Homeಕರ್ನಾಟಕಟಿಪ್ಪು ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ, ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ: ಬಿಕೆ ಹರಿಪ್ರಸಾದ್

ಟಿಪ್ಪು ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ, ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ: ಬಿಕೆ ಹರಿಪ್ರಸಾದ್

- Advertisement -
- Advertisement -

ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ ಎಂದಿದ್ದ ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿಕೆಗೆ ತಿರುಗೇಟು ನೀಡಿರುವ ಪರಿಷತ್ ವಿಪಕ್ಷ ನಾಯಕರಾದ ಬಿಕೆ ಹರಿಪ್ರಸಾದ್, ’ಟಿಪ್ಪು ಸುಲ್ತಾನ್ ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ ಹಾಗೂ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ. ಅನುಮಾನವಿದ್ದರೆ ಎದೆ ಬಗೆದು ನೋಡಿ’ ಎಂದಿದ್ದಾರೆ.

’ಪಠ್ಯ ಪುಸ್ತಕದಲ್ಲಿ ಉದ್ದೇಶಪೂರ್ವಕವಾಗಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಬಿಜೆಪಿ ಸರ್ಕಾರ ಮಾಡಿರುವ ಘನಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಟಿಪ್ಪು ಸುಲ್ತಾನರ ವಿಷಯವನ್ನ ಮತ್ತೆ ಮುನ್ನಲೆಗೆ ತಂದು ವಿಷಯವನ್ನ ಡೈವರ್ಟ್ ಮಾಡಲು ಸಚಿವ ಆರ್.ಅಶೋಕ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ’ ಎಂದು ಹೇಳಿದ್ದಾರೆ.

’ಟಿಪ್ಪು ಸುಲ್ತಾನರಿಗೆ ವೀರಾಧಿವೀರ, ಶೂರಾಧಿ ಶೂರ, ಮಹಾನ್ ಪರಾಕ್ರಮಿ, “ಮೈಸೂರಿನ ಹುಲಿ” ಎಂಬ ಬಿರುದುಗಳನ್ನ ಕಾಂಗ್ರೆಸ್ ಪಕ್ಷ ನೀಡಿದ್ದಲ್ಲ ಸ್ವಾಮಿ ಇತಿಹಾಸಕಾರರು. ಅದನ್ನ ಎಥಾವತ್ತು ಟಿಪ್ಪುವಿನ ಪರಾಕ್ರಮವನ್ನ, ಧೈರ್ಯ, ಸಾಹಸ, ದೇಶಪ್ರೇಮದ ಕಥನಗಳನ್ನ 425 ಪುಟಗಳ ಪುಸ್ತಕವನ್ನ ಪ್ರಕಟಿಸಿದ್ದು ಬಿಜೆಪಿ ಸರ್ಕಾರ ಎಂಬುದು ಅಷ್ಟು ಬೇಗ ಮರೆತು ಹೋಯಿತಾ..? ಪುಸ್ತಕದ ಮುನ್ನುಡಿಯಲ್ಲಿ 2012-13ರಲ್ಲಿ ಸಿಎಂ ಆಗಿದ್ದ ಜಗದೀಶ್ ಶೆಟ್ಟರ್ ಹಾಗೂ ಕನ್ನಡ ಸಂಸ್ಕೃತಿ ಸಚಿವರಾಗಿದ್ದ ಗೋವಿಂದ ಕಾರಜೋಳರು ಪುಸ್ತಕದಲ್ಲಿ ಬರೆದಿರುವ ಮುನ್ನಡಿಯನ್ನ ಕೋಮುವಾದದ ಕನ್ನಡಕ ತೆಗದು ಓದಿ’ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ವಿವಾದಕ್ಕೆ ಆರ್‌.ಅಶೋಕ್‌ ಸ್ಪಷ್ಟೀಕರಣ: ಒಕ್ಕಲಿಗರನ್ನು ಒಡೆದು ಆಳುವ ಹುನ್ನಾರವೇ?

“ಕರ್ನಾಟಕ ಇತಿಹಾಸದಲ್ಲಿ 1782-1799ರ ನಡುವಿನ ಅವಧಿಯು ವಿಶಿಷ್ಟವಾದದ್ದು. ಈ ಅವಧಿಯಲ್ಲಿ ಮೈಸೂರು ಸಾಮ್ರಾಜ್ಯ ಟಿಪ್ಪು ಸುಲ್ತಾನನ ಆಡಳಿತಕ್ಕೆ ಒಳಪಟ್ಟಿತ್ತು. ಏಕಾಂಗಿಯಾಗಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ತೀವ್ರವಾಗಿ ಹೋರಾಡಿ, ಅವರಿಗೆ ಸೋಲಿನ ರುಚಿಯನ್ನು ತೋರಿಸುವಲ್ಲೂ ಯಶಸ್ವಿಯಾಗಿದ್ದ. ಅದು ಕೂಡಾ ಒಂದು ಬಾರಿ ಅಲ್ಲ, ಎರಡು ಬಾರಿ. ಅದಾಗ್ಯೂ ನಾಲ್ಕನೇ ಆಂಗ್ಲೋ- ಮೈಸೂರು ಯುದ್ಧದಲ್ಲಿ ಬ್ರಿಟಿಷರ ವಿರುದ್ಧ ಕೊನೆಯವರೆಗೂ ಹೋರಾಡಿ ರಣರಂಗದಲ್ಲೇ ವೀರಮರಣವನ್ನಪ್ಪಿದ. ಈ ವಾಕ್ಯಗಳನ್ನ ಸರ್ಕಾರವೇ ಪ್ರಕಟಿಸಿದ ಪುಸ್ತಕದಲ್ಲಿ ಸಚಿವ ಗೋವಿಂದ ಕಾರಜೋಳ ಅವರು ಮುನ್ನುಡಿಯಲ್ಲಿ ಬರೆದಿದ್ದಾರೆ. ಪುಸ್ತಕ ಖಾಲಿಯಾಗಿದ್ದರೆ ಇನ್ನೊಮ್ಮೆ ಪ್ರಕಟಿಸಿ ತೊಂದರೆ ಇಲ್ಲ. ಇತಿಹಾಸದ ಅರಿವು ನಿಮಗೆ ತೀರಾ ಅಗತ್ಯವಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಬಿಜೆಪಿಯವರು ಇತ್ತೀಚೆಗೆ ಇತಿಹಾಸ ಅಷ್ಟೇ ಬದಲಾಯಿಸುತ್ತಿಲ್ಲ, ತಾವೇ ಹೇಳಿದ್ದ ಹೇಳಿಕೆಗಳನ್ನು, ಪ್ರಕಟಿಸಿದ್ದ ಪುಸ್ತಕಗಳ ಬಗ್ಗೆಯೂ ಸುಳ್ಳನ್ನ ಹೇಳಲು ಆರಂಭಿಸಿದ್ದಾರೆ. ಬಹುಶಃ ವಾಟ್ಸಪ್ ಯುನಿವರ್ಸಿಟಿಯ ಪ್ರಾರಂಭ ಆಗಿದ್ದು 2014ರಲ್ಲಿ, ಜಗದೀಶ್ ಶೆಟ್ಟರ್ ಸಿಎಂ ಆಗಿದ್ದು 2012-13ರಲ್ಲಿ. ಹೀಗಾಗಿ 2014 ಮೊದಲ ಎಲ್ಲಾ ಇತಿಹಾಸವೂ ಬಿಜೆಪಿಗೆ ಸುಳ್ಳಂತೆ ಭಾವಿಸುತ್ತಿದೆ. ಇತ್ತೀಚೆಗೆ ಕೋಟ ಶ್ರೀನಿವಾಸ್ ಪೂಜಾರಿಯವರು ಕೂಡ ವಾಟ್ಸಪ್ ಮಾಹಿತಿ ಹಾಕಿ ತಮ್ಮ ಇತಿಹಾಸ ತಿಳುವಳಿಕೆಯನ್ನ ಜಗಜ್ಜಾಹೀರು ಮಾಡಿಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

’ಶಿಕ್ಷಣ ಇಲಾಖೆಯಲ್ಲಿ ಪಠ್ಯ ಪರಿಷ್ಕರಣೆ ಹೆಸರಿನಲ್ಲಿ ನಡೆದಿರುವ ಪ್ರಮಾದಗಳಿಗೆ ಉತ್ತರ ಕೊಡಲು ಶಿಕ್ಷಣ ಸಚಿವರು ಅಸಮರ್ಥರು ಎಂಬುದನ್ನ ಸಾಬೀತು ಮಾಡಿದ್ದಾರೆ. ಶಿಕ್ಷಣ ಕ್ಷೇತ್ರದ ಬಗ್ಗೆ ಕಂದಾಯ ಸಚಿವರು ಉತ್ತರ ನೀಡುತ್ತಿರುವುದು ಸಂದೇಶವೇನು..? ಮಾಜಿ ಪ್ರಧಾನಿ ದೇವೇಗೌಡರಾದಿಯಾಗಿ, ಈ ನಾಡಿನ ಶಿಕ್ಷಣ ಪ್ರೇಮಿಗಳು, ಸಾಹಿತಿ ಚಿಂತಕರು, ಸ್ವಾಮೀಜಿಗಳು ಮುಖ್ಯಮಂತ್ರಿಗಳಿಗೆ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆಯುತ್ತಲೇ ಇದ್ದಾರೆ. ಕನಿಷ್ಠ ಸೌಜನ್ಯಕ್ಕೂ ಸಿಎಂ ಸಭೆ ಕರೆದು ಸ್ಪಷ್ಟಿಕರಣ ನೀಡಲು ಸಾಧ್ಯವಾಗುತ್ತಿಲ್ಲ. ಇದು ಪ್ರಜಾಪ್ರಭುತ್ವ ನಡೆಯಲ್ಲ. ಈಗಲು ಕಾಲ ಮಿಂಚಿಲ್ಲ, ಕೂಡಲೇ ಅವಿವೇಕಿಯೊಬ್ಬ ಮಾತ್ರ ಮಾಡಿರುವ ಪಠ್ಯ ಪರಿಷ್ಕರಣೆಯನ್ನ ರದ್ದುಗೊಳಿಸಿ, ಕೂಡಲೇ ಹಿಂದಿನ ಪಠ್ಯ ಪುಸ್ತಕವನ್ನೇ ಭೋದಿಸಲು ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ: ಬರ್ಬರವಾಗಿ ಕೊಲೆಯಾದ ಮಹಿಳೆಯರ ಸುಳಿವು ನೀಡಿದರೆ 1 ಲಕ್ಷ ಬಹುಮಾನ

ಬಿಜೆಪಿ ನಾಯಕರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು, ”ಕಂದಾಯ ಸಚಿವ ಆರ್ ಅಶೋಕ್ ಅವರೇ ಈ ಫೋಟೋ ನೆನಪಿದ್ಯಾ..? ಇದು ಟಿಪ್ಪುವಿನ ಪೋಷಕು ಧರಿಸಿ ಆಗಿನ ಸಿಎಂ ಶೆಟ್ಟರ್ ಜೊತೆಗೆ ಪೋಸ್ ನೀಡಿದವರು ತಾವೇ ಅಲ್ಲವೇ..? ಆಗ ಮೈಮೇಲಷ್ಟೆಯಲ್ಲ, ತಲೆ ಮೇಲೆ ಹೊತ್ತು ಮೆರೆಸಿದ್ದನ್ನ ಮರೆತಿದ್ದೀರಾ..? ಇತಿಹಾಸ ದಾಖಲೆ ಸಮೇತ ಸುಳ್ಳನ್ನ ಬೆತ್ತಲೆ ಮಾಡಿ ಬಿಡುತ್ತೆ ಹುಶಾರ್…!’ ಎಂದಿದ್ದಾರೆ.

 


ಇದನ್ನೂ ಓದಿ: ಮೋದಿ ಭೇಟಿಗಾಗಿ ಡಾಂಬರೀಕರಣ ಮಾಡಿದ್ದ 6 ಕೋಟಿ ವೆಚ್ಚದ ರಸ್ತೆ ಮೂರೇ ದಿನಕ್ಕೆ ಕುಸಿತ, ವರದಿ ಕೇಳಿದ ಪ್ರಧಾನಿ ಕಚೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...