ಲಿ ಬರೆದಿರುವ ಮುನ್ನಡಿಯನ್ನ ಕೋಮುವಾದದ ಕನ್ನಡಕ ತೆಗದು ಓದಿ’ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

“ಕರ್ನಾಟಕ ಇತಿಹಾಸದಲ್ಲಿ 1782-1799ರ ನಡುವಿನ ಅವಧಿಯು ವಿಶಿಷ್ಟವಾದದ್ದು. ಈ ಅವಧಿಯಲ್ಲಿ ಮೈಸೂರು ಸಾಮ್ರಾಜ್ಯ ಟಿಪ್ಪು ಸುಲ್ತಾನನ ಆಡಳಿತಕ್ಕೆ ಒಳಪಟ್ಟಿತ್ತು. ಏಕಾಂಗಿಯಾಗಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ತೀವ್ರವಾಗಿ ಹೋರಾಡಿ, ಅವರಿಗೆ ಸೋಲಿನ ರುಚಿಯನ್ನು ತೋರಿಸುವಲ್ಲೂ ಯಶಸ್ವಿಯಾಗಿದ್ದ. ಅದು ಕೂಡಾ ಒಂದು ಬಾರಿ ಅಲ್ಲ, ಎರಡು ಬಾರಿ. ಅದಾಗ್ಯೂ ನಾಲ್ಕನೇ ಆಂಗ್ಲೋ- ಮೈಸೂರು ಯುದ್ಧದಲ್ಲಿ ಬ್ರಿಟಿಷರ ವಿರುದ್ಧ ಕೊನೆಯವರೆಗೂ ಹೋರಾಡಿ ರಣರಂಗದಲ್ಲೇ ವೀರಮರಣವನ್ನಪ್ಪಿದ. ಈ ವಾಕ್ಯಗಳನ್ನ ಸರ್ಕಾರವೇ ಪ್ರಕಟಿಸಿದ ಪುಸ್ತಕದಲ್ಲಿ ಸಚಿವ ಗೋವಿಂದ ಕಾರಜೋಳ ಅವರು ಮುನ್ನುಡಿಯಲ್ಲಿ ಬರೆದಿದ್ದಾರೆ. ಪುಸ್ತಕ ಖಾಲಿಯಾಗಿದ್ದರೆ ಇನ್ನೊಮ್ಮೆ ಪ್ರಕಟಿಸಿ ತೊಂದರೆ ಇಲ್ಲ. ಇತಿಹಾಸದ ಅರಿವು ನಿಮಗೆ ತೀರಾ ಅಗತ್ಯವಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಬಿಜೆಪಿಯವರು ಇತ್ತೀಚೆಗೆ ಇತಿಹಾಸ ಅಷ್ಟೇ ಬದಲಾಯಿಸುತ್ತಿಲ್ಲ, ತಾವೇ ಹೇಳಿದ್ದ ಹೇಳಿಕೆಗಳನ್ನು, ಪ್ರಕಟಿಸಿದ್ದ ಪುಸ್ತಕಗಳ ಬಗ್ಗೆಯೂ ಸುಳ್ಳನ್ನ ಹೇಳಲು ಆರಂಭಿಸಿದ್ದಾರೆ. ಬಹುಶಃ ವಾಟ್ಸಪ್ ಯುನಿವರ್ಸಿಟಿಯ ಪ್ರಾರಂಭ ಆಗಿದ್ದು 2014ರಲ್ಲಿ, ಜಗದೀಶ್ ಶೆಟ್ಟರ್ ಸಿಎಂ ಆಗಿದ್ದು 2012-13ರಲ್ಲಿ. ಹೀಗಾಗಿ 2014 ಮೊದಲ ಎಲ್ಲಾ ಇತಿಹಾಸವೂ ಬಿಜೆಪಿಗೆ ಸುಳ್ಳಂತೆ ಭಾವಿಸುತ್ತಿದೆ. ಇತ್ತೀಚೆಗೆ ಕೋಟ ಶ್ರೀನಿವಾಸ್ ಪೂಜಾರಿಯವರು ಕೂಡ ವಾಟ್ಸಪ್ ಮಾಹಿತಿ ಹಾಕಿ ತಮ್ಮ ಇತಿಹಾಸ ತಿಳುವಳಿಕೆಯನ್ನ ಜಗಜ್ಜಾಹೀರು ಮಾಡಿಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

’ಶಿಕ್ಷಣ ಇಲಾಖೆಯಲ್ಲಿ ಪಠ್ಯ ಪರಿಷ್ಕರಣೆ ಹೆಸರಿನಲ್ಲಿ ನಡೆದಿರುವ ಪ್ರಮಾದಗಳಿಗೆ ಉತ್ತರ ಕೊಡಲು ಶಿಕ್ಷಣ ಸಚಿವರು ಅಸಮರ್ಥರು ಎಂಬುದನ್ನ ಸಾಬೀತು ಮಾಡಿದ್ದಾರೆ. ಶಿಕ್ಷಣ ಕ್ಷೇತ್ರದ ಬಗ್ಗೆ ಕಂದಾಯ ಸಚಿವರು ಉತ್ತರ ನೀಡುತ್ತಿರುವುದು ಸಂದೇಶವೇನು..? ಮಾಜಿ ಪ್ರಧಾನಿ ದೇವೇಗೌಡರಾದಿಯಾಗಿ, ಈ ನಾಡಿನ ಶಿಕ್ಷಣ ಪ್ರೇಮಿಗಳು, ಸಾಹಿತಿ ಚಿಂತಕರು, ಸ್ವಾಮೀಜಿಗಳು ಮುಖ್ಯಮಂತ್ರಿಗಳಿಗೆ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆಯುತ್ತಲೇ ಇದ್ದಾರೆ. ಕನಿಷ್ಠ ಸೌಜನ್ಯಕ್ಕೂ ಸಿಎಂ ಸಭೆ ಕರೆದು ಸ್ಪಷ್ಟಿಕರಣ ನೀಡಲು ಸಾಧ್ಯವಾಗುತ್ತಿಲ್ಲ. ಇದು ಪ್ರಜಾಪ್ರಭುತ್ವ ನಡೆಯಲ್ಲ. ಈಗಲು ಕಾಲ ಮಿಂಚಿಲ್ಲ, ಕೂಡಲೇ ಅವಿವೇಕಿಯೊಬ್ಬ ಮಾತ್ರ ಮಾಡಿರುವ ಪಠ್ಯ ಪರಿಷ್ಕರಣೆಯನ್ನ ರದ್ದುಗೊಳಿಸಿ, ಕೂಡಲೇ ಹಿಂದಿನ ಪಠ್ಯ ಪುಸ್ತಕವನ್ನೇ ಭೋದಿಸಲು ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ: ಬರ್ಬರವಾಗಿ ಕೊಲೆಯಾದ ಮಹಿಳೆಯರ ಸುಳಿವು ನೀಡಿದರೆ 1 ಲಕ್ಷ ಬಹುಮಾನ

ಬಿಜೆಪಿ ನಾಯಕರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು, ”ಕಂದಾಯ ಸಚಿವ ಆರ್ ಅಶೋಕ್ ಅವರೇ ಈ ಫೋಟೋ ನೆನಪಿದ್ಯಾ..? ಇದು ಟಿಪ್ಪುವಿನ ಪೋಷಕು ಧರಿಸಿ ಆಗಿನ ಸಿಎಂ ಶೆಟ್ಟರ್ ಜೊತೆಗೆ ಪೋಸ್ ನೀಡಿದವರು ತಾವೇ ಅಲ್ಲವೇ..? ಆಗ ಮೈಮೇಲಷ್ಟೆಯಲ್ಲ, ತಲೆ ಮೇಲೆ ಹೊತ್ತು ಮೆರೆಸಿದ್ದನ್ನ ಮರೆತಿದ್ದೀರಾ..? ಇತಿಹಾಸ ದಾಖಲೆ ಸಮೇತ ಸುಳ್ಳನ್ನ ಬೆತ್ತಲೆ ಮಾಡಿ ಬಿಡುತ್ತೆ ಹುಶಾರ್…!’ ಎಂದಿದ್ದಾರೆ.

 


ಇದನ್ನೂ ಓದಿ: ಮೋದಿ ಭೇಟಿಗಾಗಿ ಡಾಂಬರೀಕರಣ ಮಾಡಿದ್ದ 6 ಕೋಟಿ ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ವರದಿ ಕೇಳಿದ ಪ್ರಧಾನಿ ಕಚೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...